ನೃಪತುಂಗ ಸಾಹಿತ್ಯ ಪ್ರಶಸ್ತಿ

ಸಾಹಿತ್ಯ ಪ್ರಶಸ್ತಿ

ನೃಪತುಂಗ ಸಾಹಿತ್ಯ ಪ್ರಶಸ್ತಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಸ್ಥಾಪಿಸಿರುವ ಪ್ರಶಸ್ತಿಯಾಗಿದ್ದು, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ದವಾದ ಹಾಗೂ ಮೌಲಿಕವಾದ ಕೊಡುಗೆ ನೀಡಿದ ಬರಹಗಾರರೊಬ್ಬರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರಶಸ್ತಿಯನ್ನು ಯಾವುದೇ ಕೃತಿಗೆ ನೀಡದೆ, ವ್ಯಕ್ತಿಯ ಸಮಗ್ರ ಕೊಡುಗೆಯನ್ನು ಪರಿಗಣಿಸಲಾಗುತ್ತದೆ.[೧]

ಪ್ರಶಸ್ತಿ ಬದಲಾಯಿಸಿ

  • ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಯನ್ನು ಕನ್ನಡದ ಶ್ರೇಷ್ಠ ವಿದ್ವಾಂಸರು, ಕನ್ನಡಪರ ಹೋರಾಟಗಾರರಿಗೆ ನೀಡಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಸಾಪದಲ್ಲಿರಿಸಿರುವ 1.5 ಕೋಟಿ ರೂ. ದತ್ತಿಯ ಮೂಲಕ ಕನ್ನಡದ ಗಣ್ಯ ಸಾಧಕರಿಗೆ ನೃಪತುಂಗ ಪ್ರಶಸ್ತಿಯನ್ನು ಪ್ರದಾನ ಮಾಡುವುದು.[೧]
  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೊಡುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಭಾಜನರು:
  • ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ (2015) ವಿದ್ವಾಂಸ ಡಾ.ಟಿ. ವಿ. ವೆಂಕಟಾಚಲ ಶಾಸ್ತ್ರಿ ಅವರು ಆಯ್ಕೆಯಾಗಿದ್ದಾರೆ. [೨]
  • 2016 ರ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಭಾಜನರಾಗಿದ್ದಾರೆ.

[೩]

ಇದುವರೆಗೆ ಪ್ರಶಸ್ತಿ ಪಡೆದವರು ಬದಲಾಯಿಸಿ

  • ಜಿ. ಎಸ್. ಆಮೂರ -2020
  • ಜಿ ವೆಂಕಟೇಶ್ - 2021

ನೋಡಿ ಬದಲಾಯಿಸಿ

ಉಲ್ಲೇಖ & ಬಾಹ್ಯಕೊಂಡಿಗಳು ಬದಲಾಯಿಸಿ

  1. ಹೆಚ್ಚಿನ ವಿವರ, ಕಸಪ ಮತ್ತು ಬಿ.ಎಂ.ಟಿ.ಸಿ ಜಂಟಿಯಾಗಿ ಸ್ಥಾಪಿಸಿರುವ ನೃಪತುಂಗ ಪ್ರಶಸ್ತಿಯ ಬಗ್ಗೆ ಹೆಚ್ಚಿನ ವಿವರ
  2. ದಿ.14/04/2016 :w:prajavani.net/article/ಡಾಟಿವಿ-ವೆಂಕಟಾಚಲ-ಶಾಸ್ತ್ರಿಗೆ-ನೃಪತುಂಗ-ಪ್ರಶಸ್ತಿ
  3. ಚಿದಾನಂದ ಮೂರ್ತಿಗೆ ‘ನೃಪತುಂಗ ಪ್ರಶಸ್ತಿ’;ಪ್ರಜಾವಾಣಿ ವಾರ್ತೆ;25 Jan, 2017