ಸಂಯುಕ್ತ ಕರ್ನಾಟಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Haldodderi (ಚರ್ಚೆ | ಕಾಣಿಕೆಗಳು) No edit summary |
Haldodderi (ಚರ್ಚೆ | ಕಾಣಿಕೆಗಳು) No edit summary |
||
೨೭ ನೇ ಸಾಲು:
ಪ.ಸು.ಭಟ್ಟ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕೆಲಕಾಲ ‘ರಾವಬಹಾದ್ದೂರ’ ಅವರನ್ನು ನೇಮಕ ಮಾಡಲಾಯಿತು. ಅವರು ಬೆಂಗಳೂರು ಮುದ್ರಣಕ್ಕೆ ಮಾತ್ರ ಸಂಪಾದಕರಾಗಿದ್ದರು. ಕೆಲ ದಿನಗಳ ನಂತರ ಅವರೂ ರಾಜೀನಾಮೆ ನೀಡಿದರು. ಸಹ ಸಂಪಾದಕರಾಗಿದ್ದ ಎಸ್.ವಿ.ಜಯಶೀಲರಾವ್ ಬೆಂಗಳೂರು ಮುದ್ರಣವನ್ನು ನೋಡಿಕೊಂಡರು. ಅರಸು ಅಧಿಕಾರ ಕಳೆದುಕೊಂಡ ನಂತರ ಬಸವರಾಜ್ `ಸಂಕ'ದ ಬೆಂಗಳೂರು ಮುದ್ರಣವನ್ನು ಹಠಾತ್ ಆಗಿ ಮುಚ್ಚಿದರು (31-01-1980). ಜನಾರ್ದನ ರಾಜಿನಾಮೆಯಿತ್ತರು. ಘೋರ್ಪಡೆಯವರ ‘ಸಂಡೂರು ಮ್ಯಾಂಗನೀಸ್ ಅಂಡ್ ಐರನ್ ಓರ್ ಲಿಮಿಟೆಡ್ (ಸ್ಮಯೋರ್)’ ಕಂಪನಿಯ ಸಾರ್ವಜನಿಕ ಸಂಪರ್ಕಾಧಿಕಾರಿಯಾದರು. ಇತ್ತ ಹುಬ್ಬಳ್ಳಿ ಆವೃತ್ತಿಯ ಸ್ಥಾನಿಕ ಸಂಪಾದಕರ ಹುದ್ದೆ [[ಮತ್ತೀಹಳ್ಳಿ ನಾಗರಾಜರಾವ್]] ಅವರದಾಯಿತು.
ಬಹು ಹಿಂದೆ ಆರಂಭಗೊಂಡಿದ್ದ [[ಸಂಯುಕ್ತ ಕರ್ನಾಟಕ ನೌಕರರ ಸಂಘ]] ಬೆಂಗಳೂರಿನಲ್ಲಿ ಮರುಚಾಲನೆಗೊಂಡಿತು. ನಾಗೇಶರಾವ್ ನೇತೃತ್ವದ ಸಂಘವು ಬೆಂಗಳೂರು ಆವೃತ್ತಿಯ ಪುನಾರಂಭಕ್ಕೆ ಒತ್ತಾಯಿಸಿ ಹೋರಾಟ ನಡೆಸಿತು. ಪತ್ರಕರ್ತರು ಸರದಿಯಲ್ಲಿ ವಿಧಾನಸೌಧದ ಮುಂದೆ ಉಪವಾಸ ಮುಷ್ಕರ ಹೂಡಿದರು. ಇತ್ತ ಅರ್ಜುನದೇವ, ಜಯಶೀಲರಾವ್, [[ಕೋಡಿಹೊಸಳ್ಳಿ ರಾಮಣ್ಣ]] ನೇತೃತ್ವದಲ್ಲಿ [[ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ]]ವೂ ಹಕ್ಕೊತ್ತಾಯದ ಹೋರಾಟ ನಡೆಸಿತು. [[ಆರ್.