ಗೀತಪ್ರಿಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
'''ಗೀತಪ್ರಿಯ''' - ಕನ್ನಡ ಚಲನಚಿತ್ರರಂಗದ ಪ್ರಮುಖ ಗೀತರಚನಕಾರ ಹಾಗೂ ನಿರ್ದೇಶಕರ ಸಾಲಿಗೆ ಸೇರುವ ಮತ್ತೊಂದು ಹೆಸರು.ಜನನ [[೧೯೩೧]]ರ ಜೂನ್ ೧೫ರಂದು.ನಿಜವಾದ ಹೆಸರು "ಲಕ್ಷ್ಮಣರಾವ್ ಮೋಹಿತೆ".ಬಾಲ್ಯಮಿತ್ರ [[ವಿಜಯಭಾಸ್ಕರ್]] ಸಹಾಯದಿಂದ ೧೯೫೫ರಲ್ಲಿ [[ಶ್ರೀರಾಮಪೂಜಾ]] ಚಲನಚಿತ್ರಕ್ಕೆ ಗೀತೆ ಬರೆಯುವ ಅವಕಾಶ ದೊರಕಿತು.ವಿಜಯಭಾಸ್ಕರ್ ಅವರಿಂದಲೇ "ಗೀತಪ್ರಿಯ" ಎಂಬ ನಾಮಕರಣ.[[ಮಣ್ಣಿನಮಗ]] ಚಲಚಿತ್ರದಿಂದ ನಿರ್ದೇಶಕನ ಪಟ್ಟ ,ಜೊತೆಜೊತೆಗೆ ಹೆಸರು,ಪ್ರಶಸ್ತಿ.. ಎಲ್ಲವೂದಕ್ಕಿತು.
ಮಿಲಿಟರಿ ಪರಂಪರೆಯ ಕುಟುಂಬದಿಂದ ಬಂದವರು ಗೀತಪ್ರಿಯ. ಅವರ ತಂದೆ, ಮೊದಲ ಮಹಾಯುದ್ಧದಲ್ಲಿ ಪಾಲ್ಗೊಂಡಿದ್ದ
ಗೀತಪ್ರಿಯರಿಗೆ ಚಿತ್ರರಂಗದ ಗೀಳು ಅಂಟಿಕೊಂಡದ್ದಕ್ಕೂ ಒಂದು ಹಿನ್ನೆಲೆಯಿದೆ. ಅದು 1943ರ ಮಾತು. ಆಗಷ್ಟೇ `ಸತ್ಯಹರಿಶ್ಚಂದ್ರ’ ಸಿನಿಮಾ ಬಿಡುಗಡೆಯಾಗಿತ್ತು. ಆ ಸಿನಿಮಾ ನೋಡಿದ ಗೀತಪ್ರಿಯ, ಚಿತ್ರನಟನಾಗಲೇಬೇಕು ಎಂದು ಆ ಕ್ಷಣದಲ್ಲೇ ನಿರ್ಧರಿಸಿದರಂತೆ. ಅಷ್ಟೇ ಅಲ್ಲ, ನಟನಾಗುವ ಉದ್ದೇಶದಿಂದಲೇ ಮದ್ರಾಸ್ಗೆ ಹೋದರು. ಅಲ್ಲಿ ಕಥಕ್ ಡ್ಯಾನ್ಸ್ ಕಲಿತರು. ನಾಟಕ ಕಂಪನಿಗಳಲ್ಲಿ ಅಭಿನಯಿಸಿ `ಅನುಭವ’ ಪಡೆದುಕೊಂಡರು. ನಂತರ ಒಂದೆರಡು ತೆಲುಗು ಚಿತ್ರಗಳಲ್ಲಿ `ಡ್ಯಾನ್ಸರ್’ ಆಗಿಯೂ ಕಾಣಿಸಿಕೊಂಡದ್ದಾಯಿತು. ಹೀಗಿದ್ದಾಗಲೇ ಆರ್. ನಾಗೇಂದ್ರರಾವ್ ಅವರು ಒಂದು ಸಿನಿಮಾ ತಯಾರಿಸಲಿದ್ದಾರೆ ಎಂಬ ಸುದ್ದಿ ಕಿವಿಗೆ ಬಿತ್ತು. ತಕ್ಷಣವೇ ಅಲ್ಲಿಗೆ ಹೋದ ಗೀತಪ್ರಿಯ-`ಸಾರ್, ನನಗೆ ಒಂದು ಪಾತ್ರ ಕೊಡಿ’ ಅಂದರಂತೆ. ಅದಕ್ಕೆ ನಾಗೇಂದ್ರರಾಯರು- ಈಗಾಗಲೇ ಎಲ್ಲ ಪಾತ್ರಗಳ ಆಯ್ಕೆ ಮುಗಿದಿದೆಯಪ್ಪಾ. ಮುಂದೆ ನೋಡೋಣ. ಈಗ ನೀನು ಬೆಂಗಳೂರಿಗೆ ಹೋಗು’ ಎಂದರಂತೆ.
|