ಹೊಯಿಸಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
ಚುNo edit summary |
||
೧ ನೇ ಸಾಲು:
'''ಹೊಯಿಸಳ''' ಆರಗ ಲಕ್ಷ್ಮಣರಾವ್ ಅವರ ಕಾವ್ಯನಾಮ. ಕನ್ನಡಿಗರ ನೆನಪಿನಂಗಳದಿಂದ ಬಹುಪಾಲು ಮಾಸಿಹೋಗಿರುವ ಮಹನೀಯರಲ್ಲಿ ಆರಗ ಲಕ್ಷ್ಮಣರಾವ್ ಅವರೂ ಒಬ್ಬರು. ಖ್ಯಾತಲೇಖಕಿ [[ಎಂ. ಕೆ. ಇಂದಿರ]], ಇವರ ಸೋದರ ಸಂಬಂಧಿ. ಎಳೆಯರಿಗೆ ಪುಸ್ತಕ ಬೊಧಿಸುವ ಹೊಯಿಸಳರ ಕವಿತೆ ಮಕ್ಕಳ ಸಾಹಿತ್ಯಕ್ಕೆ ಹೊಸ ಮೆರಗು ಹೊಸ ತಿರುವು ಕೊಟ್ಟ ಶಕಪುರುಷರು."ಸಣ್ಣ ಚಿಣ್ಣ ಹೊನ್ನ ಹಸುಳೆ ನಮ್ಮ ನಾಡದೇವರು, ಇಂದಿನವರು ಮುಂದೆಬೆಳೆದು ಹಣ್ಣು ಕೊಡುವ ಸಸಿಗಳು....ಹೀಗೆಂದು ಮಕ್ಕಳನ್ನು ದೇವರಿಗೆ ಸಮೀಕರಿಸಿ, ಅವರ ಮಾನಸಿಕ ವಿಕಾಸಕ್ಕೆ ಬದುಕಿನ್ನುದ್ದಕ್ಕೂ ಶ್ರಮಿಸಿದವರು.
ಕನ್ನಡದ ಮಕ್ಕಳಿಗಾಗಿ ಅನೇಕ ಕವಿತೆಗಳನ್ನು, ಸಣ್ಣ ಕಥೆಗಳನ್ನು, ಸ್ವಾರಸ್ಯಪೂರ್ಣ ನಾಟಕಗಳನ್ನು ಬರೆದಿದ್ದಾರೆ. "ಸಂತಮ್ಮಣ್ಣ" ನನ್ನು ಮರೆಯಲಾದೀತೆ?. ಗಾಂಧೀಜಿಯನ್ನು ಶಿಶುಭಾಶೆಯಲ್ಲಿ ಕೀರ್ತಿಸುವ "ತಟ್ಟು ಚಪ್ಪಾಳೆ ಪುಟ್ಟ ಮಗು..." ಎಂಬ ಕವಿತೆ ಯಾರಿಗೆ ಗೊತ್ತಿಲ್ಲ? ಅವರ ಕಥೆಗಳಲ್ಲಿ ಬಂದಂತಹ 'ಅಭ್ಯಂಕು', 'ಪುಟ್ಟರಸು', 'ವೀರಕುಮಾರ' .....ಇಂತ ನೂರಾರು ಪಾತ್ರಗಳು ಕಳೆದ ಶತಮಾನದ ಪೂರ್ವಾರ್ಧದಲ್ಲಿ ಕನ್ನಡನಾಡಿನ ಮಕ್ಕಳನ್ನು ಸೂರೆಗೊಂಡಿದ್ದವು. ಇವರ
ಆರಗ
ಹೊಯಿಸಳ ಮಕ್ಕಳ ಕವಿತೆಗಳ ಭಾಷೆ ತುಂಬಾ ಸರಳ. ಮಕ್ಕಳನ್ನು ಆಕರ್ಷಿಸುವ ಲಯವೈವಿಧ್ಯ, ವಸ್ತುವೈವಿಧ್ಯಗಳಿವೆ. ಅನೇಕ ಕವಿತೆಗಳಲ್ಲಿ ನವಿರಾದ ಹಾಸ್ಯಲೇಪವಿದೆ. ಆದ್ದರಿಂದ ಹೊಯಿಸಳರ ಪದ್ಯಗಳು ಈಗಲೂ ಮುದ್ದು ಪುಟಾಣಿಗಳಿಗೆ ಖುಶಿಕೊಡುವಂತಿದೆ.
|