ತೆಲುಗು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೦ ನೇ ಸಾಲು:
 
==ಬೆಳವಣಿಗೆ==
ರಾಜಮಹೇಂದ್ರಿಯಲ್ಲಿದ್ದ ಪೂರ್ವ [[ಚಾಲುಕ್ಯ]] ವಂಶದ ರಾಜರಾಜ ನರೇಂದ್ರನ (1033-43) ಆಸ್ಥಾನದಲ್ಲಿದ್ದ [[ನನ್ನಯ]]ನ ಕಾಲಕ್ಕೆ ಹಿಂದೆ ತೆಲುಗು ಭಾಷೆ ಹೇಗೆ ಬೆಳೆಯಿತು ಎಂಬ ವಿಷಯವನ್ನು ನಿರೂಪಿಸಲು ನಮಗೆ ತಕ್ಕಷ್ಟು ಆಧಾರಗಳು ದೊರೆತಿಲ್ಲ. ಬೆಜವಾಡದಲ್ಲಿರುವ ([[ವಿಜಯವಾಡ]]) ಒಂದು ಕಂಬದಲ್ಲಿ ಕೊರೆದಿರುವ "ಯುದ್ಧಮಲ್ಲ ಶಾಸನಮು" ಎಂಬ [[ಶಾಸನ]] ಮತ್ತು ನನ್ನಯ್ಯನಿಗೆನನ್ನಯನಿಗೆ ಹಿಂದಿನ ಇತರ ಶಾಸನಗಳಲ್ಲಿ ಪದ್ಯಗಳಿವೆ; ಅವುಗಳ ಭಾಷೆ ನನ್ನಯ್ಯನನ್ನಯ ಬಳಸಿರುವ ಭಾಷೆಯ ಹಾಗೆಯೇ ಇದೆ. ತೆಲುಗು ಭಾಷೆ ಅಥವಾ ಸಾಹಿತ್ಯ ಯಾವಾಗ ಹುಟ್ಟಿತ್ತೆಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅದು ಕ್ರಿ.ಶ 600ರ ಹೊತ್ತಿಗೆ ದ್ರಾವಿಡ ಭಾಷೆಯ ಒಂದು ಪ್ರತ್ಯೇಕ ಶಾಖೆಯಾಗಿ ಇದ್ದಿತ್ತೆಂಬುದನ್ನು ಆ ಕಾಲದ [[ಚೋಳ ವಂಶ|ಚೋಳ]] ಮಹಾರಾಜರ ತೆಲುಗು ಶಾಸನವೊಂದರಿಂದ ನಿರ್ದಿಷ್ಟವಾಗಿ ಹೇಳಬಹುದು.
 
ನನ್ನಯ್ಯನ ಕಾಲದಿಂದಾಚೆಗೆ ತೆಲುಗು ಭಾಷೆ ಹೇಗೆ ಬೆಳೆಯಿತು ಎಂಬುದಕ್ಕೆ ತಕ್ಕಷ್ಟು ಸಾಕ್ಷ್ಯಗಳಿವೆ. [[ತಮಿಳು|ತಮಿಳಿನಲ್ಲಿ]] ದ್ರಾವಿಡಾಂಶ ಹೇರಳವಾಗಿ ನಿಂತುಬಿಟ್ಟಿದೆ. ಸಂಸ್ಕೃತ ಅಥವಾ ಪ್ರಾಕೃತದ ಪ್ರಭಾವಕ್ಕೆ ಅದು ಅಷ್ಟಾಗಿ ಈಡಾಗಲಿಲ್ಲ; ಆದರೆ ಇತರ ಮೂರು ದ್ರಾವಿಡ ಭಾಷೆಗಳು ಸಂಸ್ಕೃತ ಮತ್ತು [[ಪ್ರಾಕೃತ]] ಶಬ್ದಗಳನ್ನು ಹೇರಳವಾಗಿ ತೆಗೆದುಕೊಂಡಿದೆ.