ಎಚ್. ಜಿ ಗೋವಿಂದೇಗೌಡರು
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
'ಮಲೆನಾಡ ಗಾಂಧಿ' ಎಂದೇ ಪ್ರಸಿದ್ಧರಾಗಿದ್ದ ಎಚ್ ಜಿ ಗೋವಿಂದೇಗೌಡರು ಕರ್ನಾಟಕ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿ ಹೆಸರು ಮಾಡಿದವರು. ಅವರ ಅಧಿಕಾರಾವಧಿಯಲ್ಲಿ ಒಂದು ಲಕ್ಷದ ಐದು ಸಾವಿರ ಶಿಕ್ಷಕರನ್ನು ನೇಮಿಸಿದರು. 1999ರಲ್ಲಿ ರಾಜಕೀಯ ನಿವೃತ್ತಿ ಹೊಂದಿದರು.
ಎಚ್. ಜಿ ಗೋವಿಂದೇಗೌಡರು | |
---|---|
ಜನನ | ಮೇ 25, 1926 |
ಮರಣ | ಜನವರಿ 6, 2016 |
ವೃತ್ತಿ | ರಾಜಕಾರಣಿ |
Known for | ಶಿಕ್ಷಣ ಮಂತ್ರಿ |
ಜನನ ಬದಲಾಯಿಸಿ
ಎಚ್. ಜಿ. ಗೋವಿಂದೇಗೌಡರು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಕಾನೂರು ಗ್ರಾಮದ ಹಿಣಚಿಯಲ್ಲಿ 1926 ಮೇ 26ರಂದು ಜನಿಸಿದರು. [೧] [೨]
ವೈವಾಹಿಕ ಬದುಕು ಬದಲಾಯಿಸಿ
ಅವರಿಗೆ ಐದು ಜನ ಹೆಣ್ಣು ಮಕ್ಕಳೂ, ಓರ್ವ ಪುತ್ರನೂ ಇದ್ದಾರೆ.
ಸಾಧನೆ ಬದಲಾಯಿಸಿ
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಗೋವಿಂದೇಗೌಡರು ಕರ್ನಾಟಕದ ಶಿಕ್ಷಣ ಮಂತ್ರಿಯಾಗಿ ಒಂದು ಲಕ್ಷದ ಐದು ಸಾವಿರ ಶಿಕ್ಷಕರನ್ನು ನೇಮಿಸಿ ದಾಖಲೆಗೈದಿದ್ದಾರೆ. ಶಿಕ್ಷಕ ಹುದ್ದೆಯ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಕಲ್ಪಿಸಿದ ಹೆಗ್ಗಳಿಕೆಯೂ ಅವರಿಗಿದೆ.
ಮರಣ ಬದಲಾಯಿಸಿ
ಗೋವಿಂದೇಗೌಡರು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಕೊಪ್ಪದಲ್ಲಿ 2016 ಜನವರಿ 6ರಂದು ನಿಧನರಾದರು.
- ↑ https://www.google.co.in/?gfe_rd=cr&ei=nLV4WIKrF9aDuASUzYX4Aw&gws_rd=ssl#q=h+g+govindegowda
- ↑ "ಆರ್ಕೈವ್ ನಕಲು". Archived from the original on 2016-11-13. Retrieved 2017-01-13.