ಸದಸ್ಯ:Indudhar Haleangadi/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೨ ನೇ ಸಾಲು:
=ಹಿನ್ನೆಲೆ=
ಕಾಯ್ದಿರಿಸಿದ ವಿಧಾನಸಭಾ ಕ್ಷೇತ್ರದ, ಕಾಂಗ್ರೆಸ್ ಶಾಸಕರೊಬ್ಬರ ಸಂಬಂಧಿಯೊಬ್ಬರು ಆಗಸ್ಟ್ ೧೧, ೨೦೨೦ ರ ಸಂಜೆ ಫೇಸ್ಬುಕ್ ಪೋಸ್ಟ್ ಈ ಎಲ್ಲಾ ಗಲಭೆಗೆ ಮೂಲ ಕಾರಣವಾಗಿದೆ. ನವೀನ್ ಹೆಸರಿನ ಸಂಬಂಧಿ, ಫೇಸ್ಬುಕ್ ನಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಪೋಸ್ಟ್ ಒಂದನ್ನು ಹಂಚಿದ್ದರು. ಇದಕ್ಕೆ ಮಹಮ್ಮದ್ ಅನುಯಾಯಿಗಳಿಂದ ತೀವೃ ವಿರೋಧ ವ್ಯಕ್ತವಾಯಿತು. ರಾತ್ರಿ ಸುಮಾರು ೮-೯ ಗಂಟೆಯ ಹೊತ್ತಿಗೆ, ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಯ ಹೊರಗೆ ದೊಡ್ಡ ಜನಸಮೂಹವೇ ಜಮಾಯಿಸಿತ್ತು. ಅಲ್ಲಿ "ಫೇಸ್ಬುಕ್ ನ ಅವಹೇಳನಕಾರಿ ಹೇಳಿಕೆಯ" ವಿರುದ್ಧ ಇವರು ಗರ್ಜಿಸಲು ಪ್ರಾರಂಭಿಸಿದರು. ಶ್ರೀನಿವಾಸ ಮೂರ್ತಿಯ ಸೋದರಳಿಯನೆಂದು ಹೇಳಲಾಗುವ ನವೀನ್ನನ್ನು ಬಂಧಿಸುವಂತೆ ಒತ್ತಾಯಿಸಿ ಜನಸಮೂಹ ಅಲ್ಲಿ ಅಕ್ಕಪಕ್ಕದಲ್ಲಿ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಲು ಪ್ರಾರಂಭಿಸಿದರು. ನೆರೆದಿದ್ದ ಜನರು,
ಇದೇ ವೇಳೆ, ಮತ್ತೊಂದು ಗುಂಪು, ಪೊಲೀಸ್ ಠಾಣೆಗೆ ತೆರಳಿ ಶಾಸಕರ ಸೋದರಳಿಯ ವಿರುದ್ಧ ಎಫ್ಐಆರ್ ದಾಖಲಿಸಲು ಹೋದರು. ಆದರೆ ಪೊಲೀಸರು ಎಫ್ಐಆರ್ ಬರೆಯಲು ನಿರಾಕರಿಸಿದಾಗ, ಅವರು ನೇರವಾಗಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ಹಿಂಸಾತ್ಮಕವಾಗಿ ದಾಳಿ ನಡೆಸಿದಲ್ಲದೆ, ಅಲ್ಲಿದ್ದ ವಾಹನಗಳನ್ನು ಮತ್ತು ಇತರ ಪೀಠೋಪಕರಣಗಳನ್ನು ಧ್ವಂಸಗೊಳಿಸಿದರು<ref>https://vijaykarnataka.com/news/bengaluru-city/mob-attacks-on-police-in-dg-halli-police-station-over-controversial-fb-post/articleshow/77492141.cms</ref>. ಗಲಭೆಯಲ್ಲಿ ಕೆಲವರು, ಮೊಲೊಟೊವ್ ಕಾಕ್ಟೈಲ್ ಅನ್ನು ಸಹ ಬಳಸಿದರು. ಪರಿಸ್ಥಿತಿಯು ನಿಯಂತ್ರಣಕ್ಕೆ ಬಾರದಾಗ, ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದರು. ಬಳಿಕ ನಡೆದ ಗೋಲಿಬಾರ್ ನಲ್ಲಿ ಮೂವರು ಪ್ರತಿಭಟನಾಕಾರರ ಬಲಿಯಾಗಿದೆ. ಗಲಭೆಯಲ್ಲಿ 60 ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ.
ಜನಸಮೂಹದ ಹಲವು ಸದಸ್ಯರು, ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಯಾದ ಪಿಎಫ್ಐನ ರಾಜಕೀಯ ದಳ ಎಸ್ಡಿಪಿಐನ ಬೆಂಬಲಿಗರು ಎಂದು ಆರೋಪಿಸಲಾಗಿದೆ. ಆದರೆ, ಎಸ್.ಡಿ.ಪಿ.ಐ ನ ಅಧ್ಯಕ್ಷರು ಈ ಆರೋಪವನ್ನು ತಳ್ಳಿಹಾಕಿದ್ದು, ಪೋಲೀಸರ ನಿರ್ಲಕ್ಷ್ಯವೇ ಗಲಭೆಗೆ ಮೂಲ ಕಾರಣ ಎಂದಿದ್ದಾರೆ.<ref>https://suddivani.com/%E0%B2%AC%E0%B3%86%E0%B2%82%E0%B2%97%E0%B2%B3%E0%B3%82%E0%B2%B0%E0%B2%BF%E0%B2%A8%E0%B2%B2%E0%B3%8D%E0%B2%B2%E0%B2%BF-%E0%B2%A8%E0%B2%A1%E0%B3%86%E0%B2%A6-%E0%B2%97%E0%B2%B2%E0%B2%AD%E0%B3%86/</ref>
೧೮ ನೇ ಸಾಲು:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸೇರಿದಂತೆ ಕಾಂಗ್ರೆಸ್ ನಾಯಕರು ಈ ಗಲಭೆಯು ಸಂಘಟಿತ ಜನಸಮೂಹ ಎಂಬುವುದನ್ನು ಅಲ್ಲಗೆಳೆದಿದ್ದಾರೆ. ಪ್ರಮುಖವಾಗಿ, ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾಗಿದ್ದ ಅವಹೇಳನಕಾರಿ ಪೋಸ್ಟ್ ಒಂದನ್ನು ಮಾತ್ರ ವಿರೋಧಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಮತ್ತು ಪೋಲೀಸರು ಗಲಭೆಗಯು ಯೋಜಿತ ಮತ್ತು ಸಂಘಟಿತವೆಂದು ಹೇಳಿದೆ.
ಸೋದರಳಿಯ, ತನ್ನ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾನೆ.
=ಉಲ್ಲೇಖಗಳು=
|