ಬಲರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ಹಿಂದೂ ದೇವ ಹಾಗೂ ಶ್ರೀಕೃಷ್ಣನ ಸಹೋದರ
Content deleted Content added
No edit summary
( ಯಾವುದೇ ವ್ಯತ್ಯಾಸವಿಲ್ಲ )

೦೧:೦೦, ೧೩ ಅಕ್ಟೋಬರ್ ೨೦೦೬ ನಂತೆ ಪರಿಷ್ಕರಣೆ

ಬಲದೇವ, ಬಲಭದ್ರ, ಮತ್ತು ಹಲಾಯುಧ ಎಂಬ ಹೆಸರುಗಳನ್ನು ಹೊತ್ತ ಬಲರಾಮ ಕೃಷ್ಣನ ಹಿರಿಯಣ್ಣ. ದಕ್ಷಿಣ ಭಾರತದ ಬಹುತೇಕ ವೈಷ್ಣವರ ಪ್ರಕಾರ ಬಲರಾಮನು ವಿಷ್ಣುವಿನ ಒಂಬತ್ತನೇ ಅವತಾರ. ವಿಷ್ಣುವನ್ನು ಹೊಂದುವ ದೈವೀ ಸರ್ಪಆದಿಶೇಷನ ಅವತಾರವಾಗಿಯೂ ಪರಿಗಣಿಸಲಾಗುತ್ತದೆ. ಭಾಗವತ ಪುರಾಣದ ಪ್ರಕಾರ ಕೃಷ್ಣನೇ ವಿಶ್ವದ ಮೂಲ. ಈ ಪ್ರಕಾರ ಕೃಷ್ಣನ ಮೊದಲ ಅವತಾರವೇ ಬಲರಾಮ. ಬಲರಾಮನಿಂದ ಇತರ ಅವತಾರಗಳು ಹುಟ್ಟಿದವು.

Balarama, next to the river Yamuna. Copyright BBTI

ಅಸ್ತಿತ್ವ

ಬಲರಾಮನ ಹುಟ್ಟು ವಸುದೇವ ಮತ್ತು ದೇವಕಿಯರ ಪುತ್ರನಾಗಿ. ದೇವಕಿಯ ಅಣ್ಣ ಮತ್ತು ದುಷ್ಟ ರಾಜನಾದ ಕಮ್ಸನು ದೇವಕಿಯ ಎಲ್ಲ ಮಕ್ಕಳನ್ನು ಕೊಲ್ಲುವ ಹೊಂಚು ಹಾಕಿದ್ದನು. ಇದರ ಕಾರಣ ದೇವಕಿಯ ಸಂತಾನ ಕಂಸನ ಹತ್ಯೆ ಮಾಡುವುದೆಂಬ ಅಶರೀರವಾಣಿ. ಈ ಕಾರಣದಿಂದ ಕಂಸನು ದೇವಕಿ ಮತ್ತು ವಸುದೇವನನ್ನು ಬಂಧನದಲ್ಲಿಟ್ಟು ಅವರ ಮಕ್ಕಳನ್ನು ಹುಟ್ಟಿದ ಕೂಡಲೇ ಕೊಲ್ಲುತ್ತ ಬಂದನು. ಕಾಲಾನಂತರ ದೇವಕಿ ಏಳನೇ ಸಲ ಗರ್ಭಿಣಿಯಾದಳು. ಆದರೆ ಗರ್ಭದಲ್ಲಿದ್ದ ಮಗು ಪವಾಡದಿಂದ ದೇವಕಿಯ ಗರ್ಭದಿಂದ ರೋಹಿಣಿಯ ಗರ್ಭಕ್ಕೆ ಹರಿಯಿತು. ಈ ಕಾರಣದಿಂದ ಬಲರಾಮನ ಇನ್ನೊಂದು ಹೆಸರು ಸಂಕರ್ಷಣ ಎಂದು. ಮಗುವಿನ ಹೆಸರು ರಾಮ ಎಂದಿದ್ದರೂ, ಅವನ ಅತೀವ ಶಕ್ತಿಯ ಕಾರಣ "ಬಲರಾಮ" ಎಂದು ಕರೆಯಲಾಯಿತು. ಹೀಗೆ ರೋಹಿಣಿ ಬಲರಾಮನಿಗೆ ಜನ್ಮ ಕೊಟ್ಟು ಪಾಲಿಸಿದಳು. ಬಲರಾಮನು ತನ್ನ ಬಾಲ್ಯವನ್ನು ಸಹೋದರ ಕೃಷ್ಣನ ಜೊತೆ ಹಸುಗಳನ್ನು ಕಾಯುವ ಗೋಪಾಲನಾಗಿ ಕಳೆದನು.