ಗುಂಡೂರಾವ್]] ಮುಖ್ಯಮಂತ್ರಿಯಾಗಿದ್ದರು. [[ವೀರಪ್ಪ ಮೊಯ್ಲಿ]] ಸಂಪುಟ ಸಹೋದ್ಯೋಗಿಯಾಗಿದ್ದರು. ವಿಧಾನಸಭೆಯ ಅಧಿವೇಶನದಲ್ಲಿ ‘ಸಂಕ’ದ ಪುನಾರಂಭಕ್ಕೆ ಒತ್ತಾಯ ಹೆಚ್ಚಿತು. ಇತ್ತ ಧಾರವಾಡ ನ್ಯಾಯಾಲಯದಲ್ಲಿನ ವಾದ-ಪ್ರತಿವಾದಗಳೂ ಜೋರಾಗಿದ್ದವು. ಸರ್ಕಾರದ ದಯಾದೃಷ್ಟಿ, ನ್ಯಾಯಾಲಯದಲ್ಲಿ ಮೊಕ್ಕದ್ದಮೆ ಹೂಡಿದ್ದವರ ಸಹಕಾರ, ನೌಕರರ ಅನಿರ್ದಿಷ್ಟ ಹೋರಾಟದ ಫಲವಾಗಿ ಧಾರವಾಡ ಜಿಲ್ಲಾ ನ್ಯಾಯಾಲಯವು ಒಂದು ಮಧ್ಯಂತರ ತೀರ್ಪು ನೀಡಿತು. ಲೋಕ ಶಿಕ್ಷಣ ಟ್ರಸ್ಟ್ ನ ಮಾಲಿಕತ್ವ ಇತ್ಯರ್ಥವಾಗುವವರೆಗೆ ‘ದತ್ತಿ ಆಯುಕ್ತ’ರು (ಚಾರಿಟಿ ಕಮೀಷನರ್) ಆಡಳಿತ ನಡೆಸಬೇಕು ಎಂಬ
ಸೆಪ್ಟಂಬರ್ 1, 1981ರಂದು ವಿಶೇಷ ಆಜ್ಞೆಯೊಂದಿಗೆ ಆಡಳಿತಾಧಿಕಾರಿಯೊಬ್ಬರ ಮೂಲಕ ಲೋಕ ಶಿಕ್ಷಣ ಟ್ರಸ್ಟ್ ನ ಆಡಳಿತವನ್ನು ರಾಜ್ಯ ಸರ್ಕಾರವು ವಹಿಸಿಕೊಂಡಿತು. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಗಳಾದವು. ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಮೊಕ್ಕದ್ದಮೆಗಳು ಮುಂದುವರಿದವು. ಗುಂಡೂರಾವ್ ಅಧಿಕಾರ ಕಳೆದುಕೊಂಡರು. ಗೋಪಾಲಕೃಷ್ಣ ನಿರ್ಗಮಿಸಿದರು. [[ಟೈಮ್ಸ್ ಆಫ್ ಡೆಕ್ಕನ್]] ಸಮೂಹದ ಕನ್ನಡ ಪತ್ರಿಕೆ [[ಮುಂಜಾನೆ]]ಯ ಸಂಪಾದಕರಾಗಲು ಜಯಶೀಲರಾವ್ ‘ಸಂಕ’ ತೊರೆದರು. ಹುಬ್ಬಳ್ಳಿ ಆವೃತ್ತಿಯಲ್ಲಿ ಮತ್ತೀಹಳ್ಳಿ ನಾಗರಾಜರಾವ್ ಅವರ ನಿವೃತ್ತಿಯ ನಂತರ [[ಸುರೇಂದ್ರ ದಾನಿ]] ಸಹಾಯಕ ಸಂಪಾದಕರಾಗಿದ್ದರು. ಸೆಪ್ಟಂಬರ್ 1, 1983ರಂದು ಬೆಂಗಳೂರು ಆವೃತ್ತಿಯ ಸಹಾಯಕ ಸಂಪಾದಕರಾಗಿ [[ಹೆಚ್.ಆರ್.ನಾಗೇಶರಾವ್]] ಅವರ ನೇಮಕವಾಯಿತು. ಸುರೇಂದ್ರ ದಾನಿ ಅವರನ್ನು ಎರಡೂ ಆವೃತ್ತಿಗಳ ಸಂಪಾದಕರನ್ನಾಗಿ ನೇಮಕ ಮಾಡಲಾಯಿತು. ಅವರ ನಿವೃತ್ತಿಯ ನಂತರ [[ಆರ್.ಎ.ಉಪಾಧ್ಯ]] ಎರಡೂ ಆವೃತ್ತಿಗಳ ಸಂಪಾದಕತ್ವ ವಹಿಸಿಕೊಂಡರು. 1984ರಲ್ಲಿ [[ಹೆಚ್.ಆರ್.ನಾಗೇಶರಾವ್]] ಅವರಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ದೊರೆಯಿತು. 31-10-1985ರಲ್ಲಿ ನಾಗೇಶರಾವ್ ನಿವೃತ್ತಿಯ ನಂತರ ಧ್ರುವರಾಜ ಮುತಾಲಿಕ ದೇಸಾಯಿ ಬೆಂಗಳೂರು ಆವೃತ್ತಿಯ ಸ್ಥಾನಿಕ ಸಂಪಾದಕರಾಗಿ ಅಧಿಕಾರ ವಹಿಸಿಕೊಂಡರು.
