ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೫೬

ವಿಠ್ಠಲ, ವಿಠೋಬಾ ಮತ್ತು ಪಾಂಡುರಂಗ ಎಂದೂ ಪರಿಚಿತನಿರುವ, ಮುಖ್ಯವಾಗಿ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳಲ್ಲಿ ಆರಾಧಿಸಲಾಗುವ ಒಬ್ಬ ಹಿಂದೂ ದೇವರು. ಅವನನ್ನು ಸಾಮಾನ್ಯವಾಗಿ ಹಿಂದೂ ವಿಷ್ಣು ಅಥವಾ ಅವನ ಅವತಾರನಾದ ಕೃಷ್ಣ ಅಥವಾ, ಪ್ರಾಸಂಗಿಕವಾಗಿ, ಅವನ ಅವತಾರ ಬುದ್ಧನ ಒಂದು ಸ್ವರೂಪವೆಂದು ಪರಿಗಣಿಸಲಾಗುತ್ತದೆ. ಕೆಲವೊಮ್ಮೆ ಅವನನ್ನು ಶಿವನೊಂದಿಗೂ ಸಂಬಂಧಿಸಲಾಗುತ್ತದೆ. ವಿಠ್ಠಲನನ್ನು ಹಲವುವೇಳೆ, ಸೊಂಟದ ಮೇಲೆ ಕೈಯಿಟ್ಟುಕೊಂಡು ಒಂದು ಇಟ್ಟಿಗೆಯ ಮೇಲೆ ನಿಂತಿರುವ, ಕೆಲವೊಮ್ಮೆ ಅವನ ಮುಖ್ಯ ಪತ್ನಿಯಾದ ರಖುಮಾಯಿ (ರುಕ್ಮಿಣಿ) ಜೊತೆಯಲ್ಲಿರುವಂತೆ, ಒಬ್ಬ ಕಪ್ಪು ಬಣ್ಣದ ಬಾಲಕನನ್ನಾಗಿ ಚಿತ್ರಿಸಲಾಗುತ್ತದೆ. ವಿಠ್ಠಲನು ಮಹಾರಾಷ್ಟ್ರದ ಏಕದೇವತಾವಾದಿ ಬ್ರಾಹ್ಮಣೇತರ ವಾರಕರೀ ಪಂಥ ಮತ್ತು ಕರ್ನಾಟಕದ ಹರಿದಾಸ ಪಂಥಗಳ ಕೇಂದ್ರಬಿಂದುವಾಗಿದ್ದಾನೆ. ವಿಠ್ಠಲನ ಮುಖ್ಯ ದೇವಸ್ಥಾನ, ಕರ್ನಾಟಕದ ಗಡಿಗೆ ಹತ್ತಿರವಿರುವ, ಮಹಾರಾಷ್ಟ್ರದ ಪಂಢರಪುರದಲ್ಲಿದೆ. ವಿಠ್ಠಲನ ದಂತಕಥೆಗಳು, ಈ ದೇವರನ್ನು ಪಂಢರಪುರಕ್ಕೆ ಕರೆತಂದನೆಂದು ನಂಬಲಾದ, ಅವನ ಭಕ್ತ ಪುಂಡಲೀಕನ ಸುತ್ತ, ಮತ್ತು ವಾರಕರೀ ಮತದ ಕವಿ-ಸಂತರ ಒಬ್ಬ ಸಂರಕ್ಷಕನಾಗಿ ವಿಠ್ಠಲನ ಪಾತ್ರದ ಸುತ್ತ ಕೇಂದ್ರೀಕೃತವಾಗಿವೆ.