[[ಮಲೆಯಾಳ ಭಾಷೆ|ಮಲೆಯಾಳ]] ತನ್ನ ದ್ರಾವಿಡಾಂಶದಲ್ಲಿ ಕನ್ನಡ ತೆಲುಗುಗಳಿಗಿಂತಲೂ ತಮಿಳಿಗೆ ಹೆಚ್ಚು ಸಮೀಪವಾಗಿದೆ. ತೆಲುಗಿಗೂ [[ಕನ್ನಡ]]ಕ್ಕೂ ಸಮಾನಾಂಶಗಳು ಹೆಚ್ಚಾಗಿದ್ದರೂ ತೆಲುಗುಗಿಂತಲೂತೆಲುಗಿಗಿಂತಲೂ ಕನ್ನಡದಲ್ಲಿ ದ್ರಾವಿಡಾಂಶ ಹೆಚ್ಚು. ಈ ಬಾಂಧವ್ಯಗಳು ಮತ್ತು ವ್ಯತ್ಯಾಸಗಳನ್ನು ಈ ಭಾಷೆಗಳು ಬೆಳೆದ ಕ್ಷೇತ್ರಗಳ ಭೌಗೋಳಿಕ ವೈಲಕ್ಷಣಗಳಿಂದಲೂ ಪ್ರಾಚೀನ ಹಾಗೂ ಮಧ್ಯಕಾಲದ ಭಿನ್ನಭಿನ್ನ ರಾಜಕೀಯ ಪರಿಸ್ಥಿತಿಗಳಿಂದಲೂ ಸುಲಭವಾಗಿ ತರ್ಕಿಸಬಹುದು. ತೆಲುಗು ದೇಶ ದಖನ್ನಿನ ಮಧ್ಯಭಾಗದಲ್ಲಿದೆ. ಓಂಡ್ರ ದೇಶದವರು ಈಶಾನ್ಯದಲ್ಲೂ [[ಮಧ್ಯಪ್ರದೇಶ]]ದ [[ಹಿಂದಿ ಭಾಷೆ]]ಯ ಜನರು ಉತ್ತರದಲ್ಲೂ ಮಹಾರಾಷ್ಟ್ರರು ವಾಯುವ್ಯದಲ್ಲೂ ಕನ್ನಡಿಗರು ಪಶ್ಚಿಮದಲ್ಲೂ ತಮಿಳರು ದಕ್ಷಿಣದಲ್ಲೂ ಅದನ್ನು ಸುತ್ತುವರಿದಿದ್ದಾರೆ. ದಕ್ಷಿಣಕ್ಕೆ ಪ್ರಸರಿಸುವಾಗ ಆರ್ಯಸಂಸ್ಕೃತಿ ಅನಿವಾರ್ಯವಾಗಿ ಮೊದಲು ತೆಲುಗು ದೇಶವನ್ನು ಹಾಯ್ದೇ ದಕ್ಷಿಣ ತುದಿಯನ್ನು ಮುಟ್ಟಬೇಕು. ಆದುದರಿಂದ ತೆಲುಗುಭಾಷೆ ಮತ್ತು ಸಂಸ್ಕೃತಿಗಳು [[ಆರ್ಯಭಾಷೆ]] ಮತ್ತು ಸಂಸ್ಕೃತಿಗಳಿಂದ ದಕ್ಷಿಣದ ಇತರ ಪ್ರದೇಶಗಳಿಗಿಂತ ಹೆಚ್ಚಾಗಿ ಪ್ರಭಾವಿತವಾದವು. ತೆಲುಗಿಗಿರುವ ಮತ್ತೊಂದು ಲಾಭಾಂಶವೇನೆಂದರೆ ಮಿಕ್ಕೆಲ್ಲ ದ್ರಾವಿಡ ಭಾಷೆಗಳಿಗಿಂತಲೂ ತೆಲುಗನ್ನು ಆಡುವ ಜನರೇ ಹೆಚ್ಚು ಮಂದಿ (ಸುಮಾರು ಮೂರು ಕೋಟಿ ಅರವತ್ತು ಲಕ್ಷ ಜನ) ಇದ್ದಾರೆ. ತನ್ನ ಮೃದು ಮಧುರ ಧ್ವನಿಗೆ ಅದು ಹೆಸರಾಗಿದೆ. ಪಾಶ್ಚಾತ್ಯ ಪ್ರವಾಸಿಗರು ಇದನ್ನು ಪೂರ್ವದ ಇಟಾಲಿಯನ್ ಎಂದು ಕರೆದಿದ್ದಾರೆ.