ನ್ಯಾಯಾಲಯದ ಮೊಕ್ಕದ್ದಮೆಗಳು ಇತ್ಯರ್ಥವಾಗಿ ಲೋಕ ಶಿಕ್ಷಣ ಟ್ರಸ್ಟ್ ಗೆ ಆಡಳಿತ ಹಿಂದಿರುಗಿತು. ಮಾಜಿ ಮುಖ್ಯ ಮಂತ್ರಿ [[ಬಿ.ಡಿ.ಜತ್ತಿ]]ಯವರ ಅಧ್ಯಕ್ಷತೆಯಲ್ಲಿ ಟ್ರಸ್ಟ್ ಪುನಾರಚನೆಗೊಂಡಿತು. ನ್ಯಾಯಮೂರ್ತಿ [[ನಿಟ್ಟೂರು ಶ್ರೀನಿವಾಸರಾವ್]] ಸದಸ್ಯರಾಗಿ ಸೇರ್ಪಡೆಗೊಂಡರು. [[ಕೆ.ಶಾಮರಾವ್]] ಟ್ರಸ್ಟ್ ನ ಕಾರ್ಯದರ್ಶಿ ಹಾಗೂ ಪತ್ರಿಕಾ ಸಮೂಹದ ವ್ಯವಸ್ಥಾಪಕ ಸಂಪಾದಕರಾಗಿ ನೇಮಕಗೊಂಡರು. ಉಪಾಧ್ಯ, ಮುತಾಲಿಕ ದೇಸಾಯಿ ಅವರ ನಿವೃತ್ತಿಯ ನಂತರ [[ನರಸಿಂಹ ಜೋಶಿ]] ಸಂಪಾದಕರಾದರು. ಆಡಳಿತ ವರ್ಗದೊಂದಿಗೆ ಭಿನ್ನಾಭಿಪ್ರಾಯದಿಂದ [[ವೆಂಕಟನಾರಾಯಣ]] ನಿರ್ಗಮಿಸಿದರು. ಜೋಶಿ ನಿವೃತ್ತರಾದರು. [[ಕೆ.ಶ್ರೀಧರ ಆಚಾರ್]] ಸಲಹೆಗಾರರಾಗಿ ಸೇರ್ಪಡೆಯಾದರು. ಸ್ಥಾನಿಕ ಸಂಪಾದಕರಾಗಿದ್ದ [[ಎ.ಗುಂಡಾಭಟ್]] ನಿವೃತ್ತರಾದರು. ಶಾಮರಾವ್ ನಿರ್ಗಮಿಸಿದರು. [[ಹಾರನಹಳ್ಳಿ ರಾಮಸ್ವಾಮಿ]] ಟ್ರಸ್ಟ್ ನ ಅಧ್ಯಕ್ಷರಾದರು. ಹಿರಿಯ ಪತ್ರಕರ್ತ [[ವಿ.ಎನ್.ಸುಬ್ಬರಾವ್]] ‘ಸಂಕ’ದ ಸಂಪಾದಕರಾದರು. ಅವರ ಅಧಿಕಾರಾವಧಿಯ ನಂತರ, ಪ್ರಧಾನಿ [[ಹೆಚ್.ಡಿ.ದೇವೇಗೌಡ]]ರಿಗೆ ಪತ್ರಿಕಾ ಕಾರ್ಯದರ್ಶಿಯಾಗಿ ದೆಹಲಿಗೆ ಹೋಗಿದ್ದ [[ಎಸ್.ವಿ.ಜಯಶೀಲರಾವ್]] ‘ಸಂಕ’ಕ್ಕೆ ಸಂಪಾದಕರಾದರು. [[ಕನ್ನಡಪ್ರಭ]]ದಿಂದ ನಿವೃತ್ತರಾಗಿ [[ಪತ್ರಿಕಾ ಅಕ್ಯಾಡೆಮಿ]] ಅಧ್ಯಕ್ಷಗಿರಿಯಿಂದಲೂ ನಿವೃತ್ತರಾಗಿದ್ದ [[ಗರುಡನಗಿರಿ ನಾಗರಾಜ]] [[ಕರ್ಮವೀರ]] ಪತ್ರಿಕೆಯ ಸಂಪಾದಕರಾದರು. ಜಯಶೀಲರಾವ್ ಅವರ ನಿರ್ಗಮನದ ನಂತರ ‘ಸಂಕ’ದ ಸಂಪಾದಕರಾಗಿ [[ಮನೋಜ್ ಗೌಡ ಪಾಟೀಲ]] ನೇಮಕಗೊಂಡರು. ಹಾರನಹಳ್ಳಿಯವರ ನಿಧನದ ನಂತರ ಟ್ರಸ್ಟ್ ಪುನಾರಚನೆಗೊಂಡಿತು. ಪಾಟೀಲ ನಿವೃತ್ತರಾದರು. ಇದೀಗ ಪ್ರಧಾನ ವರದಿಗಾರರಾಗಿದ್ದ [[ಹುಣಸವಾಡಿ ರಾಜನ್]] ‘ಸಂಕ’ದ ಸಂಪಾದಕರಾಗಿದ್ದಾರೆ.
[[ಚಿತ್ರ:News_Clip_02.jpg|thumb|1983ರಲ್ಲಿ ಸಂಯುಕ್ತ ಕರ್ನಾಟಕ|ಪತ್ರಿಕೆಯ ಕೆ.ಶಾಮರಾವ್ ಹಾಗೂ ಸುರೇಂದ್ರ ದಾನಿಯವರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ಗೌರವಧನದ ಸುದ್ದಿಯಿದೆ|[[ಹೆಚ್.ಆರ್.ನಾಗೇಶರಾವ್]] ಸಂಗ್ರಹದಿಂದ]]
|