ತಾಳ್ಯದ ಆಂಜನೇಯಸ್ವಾಮಿ ದೇವಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಚಿತ್ರ:Hanuman.jpeg|thumb|right|200px|'ತಾಳ್ಯದ ಆಂಜನೇಯಸ್ವಾಮಿ']]
ತಾಳ್ಯ, ಚಿತ್ರದುರ್ಗ ಜಿಲ್ಲೆಯ ಇತರ ಹಳ್ಳಿಗಳಂತೆ, ಕುಡಿಯುವ ನೀರಿನವ್ಯವಸ್ಥೆಯೂ ಇಲ್ಲದ ಒಂದು ಅತ್ಯಂತ ಚಿಕ್ಕಹಳ್ಳಿಯಾಗದೆ ಇರಲು ಕಾರಣ, ಇಲ್ಲಿಯ ವಿಶಾಲವಾದ ಕೆರೆಯ ಅಸ್ತಿತ್ವದಿಂದ. ಹೋಬಳಿ ಕೇಂದ್ರವಾದ ತಾಳ್ಯದ ಸುತ್ತಮುತ್ತಲೂ ಅನೇಕ ಬೆಟ್ಟ ಗುಡ್ಡಗಳಿಂದ ಆವೃತವಾಗಿದ್ದು ಅರ್ಥಚಂದ್ರಾಕೃತಿಯ ಮಾದರಿಯ ಭೂಭಾಗದಲ್ಲಿ ಗ್ರಾಮದ ಪೂರ್ವದಿಕ್ಕಿನಲ್ಲಿ ಸುಂದರವಾದ ಹಾಗೂ ವಿಶಾಲವಾದ ಕೆರೆಯನ್ನು ಹೊಂದಿದೆ. ಈ ಕೆರೆಯು ೧೮೦ ಎಕರೆ ೨೩ ಗುಂಟೆ ವಿಸ್ತೀರ್ಣವನ್ನು ಹೊಂದಿದ್ದು ಇದರ ಅಂಕು-ಡೊಂಕಾದ ಏರಿ ೭೦೦-೮೦೦ ಮೀಟರ್ ವ್ಯಾಪ್ತಿ ಹೊಂದಿದೆ. ಈ ಕೆರೆ ಬತ್ತಿದ ದಿನಗಳೇ ಅಪರೂಪವೆಂದು ಗ್ರಾಮದ ಜನ ನೆನೆಸಿಕೊಳ್ಳುತ್ತಾರೆ. ಇಂಥ ತಾಣದಲ್ಲಿ ಹನುಮಪ್ಪ ಅಥವಾ ಆಂಜನೇಯಸ್ವಾಮಿಯ ದೇವಸ್ಥಾನವಿದ್ದು ಜಿಲ್ಲೆಯಲ್ಲಿ ಪ್ರಸಿದ್ಧಿಯಾಗಿದೆ. ತಾಳ್ಯದ ತೇರು ಸಾಮಾನ್ಯವಾಗಿ ಎಪ್ರಿಲ್ ತಿಂಗಳಿನಲ್ಲಿ ಅಂದರೆ, ಬೆಂಗಳೂರಿನಲ್ಲಿ ಕರಗವಾಗುವ ಸಮಯದಲ್ಲಿ ನಡೆಯುತ್ತದೆ.ಹೊಳಲ್ಕೆರೆ ಚಿತ್ರದುರ್ಗ ಬಸ್ ಮಾರ್ಗದಲ್ಲಿ ಸಿಗುವ ಶಿವಗಂಗ ಗ್ರಾಮದಿಂದ ೮ ಕಿ.ಮೀ.ದೂರದಲ್ಲಿದೆ. ತಾಳ್ಯ ಗ್ರಾಮದ ಪ್ರಾರಂಭದಲ್ಲೇಆರಂಭದಲ್ಲೇ ಆಂಜನೇಯ ಸ್ವಾಮಿಯ ಗುಡಿಯಿದೆ.