 
ತೆಲುಗು ಭಾಷೆ ಪ್ರಾಚೀನ ಕಾಲದಲ್ಲಿ ಹೇಗೆ ಬೆಳೆಯಿತು ಎಂಬುದನ್ನು ನಿರೂಪಿಸುವಾಗ ನನ್ನಯ್ಯನಿಗೆನನ್ನಯನಿಗಿಂತ ಪೂರ್ವದಹಿಂದಿನ ಕಾಲದ ಒಂದು ವಿಶಿಷ್ಟ ಲಕ್ಷಣವನ್ನು ಗಮನಕ್ಕೆ ತೆಗೆದುಕೊಳ್ಳುವುದು ಆವಶ್ಯಕ. ಇತರ ಭಾಷೆಗಳಲ್ಲಿ ಇನ್ನೂ ಉಳಿದುಕೊಂಡಿರುವ ಗಳ್(ಕಳ್) ಎಂಬ ಬಹುವಚನ ಪ್ರತ್ಯಯದ ಸ್ಥಾನವನ್ನು ನನ್ನಯ್ಯನಿಗೆನನ್ನಯನಿಗೆ ಬಹು ಹಿಂದೆಯೇ - ಲು ಎಂಬುದು ಆಕ್ರಮಿಸಿಕೊಂಡಿತು. ಅದು ಬಹುಕಾಲದಿಂದಲೂ ತೆಲುಗಿನಲ್ಲಿತ್ತೆಂಬುದನ್ನು ತೋರಿಸಲು -ಮ್ರಾ (ನ್) ಕುಲು (ಮರಗಳು) ; ಕೊಲ (ನ್) ಕುಲು (ಕೊಳಗಲುಕೊಳಗಳು); ಈಗಲು (ನೊಣಗಳು); ಏನುಗಲು (ಆನೆಗಳು) ಎಲುಕಲು (ಇಲಿಗಳು) ಇತ್ಯಾದಿ ಬಹುವಚನ ರೂಪಗಳು ನಿದರ್ಶನವಾಗಿ ಉಳಿದು ಬಂದಿದೆಬಂದಿವೆ. ಮುಂದೆ ಬಹುವಚನ ಪ್ರತ್ಯಯ ಲ (ಉ) ಎಂದು ತೆಲುಗರು ಕಂಡುಕೊಂಡಾಗ ಏಕವಚನ ರೂಪಗಳನ್ನು ರಚಿಸಲು ಲು ವನ್ನು ಕಳೆದಿಟ್ಟರು. ಉದಾಹರಣೆಗೆ, ಈಗ, ಏನುಗ, ಏಲುಕ; ತಮಿಳಿನ ಈ ಯಾನೈ, ಮುಂತಾದುವನ್ನು ನೋಡಬಹುದು.
 
ತೆಲುಗು ಭಾಷೆ ಪ್ರಾಚೀನ ಕಾಲದಲ್ಲಿ ಹೇಗೆ ಬೆಳೆಯಿತು ಎಂಬುದನ್ನು ನಿರೂಪಿಸುವಾಗ ನನ್ನಯ್ಯನಿಗೆ ಪೂರ್ವದ ಕಾಲದ ಒಂದು ವಿಶಿಷ್ಟ ಲಕ್ಷಣವನ್ನು ಗಮನಕ್ಕೆ ತೆಗೆದುಕೊಳ್ಳುವುದು ಆವಶ್ಯಕ. ಇತರ ಭಾಷೆಗಳಲ್ಲಿ ಇನ್ನೂ ಉಳಿದುಕೊಂಡಿರುವ ಗಳ್(ಕಳ್) ಎಂಬ ಬಹುವಚನ ಪ್ರತ್ಯಯದ ಸ್ಥಾನವನ್ನು ನನ್ನಯ್ಯನಿಗೆ ಬಹು ಹಿಂದೆಯೇ - ಲು ಎಂಬುದು ಆಕ್ರಮಿಸಿಕೊಂಡಿತು. ಅದು ಬಹುಕಾಲದಿಂದಲೂ ತೆಲುಗಿನಲ್ಲಿತ್ತೆಂಬುದನ್ನು ತೋರಿಸಲು -ಮ್ರಾ (ನ್) ಕುಲು (ಮರಗಳು) ; ಕೊಲ (ನ್) ಕುಲು (ಕೊಳಗಲು); ಈಗಲು (ನೊಣಗಳು); ಏನುಗಲು (ಆನೆಗಳು) ಎಲುಕಲು(ಇಲಿಗಳು) ಇತ್ಯಾದಿ ಬಹುವಚನ ರೂಪಗಳು ನಿದರ್ಶನವಾಗಿ ಉಳಿದು ಬಂದಿದೆ. ಮುಂದೆ ಬಹುವಚನ ಪ್ರತ್ಯಯ ಲ (ಉ) ಎಂದು ತೆಲುಗರು ಕಂಡುಕೊಂಡಾಗ ಏಕವಚನ ರೂಪಗಳನ್ನು ರಚಿಸಲು ಲು ವನ್ನು ಕಳೆದಿಟ್ಟರು. ಉದಾಹರಣೆಗೆ, ಈಗ, ಏನುಗ, ಏಲುಕ; ತಮಿಳಿನ ಈ ಯಾನೈ, ಮುಂತಾದುವನ್ನು ನೋಡಬಹುದು.
