ತ. ರಾ. ಸುಬ್ಬರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ತ.ರಾ. ಸುಬ್ಬರಾಯ''' - ಕನ್ನಡದ ಖ್ಯಾತ ಕಾದಂಬರಿಕಾರ ಮತ್ತು ಸಾಹಿತಿ.
ಇವರ "ದುರ್ಗಾಸ್ತಮಾನ" ಎಂಬ ಕೃತಿಗೆ ೧೯೮೫ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.
ತಳುಕು ರಾಮಸ್ವಾಮಯ್ಯ ಸುಬ್ಬರಾಯ ಅವರು ಕನ್ನಡದ ಮೊದಲ ಪ್ರಾಧ್ಯಾಪಕ ತಳುಕಿನ ವೆಂಕಣ್ಣಯ್ಯನವರ ತಮ್ಮನವರ ಮಗ. ಇವರು ಹುಟ್ಟಿದ್ದು ೧೯೧೯ರಲ್ಲಿ. ತಂದೆ ರಾಮಸ್ವಾಮಯ್ಯನವರು ಪ್ಲೀಡರ್ ಆಗಿ ಚಿತ್ರದುರ್ಗದಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕಂದಿನಿಂದ ಬಹಳ ತುಂಟರಾಗಿದ್ದ ಸುಬ್ಬರಾಯರು ಇಂಟರ್ ಮುಗಿದ ಕೂಡಲೇ ಓದಿಗೆ ಶರಣು ಎಂದು ಸ್ವಾತಂತ್ರ್ಯ ಸಂಗ್ರಾಮದ ಚಳುವಳಿಯಲ್ಲಿ ಭಾಗಿಯಾಗಿದ್ದರು. ಅವರಿಗೆ ಗುರುವಾಗಿದ್ದವರು ಅ.ನ. ಕೃಷ್ಣರಾಯರು. ಆ ಸಮಯಕ್ಕಾಗಲೇ ಸಾಮಾಜಿಕ ವಿಷಯಗಳ ಬಗ್ಗೆ ಕಾದಂಬರಿಗಳನ್ನು ಬರೆದಿದ್ದ ಅ.ನ.ಕೃಅನಕೃ ಅವರು ಕನ್ನಡಿಗರ ಮನೆ ಮಾತಾಗಿದ್ದರು. ಬರಹ ಅವರ ರಕ್ತಕ್ಕೆ ಬಂದಂತಿತ್ತು. ಅವರು ಬರೆದಿದ್ದ ಒಂದು ಕಾದಂಬರಿಯ ವಸ್ತು ಹಿಂದಿ ಭಾಷೆಯ ಚಲನಚಿತ್ರವಾದ 'ಬಸಂತ್ ಬಹಾರ್' ಆಗಿತ್ತು. ಅಲ್ಲಿಯವರೆವಿಗೆ ಅವರು ಕನ್ನಡದ ಹೋರಾಟದಲ್ಲಿ ಅನಕೃ ಮತ್ತಿತರ ಸಹೃದಯರರ ಜೊತೆ ಲೀನವಾಗಿದ್ದರು. ಹಣಗಳಿಕೆಯಲ್ಲಿ ವಿಫಲರಾಗಿದ್ದರು. ಅವರ ಕಾದಂಬರಿಗಳ ಸುವಾಸನೆ ಬಹಳ ನಿಧಾನವಾಗಿ ಕನ್ನಡ ಚಲನಚಿತ್ರಲೋಕ ಮೂಲಕ ಪಸರಿಸಿ ಹಣಗಳಿಸಿಕೊಟ್ಟಿತು. ಮೊದಲ ಚಿತ್ರ ಹಂಸಗೀತೆ. ಆ ವೇಳೆಗಾಗಲೇ ಅವರ ಆರೋಗ್ಯ ಬಹಳವಾಗಿ ಕೆಟ್ಟು ಹೋಗಿತ್ತು. ನಂತರ ಒಂದರ ಹಿಂದೊಂದರಂತೆ ನಾಗರಹಾವು, ಗಾಳಿಮಾತು ಇತ್ಯಾದಿ ಕಾದಂಬರಿಗಳು ಚಲನಚಿತ್ರವಾದುವು. ೧೯೭೦ರ ಸಮಯದಲ್ಲಿ ಶೃಂಗೇರಿ ಸ್ವಾಮಿಗಳ ಸಾನ್ನಿಧ್ಯದ ಪರಿಣಾಮವಾಗಿ ಆರೋಗ್ಯ ಸುಧಾರಿಸಿತು.
ಸಂಬಂಧಿಗಳಲ್ಲೇ ಮದುವೆಯಾಗಿದ್ದ ಅವರ ಪತ್ನಿಯ ಹೆಸರು ಅಂಬುಜ. ಬಹಳ ಸಮಯದ ನಂತರ ಹುಟ್ಟಿದ ಮೂವರು ಮಕ್ಕಳು ನಾಗಪ್ರಸಾದ್, ಪೂರ್ಣಿಮಾ ಮತ್ತು ಪ್ರದೀಪ. ಮೈಸೂರಿನಲ್ಲಿ ಕಟ್ಟಿಸಿದ ಮನೆಯ ಹೆಸರು 'ಗಿರಿಕನ್ಯಕಾ'.
೧೯೮೪ರಲ್ಲಿ ಹೃದಯಾಘಾತವಾಗಿ ಬೆಂಗಳೂರಿನ ರಾಜಾಜಿನಗರದಲ್ಲಿರುವ ವರಲಕ್ಷ್ಮಿ ನರ್ಸಿಂಗ್ ಹೋಂಗೆ ಸೇರಿದ್ದವರು ಮತ್ತೆ ಮನೆಗೆ ಬರಲೇ ಇಲ್ಲ.
 
{{ಚುಟುಕು}}
"https://kn.wikipedia.org/wiki/ತ._ರಾ._ಸುಬ್ಬರಾಯ" ಇಂದ ಪಡೆಯಲ್ಪಟ್ಟಿದೆ