ಜಯ. ಸಿ. ಸುವರ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಜಯ ಸಿ. ಸುವರ್ಣ''' ಶ್ರೇಷ್ಟ ಸಮಾಜಸೇವಕ, ಅಪೂರ್ವ ಸಾಧಕ, ಭಾರತ್ ಕೋ- ಆಪರೇಟಿವ್ ಬ...
( ಯಾವುದೇ ವ್ಯತ್ಯಾಸವಿಲ್ಲ )

೧೧:೩೦, ೨೩ ಅಕ್ಟೋಬರ್ ೨೦೨೦ ನಂತೆ ಪರಿಷ್ಕರಣೆ

ಜಯ ಸಿ. ಸುವರ್ಣ ಶ್ರೇಷ್ಟ ಸಮಾಜಸೇವಕ, ಅಪೂರ್ವ ಸಾಧಕ, ಭಾರತ್ ಕೋ- ಆಪರೇಟಿವ್ ಬ್ಯಾಂಕ್ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದಂತಹ  ಹಲವಾರು ಸಂಘಟನೆಗಳ ಸ್ಥಾಪಕರೆಂದು ಮುಂಬಯಿ ಮಹಾನಗರದಲ್ಲಿ ಜನಪ್ರಿಯರಾಗಿದ್ದಾರೆ.  ==ಜನನ ಮತ್ತು ವಿದ್ಯಾಭ್ಯಾಸ==ಜಯ ಸುವರ್ಣ ಜಿಲ್ಲೆಯ ಪಡುಬಿದ್ರಿ ಹತ್ತಿರದ ಅಡೈ ಮೂಲದ ಚಂದು ಪೂಜಾರಿ ಮತ್ತು ಅಚ್ಚು ಪೂಜಾರಿದಂಪತಿಗಳ ಪ್ರೀತಿಯ ಮಗನಾಗಿ ೧೯೪೬, ಮೇ. ೧೫, ಜನಿಸಿದರು. ಪ್ರಾಥಮಿಕ ೭ ನೆಯ ತರಗತಿಯವರೆಗೆ ತಮ್ಮ ಊರಿನಲ್ಲಿಯೇ  ಕಲಿತರು. ೮ ನೆಯ ತರಗತಿಗೆ ಕಲಿಯಲು ದೂರದ ಅದಮಾರು ಮತ್ತು ಹೆಜಮಾಡಿ ಶಾಲೆಗಳಿಗೆ ಹೋಗಬೇಕಿತ್ತು. ಜಯಸುವರ್ಣರ ಸೋದರಮಾವನಿದ್ದ ಮುಂಬಯಿಗೆ ೧೯೫೯ ರಲ್ಲಿ ಬಂದರು.  ಮುಂಬಯಿನಗರದ ಉಪನಗರವೊಂದಾದ ವಡಾಲಕನ್ನಡ ಶಾಲೆಯಲ್ಲಿ ೧೦ ಇಯತ್ತೆಯವರೆಗೆ ಅಭ್ಯಾಸಮಾಡಿದರು. ಹೋಟೆಲ್ ಕೆಲಸ ಮತ್ತು ವಿದ್ಯಾಭ್ಯಾಸ ಜೊತೆ ಜೊತೆಯಾಗಿ ಸಾಗುತ್ತಿತ್ತು. ಮುಂದೆ ಅಂಧೇರಿಯ ಚಿನೈ ಕಾಲೇಜಿಗೆ ಸೇರಿ ೧೯೭೪ ರಲ್ಲಿ ಪದವಿ ಗಳಿಸಿದರು. ಆದರೆ ಅವರಿಗೆ ಹೋಟೆಲ್ ಉದ್ಯಮದಲ್ಲಿ ಹೆಚ್ಚು ಆಸಕ್ತಿಕಾಣಿಸತೊಡಗಿತು.  