ಪಂಜೆ ಮಂಗೇಶರಾಯ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೮ ನೇ ಸಾಲು:
* ಕನ್ನಡ ಪಾಠಗಳಿಗೆ ಪದ್ಯಗಳು ಬೇಕಾದ ಆ ಕಾಲದಲ್ಲಿ ಪ್ರಥಮವಾಗಿ ಪದ್ಯಪುಸ್ತಕಗಳನ್ನು ಸಂಪಾದಿಸಿದರು. ೧೯೧೨ರಲ್ಲಿ ಮೊದಲನೆಯ, ೧೯೧೯ರಲ್ಲಿ ಎರಡನೆಯ ಹಾಗು ೧೯೨೭ರಲ್ಲಿ ಮೂರನೆಯ ಪದ್ಯಪುಸ್ತಕಗಳು ಹೊರಬಂದು ಪಾಠ್ಯಕ್ರಮದಲ್ಲಿ ಅಳವಡಿಕೆಯಾದವು. ಸ್ವತಃ ಪಂಜೆಯವರೆ ಈ ಪುಸ್ತಕಗಳಿಗಾಗಿ ಕೆಲವು ಪದ್ಯಗಳನ್ನು ರಚಿಸಿದರು. ಮ್ಯಾಕ್ ಮಿಲನ್ ಪ್ರಕಟಣ ಸಂಸ್ಥೆಯ ಕೋರಿಕೆಯಂತೆ ಕನ್ನಡದ ಪಠ್ಯ ಪುಸ್ತಕಗಳನ್ನು ಬರೆದರು.
* ಶಿಕ್ಷಣದ ದೃಷ್ಟಿಯಿಂದ ಹೊಸ ಮಾರ್ಗವನ್ನು ತುಳಿದ ಪಾಠಪುಸ್ತಕಗಳಿವು. ಪಂಜೆಯವರು ಬರೆದ ಮಕ್ಕಳ ಸಾಹಿತ್ಯವು ೨೨ ಶಿಶುಸಾಹಿತ್ಯವರ್ಗದ ಕಥೆಗಳನ್ನು, ೧೮ ಶಿಶುಗೀತೆಗಳನ್ನು, ೧೨ ಬಾಲಸಾಹಿತ್ಯ ಕಥೆಗಳನ್ನು, ೧೧ ಬಾಲಗೀತೆಗಳನ್ನು ಒಳಗೊಂಡಿದೆ. ಈ ಹೆಚ್ಚಿನವನ್ನು ಅವರು ’<big>ಕವಿಶಿಷ್ಯ</big> ಎಂಬ ಹೆಸರಲ್ಲಿ ಬರೆದರು. ತಾವೇ ಸಮರ್ಥ ಕವಿಗಳೆಂದು ಪ್ರಸಿದ್ಧರಾಗಿದ್ದರೂ, ತಾನು ಕವಿಯ ಶಿಷ್ಯನಷ್ಟೇ, ಎನ್ನುವ ವಿನಯ ಅವರದಾಗಿತ್ತು.
==ಕವಿತೆಗಳು== # ‘ನಾಗರಹಾವೆ ಹಾವೊಳು ಹೂವೆ ‘-ಇವರ ಪ್ರಸಿದ್ಧ ಬಾಲಗೀತೆ, ಕವಿತೆಯು [[ಆಂಗ್ಲ]]ರನ್ನು ಪ್ರತಿಮಾರೂಪದಿಂದ ಉದ್ದೇಶಿಸಿ ಬರೆದ ಕವಿತೆಯಾಗಿದೆ.
# ‘ತೆಂಕಣ ಗಾಳಿಯಾಟ’ The Frolic in the wind ಎಂಬ ಕವಿತೆಯ ರೂಪಾಂತರ.ಎಂಬ ಪದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕರಾವಳಿಯ ಮುಂಗಾರು ಮಳೆಯನ್ನು ತರುವ ಬಿರುಗಾಳಿಯ ಬಿರುಸನ್ನು ಕವನದ ಶಬ್ದಜಾಲ, ಅದರ ಗತಿ, ಧ್ವನಿ, ಎಲ್ಲವೂ ಮೇಳೈಸಿ ಸಾಕ್ಷಾತ್ಕರಿಸುವಂತೆ ಪ್ರತಿಧ್ವನಿಸುತ್ತವೆ.
# [[‘ ಅಣ್ಣನ ವಿಲಾಪ’]] " ಓ ಕಾಲ್ ಮೈ ಬ್ರದರ್ ಬ್ಯಾಂಕ್ ಟು ಮಿ " ಎಂಬುದರ ಕನ್ನಡ ಅನುವಾದ. ಹೊಸಗನ್ನಡದ ಮೊಟ್ಟಮೊದಲ ಶೋಕಗೀತೆಯಾಗಿದೆ. ಮಂಗೇಶರಾಯರ ಎರಡನೇ ಜೀವದಂತಿದ್ದ ತಮ್ಮನೊಬ್ಬನ ಅನಿರೀಕ್ಷಿತ ಸಾವಿನ ದುಃಖವನ್ನು ಬಹುಕಾಲ ಯಾರಲ್ಲೂ ತೋಡಿಕೊಳ್ಳದೆ ಎದೆಯಲ್ಲಿಟ್ಟುಕೊಂಡಿದ್ದು ನಂತರ ’ಎಲ್ಲಿ ಹೋದನು ಅಮ್ಮ’ ಎಂಬ ಸೊಲ್ಲಿನಿಂದ ಆರಂಭವಾಗುವ ಕವನವಿದು. ಕನ್ನಡದಲ್ಲಿ ಮೊದಲ ಬಾರಿಗೆ ಕಥನಕವನಗಳನ್ನು ಬರೆದವರೂ ಪಂಜೆಯವರೆ.
"https://kn.wikipedia.org/wiki/ಪಂಜೆ_ಮಂಗೇಶರಾಯ್" ಇಂದ ಪಡೆಯಲ್ಪಟ್ಟಿದೆ