ಮದಕರಿ ನಾಯಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೪೬ ನೇ ಸಾಲು:
ಚಿತ್ರದುರ್ಗದ ನಾಯಕರಲ್ಲಿ ಕಡೆಯ ನಾಯಕನಾದ, ಮದಕರಿ ನಾಯಕ, ಚಿತ್ರದುರ್ಗದ ಸಿಂಹಾಸನವನ್ನು ಅಲಂಕರಿಸಿದಾಗ ಹನ್ನೆರಡು ವರ್ಷ ವಯಸ್ಸಿನವನಾಗಿದ್ದನು. ಚಿತ್ರದುರ್ಗದ ವೈರಿಗಳು ಮತ್ತೊಮ್ಮೆ ಅದನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಬೇಡರ ಸಮುದಾಯ ತಮ್ಮ ನಾಯಕನಿಗೆ ನಿಷ್ಠಾವಂತರಾಗಿ ಉಳಿದು ಆತನನ್ನು ರಕ್ಷಿಸುತ್ತಾರೆ. ಕಲ್ಯದುರ್ಗ ಒಬ್ಬನೇ ಅದನ್ನು ಆಕ್ರಮಿಸಲು ಮತ್ತೊಮ್ಮೆ ಪ್ರಯತ್ನಿಸಿ ಸೋಲುತ್ತಾನೆ. ನಂತರ 1759–60ರಲ್ಲಿ, ರಾಯದುರ್ಗ, ಹರಪನಹಳ್ಳಿ, ಹಾಗು ಸವಣೂರಿನ ಏಕೀಕೃತ ಮೈತ್ರಿಕೂಟ ಶತ್ರುಸೈನ್ಯವು ಆಕ್ರಮಣ ನಡೆಸಿತು. ಐಹೊಸ್ಕೆರೆ ಸಮೀಪ ಈ ಕದನ ನಡೆಯುತ್ತದೆ. ಇದರಲ್ಲಿ ಕೆಲವನ್ನು ಕಳೆದುಕೊಂಡರೂ, ಈ ಹಾನಿಯೊಂದಿಗೆಯೇ ಚಿತ್ರದುರ್ಗ ಸೈನ್ಯ ಜಯ ಗಳಿಸುತ್ತದೆ. ಇದರ ನಂತರ ರಾಜ್ಯದ ಗಡಿ ಪ್ರದೇಶಗಳಾದ ತರಿಕೆರೆ ಹಾಗು ಜರಿಮಲೆಯ ನಾಯಕರುಗಳು ಉಂಟುಮಾಡಿದ ಕುಕೃತ್ಯಗಳಿಂದಾಗಿ ಕೆಲವು ಸಣ್ಣಪುಟ್ಟ ಗಲಾಟೆಗಳು ಸಂಭವಿಸುತ್ತವೆ.
ತದನಂತರ ಚಿತ್ರದುರ್ಗವು, ದಕ್ಷಿಣದಲ್ಲಿ ಒಂದು ಬಲಶಾಲಿ ಸೈನ್ಯವಾಗುತ್ತದೆ. ಪರಿಣಾಮವಾಗಿ ಪ್ರಬಲವಾಗಿದ್ದ ಹೈದರ್ ಅಲಿ ಹಾಗು ಪೇಶ್ವೆಗಳು ಪರಸ್ಪರ ಕದನಕ್ಕೆ ಇದರ ಸಹಾಯ ಯಾಚಿಸುತ್ತಾರೆ. ನಾಯಕನು, ಬಂಕಾಪುರ, ನಿಜಗಲ್, ಬಿದನೂರು, ಹಾಗು ಮರಾಠರ ವಿರುದ್ಧದ ಕದನಗಳಲ್ಲಿ ಮೊದಲ ಬಾರಿಗೆ ಹೈದರ್ ಅಲಿಗೆ ಸಹಾಯ ಮಾಡಿರುತ್ತಾನೆ. ಇದರ ಹೊರತಾಗಿಯೂ, ನವಾಬನು ಚಿತ್ರದುರ್ಗವನ್ನು ಆಕ್ರಮಿಸಲು ಸೂಕ್ತ ಸಮಯಕ್ಕಾಗಿ ಕಾಯುತ್ತಿರುತ್ತಾನೆ. 1777ರಲ್ಲಿ, ಮರಾಠ ಹಾಗು ನಿಜಾಮರ ಮಿತ್ರಕೂಟ ಸೈನ್ಯದಿಂದ ಹೈದರ್, ಭಯಾನಕ ಆಕ್ರಮಣವನ್ನು ಎದುರಿಸಬೇಕಾಗುತ್ತದೆ. ಈ ನಡುವೆ ಚಿತ್ರದುರ್ಗದ ನಾಯಕನು ತನ್ನ ಸ್ವಾಮಿನಿಷ್ಠೆಯನ್ನು ಬದಲಿಸುತ್ತಾನೆ. ಅಲ್ಲದೇ ನಾಯಕನು ದೊಡ್ಡ ಮೊತ್ತದ ಕಪ್ಪವನ್ನು ಸಲ್ಲಿಸುವ ಪ್ರಸ್ತಾಪದ ಹೊರತಾಗಿಯೂ, ಹೈದರ್ ಅದನ್ನು ನಿರಾಕರಿಸಿ ಚಿತ್ರದುರ್ಗದೆಡೆಗೆ ದಾಳಿಗಾಗಿ ಕ್ರಮಣ ಮಾಡುತ್ತಾನೆ. ಕೋಟೆಯನ್ನು ಪ್ರವೇಶಿಸಲು ಸೂಕ್ತ ತಯಾರಿಯನ್ನು ಮಾಡಿಕೊಳ್ಳುವವರೆಗೂ ಕೆಲವು ತಿಂಗಳುಗಳ ಕಾಲ ಮುತ್ತಿಗೆ ನಿಷ್ಫಲವಾಗುತ್ತದೆ. ಅಲ್ಲದೇ ಹದಿಮೂರು ''ಲಕ್ಷಗಳ'' ಪಗೋಡಗಳನ್ನು ಮುಖ್ಯಸ್ಥ, ನಾಯಕನಿಂದ ಕಪ್ಪವಾಗಿ ಪಡೆಯಲಾಗುತ್ತದೆ. ಮರಾಠ ಸೈನ್ಯದ ಕಾರ್ಯಾಚರಣೆ ಮುಗಿದ ನಂತರ, ಹೈದರ್ ಮತ್ತೊಮ್ಮೆ ಚಿತ್ರದುರ್ಗದ ನಾಯಕನೊಂದಿಗೆ ಪ್ರಸ್ತಾಪ ಮಾಡುತ್ತಾನೆ. ಆದರೆ ಈ ಸಂದರ್ಭದಲ್ಲಿ ಹೈದರ್ ನ ವಿರುದ್ಧ ಸೈನ್ಯವು ತಿಂಗಳುಗಟ್ಟಲೇ ತನ್ನ ಪ್ರತಿಭಟನೆಯನ್ನು ಮುಂದುವರೆಸುತ್ತದೆ. ಪಾಳೆಯಗಾರರ ಸೇವೆಯಲ್ಲಿದ್ದ ವಿಶ್ವಾಸಘಾತುಕ
==ಮೂಲಗಳು==
|