==ದೇವಸ್ಥಾನದ ವೈಶಿಷ್ಟ್ಯಗಳು==
ಸುಮಾರು ೪೦೦ ವರ್ಷಗಳ ಹಿಂದೆ, ಚಿತ್ರದುರ್ಗದ ಪಾಳೇಗಾರರಿಂದ ಈ ದೇವಾಲಯ ಸ್ಥಾಪನೆಯಾಗಿರಬಹುದು. ಆದರೆ ಯಾವುದಕ್ಕೂ ಆಧಾರಗಳು ದೊರೆತಿಲ್ಲ. ಅಜಾನುಬಾಹುವಾಗಿ ನಿಂತಿರುವ ಸ್ವಾಮಿಯ ವಿಗ್ರಹ, ಸುಮಾರು ೧೧ ಅಡಿ ಎತ್ತರವಿದೆ. ಪಕ್ಕದಲ್ಲಿ ದಶಾವತಾರದ ಭಂಗಿಗಳಿವೆ. ಅಷ್ಟದಿಕ್ಪಾಲಕರು, ಆದಿಶಕ್ತಿ, ಮತ್ತು ಶ್ರೀರಾಮ ಪಟ್ಟಾಭಿಷೇಕ, 'ರಾಮಾಯಣದ ಅರಣ್ಯಕಾಂಡದ ಚಿತ್ರಣ'ಗಳು ಸುಂದರವಾಗಿಮೂಡಿಬಂದಿವೆ. ಸಭಾಂಗಣದ ಕಂಭಗಳಲ್ಲಿ ಶಿವ,ಪಾರ್ವತಿ,ನಂದಿ ಗರುಡ, ಲಿಂಗ, ಮತ್ತು ಮಾರುತಿಯ ಕೆತ್ತನೆಗಳಿವೆ. ಹತ್ತಿರದಲ್ಲೇ ಇರುವ 'ಹಾಲುರಾಮೇಶ್ವರ ಮಟ್ಟಿ'ಯಿಂದ 'ಮಲಸಿಂಗನಹಳ್ಳಿ'ಯ 'ಕಿಟ್ಟದಹಳ್ಳಿ'ಯ ಮೂರ್ತಿಗಳು ಒಂದೇ ಬೃಹತ್ ಬಂಡೆಯಿಂದ ನಿರ್ಮಿಸಲ್ಪಟ್ಟಿವೆ. 'ತಾಳ್ಯದ ಮೂರ್ತಿ'ಯು 'ವೀರ ಭಾವ'ವನ್ನು ಹೊಂದಿದ್ದು, 'ಕಿಟ್ಟದ ಹಳ್ಳಿಯ ಮೂರ್ತಿ', 'ಶಿಶು'ವಿನಂತೆ ಮತ್ತು ಮಲಸಿಂಗನಹಳ್ಳಿಮೂರ್ತಿ, 'ನರ'ನಂತೆ ಕಾಣಬರುತ್ತದೆ. ಗರ್ಭಗುಡಿಯ ಬಾಗಿಲಿಗೆ ಹಿತ್ತಾಳೆಯಲ್ಲಿ ಮಾಡಿಸಿದ ರಾಮಾಯಣದ ಚಿತ್ತಾರಗಳನ್ನು ಹೊರಸೂಸುವ ತಗಡನ್ನು ೧೯೧೬ ರಲ್ಲಿ ಅಳವಡಿಸಿದ್ದಾರೆ. ಮಹಾದ್ವಾರದ ಬಳಿ 'ಬಾಣಪ್ಪ ದೇವರ ಚಿಕ್ಕಗುಡಿ'ಯಿದೆ. ಈ ದೇವತೆ ಭೂತ ಪ್ರೇತ ಪಿಶಾಚಿಗಳ, ಮತ್ತು ರೋಗಗಳನ್ನು ವಾಸಿಮಾಡಲು, ಕಷ್ಟಗಳನ್ನು ಪರಿಹರಿಸಲು 'ನಂದನ ಹೊಸೂರಿನ ರಾಜ'ನು ದಾಸಯ್ಯನಿಗೆ ನೀಡಿದ ಚಿತ್ರಹಿಂಸೆಗಳನ್ನೇ ಜಾತ್ರೆಯ ಸಮಯದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಆಚರಿಸುತ್ತಾರೆ. ಜಾತಿ ಭೇದವಿಲ್ಲದೆ ಎಲ್ಲರೂ ಭಾಗವಹಿಸಿ ಕಾಣಿಕೆಗಳನ್ನು ಸಮರ್ಪಿಸುತ್ತಾರೆ.
