ಸಂಪಾದನೆಯ ಸಾರಾಂಶವಿಲ್ಲ
Content deleted Content added
No edit summary |
No edit summary |
||
೪೭ ನೇ ಸಾಲು:
==ಹಳೇಬೀಡು==
ಈ ಊರು ಒಂದೊಮ್ಮೆ [[ಹೊಯ್ಸಳ]] ವಂಶದ ರಾಜಧಾನಿಯಾಗಿತ್ತು. [[ಹೊಯ್ಸಳ]]ರು ಹತ್ತನೆಯ ಶತಮಾನದ ಆರಂಭದಿಂದ ಹದಿಮೂರನೆಯ ಶತಮಾನದ
===ಐತಿಹಾಸಿಕ ಹಿನ್ನಲೆ===
ಸುಮಾರು
ರಾಜ [[ವಿಷ್ಣುವರ್ಧನ]]ನ ಕಾಲವನ್ನು ಹೊರತುಪಡಿಸಿ ಮಿಕ್ಕ ಎಂಟು ರಾಜರ ಕಾಲದಲ್ಲೂ ಇಂದಿನ ಹಳೇಬೀಡು ಪಟ್ಟಣವೇ ರಾಜಧಾನಿಯಾಗಿತ್ತೆಂದು ಸಂಶೋಧನೆಗಳಿಂದ ತಿಳಿದುಬಂದಿರುತ್ತದೆ. ಹೊಯ್ಸಳರಲ್ಲಿ ಒಂಬತ್ತು ಮಂದಿ ರಾಜರುಗಳು ಆಗಿಹೋಗಿದ್ದರೂ '''ವೀರಬಲ್ಲಾಳ''' , '''ವಿಷ್ಣುವರ್ಧನ''' ಮತ್ತು '''ನರಸಿಂಹ ಬಲ್ಲಾಳ''' ರು ಮಾತ್ರ ಹೆಚ್ಚು ಸಾಮರ್ಥ್ಯವುಳ್ಳರಾಗಿದ್ದರೆಂದು ಇತಿಹಾಸವು ಹೇಳುತ್ತದೆ.
೬೦ ನೇ ಸಾಲು:
ಹಳೇಬೀಡಿನ ಐತಿಹಾಸಿಕ ನಾಗರಿಕತೆಯು ಇಂದಿಗಿಂತಲೂ ಉತ್ತಮವಾಗಿಯೇ ಇದ್ದುದು ಶಾಸನಗಳಿಂದ ತಿಳಿದುಬರುತ್ತದೆ. ಅಂದು ಹೆಚ್ಚಿನವರು ಕೃಷಿಕರಾಗಿದ್ದು ವಸ್ತುವಿನಿಮಯ ಪಧ್ಧತಿಯನ್ನು ಅನುಸರಿಸಿಕೊಂಡು ಬಂದಿರುತ್ತಾರೆ. ಹೊಯ್ಸಳರ ರಾಜಕೀಯ ಮತ್ತು ಆರ್ಥಿಕ ಕೇಂದ್ರಸ್ಥಾನವಾಗಿದ್ದ ಈ ಊರು ಇಂದಿನ ಯಾವ ರಾಜಯಾಗಿಧಾನಿಗೂ ಕಡಿಮೆ ಇರಲಿಲ್ಲವೆಂದು ಅಂದುಕೊಳ್ಳಬಹುದು. ಊರಿನ ರಾಜಬೀದಿಗಳಲ್ಲಿ ನ್ಯಾಯವಾದಿಗಳು, ಆರ್ಥಿಕ ಪರಿಣತರು, ದೊಡ್ಡ ವ್ಯಾಪಾರಸ್ಥರು, ವಿದ್ವಾಂಸರು ಮತ್ತು ಧಾರ್ಮಿಕ ಮುಖಂಡರು ವಾಸಿಸುತ್ತಿದ್ದರೆಂದು ಶಾಸನಗಳು ಹೇಳುತ್ತವೆ. ಕಲಾವಿದರು, ಸೇವಕರು