ಷಟ್ಪದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
 
೧ ನೇ ಸಾಲು:
'''ಷಟ್ಪದಿ''' ಎಂಬುದು ಛಂದಸ್ಸಿನ ಒಂದು ಪ್ರಕಾರ. ಪದ್ಯವೊಂದರಲ್ಲಿ ಆರು ಪಾದಗಳಿದ್ದರೆ ಅದು ಷಟ್ಪದಿ ಎನಿಸುತ್ತದೆ. ಪಾದಗಳ ಗಣ/ಮಾತ್ರಾ/ಅಕ್ಷರ ವಿನ್ಯಾಸಗಳನ್ನು ಹಿಡಿದು ಬೇರೆ ಬೇರೆ ರೀತಿಯ ಷಟ್ಪದಿಗಳಿವೆ.
ಆರು ಸಾಲುಗಳ ಕವನಕ್ಕೆ '''ಷಟ್ಪದಿ''' ಎನ್ನುತ್ತಾರೆ.
 
=== ಕನ್ನಡ ಸಾಹಿತ್ಯದಲ್ಲಿ ಷಟ್ಪದಿ ===
ಕನ್ನಡ ಕಾವ್ಯದಲ್ಲಿ ಷಟ್ಪದಿಗಳನ್ನು ರಾಘವಾಂಕನು ಬಳಕೆಗೆ ತಂದನು. ಹಳಗನ್ನಡ ಸಾಹಿತ್ಯದಲ್ಲಿ ಕಂದ, ಖ್ಯಾತ ಕರ್ನಾಟಕ ವೃತ್ತಗಳು, ಹೇರಳವಾಗಿದ್ದರೆ ನಡುಗನ್ನಡ ಕಾಲದ ಸಾಹಿತ್ಯದಲ್ಲಿ ಷಟ್ಪದಿಗೆ ಮೊದಲ ಸ್ಥಾನ. ಕುಮಾರವ್ಯಾಸನ 'ಗದುಗಿನ ಭಾರತ'ವೆಂದೆ ಪ್ರಸಿದ್ಧವಾಗಿರುವ '''ಕರ್ಣಾಟ ಭಾರತ ಕಥಾಮಂಜರೀ''', ಲಕ್ಷ್ಮೀಶಕವಿಯ '''ಜೈಮಿನಿ ಭಾರತ''' ಇವೆರಡೂ ಷಟ್ಪದಿ ಕಾವ್ಯಗಳೆ.
 
ಕನ್ನಡ ಸಾಹಿತ್ಯದಲ್ಲಿ ಬಳಕೆಯಲ್ಲಿದ್ದ ಷಟ್ಪದಿಗಳು ಇವು
 
* ಕುಸುಮ
* ಶರ
* ಭೋಗ
* ಭಾಮಿನೀ
* ವಾರ್ಧಕ
* ಪರಿವರ್ಧಿನೀ
 
ಇವುಗಳಲ್ಲಿ ಭಾಮಿನೀ ಷಟ್ಪದಿ ಜನಪ್ರಿಯ. ಗದುಗಿನ ಭಾರತವಿರುವುದು ಈ ಛಂದಸ್ಸಿನಲ್ಲಿಯೆ.
 
 
ಷಟ್ಪದಿಗಳೂ ಸೇರಿದಂತೆ ಹಲವಾರು ಛಂದೋಪ್ರಕಾರಗಳ ಲಕ್ಷಣಗಳ ಕೈಗೆಟಕುವಂತಹ ವಿವರಣೆಯನ್ನು ಅ.ರಾ. ಮಿತ್ರರ 'ಛಂದೋಮಿತ್ರ' ದಲ್ಲಿ ಕಾಣಬಹುದು. ಷಟ್ಪದಿಗಳ ಉಗಮ ವಿಕಾಸಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಸೇಡಿಯಾಪು ಕೃಷ್ಣಭಟ್ಟರ, ಟಿ.ವಿ. ವೆಂಕಟಾಚಲ ಶಾಸ್ತ್ರಿಗಳ ಕೃತಿಗಳನ್ನು ಇಲ್ಲಿ ನೆನೆಯಬಹುದು.
 
 
{{ಚುಟುಕು}}
"https://kn.wikipedia.org/wiki/ಷಟ್ಪದಿ" ಇಂದ ಪಡೆಯಲ್ಪಟ್ಟಿದೆ