==ವ್ಯಾಕರಣ==
ತಮಿಳು ಮತ್ತು ಇತರ ದ್ರಾವಿಡ ಭಾಷೆಗಳಲ್ಲಿರುವಂತೆ ತೆಲುಗು ಸಹ ಬಹುವಚನ ದ್ವಿಲಿಂಗ ಪ್ರತ್ಯಯ [ರ(ಉ)] ವನ್ನು ಉಳಿಸಿಕೊಂಡಿದೆ. ಉದಾರಣೆಗೆ, ವಾರು (ಅವರು), ವೀರು (ಇವರು), ಎವರು (ಯಾರು?), ಮೀರು (ನೀವು), ಆದರೆ ಸರ್ವತ್ರ ಹರಡಿರುವ ಲು ವಿನ ಪ್ರಭಾವ ಎಷ್ಟೆಂದರೆ, ಅದಿಲ್ಲದಿದ್ದರೆ ಬಹುವಚನದ ಭಾವ ಸಮಗ್ರವಾಗಿ ಮನಸ್ಸಿಗೆ ತಟ್ಟುವುದಿಲ್ಲ. ಆದುದರಿಂದ ಕಾಲಕ್ರಮದಲ್ಲಿ ವಾರಲು, ವೀರಲು, ಮೀರಲು, ಮುಂತಾದವುಗಳು ಬೆಳೆದವು. ಇವು ಇಂಗ್ಲೀಷಿನಲ್ಲಿ ಚಿಲ್ರನ್ಸ್, ಮೆನ್ಸ್, ಡೇಟಾಸ್, ಎಂಬ ಹಾಗಿವೆ. ಕೆಲವು ಸಂದರ್ಭಗಳಲ್ಲಿ ದ್ವಿಲಿಂಗೀ ಬಹುವಚನ ಪ್ರತ್ಯಯದ ಸ್ಥಾನವನ್ನು ಸಹ ಲು ಆಕ್ರಮಿಸುತ್ತದೆ. ಉದಾಹರಣೆಗೆ, ವಾಂಡ್ಲು; ವಾಳ್ಳು (ಅವರು); ಕೂತುಂಡ್ಳು, ಕೂತೂಳ್ಳು, (ಹೆಣ್ಣು ಮಕ್ಕಳು) ಇತ್ಯಾದಿ. ಅನೇಕಾಕ್ಷರ ರೂಪಗಳನ್ನು ಮೊಟಕುಗೊಳಿಸಿದ ರೂಪಗಳು ನನ್ನಯ್ಯನ ಕಾಲದಷ್ಟು ಮುಂಚಿನಿಂದಲೇ ತಲೆದೋರುತ್ತದೆ. ಉದಾಹರಣೆಗೆ ಪೂಜಿಂಚಿತೇ? ಎಂಬ ನನ್ನಯ್ಯನ ಪ್ರಯೋಗ ಪೂಜಿಂಚಿತಿವೇ? (ಪೂಜಿಸಿದೆಯಾ) ಎಂಬುದರಿಂದ ಹುಟ್ಟಿದೆ. ಪೂಜಿಂಚಿತಿವೇನಿನ್ (ಪೂಜಿಸಿದ್ದೇ ಆದರೆ) ಎಂಬ ದೀರ್ಘರೂಪ ಕ್ರಮೇಣ ಪೂಜಿಂಚಿತಿವೇನಿ ಎಂದಾಗಿ, ಬಳಿಕ ವೇನ್-ವೇ; ತೇನ್-ತೇ ಮುಂತಾದ್ದಾಗಿ ಈಗಿನ ಪೂಜಿಸ್ತೇ ಎಂಬ ರೂಪಕ್ಕಿಳಿದಿದೆ. ಪೂಜಿಂಚಿತೇನ್ ಎಂಬುದಕ್ಕಿಂತ ಹಿಂದಿನ ಶಬ್ದರೂಪಗಳಲ್ಲಿ `ವಿ ಎಂಬುದಿದ್ದು ಮಧ್ಯಮ ಪುರುಷದ ಏಕವಚನವನ್ನು ನಿರ್ದೇಶಿಸುತ್ತಿತ್ತು. ಆದರೆ ಆ ತರುವಾಯದ ರೂಪಗಳಲ್ಲಿ ವಿ ಅಳಿದುಹೋಗಿ ಆ ರೂಪ ಎಲ್ಲ ಜನಕ್ಕೂ ಏಕವಚನ ಬಹುವಚನಗಳೆರಡಲ್ಲೂ ಪ್ರಯುಕ್ತವಾಗತೊಡಗಿತು. ಹೀಗೆ ಮಟ್ಟ ಸಮ ಮಾಡುವ ಪ್ರವೃತ್ತಿ ಈ ಮಾತುಗಳಲ್ಲಿ ಕಂಡು ಬರುತ್ತದೆ. ಅಂಟಿವೇನಿನ್ ಎಂಬುದರಿಂದ ಅನ್‍ಟೆ (ನೀನು ಹೇಳಿದರೆ); ಐತಿವೇನಿನ್ ಎಂಬುದರಿಂದ ಐತೆ (ನೀನು ಹೀಗಾಗುವುದಾದರೆ) ಇತ್ಯಾದಿ. ಕವಿಗಳು ಈ ಎಲ್ಲ ರೂಪಗಳನ್ನೂ ಛಂದಸ್ಸಿನ ಸೌಕರ್ಯಕ್ಕಾಗಿ ಉಪಯೋಗಿಸುತ್ತಾರೆ. ಕಾವ್ಯಗಳಲ್ಲೂ ಅವುಗಳನ್ನು ಅನುಸರಿಸಿ ಬರೆದ ವ್ಯಾಕರಣಗಳಲ್ಲೂ ಜನರಾಡುವ ಮಾತಿನಲ್ಲಿ ತೋರಿ ಬರುವ ಬದಲಾವಣೆಗಳು ಕಂಡುಬರುವುದಿಲ್ಲ. ಏಕೆಂದರೆ ಬಹು ಹಿಂದಣ ಕವಿಗಳು ಅನಿವಾರ್ಯವಾಗಿ ತಾವಾಡುತ್ತಿದ್ದ ಭಾಷೆಯನ್ನೇ ತಮ್ಮ ಕಾವ್ಯಗಳಲ್ಲಿ ಬಳಸುತ್ತಿದ್ದರೂ ಮುಂದೆ ಬಂದ ಕವಿಗಳು ಹಿಂದಿನ ಕವಿಗಳ ಭಾಷೆಗೆ ತಮ್ಮ ಕಾಲದ ಆಡುಮಾತಿಗಿಂತಲೂ ಹೆಚ್ಚಿನ ಗಮನವನ್ನು ಕೊಡುತ್ತಿದ್ದರು; ವೈಯಾಕರಣರು ಭಾಷೆ ಒಂದೇ ಸಲಕ್ಕೆ ಸ್ಥಿರರೂಪವನ್ನು ಪಡೆದುಬಿಟ್ಟಿರುವಂತೆ ಭಾವಿಸಿ ಪ್ರಾಚೀನ ಕವಿಗಳ ಪ್ರಯೋಗಗಳನ್ನೇ ಅವಲಂಬಿಸಿ ವ್ಯಾಕರಣ ಸೂತ್ರಗಳನ್ನು ರಚಿಸಿದರು. ಆದರೆ ಕವಿಗಳು ತಿಳಿದೋ ತಿಳಿಯದೆಯೋ ವ್ಯಾಕರಣ ಸೂತ್ರಗಳನ್ನು ಮುರಿಯುತ್ತಿದ್ದರು. ಎಷ್ಟು ಪ್ರಾಚೀನವಾದರೆ ಅಷ್ಟು ಶ್ರೇಷ್ಠ ಎಂಬ ಸೂತ್ರವನ್ನು ಸಂಪ್ರದಾಯ ನಿಷ್ಠ ಕವಿಗಳೂ ವೈಯಾಕರಣರೂ ಭಾಷಾಕ್ಷೇತ್ರದಲ್ಲೂ ಎತ್ತಿ ಹಿಡಿದಿದ್ದರು. ಆದರೆ ಕವಿಗಳು ಹಳೆಯ ವ್ಯಾಕರಣಸೂತ್ರಗಳನ್ನು ಬದಿಗೊತ್ತಿ ಜೀವಂತವಾಗಿರುವ ಆಡುಮಾತನ್ನೇ ಬಳಸಲು ಹಿಂಜರಿಯಲಿಲ್ಲ. ಏಕೆಂದರೆ ಅವು ಅವರ ಭಾವಗಳನ್ನು ಪ್ರಕಟಿಸಲು ಹೆಚ್ಚು ಪರಿಣಾಮಕಾರಿಯಾಗಿದ್ದುವಲ್ಲದೆ ಪ್ರಾಚೀನ ಶಬ್ದಗಳಿಗಿಂತಲೂ ಸುಲಭವಾಗಿ ಅರ್ಥವಾಗುತ್ತಿದ್ದವು. ಆದರೆ ಇಂಥ ಕವಿಗಳು ಬಹು ವಿರಳ. ಅವರು ಆಡುಮಾತುಗಳನ್ನು ಎಚ್ಚರದಿಂದಲೂ ಅಂಜಿಕೆಯಿಂದಲೂ ಪ್ರಯೋಗಿಸುತ್ತಿದ್ದರು. ಶಾಸನಗಳು, ಹಾಡುಗಳು, ಶತಕಗಳು ಮತ್ತು ತಮ್ಮ ತತ್ತ್ವಗಳು ಜನಕ್ಕೆ ತಿಳಿದು ಅವು ಅವರಲ್ಲಿ ಹರಡಬೇಕೆಂಬ ಆಸೆಯುಳ್ಳ ಶೈವ ಕವಿಗಳ ದ್ವೀಪದ ಕಾವ್ಯಗಳು ಆಡುಮಾತುಗಳನ್ನು ಅವುಗಳ ರೂಢಿಯ ಅರ್ಥದಲ್ಲೇ ಹೆಚ್ಚಾಗಿ ಬಳಸುತ್ತಿದ್ದರು. 