ಕಪ್ಪತಗುಡ್ಡ

ಕಪ್ಪತಗುಡ್ಡ (ದ್ರೋಣ ಗಿರಿ) ಪಾರ್ವತಿ ದೇವಿಯ ವಿಹಾರ ಸ್ಥಳ

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೆ ಪ್ರಖ್ಯಾತವಾಗಿರುವ ಕಪ್ಪತಗುಡ್ಡ , ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ. ಖನಿಜ , ನೈಸರ್ಗಿಕ ಸಂಪತ್ತು ಹೊಂದಿದೆ.ಈ ಪ್ರದೇಶವನ್ನು ಇತ್ತೀಚೆಗೆ ಕರ್ನಾಟಕ ಸರ್ಕಾರವು ವನ್ಯಜೀವಿ ಅಭಯಾರಣ್ಯವಾಗಿ ಘೋಷಿಸಿದೆ.ಒಟ್ಟಾಗಿ 17,872 ಹೆಕ್ಟೇರ್ ಇರುವ ಕಪ್ಪತಗುಡ್ಡ ಅರಣ್ಯ ಪ್ರದೇಶವು ಗದಗ ತಾಲೂಕಿನಲ್ಲಿ 401.811 ಹೆಕ್ಟೇರ್, ಮುಂಡರಗಿ ತಾಲೂಕಿನಲ್ಲಿ 15,433.673 ಹೆಕ್ಟೇರ್, ಮತ್ತು ಶಿರಹಟ್ಟಿ ತಾಲೂಕಿನಲ್ಲಿ 2016 ಹೆಕ್ಟೇರ್ಗಳಷ್ಟು ಪ್ರದೇಶವನ್ನು ಹಂಚಿಕೊಂಡಿದೆ.ಇದರಲ್ಲಿ 89.92 ಹೆಕ್ಟೇರ್ ಔಷಧೀಯ ಸಸ್ಯಗಳ ಸಂಗ್ರಹಣೆಗೆ ಮಾತ್ರ ಮೀಸಲಿಡಲಾಗಿದೆ. ಈ ಪ್ರದೇಶವನ್ನು ನೂರಾರು ವರ್ಷಗಳಿಂದ ಔಷಧೀಯ ಸಸ್ಯಗಳ ವಾಸಸ್ಥಾನ ಎಂದು ಕರೆಯಲಾಗಿದೆ.


  • ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅಡಿಯಲ್ಲಿ ಬರುವ ಕಪ್ಪತ್ತಗುಡ್ಡದ ಪ್ರಸಿದ್ಧ ತಾಣಗಳಲ್ಲಿ ಒಂದಾದ

ಶ್ರೀ ಗೆಜ್ಜಿ ಸಿದ್ದಾವಧೂತರ ಮಠ , ಬಹುಶಃ ಈ ಮಠವನ್ನ " ಶಕ್ತಿ ಪೀಠ "ವೆಂದರೆ ಅತಿಶಯೋಕ್ತಿ ಅಲ್ಲ.


  • ಈ ತಾಣ ಹಸಿರ ಸೊಬಗು ತುಂಬಿರುವ ದಟ್ಟ ಕಾನನ, ಈ ಕಾಡಿನಲ್ಲಿ ಬೆಟ್ಟದ ತುದಿಯಲ್ಲಿ ಸುಮಾರು 250 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಅನ್ನ ಜ್ಞಾನ ದಾಸೋಹ ಮಠ ಅಥವಾ ಆಶ್ರಮ, ಈ ಮಠವು ದಕ್ಷಿಣ ಸಸ್ಯಕಾಶಿಯೆಂದು ಪ್ರಖ್ಯಾತವಾಗಿರುವ ಕಪ್ಪತ್ತಗುಡ್ಡ,ದಲ್ಲಿರುವ ಹತ್ತಿರದ ಡೋಣಿ ನಗರದಿಂದ 3 ಕೀ ಮೀ ಗಳಷ್ಟು ದೂರದಲ್ಲಿ ಇದೆ, ಕಡಕೋಳದಿಂದ 5 ಕೀ ಮೀ ಗಳಷ್ಟು ದೂರದಲ್ಲಿ ಇದೆ,


ಮುಂಡರಗಿ



 Uttar Karnatakad sahyadri