 
==ಹನುಮಪ್ಪನ ತೇರಿನ ವಿವರಗಳು ==
ಪ್ರತಿವರ್ಷವೂ ಚೈತ್ರ ಶುದ್ಧ ಚಿತ್ರ ಪೂರ್ಣಿಮೆಯದಿನ ಶ್ರೀ ಆಂಜನೇಯನಿಗೆ ಬ್ರಹ್ಮ ರಥೋತ್ಸವ (ಆನೆ ಉತ್ಸವ) ಜರುಗುವುದು. ಅಂಕುರಾರ್ಪಣದ ಬಳಿಕ ಕುದುರೆ ವಾಹನ, ಸಿಂಹವಾಹನ, ಇಂದ್ರಜಿತು ವಾಹನ, ನಂತರ ಆನೆ ವಾಹನೋತ್ಸವ ಅಥವ ಬ್ರಹ್ಮರಥೋತ್ಸವ ಜರುಗುತ್ತದೆ. ಆಂಜನೇಯ ಸ್ವಾಮಿಯ ಜಾತ್ರೆಯಂದು ಗುಡ್ಡದ ತಿಮ್ಮಪ್ಪನ ಉತ್ಸವ ಮೂರ್ತಿಯನ್ನು ಗ್ರಾಮಕ್ಕೆ ಬರಮಾಡಿಕೊಂಡು ಪೂಜೆ ಸಲ್ಲಿಸಿದ ನಂತರವೇ ಮೊದಲ ದಿನ ವಿಪ್ರಬಂಧುಗಳಿಂದವಿಶೇಷ ಪೂಜೆ-ಪ್ರಾರ್ಥನೆಗಳನಂತರ ಹಾಗೂ ಶ್ರೀಗುಡ್ಡದ ತಿಮ್ಮಪ್ಪನ ಉತ್ಸವಮೂರ್ತಿಗಳನ್ನು ಬ್ರಹ್ಮರಥದಲ್ಲಿ ಅಲಂಕೃತಗೊಳಿಸಿ ಗ್ರಾಮದ ಸುತ್ತಲೂ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಗುತ್ತದೆ. ಆದಿನ ರಾತ್ರಿ ರಥಕ್ಕೆ ಎಣ್ಣೆ ಎರೆಯಲಾಗುತ್ತದೆ.
Line ೩೧ ⟶ ೩೦:
ದೇವಾಲಯದ ನಿರ್ಮಾಣದ ಕುರಿತು ಯಾವುದೆ ಶಾಸನಗಳು, ದಾಖಲೆಗಳು, ಮಾಹಿತಿಗಳು ಲಭ್ಯವಿಲ್ಲ. <೧> ವಾಸ್ತುಶೈಲಿಯನ್ನು ಆಧರಿಸಿ ಕಾಲವನ್ನು ನಿರ್ಧರಿಸಬಹುದು. ದೊರೆತ ಶಾಸನಗಳೊಂದರಲ್ಲಿ ಧಾರ್ಮಿಕ ಮನೋಭಾವದಿಂದ ಹಾಗೂ ದಾನ ಶಾಶ್ವತವಾಗಿ ಮುಂದುವರೆಯಲು ಹಾಕಿಸುತ್ತಿದ್ದರು. ಕೆರೆಕೋಡಿಯ ಬಳಿ ಮತ್ತೊಂದು ಶಾಸನವಿದೆ. ಇದು 'ಹೊರಕೆದೇವಪುರದ ಲಕ್ಷ್ಮೀನರಸಿಂಹ ದೇವಸ್ಥಾನ'ಕ್ಕೆ ಭೂದಾನ ಮಾಡಿದ್ದರ ಬಗ್ಗೆ ತಿಳಿಸುತ್ತದೆ. ಕ್ರಿ.ಶ. ೧೫೭೮. ೭ ಸಾಲುಗಳ ಈ ಚಿಕ್ಕ ಶಾಸನದಲ್ಲಿಬಹುಧಾನ್ಯ ಸಂವತ್ಸರದ, ಭಾದ್ರಪದ ಒಂದರಲ್ಲಿ ಹೊರಕೆ ದೇವಪುರದ ಲಕ್ಷ್ಮೀನರಸಿಂಹದೇವರ ನೈವೇದ್ಯಕ್ಕೆ' ಕೋಡಿಹಳ್ಳಿಗ್ರಾಮ'ವನ್ನು 'ಸಂತೆಬೆನ್ನೂರ ಹನುಮಂತನಾಯಕ'ನ ಶ್ರೇಯಸ್ಸಿಗಾಗಿ 'ಬಾಲಿನಾಯಕ'ನೆಂಬಾತನು ದಾನನೀಡಿದನೆಂಬ ದಾಖಲಿಸಿದ್ದಾರೆ.