1700-1850 ರಲ್ಲಿ ಬೆಳೆದ ಗದ್ಯ ಪ್ರಕಾರ ಕಥೆ, ಪ್ರಬಂಧ, ವ್ಯಾಖ್ಯಾನ, ಕಾಗದಗಳು ಮುಂತಾದ ಎಲ್ಲ ಪ್ರಕಾರಗಳ ಲೇಖನಗಳಿಗೂ ಒದಗಿ ಬಂತು. ಈ ಗದ್ಯ ಲೇಖನಗಳ ಬಹುಭಾಗವನ್ನು ಪ್ರಚಲಿತ ಭಾಷೆಯಲ್ಲೇ ಬರೆಯಲಾಗುತ್ತಿತ್ತು; ಅದು ತೆಲುಗು ಭಾಷಾ ಚರಿತ್ರೆಯನ್ನು ವ್ಯಾಸಂಗ ಮಾಡಲು ಬಯಸುವವರಿಗೆ ಆ ಭಾಷೆಯ ಬೆಳವಣಿಗೆಗಳನ್ನು ಗುರುತಿಸಲು ಕಾವ್ಯಗಳ ಭಾಷೆಗಿಂತ ಹೆಚ್ಚು ಸಹಕಾರಿಯಾಗಿದೆ. ಈ ಸಂಪ್ರದಾಯವನ್ನು ಸಿ. ಪಿ. ಬ್ರೌನ್ ಪ್ರೋತ್ಸಾಹಿಸಿದ. ತನ್ನ ಇಂಗ್ಲಿಷ್ ಶಬ್ದಕೋಶಗಳಲ್ಲಿ ಆತ ಪದಗಳ ಅರ್ಥವನ್ನು ವಿವರಿಸಲು ಪ್ರಚಲಿತ ಭಾಷೆಯನ್ನೇ ಉಪಯೋಗಿಸಿದ. ಆದರೆ ಕಾವ್ಯ ಭಾಷೆಯಲ್ಲಿ ನೀತಿ ಚಂದ್ರಿಕೆ ಎಂಬುದನ್ನು ಬಾಲ ವ್ಯಾಕರಣ ಎಂಬ ವ್ಯಾಕರಣ ಗ್ರಂಥವನ್ನು ಬರೆದ ಪರವಸ್ತು ಚಿನ್ನಯ್ಯಸೂರಿ ಈ ಸಂಪ್ರದಾಯಕ್ಕೆ ತಡೆಹಾಕಿದ. ಆತನ ನೀತಿ ಚಂದ್ರಿಕೆ ಕೃತಕವಾದ ಭಾಷೆಯಲ್ಲಿ ರಚಿತವಾಗಿದೆ. ಬಳಕೆಯಲ್ಲಿಲ್ಲದ ಆಡಂಬರದ ಪದಗಳು, ಅಲಂಕಾರ ನಿಬಿಡದ ಶೈಲಿ, ನಯವಾದ ಬಳಸು ಮಾತಿನ ಸಂಸ್ಕೃತ ಪದಗಳ ಸಮಾಸ ಜಾಲಗಳು- ಇವು ಆ ಭಾಷೆಯ ಲಕ್ಷಣ. ಆತನ ವ್ಯಾಕರಣ ಅಸಮಗ್ರವಾಗಿ ಅಸಂಗತವಾಗಿ ಇದ್ದರೂ ಕಾವ್ಯಗಳ ಭಾಷೆಯನ್ನು ಅವಲಂಬಿಸಿ ರಚಿತವಾಗಿತ್ತು. ಆತನ ಕೃತಿಗಳ ಪರಿಣಾಮವಾಗಿ ತೆಲುಗಿನಲ್ಲಿ ಆರೋಗ್ಯಕರವಾದ ಗದ್ಯದ ಮುನ್ನಡೆ ನಿಂತುಹೋಯಿತು. ಸುಮಾರು ಅರುವತ್ತು ವರ್ಷಗಳವರೆಗೆ ಆತನ ಸಮಕಾಲೀನ ಮತ್ತು ತರುವಾಯ ಬಂದ ತೆಲುಗು ಗದ್ಯ ಲೇಖಕರು ಯಾರೂ ಆತನ ಕೃತಿಗಳ ಮಾದರಿಗೆ ಎದುರು ಮಾತನ್ನೆತ್ತದೆ ಅನುಸರಿಸಿದರು. ಹೀಗೆ ಈತನ ಶೈಲಿಯನ್ನು ಅನುಕರಿಸುವ ಉತ್ಸಾಹದಲ್ಲಿ ಇವರು ಸಾಮಾನ್ಯ ಪದಗಳನ್ನು ಬಿಟ್ಟು ಹಳೆಯ ಶಬ್ದಗಳನ್ನು