ಮಹಾಕವಿ ರನ್ನನ ಗದಾಯುದ್ಧ

’ಕವಿಚಕ್ರವರ್ತಿ’, ’ಕವಿರತ್ನ’ ಮುಂತಾದ ಬಿರುದುಗಳನ್ನು ಪಡೆದಿದ್ದ ಕವಿ 'ರನ್ನ'ನು ಕನ್ನಡ ಸಾಹಿತ್ಯ ಮಹಾಮಕುಟದಲ್ಲಿನ ಮೂರು ಅನರ್ಘ್ಯ ರತ್ನಗಳಲ್ಲಿ ಒಬ್ಬ. ಹತ್ತನೇ ಶತಮಾನದಲ್ಲಿ ಜೀವಿಸಿದ್ದ ಈ ಜೈನಕವಿಯು ’ಅಜಿತನಾಥ ಪುರಾಣ’, ’ಸಾಹಸಭೀಮ ವಿಜಯಂ/ಗದಾಯುದ್ಧ’ ಮುಂತಾದ ೫ ಕೃತಿಗಳನ್ನು ರಚಿಸಿದ್ದಾನೆ.

ಮಹಾಕವಿ ರನ್ನನ ಗದಾಯುದ್ಧ ಬದಲಾಯಿಸಿ

  • ’ಗದಾಯುದ್ಧ’ವನ್ನು ರನ್ನನು ತನ್ನ ಆಶ್ರಯದಾತ ಅರಸನಾದ ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿ, ಭೀಮನನ್ನೇ ಕಥಾನಾಯಕನನ್ನಾಗಿ ಕಲ್ಪಿಸಿ(ಕೊನೆಯಲ್ಲಿ ಪಟ್ಟಾಭಿಷೇಕವಾಗುವುದು ಭೀಮನಿಗೇ) ಬರೆದಿದ್ದಾನೆ. ಹತ್ತು ಆಶ್ವಾಸಗಳುಳ್ಳ ಈ ಚಂಪೂ ಕೃತಿಯು ಕೇವಲ ಗದಾಯುದ್ಧದ ಪ್ರಸಂಗವನ್ನಷ್ಟೇ ಕಥಾವಸ್ತುವನ್ನಾಗಿ ಹೊಂದಿದ್ದರೂ, ಸಮಗ್ರ ಮಹಾಭಾರತದ ಸಿಂಹಾವಲೋಕನವನ್ನಿಲ್ಲಿ ಕಾಣಬಹುದು.
  • ಭೀಮನ ಪರಾಕ್ರಮವನ್ನಷ್ಟೇ ಅಲ್ಲ, ಕರ್ಣ-ದುರ್ಯೋಧನರ ಸ್ನೇಹದ ಆಳ-ವಿಸ್ತಾರವನ್ನಿಲ್ಲಿ ಕಾಣುತ್ತೇವೆ. ಕರ್ಣನ ಸಾವಿಗಾಗಿ ಮರುಗುವ ದುರ್ಯೋಧನ ನನ್ನು ಕಂಡು ನಮಗೂ ಅಷ್ಟೇ ವ್ಯಥೆಯಾಗದೇ ಇರದು. ಎಲ್ಲೋ ಒಮ್ಮೆ ದುರ್ಯೋಧನನೂ ತುಂಬ ಇಷ್ಟವಾಗಿಬಿಡುತ್ತಾನೆ ಇಲ್ಲಿ! ಹಾಗಿದೆ ಆ ಪಾತ್ರದ ಪೋಷಣೆ.
  • ಕವಿಯು ತನ್ನ ಆಶ್ರಯದಾತನನ್ನು ಭೀಮನಿಗೆ ಹೋಲಿಸಿ ಈ ಕಾವ್ಯವನ್ನು ರಚಿಸಿದ್ದಾನೆ. ಹಾಗಾಗಿ ಹಲವಾರು ಐತಿಹಾಸಿಕ ಘಟನೆಗಳೂ(ಸತ್ಯಾಶ್ರಯನ ಬಗೆಗಿನ ಘಟನೆಗಳೂ) ಈ ಕಾವ್ಯದಲ್ಲಿ ಪ್ರಸ್ತಾಪಿತವಾಗಿವೆ. ಕೃತಿಯ ಆದಿಯಲ್ಲಿಯೇ ಕವಿಯು ತಾನು ಈ ಕೃತಿಯನ್ನು ಏಕೆ ಬರೆಯು ತ್ತಿರುವುದಾಗಿ ಹೇಳಿಬಿಡುತ್ತಾನೆ.


ಎನಿಸಿದ ಸತ್ಯಾಶ್ರಯದೇ
ವನೆ ಪೃಥ್ವೀವಲ್ಲಭಂ ಕಥಾನಾಯಕನಾ
ಗನಿಲಜನೊಳ್ ಪೋಲಿಸಿ ಪೇ
ೞ್ದನೀ ಗದಾಯುದ್ಧಮಂ ಮಹಾಕವಿ ರನ್ನಂ ||೧.೩೧||

ಕೃತಿ ನೆಗೞ್ದ ಗದಾಯುದ್ಧಂ
ಕೃತಿಗೀಶಂ ಚಕ್ರವರ್ತಿ ಸಾಹಸಭೀಮಂ
ಕೃತಿಯಂ ವಿರಚಿಸಿದನಲಂ
ಕೃತಿಯಂ ಕವಿರತ್ನನೆಂದೊಡೇವಣ್ಣಿಪುದೋ ||೧.೩೨||

ಮೊದಲೊಳ್ ಬದ್ಧವಿರೋಧದಿಂ ನೆಗೞ್ದ ಕುಂತೀಪುತ್ರರೊಳ್ ಭೀಮನಂ
ಕದ ಗಾಂಧಾರಿಯ ಪುತ್ರರೊಳ್ ಮೊದಲಿಗಂ ದುರ್ಯೋಧನಂ ಧರ್ಮಯು
ದ್ಧದೊಳಂತಾತನನಿಕ್ಕಿ ಕೊಂದನದಱಿಂ ಭೀಮಂ ಜಯೋದ್ಧಾಮನೆಂ
ಬುದನೆಂಬಂತಿದು ವಸ್ತುಯುದ್ಧಮೆನಿಸಲ್ ಪೇೞ್ದಂ ಗದಾಯುದ್ಧಮಂ ||೧.೩೩||