ಅಹಲ್ಯ ಬಲ್ಲಾಳ್
ಅಹಲ್ಯ ಬಲ್ಲಾಳ್,[೧] ಕನ್ನಡದ ರಂಗಭೂಮಿ ನಟಿ ಮತ್ತು ನಿರ್ದೇಶಕಿ. ಮುಂಬಯಿ ನಗರದಲ್ಲಿ ಕನ್ನಡದ ಹಲವಾರು ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅಹಲ್ಯ, ಭರತನಾಟ್ಯ ಕಲಾವಿದೆ, ಲೇಖಕಿ ಮತ್ತು ಅನುವಾದಕಿಯೂ ಆಗಿದ್ದಾರೆ.[೨][೩][೪]
ಅಹಲ್ಯ ಬಲ್ಲಾಳ್ | |
---|---|
ಜನನ | ಅಹಲ್ಯ December 1, 1963 |
Alma mater | ಮಂಗಳೂರು ವಿಶ್ವವಿದ್ಯಾಲಯ ಮತ್ತು ಮುಂಬಯಿ ವಿಶ್ವವಿದ್ಯಾಲಯ. |
ಉದ್ಯೋಗ | ನಟಿ, ಕಂಠದಾನ ಕಲಾವಿದೆ, ಅನುವಾದಕಿ, ಭರತನಾಟ್ಯ ಕಲಾವಿದೆ, ಲೇಖಕಿ ಮತ್ತು ನಾಟಕ ನಿರ್ದೇಶಕಿ |
Known for | ನಾಟಕ ನಿರ್ದೇಶನ, ಅಭಿನಯ |
Parent(s) | ಪಿ.ಎನ್.ವೆಂಕಟ್ರಾವ್ ಜಾನಕಿ |
ಜನನ,ವಿದ್ಯಾಭ್ಯಾಸ, ಕುಟುಂಬಸಂಪಾದಿಸಿ
ಅಹಲ್ಯ[೫] ಹುಟ್ಟಿದ್ದು ಡಿಸೆಂಬರ್ ೦೧, ೧೯೬೩ರಲ್ಲಿ[ಸಾಕ್ಷ್ಯಾಧಾರ ಬೇಕಾಗಿದೆ]. ತಂದೆ ಪಿ. ಎನ್. ವೆಂಕಟ್ರಾವ್, ತಾಯಿಯ ಹೆಸರು ಜಾನಕಿ. ಚಲನಚಿತ್ರ ನಿರ್ದೇಶಕರಾದ ರಾಮಚಂದ್ರ ಪಿ. ಎನ್. ಅಹಲ್ಯಾರ ತಮ್ಮ. ಉಡುಪಿ, ಕುಂದಾಪುರ, ಧಾರವಾಡ, ಬೆಂಗಳೂರು ಮತ್ತು ಮುಂಬಯಿ ಯಲ್ಲಿ ವಿದ್ಯಾಭ್ಯಾಸ ಮಾಡಿದ ಅಹಲ್ಯ, ವಿಜ್ಞಾನ ಪದವಿಯನ್ನು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪಡೆದಿದ್ದಾರೆ.[೬]
ವಿವಾಹಸಂಪಾದಿಸಿ
ಸಂತೋಷ ಬಲ್ಲಾಳರನ್ನು ಮದುವೆಯಾದ ಅಹಲ್ಯ ಅವರಿಗೆ ಇಬ್ಬರು ಗಂಡುಮಕ್ಕಳಿದ್ದಾರೆ.
ಭರತನಾಟ್ಯ ರಂಗಪ್ರವೇಶಸಂಪಾದಿಸಿ
೧೯೮೮ರಲ್ಲಿ ಬೆಂಗಳೂರಿನ ’ಯವನಿಕಾ’ ಸಭಾಂಗಣದಲ್ಲಿ ಭರತನಾಟ್ಯ ರಂಗಪ್ರವೇಶ ಮಾಡಿದರು. ಕರ್ನಾಟಕ, ಮುಂಬಯಿ ಹಾಗೂ ಇತರೆ ನಗರಗಳಲ್ಲಿ ಹಲವಾರು ಏಕವ್ಯಕ್ತಿ ಪ್ರದರ್ಶನಗಳನ್ನು ನೀಡಿದ್ದಾರೆ. ಅನೇಕ ನೃತ್ಯನಾಟಕಗಳಲ್ಲಿ ಭಾಗವಹಿಸಿದ್ದಾರೆ.
ನಾಟಕಗಳಲ್ಲಿ ಅಭಿನಯಸಂಪಾದಿಸಿ
ಮುಂಬಯಿನ ಕನ್ನಡ ಕಲಾಕೇಂದ್ರ, ಮೈಸೂರ್ ಅಸೋಸಿಯೇಷನ್, ಮುಂಬಯಿ, ’ದೃಶ್ಯ’ ತಂಡ ಮತ್ತು ಮಾತುಂಗ ಕರ್ನಾಟಕ ಸಂಘದ ಕಲಾಭಾರತಿ ತಂಡಗಳ ಕನ್ನಡ ನಾಟಕಗಳಲ್ಲಿ ಅಭಿನಯಿಸಿದ್ದಾರೆ.
