ಬಿ.ಆರ್.ಪಂತುಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು http → https. General fixes enabled, replaced: http://www.youtube.com/ → https://www.youtube.com/
೪೮ ನೇ ಸಾಲು:
[[ಪುಟ್ಟಣ್ಣ ಕಣಗಾಲ್|ಪುಟ್ಟಣ್ಣ ಕಣಗಾಲರ]] ಪ್ರಕಾರ ಜನಸಾಮಾನ್ಯರನ್ನು ಚಿತ್ರಮಂದಿರಗಳತ್ತ ತರುವಂತೆ ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿದ್ದು ಈ ಬಿ.ಆರ್. ಪಂತುಲು.
ಅವರು ಅಭಿನಯ-ನಿರ್ದೇಶನ-ನಿರ್ಮಾಣ ಈ ಮೂರೂ ಕಲೆಗಳನ್ನು ಕರಗತ ಮಾಡಿಕೊಂಡು ಕನ್ನಡ ಚಿತ್ರರಂಗವನ್ನು ಅತ್ಯುತ್ತಮ ಗುಣಮಟ್ಟದ ಚಿತ್ರಗಳಿಂದ ಶ್ರೀಮಂತಗೊಳಿಸಿದ ಕಲಾವಿದ. 1957ರಿಂದ 1972ರವರೆಗೆ ಅವರು ಕನ್ನಡದಲ್ಲಿ ನಿರ್ಮಿಸಿದ ಚಿತ್ರಗಳು ಕನ್ನಡ ಚಿತ್ರರಂಗದತ್ತ ಭಾರತದ ಇಡೀ ಚಿತ್ರರಂಗ ತಿರುಗಿ ನೋಡು ವಂಥ ಇತಿಹಾಸವನ್ನೇ ನಿರ್ಮಿಸಿತು. ಸುಮಾರು 20 ಚಿತ್ರಗಳಲ್ಲಿನ ಶೇಕಡಾ 90ರಷ್ಟು ಚಿತ್ರಗಳಲ್ಲಿ ಡಾ. ರಾಜ್‌ಕುಮಾರ್ ನಾಯಕನಟ ನಾಗಿ ಅಭಿನಯಿಸಿರುವುದೊಂದು ವಿಶೇಷ.
ಜೊತೆಗೆ ಸ್ವತಃ ಬಿ.ಆರ್.ಪಂತುಲುರವರೂ ಒಂದು ಮುಖ್ಯ ಪೋಷಕ ಪಾತ್ರದಲ್ಲಿದ್ದು ತಂದೆಯಂತೆ ಆ ಇಡೀ ಚಿತ್ರದ ಏಳಿಗೆಗೆ ಕಾರಣ ವಾಗುತ್ತಿದ್ದುದು ಆ ಚಿತ್ರಗಳ ಇನ್ನೊಂದು ಸುವಿಶೇಷ. 1955ರಲ್ಲಿ ಪದ್ಮಿನಿ ಪಿಕ್ಚರ್ಸ್‌ ಲಾಂಛನದಡಿಯಲ್ಲಿ ಪಂತುಲುರವರು ತಮ್ಮ ಚಿತ್ರ ನಿರ್ಮಾಣವನ್ನು ಆರಂಭಿಸಿದರೂ ಅವರು ನಿರ್ಮಿಸಿದ ಚಿತ್ರಗಳನ್ನು "ಪಂತುಲು ಚಿತ್ರಗಳು"ಎಂದು ಕರೆಯುವುದೇ ವಾಡಿಕೆ.ಪಂತುಲುರವರನ್ನು ಬಹಳ ಮುಖ್ಯ ವಾಗಿ ನೆನೆಯಬೇಕಾದುದು ಅವರ ‘ಸ್ಕೂಲ್ ಮಾಸ್ಟರ್’ ಚಿತ್ರದ ಧ್ಯಾನದ ಆರಂಭದಿಂದಲೇ.[httphttps://www.youtube.com/watch?v=I3XHjgGO2ic&feature=related "ಸ್ವಾಮಿ ದೇವನೆ"] ಎಂಬ ಒಂದು ಹಾಡು ಸಾಕು ಪಂತುಲುರವರು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಪ್ರಾತಃ ಸ್ಮರಣೀಯರಾಗಲು.ಪಂತುಲು ಅವರು ಅದ್ಯಾಪಕರಾಗಿದ್ದಾಗ ಬಳಸುತ್ತಿದ್ದ "ಸೋಸಲೆ ಅಯ್ಯಾಶಾಸ್ತ್ರಿ"ಗಳ ಆ ಪ್ರಾರ್ಥನಾ ಗೀತೆ ಹೀಗಿದೆ-
ಸ್ವಾಮಿ ದೇವನೆ ಲೋಕ ಪಾಲನೆ
ತೇ ನಮೋಸ್ತುತೇ
೬೨ ನೇ ಸಾಲು:
ಈ ಹಾಡು ನಮ್ಮ ನಿಮ್ಮೆಲ್ಲರ ಪ್ರೈಮರಿ ಶಾಲೆಯ ಮಗ್ಗಿ ಪುಸ್ತಕದ ಮೊದಲ ಪುಟದ ಪ್ರಾರ್ಥನಾ ಗೀತೆ ಯಾಗಿ ಸೇರಿಕೊಂಡು ಸಿನಿಮಾ ಹಾಡೆಂಬ ಪ್ರತ್ಯೇಕತೆಯ ರಿಯಾಯಿತಿಯಿಲ್ಲದೆ ಬಹು ಮುಖ್ಯವಾದ ನಮ್ಮಲ್ಲಿ ಉತ್ಸಾಹ ತರುವ ಪ್ರಾರ್ಥ ನೆಯೇ ಆಗಿ ಹೋಗಿತ್ತು.