 
ಮತ್ತೊಂದು ಶಾಸನ ಇದೇಗ್ರಾಮದ 'ವೀರಭದ್ರ ದೇವಸ್ಥಾನದ ಇಂಜಾಮಿನ ಮೂಲೆಯಲ್ಲಿಮೂಲೆ'ಯಲ್ಲಿ ಲಭ್ಯವಾಗಿತ್ತು. ಆದರೆ ಇದು ತೃಟಿಗೊಂಡಿದ್ದು ಈಗ ; ಅಭ್ಯವಿಲ್ಲ. ಆದರೆ ಚಿತ್ರದುರ್ಗದ ಶಾಸನ ಸಂಪುಟದಲ್ಲಿ ೬ ಸಾಲಿನ ಶಾನಸನದಲ್ಲಿ ದಾಖಲಿಸಲಾದ ಪಂಕ್ತಿಗಳು ಹೀಗಿವೆ. ’[[ಸಾಧಾರಣ ಸಂವತ್ಸರದ ಜ್ಯೇಷ್ಠ ಬಹುಳ ೪]], [[ಮಂಗಳವಾರ...(ಕಾಮಗೇತಿ) ಕಸೂರಿ ಬರಮಣ್ಣ ನಾಯಕರು]], [[ಮದಕರಿ ನಾಯಕರು]], [[ಬಾಗೂಹಾರಲಿ ಬಸ]]'.. ಎಂದು ಮಾತ್ರ ಕಾಣಿಸುತ್ತದೆ, ಬಾಕಿ ವಿಷಯಗಳು ಛಿದ್ರವಾಗಿವೆ. ಚಿತ್ರದುರ್ಗ ನಾಯಕರ ಆಡಳಿತದಲ್ಲಿದ್ದಿತು ಎಂದು ನಿಸ್ಸಂಶಯವಾಗಿ ಹೇಳಬಹುದು.
 
’ಸಾಧಾರಣ ಸಂವತ್ಸರದ ಜ್ಯೇಷ್ಠ ಬಹುಳ ೪, ಮಂಗಳವಾರ...(ಕಾಮಗೇತಿ) ಕಸೂರಿ ಬರಮಣ್ಣ ನಾಯಕರು, ಮದಕರಿ ನಾಯಕರು, ಬಾಗೂಹಾರಲಿ ಬಸ'.. ಎಂದು ಮಾತ್ರ ಕಾಣಿಸುತ್ತದೆ, ಬಾಕಿ ವಿಷಯಗಳು ಛಿದ್ರವಾಗಿವೆ. ಚಿತ್ರದುರ್ಗ ನಾಯಕ್ರ ಆಡಾಳಿತದಲ್ಲಿತು ಎಂದು ನಿಸ್ಸಂಶಯವಾಗಿ ಹೇಳಬಹುದು.
'ದ್ರಾವಿಡ ಶೈಲಿ', 'ಮಿಶ್ರಿತ ಪ್ರಾದೇಶಿಕ ಶೈಲಿ'ಯಲ್ಲಿದೆ. 'ವಿಜಯ ನಗರದ ಸಾಮ್ರಾಜ್ಯ'ದ ಅವನತಿಯ ಸಮಯ ಇಲ್ಲವೇ ಪಾಳೇಗಾರರ ಕಾಲದಲ್ಲಿ 'ಕಣಶಿಲೆ'ಯನ್ನು ಬಳಸಿ ಗ್ರಾನೈಟ್, ಇಟ್ಟಿಗೆ ಗಾರೆಗಳ ಬಳಕೆಯಾಗಿದೆ.
==ತಳವಿನ್ಯಾಸ==