ಕೃಷ್ಣನ ಸಹೋದರ

 
Krishna and Balarama playing with cows -- copyright 2005 BBTI

ವೈಷ್ಣವರು ನಂಬುವ ಪ್ರಕಾರ ಬಲರಾಮನು ದೇವರ ಅಪರಾವತಾರ. ಅವನನ್ನು ಕೃಷ್ಣನಷ್ಟೇ ಪೂಜಿಸಲಾಗುತ್ತದೆ. ಆದರೆ ಕೃಷ್ಣನು ಕಂಡು ಬಂದಾಗಲೆಲ್ಲ ಬಲರಾಮನು ಅವನ ಸಹೋದರನಾಗಿ ಕಂಡುಬರುತ್ತಾನೆ. ಬಲರಾಮನು ಕೃಷ್ಣನ ಎಲ್ಲ ಅವತಾರಗಳಲ್ಲಿಯೂ ಅವನ ಜೊತೆಗಿರುತ್ತಾನೆ. ರಾಮಾಯಣದಲ್ಲಿ ರಾಮನ ತಮ್ಮ ಲಕ್ಷ್ಮಣನಾಗಿ ಮತ್ತು ಕಲಿಯುಗದಲ್ಲಿ ಚೈತನ್ಯನ 'ಸಂಕೀರ್ತನ ಚಳುವಳಿ'ಯನ್ನು ನಿತ್ಯಾನಂದನಾಗಿ ಸಾರುತ್ತಾನೆ. ಕೃಷ್ಣ ಮತ್ತು ಬಲರಾಮರ ಮಧ್ಯೆ ಒಂದೇ ವ್ಯತ್ಯಾಸವೆಂದರೆ ಮೈಬಣ್ಣ. ಕೃಷ್ಣನು ಕಪ್ಪಗಿದ್ದರೆ ಬಲರಾಮನು ಬೆಳ್ಳಗೆ.

ಶಾರೀರಿಕ ಲಕ್ಷ್ಣಣಗಳು

ಚಿತ್ರ:Krishna Balarama.jpg
Krishna-Balarama deities at the Krishna-Balarama Temple in Vrindavan

ಬಲರಾಮನನ್ನು ಯಾವಾಗಲೂ ಬಿಳಿ ಚರ್ಮ ಹೊಂದಿರುವುದಾಗಿ ತೋರಿಸಲಾಗುತ್ತದೆ. ಅವನ ಆಯುಧಗಳೆಂದರೆ ನೇಗಿಲು (ಹಲ) ಮತ್ತು ಗದೆ. ಸಾಂಪ್ರದಾಯಿಕವಾಗಿ ಬಲರಾಮನು ನೀಲಿ ಬಟ್ಟೆಗಳನ್ನು ಧರಿಸುತ್ತಾನೆ. ಕೂದಲನ್ನು ಗಂಟಿನಲ್ಲಿ ಕಟ್ಟಿ ಕಿವಿಗೆ ಒಡವೆ, ಕೈಗೆ ಕಂಕಣ ಮತ್ತು ತೋಳಬಂದಿ ಧರಿಸಿರುತ್ತಾನೆ. ಬಲರಾಮನನ್ನು ಅತಿ ಶಕ್ತಿಶಾಲಿ ಎಂದು ಚಿತ್ರಿಸಲಾಗುತ್ತದೆ.

