ಭಾರತ ಬಿಟ್ಟು ತೊಲಗಿ ಚಳುವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೮ ನೇ ಸಾಲು:
 
==ಶೀಘ್ರ ಸ್ವಾತಂತ್ರ್ಯಕ್ಕಾಗಿ ಗೊತ್ತುವಳಿ==
[[೧೪ ಜುಲೈ]], [[೧೯೪೨]]ರಂದು ಕಾಂಗ್ರೆಸ್ ಪಕ್ಷವು ಬ್ರಿಟನ್ನಿನಿಂದ ಸಂಪೂರ್ಣ ಸ್ವಾತಂತ್ರ್ಯಕ್ಕಾಗಿ ಗೊತ್ತುವಳಿ ಹೊರಡಿಸಿತು. ಈ ಬೇಡಿಕೆ ನೆರವೇರದಿದ್ದರೆ, [[ಅಸಹಾಕಾರ ಚಳುವಳಿ]]ಯನ್ನು ನಡೆಸುವುದಾಗಿಯೂ ಘೋಷಿಸಲಾಯಿತು. ಆದರೆ ಪಕ್ಷದಲ್ಲಿಯೇ ಹಲವಾರು ನಾಯಕರು ಇದನ್ನು ವಿರೋಧಿಸಿದರು. [[ಸಿ ರಾಜಗೋಪಾಲಾಚಾರಿ|ಚಕ್ರವರ್ತಿ ರಾಜಗೋಪಾಲಾಚಾರಿ]]ಯವರು ಈ ಕಾರಣದಿಂದ ಹಲವಾರು ಪ್ರಾದೇಶಿಕ ನಾಯಕರುಗಳೊಂದಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದರು. [[ಜವಾಹರಲಾಲ್ ನೆಹರು]] ಮತ್ತು [[ಮೌಲನಾಮೌಲಾನಾ ಆಜಾದ್]] ಈ ಗೊತ್ತುವಳಿಯನ್ನು ಟೀಕಿಸದರೂ ಕೂಡ ತಮ್ಮ ಬೆಂಬಲ ಸೂಚಿಸಿ ಗಾಂಧೀಜಿಯ ನಾಯಕತ್ವದಲ್ಲಿ ವಿಶ್ವಾಸ ಸೂಚಿಸಿದರು. [[ಸರ್ದಾರ್ ಪಟೇಲ್]] ಮತ್ತು ಡಾ. [[ರಾಜೇಂದ್ರ ಪ್ರಸಾದ್]] ಈ ನಿಲುವಳಿಯನ್ನು ಬಹಿರಂಗವಾಗಿ ಬೆಂಬಲಿಸಿದರು.
 
ಆದರೆ ಬೇರೆ ಪಕ್ಷಗಳು ಇದಕ್ಕೆ ಸಹಮತ ಸೂಚಿಸಲಿಲ್ಲ. ಭಾರತೀಯ ಕಮ್ಯೂನಿಸ್ಟ್ ಪಕ್ಷ ಮತ್ತು ಹಿಂದೂ ಮಹಾಸಭಾ ಇದನ್ನು ವಿರೋಧಿಸಿದವು. [[ಮೊಹಮ್ಮದ್ ಅಲಿ ಜಿನ್ನಾ]]ರ ವಿರೋಧದ ಕಾರಣ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿ ಬ್ರಿಟಿಷರ ಪರವಾಗಿ ನಿಂತರು. ಇದರಿಂದ ಮುಸ್ಲಿಂ ಲೀಗ್ ಪಕ್ಷಕ್ಕೆ ಪ್ರಾಂತೀಯ ಸರ್ಕಾರಗಳಲ್ಲಿ ಅಧಿಕಾರ ದೊರೆಯಿತು.