ಮುಂಬಯಿ (ಪ) ಗೋರೆಗಾವ್ ನಲ್ಲಿ ಹೋಟೆಲ್ ಉದ್ಯಮಕ್ಕೆ ಪಾದಾರ್ಪಣೆ ಮಾಡಿದರು.'ಶೇಟ್ ರುಕ್ಕಾರಾಮ ಸಾಲ್ಯಾನ್' ಎಂಬ ಕನ್ನಡಿಗರ ಪರಿಚಯದಿಂದಾಗಿ ಹಲವಾರು ಕನ್ನಡದ ಉದ್ಯಮಿಗಳ ನೆರವುದೊರೆಯಿತು. ಮುಂಬಯಿ ನಗರದ ಕೋಟೆಯ ವಲಯದಲ್ಲಿ 'ಮೋಹನ್ ಟೆರೇಸ್' ನಲ್ಲಿದ್ದ 'ಬಿಲ್ಲವರ ಅಸೋಸಿಯೇಷನ್ ಕಚೇರಿ'ಯನ್ನು ಒಂದು ಸುಸಜ್ಜಿತ ಕಟ್ಟಡ ನಿರ್ಮಿಸಿ ಸ್ಥಳಾಂತರ ಗೊಳಿಸುವ ಕೆಲಸದಲ್ಲಿ ಸಾಲ್ಯಾನ್ ಗೆ ಸಹಾಯ ಮಾಡಿದರು. ತರುವಾಯ ಮೂಲ್ಕಿ ನಾರಾಯಣ ಗುರು ಶಾಲೆಯ ಪ್ರಗತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನವೀಕರಣ ನಡೆದಾಗ, ಮುಂಬಯಿನ ಉದ್ಯಮಿ ಗೆಳೆಯರ  ಮತ್ತು ಇತರರ ಸಹಾಯ- ಸಹಕಾರಗಳಿಂದ ೪೫ ಲಕ್ಷ ರೂಪಾಯಿ ದೇಣಿಗೆಯನ್ನು ಸಂಗ್ರಹಿಸಿದರು. ಬಿಲ್ಲವರ ಸಂಘದ ಒಕ್ಕೂಟದಲ್ಲಿ ಸುಮಾರು ೨೭೦ ಶಾಖೆಗಳಿವೆ. ಬಿಲ್ಲವರ  ಮಹಾಮಂಡಲದ ಸ್ಥಾಪಕ ಅಧ್ಯಕ್ಷರಾಗಿ ಕೆಲಸಮಾಡಿದರು. ತಮ್ಮ ಆಡಳಿತದ ಅವಧಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಎಜುಕೇಷನ್ ಟ್ರಸ್ಟ್, ಪಡುಬೆಳ್ಳೆ ಶಿಕ್ಷಣ ಸಂಸ್ಥೆಯನ್ನು ಬಿಲ್ಲವರ ಅಸೋಸಿಯೇಷನ್ ಆಡಳಿತದ ಅಡಿಯಲ್ಲಿ ತಂದರು. ಬಿಲ್ಲವರ ಅಸೋಸಿಯೇಷನ್ ನ ಮುಖಪತ್ರಿಕೆ 'ಅಕ್ಷಯ' ಬೆಳವಣಿಗೆಗೆ ಕಾರಣರಾದರು. ಸರಳತೆ, ಸ್ನೇಹಪರ ಮನೋಭಾವ, ಪ್ರಾಮಾಣಿಕತೆ, ಸಂಘಟನಾ ಕೌಶಲ್ಯ, ಔದಾರ್ಯಗುಣ, ಬಂದ ಸವಾಲುಗಳನ್ನು ಎದುರಿಸಿ ಜಯಶಾಲಿಯಾಗುವ ಆತ್ಮ ಸ್ಥೈರ್ಯಗಳು ಜಯ ಸುವರ್ಣರ ಯಶಸ್ಸಿಗೆ ಕಾರಣವಾಗಿವೆ.