ಸ್ಕೂಲ್‌ಮಾಸ್ಟರ್’ ಚಿತ್ರದಲ್ಲಿ ಮೇಷ್ಟ್ರರಾಗಿ ಸ್ವತಃ ವಿ.ಆರ್. ಪಂತುಲುರವರ ಮನೋಜ್ಞ ಅಭಿನಯ-ಹಾವಭಾವ, ಮೇಷ್ಟ್ರರ ಹೆಂಡತಿಯಾಗಿ (ನಿಜ ಜೀವನದಲ್ಲಿಯೂ ಹೆಂಡತಿಯಾಗಿದ್ದವರು) ಕಲಾವಿದೆ ಎಂ.ವಿ. ರಾಜಮ್ಮನವರು ಪಂತುಲುವಿಗೆ ತಕ್ಕಂತೆ ಅಭಿನಯಿಸಿದ್ದರು.೨೦೧೧ ಜುಲೈಗೆ ೨೮ಕ್ಕೆ ಕನ್ನಡ ಚಿತ್ರರಂಗ ಕಂಡ ಮರೆಯಬಾರದ ಮಹಾನ್ ನಿರ್ಮಾಪಕ- ನಿರ್ದೇಶಕರು ಹುಟ್ಟಿ ೧೦೦ ವರ್ಷಗಳು ತುಂಬುತ್ತವೆ. ಅವರ ಜನ್ಮ ಶತಮಾನೋತ್ಸವವನ್ನು ಆಚರಿಸಲೇಬೇಕಾದ ಕನ್ನಡ ಚಿತ್ರರಂಗ ಭೂಮಿಯ ಮುಖ್ಯ ಪರ್ವವಿದು..ಆದ್ದರಿಂದ ಬಿ.ಆರ್. ಪಂತುಲುರವರ ಜನ್ಮ ಶತಮಾನೋತ್ಸವ ವರ್ಷಾಚರಣೆಯ ಸಂಭ್ರಮವಾಗಿ ಕನ್ನಡದ ಕಂದಮ್ಮಗಳು ಅವರ ಸಿನಿಮಾಗಳನ್ನು ವೀಕ್ಷಿಸಿ ಬೆಳೆಯುವಂತಹ ಸದವಕಾಶವನ್ನು ನಮ್ಮ ಫಿಲಂಚೇಂಬರ್ ಹಾಗೂ ಟಿವಿ ಚಾನೆಲ್‌ಗಳು ಕಲ್ಪಿಸಬೇಕಾಗಿದೆ. ಏಕೆಂದರೆ ಇದು ಕನ್ನಡ ಚಿತ್ರರಂಗದ ಪರಂಪರೆಗೆ ದೊರಕುವ ಜಯ ಹಾಗೂ ಪ್ರಗತಿಯ ದಾರಿ.ನಮನ
 
 
==ದಣಿವಿಲ್ಲದ ಧಣಿ== ಬಿ.ಆರ್.ಪಂತುಲು ಕನ್ನಡದ ಮೇರು ನಿರ್ದೇಶಕ, ನಿರ್ಮಾಪಕ, ನಟ ಬಿ.ಆರ್.ಪಂತುಲು ಅವರನ್ನು ಕುರಿತಂತೆ ಲೇಖಕ ಅ.ನಾ.ಪ್ರಹ್ಲಾದರಾವ್ ರಚಿಸಿರುವ `ದಣಿವಿಲ್ಲದ ಧಣಿ` ಪುಸ್ತಕವನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಕಟಿಸಿದ್ದು. ದಿನಾಂಕ 15.11.206ರಂದುಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ . ಖ್ಯಾತ ಕಲಾವಿದೆ ಪದ್ಮಶ್ರಿ ಡಾ. ಭಾರತಿ ವಿಷ್ಣುವರ್ಧನ್ ಪುಸ್ತಕವನ್ನು ಬಿಡುಗಡೆ ಮಾಡಿದರು. ಲೇಖಕ, ಪತ್ರಕರ್ತ ಶ್ರೀ ಜೋಗಿ (ಗಿರೀಶ್ ರಾವ್) ಪುಸ್ತಕ ಕುರಿತು ಮಾತನಾಡಿದರು. ನಿವೃತ್ತ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್, ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರಸಿಂಗ್ ಬಾಬು, ಶಿಕ್ಷಣ ತಜ್ಞ ವೋಡೆ ಕೃಷ್ಣ ಪಾಲ್ಗೊಂಡಿದ್ದರು.
"https://kn.wikipedia.org/wiki/ಬಿ.ಆರ್.ಪಂತುಲು" ಇಂದ ಪಡೆಯಲ್ಪಟ್ಟಿದೆ