ಭಾಗವತ ಪುರಾಣದಲ್ಲಿ

ಒಂದು ದಿನ ವಸುದೇವನು ಗರ್ಗಮುನಿಯನ್ನು ಪುತ್ರರಾದ ಕೃಷ್ಣ ಮತ್ತು ಬಲರಾಮರಿಗೆ ಹೆಸರನ್ನಿಡುವ ಸಲುವಾಗಿ ಆಹ್ವಾನಿಸಿದನು. ಆಗ ಗರ್ಗಮುನಿಯು ಕಂಸನ ವಿಷಯ ತಿಳಿಸಿ, ಹೆಸರಿಡುವ ಸಮಾರಂಭವನ್ನು ವಿಜೃಂಭಣೆಯಿಂದ ನಡೆಸಿದರೆ ಕಂಸನಿಗೆ ಈ ವಿಷಯ ತಿಳಿದು ಕೃಷ್ಣನ ವಿಷಯವಾಗಿ ಸಂಶಯಗೊಳ್ಳುವನೆಂದು ಹೇಳಿದಾಗ, ಈ ಸಮಾರಂಭವನ್ನು ಗುಪ್ತವಾಗಿ ನಡೆಸಲಾಯಿತು.

ಮಹಾಭಾರತದಲ್ಲಿ

ಬಲರಾಮನು ಕೌರವರ ದುರ್ಯೋಧನ ಮತ್ತು ಪಾಂಡವರ ಭೀಮರಿಗೆ ಗದಾಯುದ್ಧದ ಅಭ್ಯಾಸ ಕಲಿಸಿದನು. ನಂತರ ಕುರುಕ್ಷೇತ್ರ ಯುದ್ಧದಲ್ಲಿ ಇಬ್ಬರನ್ನೂ ಇಷ್ಟಪಟ್ಟಿದ್ದ ಬಲರಾಮನು ಯಾರ ಪಕ್ಷವನ್ನೂ ವಹಿಸಲಿಲ್ಲ. ಅಂತಿಮವಾಗಿ ಭೀಮನು ಗದಾಯುದ್ಧದಲ್ಲಿ ದುರ್ಯೋಧನನನ್ನು ತೊಡೆಯ ಮೇಲೆ ಹೊಡೆದು ಕೊಂದಾಗ ಬಲರಾಮನು ಭೀಮನನ್ನು ಕೊಲ್ಲುವ ಬೆದರಿಕೆ ಹಾಕಿದನು. ಇದನ್ನು ತಡೆದ ಕೃಷ್ಣನು ಬಲರಾಮನಿಗೆ ಭೀಮನ ಪ್ರತಿಜ್ಞೆಯ ನೆನಪು ಮಾಡಿದನು.

ಅಂತ್ಯ

ಭಾಗವತ ಪುರಾಣದ ಪ್ರಕಾರ ಯದುವಂಶದ ನಿರ್ನಾಮದ ಬಳಿಕ ಕೃಷ್ಣನ ಅಂತ್ಯದ ಬಳಿಕ ಧ್ಯಾನಾವೃತನಾಗಿ ತನ್ನ ಬಾಯಿಯಿಂದ ಸರ್ಪ ರೂಪವಾಗಿ ಶರೀರವನ್ನು ತ್ಯಜಿಸುತ್ತಾನೆ.

ಹೊರಗಿನ ಸಂಪರ್ಕಗಳು

ಟೆಂಪ್ಲೇಟು:Mahabharata

"https://kn.wikipedia.org/w/index.php?title=ಬಲರಾಮ&oldid=32838" ಇಂದ ಪಡೆಯಲ್ಪಟ್ಟಿದೆ