ಪರಿವಾರ

ಪತ್ನಿ, ಲೀಲಾವತಿ ಜಯ.ಸಿ.ಸುವರ್ಣ, ಹಾಗೂ ಮಕ್ಕಳು :  ೧. ಸೂರ್ಯಕಾಂತ್ ಜಯ. ಸಿ . ಸುವರ್ಣ. ೨ ಸುಭಾಷ್ಜಯ. ಸಿ . ಸುವರ್ಣ. ೩. ದಿನೇಶ್ ಜಯ. ಸಿ . ಸುವರ್ಣ. ೪. ಯೋಗೇಶ್ ಜಯ. ಸಿ . ಸುವರ್ಣ 

ನಿಭಾಯಿಸುತ್ತಿರುವ ಸವಾಬ್ದಾರಿಯುತ ಹುದ್ದೆಗಳು

  1. ಲಲಿತ ರುಕ್ಕರಾಮ ಸಾಲ್ಯಾನ್ ಚಾರಿಟಬಲ್ ಟ್ರಸ್ಟ್ ನ ನಾರಾಯಣ ಗುರು ಇಂಗ್ಲಿಷ್ ಹೈಸ್ಕೂಲ್ ನ ಅಧ್ಯಕ್ಷ
  2. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಜಿರ್ಣೋದ್ಧಾರ (ಮುಂಬಯಿ) ಸಮಿತಿ ಸಂಚಾಲಕ
  3. ಮುಂಬಯಿ ಬಿಲ್ಲವರ ಅಸೋಸಿಯೇಷನ್ ಗೌರವ ಅಧ್ಯಕ್ಪ 
  4. ಭಾರತ್ ಕೋ ಆಪರೇಟಿವ್ ಬ್ಯಾಂಕ್ ನ ಕಾರ್ಯಾಧ್ಯಕ್ಷರು.
  5. ರಾಷ್ಟೀಯ ಬಿಲ್ಲವರ ಮಹಾಮಂಡಳ ಸಂಸ್ಥಾಪಕ ಅಧ್ಯಕ್ಷ 

ಪ್ರಶಸ್ತಿ ಪುರಸ್ಕಾರಗಳು

  1. ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ# ಯಕ್ಷಗಾನ ಕಲಾಪ್ರಶಸ್ತಿ, 
  2. ಸಮಾಜಸೇವಾ ಧುರೀಣ ಪ್ರಶಸ್ತಿ,
  3. ಜನ ಮನ ನಾಯಕ, ಮೊದಲಾದ ಹಲವಾರು ಪ್ರಶಸ್ತಿಗಳು ಸಂದಿವೆ. 

ಮುಂಬಯಿಯ ಹಲವಾರು ದೇವಾಲಯಗಳ ಟ್ರಸ್ಟ್ ಗೆ ಪದಾಧಿಕಾರಿಗಳಾಗಿ ಸೇವೆಸಲ್ಲಿಸುತ್ತಿದ್ದಾರೆ. 

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮಹಾರಾಷ್ಟ್ರ) ಕರ್ನಾಟಕ

ದಲ್ಲಿ ೧೦೨ ಶಾಖೆಗಳಿವೆ.  ಒಟ್ಟಾರೆ ರಾಷ್ಟ್ರದಲ್ಲಿನ  ೨೦೦೦ ಗಣನೀಯ ಸಾಧನೆಮಾಡಿದ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ 'ಭಾರತ್ ಬ್ಯಾಂಕ್' ಮುಂಚೂಣಿಯಲ್ಲಿರುವ ಸಂಸ್ಥೆಯೆಂದು ಹೆಸರುಗಳಿಸಿದೆ.  ಹಲವಾರು ಪುರಸ್ಕಾರ ಗೌರವಗಳು ಸಂದಿವೆ. 

ನಿಧನ

ಜಯ ಸಿ. ಸುವರ್ಣ ೨೧, ಅಕ್ಟೊಬರ್, ೨೦೨೦ ರಂದು ಮುಂಬಯಿ ಉಪನಗರದ ತಮ್ಮ ಗೋರೆಗಾಂವ್ (ಪ) ದಲ್ಲಿರುವ ನೀಲಗಿರಿ ಅಪಾರ್ಟ್ಮೆಂಟ್ಸ್ ನಲ್ಲಿ ತೀವ್ರ ಹೃದಯಾಘಾತದಿಂದ ಮರಣಿಸಿದರು. 

ಉಲ್ಲೇಖಗಳು