ಷಟ್ಪದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨ ನೇ ಸಾಲು:
 
=== ಕನ್ನಡ ಸಾಹಿತ್ಯದಲ್ಲಿ ಷಟ್ಪದಿ ===
ಕನ್ನಡ ಕಾವ್ಯದಲ್ಲಿ ಷಟ್ಪದಿಗಳನ್ನು ರಾಘವಾಂಕನು ಬಳಕೆಗೆ ತಂದನು. ಹಳಗನ್ನಡ ಸಾಹಿತ್ಯದಲ್ಲಿ ಕಂದ, ಖ್ಯಾತ ಕರ್ನಾಟಕ ವೃತ್ತಗಳು, ಹೇರಳವಾಗಿದ್ದರೆ ನಡುಗನ್ನಡ ಕಾಲದ ಸಾಹಿತ್ಯದಲ್ಲಿ ಷಟ್ಪದಿಗೆ ಮೊದಲ ಸ್ಥಾನ. ಕುಮಾರವ್ಯಾಸನ 'ಗದುಗಿನ ಭಾರತ'ವೆಂದೆ ಪ್ರಸಿದ್ಧವಾಗಿರುವ '''ಕರ್ಣಾಟ ಭಾರತ ಕಥಾಮಂಜರೀಕಥಾಮಂಜರಿ''', ಲಕ್ಷ್ಮೀಶಕವಿಯ '''ಜೈಮಿನಿ ಭಾರತ''' ಇವೆರಡೂ ಷಟ್ಪದಿ ಕಾವ್ಯಗಳೆ.
 
ಕನ್ನಡ ಸಾಹಿತ್ಯದಲ್ಲಿ ಬಳಕೆಯಲ್ಲಿದ್ದ ಷಟ್ಪದಿಗಳು ಇವು
೧೩ ನೇ ಸಾಲು:
* ಪರಿವರ್ಧಿನೀ
 
ಇವುಗಳಲ್ಲಿ ಭಾಮಿನೀ ಷಟ್ಪದಿ ಜನಪ್ರಿಯ. ಗದುಗಿನ ಭಾರತವಿರುವುದು ಈ ಛಂದಸ್ಸಿನಲ್ಲಿಯೆ. ಭಾಮಿನೀ ಷಟ್ಪದಿಯ ಪದ್ಯವೊಂದರಲ್ಲಿ ಆರು ಸಾಲಿಗಳಿರುತ್ತವೆ. ಮೂರನೆಯ, ಆರನೆಯ ಸಾಲುಗಳಲ್ಲಿ ೭ ಮಾತ್ರೆಗಳ ಮೂರುಗಣಗಳೂ ಒಂದು ಗುರು ಇಲ್ಲ ಲಘು ಇರುತ್ತವೆ. ಮಿಕ್ಕ ಸಾಲುಗಳಲ್ಲಿ ೭ ಮಾತ್ರೆಗಳ ಎರಡು ಗಣಗಳಿರುತ್ತವೆ. ಉದಾಹರಣೆಯಾಗಿ ಗದುಗಿನ ಭಾರತದ ಈ ಪ್ರಸಿದ್ಧ ಪದ್ಯವನ್ನು ನೋಡಿ:
 
ವೇದ ಪುರುಷನ | ಸುತನ ಸುತನ ಸ
ಹೋದರನ ಹೆ|ಮ್ಮಗನ ಮಗನ ತ
ಳೋದರಿಯ ಮಾ|ತುಳನ ಮಾವನ|ನತುಳಭುಜಬಲ|ದಿ
ಕಾದು ಗೆಲಿದನ|ನಣ್ಣನವ್ವೆಯ
ನಾದಿನಿಯ ಜಠ|ರದಲಿ ಜನಿಸಿದ
ನಾದಿಮೂರುತಿ | ಸಲಹೊ ಗದುಗಿನ | ವೀರನಾರಯ|ಣ
 
'|' ಸಂಜ್ಞೆ ಗಣವಿಭಾಗವನ್ನು ತೋರಿಸುತ್ತದೆ.
ಷಟ್ಪದಿಗಳೂ ಸೇರಿದಂತೆ ಹಲವಾರು ಛಂದೋಪ್ರಕಾರಗಳ ಲಕ್ಷಣಗಳ ಕೈಗೆಟಕುವಂತಹ ವಿವರಣೆಯನ್ನು ಅ.ರಾ. ಮಿತ್ರರ 'ಛಂದೋಮಿತ್ರ' ದಲ್ಲಿ ಕಾಣಬಹುದು. ಷಟ್ಪದಿಗಳ ಉಗಮ ವಿಕಾಸಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಸೇಡಿಯಾಪು ಕೃಷ್ಣಭಟ್ಟರ, ಟಿ.ವಿ. ವೆಂಕಟಾಚಲ ಶಾಸ್ತ್ರಿಗಳ ಕೃತಿಗಳನ್ನು ಇಲ್ಲಿ ನೆನೆಯಬಹುದು.
 
ಷಟ್ಪದಿಗಳೂ ಸೇರಿದಂತೆ ಹಲವಾರು ಛಂದೋಪ್ರಕಾರಗಳ ಲಕ್ಷಣಗಳ ಕೈಗೆಟಕುವಂತಹ ವಿವರಣೆಯನ್ನು ಅ.ರಾ. ಮಿತ್ರರ 'ಛಂದೋಮಿತ್ರ' ದಲ್ಲಿ ಕಾಣಬಹುದು. ಷಟ್ಪದಿಗಳ ಉಗಮ ವಿಕಾಸಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಸೇಡಿಯಾಪು ಕೃಷ್ಣಭಟ್ಟರ, ಟಿ.ವಿ. ವೆಂಕಟಾಚಲ ಶಾಸ್ತ್ರಿಗಳ ಕೃತಿಗಳನ್ನುಗ್ರಂಥಗಳನ್ನು ಇಲ್ಲಿ ನೆನೆಯಬಹುದು.
 
 
"https://kn.wikipedia.org/wiki/ಷಟ್ಪದಿ" ಇಂದ ಪಡೆಯಲ್ಪಟ್ಟಿದೆ