ತಳುಕಿನ ವೆಂಕಣ್ಣಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬ ನೇ ಸಾಲು:
ಇವರ ಮನೆಯಲ್ಲಿ ಪ್ರತಿನಿತ್ಯವೂ ಸಾಹಿತ್ಯ ಗೋಷ್ಠಿ ನಡೆಯುತ್ತಿತ್ತು. ಅದರಲ್ಲಿ ಪಾಲ್ಗೊಳ್ಳುತ್ತಿದ್ದವರಲ್ಲಿ ಬಿ.ಎಂ.ಶ್ರೀ, ತೀ.ನಂ.ಶ್ರೀ, ಎ.ಆರ್.ಕೃ ಮುಂತಾದವರನ್ನು ಹೆಸರಿಸಬಹುದು. ಡಿ.ವಿ.ಗುಂಡಪ್ಪನವರು ಮಂಕುತಿಮ್ಮನ ಕಗ್ಗದ ಮುಖಪುಟದಲ್ಲಿ ಟಿ.ಎಸ್.ವಿ, ಎ.ಆರ್.ಕೃ ಮತ್ತು ಮೋಕ್ಷಗುಂಡಂ ಕೃಷ್ಣಮೂರ್ತಿಗಳನ್ನು (ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಸಾಕು ಮಗ) ಮೂವರು ಮೇರು ಪರ್ವಗಳೆಂದು ಹೆಸರಿಸಿದ್ದಾರೆ. ಇವರ ಮನೆಯಲ್ಲಿ ನಡೆಯುತ್ತಿದ್ದ ಸಾಹಿತ್ಯ ಗೋಷ್ಠಿಯಲ್ಲಿ ಟಿ.ಎಸ್.ವಿ.ಯವರು ಎಷ್ಟರ ಮಟ್ಟಿಗೆ ತಲ್ಲೀನರಾಗುತ್ತಿದ್ದರೆಂದರೆ, ಒಮ್ಮೆ ಅವರ ನವಜಾತ ಕೂಸು ಮರಣ ಹೊಂದಿ ಮನೆಯವರೆಲ್ಲರೂ ಗೊಳೋ ಎಂದು ಅಳುತ್ತಿದ್ದರೆ, ಒಳಗೆ ಹೋಗಿ ಮತ್ತೆ ಬಂದು ಸಾಹಿತ್ಯ ಗೋಷ್ಠಿ ಯಲ್ಲಿ ಪಾಲ್ಗೊಂಡಿದ್ದರಂತೆ. ಅದಕ್ಕೆ ಒಬ್ಬರ್‍ಯಾರೋ ಒಳಗೆ ಅಳುತ್ತಿದ್ದಾರೆ ನೀವು ನೋಡುವುದಿಲ್ಲವೇ ಎಂದರೆ ಎಲ್ಲ ದೈವನಿಯಾಮಕ - ನಡೆಯುವುದೆಲ್ಲವೂ ನಡೆಯುತ್ತಲೇ ಇರುತ್ತದೆ ಎಂದಿದ್ದರಂತೆ. ಎಂದಿಗೂ ಹೆಚ್ಚಿನ ಸಂತೋಷ ಅಥವಾ ದು:ಖ ವ್ಯಕ್ತಪಡಿಸದ ವ್ಯಕ್ತಿತ್ವ ಅವರದ್ದು.
 
ಒಮ್ಮೆ ಒಬ್ಬರು ಸ್ವಾಮಿಗಳು ಅವರಿಗೆ ಹೇಳಿದ್ದರಂತೆ - ವೆಂಕಣ್ಣಯ್ಯ ನಿನಗೆ ಪುನರ್ಜನ್ಮವಿಲ್ಲ ಎಂದು. ಹಾಗೆಯೇ ತಮಾಷೆಗಾಗಿ ಒಮ್ಮೆ ಕೈಲಾಸಂರವರು ಇವರ ಎತ್ತರವನ್ನು ಚುಡಾಯಿಸಲು, ಸಾರ್ ಅಲ್ಲೇ ಮೇಲೆ ಸ್ವರ್ಗದಲ್ಲಿ ನನ್ನ ಪೂರ್ವಜರು ಕ್ಷೆಮಾವೇಕ್ಷೇಮವೇ ಸ್ವಲ್ಪ ನೋಡಿಬಿಡಿ, ಎಂದಿದ್ದರಂತೆ.
{{ಸಾಹಿತಿಗಳು}}