ಅಭಿನಯಿಸಿದ ನಾಟಕಗಳುಸಂಪಾದಿಸಿ
- ಪದ್ಮಶ್ರೀ ದುಂಢೀರಾಜ್ (ನಿರ್ದೇಶನ: ಕಿಶೋರಿ ಬಲ್ಲಾಳ)
- ಸಹ್ಯಾದ್ರಿಯ ಸ್ವಾಭಿಮಾನ (ರಚನೆ: ಆರ್.ಡಿ.ಕಾಮತ, ನಿ: ಶ್ರೀಪತಿ ಬಲ್ಲಾಳ)
- ತರುಣ ದುರ್ದಂಡ ಮುದುಕ ಮಾರ್ತಾಂಡ (ಮರಾಠಿ ಮೂಲದ ಕನ್ನಡ ರೂಪಾಂತರ ಮತ್ತು ನಿರ್ದೇಶನ: ಶ್ರೀಪತಿ ಬಲ್ಲಾಳ)
- ನಮ್ಮ ನಮ್ಮಲ್ಲಿ ( ಮರಾಠಿಯ ’ಚಾರ್ ಚೌಗಿಯ’ ನಾಟಕದ ರೂಪಾಂತರ ಮತ್ತು ನಿರ್ದೇಶನ: ಸಂತೋಷ ಬಲ್ಲಾಳ)
- ಬಾಕಿ ಇತಿಹಾಸ (ಮೂಲ ಕೃತಿ:ಬಾದಲ್ ಸರ್ಕಾರ್, ನಿ: ರಮೇಶ್ ಶಿವಪುರ)
- ಬೆಂದಕಾಳೂರು (ರಚನೆ ಮತ್ತು ನಿರ್ದೇಶನ: ಡಾ.ಬಿ.ಆರ್.ಮಂಜುನಾಥ್)
- ಪುಷ್ಪರಾಣಿ (ರಚನೆ: ಚಂದ್ರಶೇಖರ ಕಂಬಾರ, ನಿ: ಜಯಲಕ್ಷ್ಮೀ ಪಾಟೀಲ್)
- ಮಂಥರಾ (ರಚನೆ: ಡಾ.ಹೆಚ್.ಎಸ್.ವೆಂಕಟೇಶಮೂರ್ತಿ, ನಿ: ಜಯಲಕ್ಷ್ಮೀ ಪಾಟೀಲ್)
- ಎಲ್ಲಮ್ಮ (ಮೂಲ ನಾಟಕ: ಲೋರ್ಕಾ, ರೂಪಾಂತರ ಮತ್ತು ನಿರ್ದೇಶನ: ಬಿ. ಬಾಲಚಂದ್ರ ರಾವ್)
- ಅಂಬೆ (ಕನ್ನಡಕ್ಕೆ: ಸರಜೂ ಕಾಟ್ಕರ್, ನಿರ್ದೇಶನ:ಭರತ್ ಕುಮಾರ್ ಪೊಲಿಪು)
- ಅಂಬೆ [ತುಳು] (ನಿ: ಭರತ್ ಕುಮಾರ್ ಪೊಲಿಪು)
- ಕುವೆಂಪು ಕಂಡ ಮಂಥರೆ (ಮೂಲ : ಕುವೆಂಪು, ರಂಗರೂಪ ಮತ್ತು ನಿರ್ದೇಶನ ಸಾ ದಯಾ[ದಯಾನಂದ ಸಾಲ್ಯಾನ])
- ಮಾಯಾವಿ ಸರೋವರ.[೭]
- ಚೌಕಟ್ಟಿನಾಚೆಯ ಚಿತ್ರಗಳು.[೮]
ನಿರ್ದೇಶಿಸಿದ ನಾಟಕಗಳುಸಂಪಾದಿಸಿ
ಪ್ರಶಸ್ತಿ ಹಾಗೂ ಪುರಸ್ಕಾರಗಳುಸಂಪಾದಿಸಿ
- ಮಾಟುಂಗಾ ಕರ್ನಾಟಕ ಸಂಘ ಮುಂಬಯಿ ಆಯೋಜಿಸುವ ೨೦೦೪ರ ಸಾಲಿನ ಅಖಿಲ ಭಾರತ ಕುವೆಂಪು ನಾಟಕ ಸ್ಪರ್ಧೆ”ಯಲ್ಲಿ ಶ್ರೇಷ್ಠ ಅಭಿನಯಕ್ಕಾಗಿ ‘ಅತ್ಯುತ್ತಮ ನಟಿ ಪ್ರಥಮ ಪ್ರಶಸ್ತಿ’(ನಾಟಕ: ಪುಷ್ಪರಾಣಿ, ಮಹಾರಾಣಿ ಪಾತ್ರ).
