ಮಹಾ ಜ್ಯೋತಿಷಿ, 'ವರಾಹ ಮಿಹಿರ' ಸಹಿತ ಉಜ್ಜಯಿನಿಯಲ್ಲಿ ವಾಸಿಸಿದ್ದರು. ಧಾರಾದ ರಾಜ 'ಭೋಜರಾಜನ ಆಸ್ಥಾನ'ದಲ್ಲಿ ಕವಿಗಳಿಗೆ ವಿಶೇಷ ಮನ್ನಣೆಯನ್ನು ಕೊಟ್ಟು ಆಶ್ರಯವನ್ನು ಕೊಡಲಾಗಿತ್ತು. ರಾಜಾ ಭೋಜ್ಭೋಜ ಸ್ವತಃ ಒಬ್ಬ ಶ್ರೇಷ್ಟ ಕವಿಯಾಗಿದ್ದರು. ಹಲವಾರು ಕೃತಿಗಳನ್ನು ರಚಿಸಿದ್ದಾರೆ. 'ಧಾರ್ಧಾರ ನಗರ'ದಲ್ಲಿ ಭೋಜರಾಜರು ನಿರ್ಮಿಸಿದ 'ಸಂಸ್ಕೃತ ಪಾಠಶಾಲೆ' ಇಂದಿಗೂ ಇದೆ. ಶಾಲೆಯ ಗೋಡೆಗಳ ಮೇಲೆ ಸಂಸ್ಕೃತ ಭಾಷೆಯಲ್ಲಿ ಕೆತ್ತಿದ ಹಲವಾರು ಶ್ಲೋಕಗಳಿವೆ. ಮಧ್ಯಪ್ರದೇಶ ಇನ್ನೂ ಹಲವಾರು ಖ್ಯಾತ ಪಂಡಿತರಿಗೆ ತವರುಮನೆ. ಅವರುಗಳಲ್ಲಿ ಪ್ರಮುಖರು, 'ಧನಪಾಲ', 'ಭರ್ತುಹರಿ', 'ಆಶಾಧಾರ', 'ಮನತುಂಗ', 'ಬ್ರಹ್ಮಗುಪ್ತ', 'ಭಾಸ್ಕರಾಚಾರ್ಯ', ಮುಂತಾದವರು. '[[ಚಂದ್ರಗುಪ್ತ ವಿಕ್ರಮಾದಿತ್ಯ ಮಹಾರಾಜ]]' ನ ಕಾಲದಲ್ಲಿ, '[[ಧನ್ವಂತರಿ]]', '[[ಕ್ಷಪಣಕ]]' (ಸಿದ್ಧಸೇನ) '[[ಅಮರ ಸಿಂಹ]]', '[[ಸಂಕು]]', '[[ವೇತಾಲಭಟ್ಟ]]', '[[ಘಟಕರ್ಪರ]]', '[[ಕಾಳಿದಾಸ]]', '[[ವರಾಹಮಿಹಿರ]]', ಮತ್ತು '[[ವರರುಚಿ]]' ಎಂಬ [[ನವರತ್ನ|ನವರತ್ನಗಳಿದ್ದರು]]. ''''ಆಧುನಿಕ ಕಾಲದ ಕೆಲವು ಹೆಸರಾಂತ ಕವಿಗಳು',''' 'ಮಾಖನ್ ಲಾಲ್', 'ಚತುರ್ವೇದಿ', 'ಶರದ್ ಜೋಶಿ', 'ಗಜಾನನ', 'ಮಾಧವ ಮುಕ್ತಿ', 'ಬೊಧ' ಮತ್ತು 'ವಿನೋದ್ ಕುಮಾರ್', 'ಶುಕ್ಲಾ' ಮುಂತಾದವರು.