ವೈಶಾಖ ಶುದ್ಧ ತದಿಗೆಯಂದು, ಲಿಂಗಾಯತ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಹಾಗೂ ಸರ್ವಧರ್ಮೀಯರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.

ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು. ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳಮಾಚಯ್ಯ, ನೂಲಿನ ಚಂದಯ್ಯ ಮುಂತಾದ ಶಿವಶರಣರ ಕಾಲದಲ್ಲಿಯೇ ಜೀವಿಸಿದ್ದ ಜಗಜ್ಯೋತಿ ಬಸವಣ್ಣನವರ ಪ್ರಭಾವದ ಕಾರಣ ಆ ಕಾಲವನ್ನು ಬಸವಯುಗವೆಂದೇ ಕರೆಯುತ್ತಾರೆ.