- 'ಮಂಥರಾ' ನಾಟಕದ ಮಂಥರೆ ಪಾತ್ರಕ್ಕೆ ‘ಭಾರತಿ ಕೊಡ್ಲೀಕೆರೆ ಸ್ಮಾರಕ’ ಪ್ರಶಸ್ತಿ [ಸಾಕ್ಷ್ಯಾಧಾರ ಬೇಕಾಗಿದೆ]
- ನಾಟಕ: ಎಲ್ಲಮ್ಮ, ಅತ್ಯುತ್ತಮ ನಟಿ ಪ್ರಥಮ ಪ್ರಶಸ್ತಿ, [ಸಾಕ್ಷ್ಯಾಧಾರ ಬೇಕಾಗಿದೆ]
- ಉಡುಪಿಯ ತುಳು ಕೂಟ ಏರ್ಪಡಿಸಿದ ದೊಡ್ಡಣ್ಣ ಶೆಟ್ಟಿ ಸ್ಮಾರಕ ತುಳು ನಾಟಕ ಸ್ಪರ್ಧೆಯಲ್ಲಿ ’ಅತ್ಯುತ್ತಮ ನಟಿ ಪ್ರಥಮ’ (ನಾಟಕ: ಅಂಬೆ, ಅಂಬೆ ಪಾತ್ರಕ್ಕಾಗಿ)ಪ್ರಶಸ್ತಿ [ಸಾಕ್ಷ್ಯಾಧಾರ ಬೇಕಾಗಿದೆ]
- `ಕುವೆಂಪು ಕಂಡ ಮಂಥರೆ'ನಾಟಕದಲ್ಲಿನ ಮಂಥರೆ ಪಾತ್ರಕ್ಕಾಗಿ, ಮಾಟುಂಗಾ ಕರ್ನಾಟಕ ಸಂಘ ಮುಂಬಯಿ ಆಯೋಜಿಸುವ ೨೦೧೨ರ ಸಾಲಿನ ಅಖಿಲ ಭಾರತ ಕುವೆಂಪು ನಾಟಕ ಸ್ಪರ್ಧೆ”ಯಲ್ಲಿ ಅತ್ಯುತ್ತಮ ನಟಿ, ಗೌರವ [ಸಾಕ್ಷ್ಯಾಧಾರ ಬೇಕಾಗಿದೆ]
- ಭಾರತಿ ಕೊಡ್ಲೇಕರ್ ಪ್ರಶಸ್ತಿ [ಸಾಕ್ಷ್ಯಾಧಾರ ಬೇಕಾಗಿದೆ]
- 'ಅಖಿಲ ಭಾರತ ಮಟ್ಟದ ಕನ್ನಡ ನಾಟಕ ಸ್ಪರ್ಧೆಯ ತೀರ್ಪುಗಾರ'ರಾಗುವ ಗೌರವ ಸಂದಿದೆ [ಸಾಕ್ಷ್ಯಾಧಾರ ಬೇಕಾಗಿದೆ]
ಚಿತ್ರಗಳುಸಂಪಾದಿಸಿ
|
ಉಲ್ಲೇಖಗಳುಸಂಪಾದಿಸಿ
- ↑ ಸೊಬಗು, 'ಕನ್ನಡನಾಡಿನ ಸಿರಿವಂತಿಕೆ'-ಅಹಲ್ಯ ಬಲ್ಲಾಳ್
- ↑ Mumbai: Dramas convey social and cultural message; Ahalya Ballal, 17 Jan 2014
- ↑ Ahalya Ballal, thorough and good
- ↑ 10 ಏಪ್ರಿಲ್ 2015, vArtabharati, ಅಂಕಣ - ಮುಂಬಯಿ ಮೇರಿ ಜಾನ್ ಯಶಸ್ವಿ ರಂಗ ಪ್ರಯೋಗ ನೀಡುವ ಆತ್ಮೋಲ್ಲಾಸ ಬುಧವಾರ - ಫೆಬ್ರವರಿ -08-2012
- ↑ Science Graph[permanent dead link]
- ↑ ಅಹಲ್ಯಾ ಬಲ್ಲಾಳ್ ಒಂದೊಂದೂ ನೆನಪು ಪುಟಗಳ ನಡುವಿನ ನವಿಲುಗರಿ: ಅಹಲ್ಯಾಬಲ್ಲಾಳ್, Wednesday, 22 May,
- ↑ one India kannada, June 19, 2014, ಜೂ. 21ರಂದು ಮಾಯಾವಿ ಸರೋವರ ನಾಟಕ
- ↑ kannada ranga bhumi, facebook, `ಮುಂಬಯಿ ಚುಕ್ಕಿ ಸಂಕುಲ’ ತಂಡದಿಂದ, ‘ಚೌಕಟ್ಟಿನಾಚೆಯ ಚಿತ್ರಗಳು’