ಸಂಸ್ಕೃತ ಸಮಾಸಗಳಿಂದ ತುಂಬಿರುವ ಪದಗಳನ್ನೂ ಉಪಯೋಗಿಸತೊಡಗಿದರು. ಚಿನ್ನಯ್ಯಸೂರಿಯ ನೀತಿಚಂದ್ರಿಕೆ ಅಥವಾ ಅಂಥ ಶೈಲಿಯಲ್ಲಿ ಬರೆದ ಇತರ ಗ್ರಂಥಗಳನ್ನು ಶಾಲಾ ಕೊಠಡಿಗಳಲ್ಲಿ ಮಾತ್ರ ಛಾಸರನ ಭಾಷೆಯಲ್ಲಿರುವ ಛಾಸರನ ಪದ್ಯಗಳನ್ನು ಹೇಗೋ ಹಾಗೆ, ಓದಲು ಏರ್ಪಡಿಸಿದ್ದರೆ, ತೆಲುಗು ವಿದ್ಯಾರ್ಥಿಗಳಿಗಾಗಲಿ ತೆಲುಗು ಬರಹಗಾರರಿಗಾಗಲಿ ಯಾವ ಕೆಡುಕೂ ಆಗುತ್ತಿರಲಿಲ್ಲ. ಆದರೆ ಪಂಡಿತರೂ ವಿದ್ಯಾ ಇಲಾಖೆ ಹಾಗೂ ವಿಶ್ವವಿದ್ಯಾನಿಲಯಗಳ ಅಧಿಕಾರಿಗಳೂ ಒಂದು ಹೆಜ್ಜೆ ಮುಂದೆ ಹೋದರು. ಶಾಲೆಗಳಲ್ಲೂ ಆಡುಮಾತನ್ನು ನಿಷೇಧಿಸಿದರು. ಆಡುಮಾತಿನಲ್ಲಿ ತಮ್ಮ ಮನೆಮಾತಿನಲ್ಲಿ ಪ್ರಬಂಧಗಳನ್ನು ಬರೆಯಲು ಮತ್ತು ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗೆ ಉತ್ತರ ಬರೆಯಲು ಅವಕಾಶ ಕೊಡಲಿಲ್ಲ. ಸಾಮಾಜಿಕ ಬದಲಾವಣೆಗಳನ್ನೂ ದಲಿತರ ಉದ್ಧಾರವನ್ನು ಪ್ರತಿಪಾದಿಸುತ್ತಿದ್ದ ವೀರೇಶಲಿಂಗಂ ಪಂತುಲು ಕೂಡ ಮೊದಲು ಚಿನ್ನಯ್ಯಸೂರಿ ಹಾಕಿಕೊಟ್ಟ ಮೇಲು ಪಂಕ್ತಿಯನ್ನೇ ಅನುಸರಿಸಿದರು. ಆದರೆ ಇಂಥ ಮಾದರಿಯ ನಿರುಪಯೋಗಿತೆಯನ್ನು ಬೇಗನೆ ಅರಿತುಕೊಂಡು ವಿದ್ಯಾರ್ಥಿಗಳಿಗೂ ಸಾಮಾನ್ಯ ಓದುಗನಿಗೂ ತಿಳಿಯುವಂತೆ ತನ್ನ ಭಾಷೆಯನ್ನು ಸರಳ ಮಾಡಿಕೊಂಡ. ಜೀವಂತ ಭಾಷೆಯ ಸಾಮರ್ಥ್ಯವನ್ನು ಆತ ಗಮನಕ್ಕೆ ತಂದುಕೊಳ್ಳದಿರಲಿಲ್ಲ; ತನ್ನ ಬರೆಹಗಳು ಸ್ಕೂಲು ಕಾಲೇಜುಗಳಿಗಲ್ಲ ಎಂದುಕೊಂಡು ಆತ ತನ್ನ ಸಾಮಾಜಿಕ ನಾಟಕಗಳಲ್ಲೂ ಪ್ರಹಸನಗಳಲ್ಲೂ ಅದನ್ನು ಬಳಸಿದ. ಆದರೆ ಎರಡು ಅಂಶಗಳು ಆತನ ತಿಳಿವಳಿಕೆಗೆ ಬರಲಿಲ್ಲ; ಒಂದು-ಆಗ ಇದ್ದ ವ್ಯಾಕರಣಗಳು ಕಾವ್ಯದ ಭಾಷೆಗೆ ಮಾತ್ರ ಉಪಯುಕ್ತವಾದುವು ಮತ್ತು ಕಾಲಕಾಲಕ್ಕೆ ಮುಂದಿನ ಕವಿಗಳ ಪ್ರಯೋಗಗಳ ದೃಷ್ಟಿಯಿಂದ ಅವನ್ನು ತಿದ್ದಬೇಕು ಎಂಬಂಶ. ಎರಡು-ಜೀವಂತ ಭಾಷೆಗಳು ಯಾವಾಗಲೂ ಚಲಿಸುತ್ತಲೇ ಇವೆ, ಮುಂಬರಿಯುತ್ತಿವೆ, ಬದಲಾಯಿಸುತ್ತಿವೆ, ಅವನ್ನು ವ್ಯಾಕರಣದಿಂದ ಕಟ್ಟಿ ಹಾಕಲಾಗುವುದಿಲ್ಲ. ವ್ಯಾಕರಣಗಳೆಲ್ಲ ಅವನ್ನು ಹಿಂಬಾಲಿಸಬೇಕು ಎಂಬುದು ಮತ್ತೊಂದಂಶ. ತನ್ನ ಆತ್ಮಚರಿತ್ರೆಯಲ್ಲಿ ಹೇಳಿಕೊಳ್ಳುವಂತೆ ಆಧುನಿಕ ತೆಲುಗು ಚಳವಳಿ ಸಾಧುವೆಂಬುದನ್ನು ವೀರೇಶಲಿಂಗಂ ತುಂಬ ತಡವಾಗಿ ಅರಿತುಕೊಂಡ. ಗಿಡುಗು ರಾಮಮೂರ್ತಿ ಮತ್ತು ಗುರುಜಾಡ ಅಪ್ಪಾರಾವ್ ಎಂಬವರಿಂದ 1910ರಲ್ಲಿ ಪ್ರೇರಿತವಾದ ಈ ಚಳವಳಿ, ಚಿನ್ನಯ್ಯಸೂರಿ ತಡೆ ಹಾಕುವವರೆಗೂ ನಡೆದು ಬಂದಿದ್ದ ಆಡುಮಾತಿನಲ್ಲೇ ತೆಲುಗು ಗದ್ಯವನ್ನು ಬರೆಯಬೇಕೆಂಬ ಪಂಥದವರೊಡನೆ ರಾಮಮೂರ್ತಿ ಹಲವು ವರ್ಷಗಳ ಕಾಲ ಹೋರಾಡಬೇಕಾಯಿತು. 1920ರ ಹೊತ್ತಿಗೆ ಆತ ಜಯಶಾಲಿಯಾದ. ಪತ್ರಿಕಾಕರ್ತರು ಕ್ರಮೇಣ ಜೀವಂತ ಭಾಷೆಯನ್ನೇ ತಮ್ಮ ಸಂಪಾದಕೀಯಗಳಿಗೂ ಇತರ ಲೇಖನಗಳಿಗೂ ಬಳಸತೊಡಗಿದರು. ಸಾವಿರಗಟ್ಟಲೆ ಗ್ರಂಥಗಳು ಜೀವಂತಭಾಷೆಯಲ್ಲೇ 1930-60ರ ಅವಧಿಯಲ್ಲಿ ಪ್ರಕಟವಾಗಿವೆ. ಪದ್ಯದ ಬರವಣಿಗೆಯಲ್ಲಿ ಸಹ, ಆಧುನಿಕ ಕವಿಗಳು ಉಪಯೋಗಿಸುವ ಭಾಷೆಯಲ್ಲಿ ನಿರುಪಯುಕ್ತವಾದ ಹಳೆಯ ಶಬ್ದಗಳಿರುವುದಿಲ್ಲ ಮತ್ತು ಆಧುನಿಕ ಪದಪ್ರಯೋಗಗಳನ್ನೇ ಬಳಸುತ್ತಾರೆ. ಆದರೆ ಹಳೆಯ ಸಂಪ್ರದಾಯವನ್ನೂ ಅನುಸರಿಸುವ ಕವಿಗಳೂ ಇದ್ದಾರೆ. ಅವರು ಹಳೆಯ ವ್ಯಾಕರಣಗಳ ನಿಯಮಗಳಿಗೆ ಅನುಸಾರವಾಗಿ ಬರೆಯಲೂ ಯತ್ನಿಸುತ್ತಿದ್ದಾರೆ. ಆದರೆ ಹೀಗೆ ಬರೆಯುವುದರಲ್ಲಿ ಅವರು ದೋಷಗಳಿಗೆಡೆಗೊಡುವುದೂ ಅನಿವಾರ್ಯವಾಗಿಯೇ ಆಗುತ್ತಿದೆ. ಜಾಗವಿಲ್ಲದ್ದರಿಂದ, ನನ್ನಯ್ಯನ ಕಾಲದಿಂದಲೂ ಭಾಷೆ ಹೇಗೆ ಬದಲಾಯಿಸುತ್ತ ಬಂದಿದೆ ಎಂಬುದಕ್ಕೆ ಕೆಲವು ಉದಾಹರಣೆಗಳನ್ನು ಮಾತ್ರ ಇಲ್ಲಿ ಕೊಡಲಾಗಿದೆ.
"https://kn.wikipedia.org/wiki/ತೆಲುಗು" ಇಂದ ಪಡೆಯಲ್ಪಟ್ಟಿದೆ