ಮತ್ತು ಇತರೆ ಎಲ್ಲಾ ವರ್ಗದ ಜನರಿಗೂ ಉತ್ತಮ ಸೌಲಭ್ಯಗಳುಳ್ಳ ಕೇರಿಗಳೂ ಮರ್ಯಾದೆಗಳೂ ದೊರೆಯುತ್ತಿದ್ದವು. ವಿಶೇಷವಾಗಿ ಕಲಾವಿದರಿಗೆಂದೇ ಪ್ರತ್ಯೇಕವಾದ ವಿಹಾರಧಾಮಗಳೂ ಮತ್ತು ವಿದ್ಯಾಲಯಗಳೂ ಇದ್ದುವೆಂದು ಇಲ್ಲಿನ ಪ್ರಾಚೀನ ಕುರುಹುಗಳಿಂದ ತಿಳಿದುಬರುತ್ತದೆ. ಕುಂಬಾರರು, ಹಾಕುಮತದವರು ಮತ್ತು ವೈದಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಎಲ್ಲರೂ ತಮ್ಮ ವೃತ್ತಿಯ ಜೊತೆಗೆ ಬಹುವಾಗಿ ಕೃಷಿಯನ್ನೇ ನಂಬಿಕೊಂಡಿದ್ದರು. ಆದರೆ, ಇಂದು ಆ ವೈಭವದ ದಿನಗಳ ಕುರುಹುಗಳು ಅತ್ಯಲ್ಪ ಎನ್ನುವಷ್ಟು ಉಳಿದಿದೆ. ಪದೇಪದೆ ಪರಕೀಯರ ಆಕ್ರಮಣಕ್ಕೆ ತುತ್ತಾಗಿದ್ದೂ ಅಲ್ಲದೆ ಬಹು ವರುಷಗಳ ಕಾಲ ಕಾಲಗರ್ಭದಲ್ಲಿ ಕಳೆದುಹೋಗಿದ್ದೂ ಸಹ ಹಳೇಬೀಡಿನ ನಾಗರಿಕತೆಯ ಕುರುಹುಗಳು ಕಡಿಮೆಯಾಗಲು ಕಾರಣ ಎನ್ನಬಹುದು.
ಇಂದು ಹಳೇಬೀಡಿನ ಜನಸಂಖ್ಯೆ ಸುಮಾರು ಹತ್ತುಸಾವಿರದಷ್ಟಿದ್ದು ಎಲ್ಲಾ ಅತ್ಯಾಧುನಿಕ ಸೌಲಭ್ಯಗಳು ದೊರುಕುತ್ತಿವೆ. ವಾಸಿಸುತ್ತಿರುವ ಜನರಲ್ಲಿ ಅರ್ಧದಷ್ಟು ಮಂದಿ ಕೃಷಿಕರಿದ್ದು ಉಳಿದಂತೆ ಸರ್ಕಾರಿ ನೌಕರರು, ವ್ಯಾಪಾರಸ್ಥರು ಮುಂತಾಗಿ
===ವಾಣಿಜ್ಯ-ಉತ್ಪನ್ನಗಳು===
ಹೊಯ್ಸಳರ ಕಾಲದಲ್ಲಿ ಈ ಪ್ರಾಂತ್ಯವು ದಟ್ಟವಾದ ಮಲೆನಾಡಾಗಿದ್ದು ಕಾಡಿನ ಉತ್ಪನ್ನಗಳು ಹೆಚ್ಚಾಗಿ ಬಳಕೆಯಲ್ಲಿತ್ತು. ಅಡಿಕೆ, ತೆಂಗು, ಬಾಳೆ, ಕಾಳುಮೆಣಸು ಮತ್ತು ಹುರುಳಿ, ರಾಗಿ ಮುಂತಾದ ಧಾನ್ಯಗಳನ್ನೂ ಬೆಳೆಯುತ್ತಿದ್ದರು. ಕೃಷ್ಯುತ್ಪನ್ನಗಳನ್ನು ಸ್ಥಳೀಯವಾಗಿಯೇ ವಿನಿಮಯ ಮಾಡಿಕೊಳ್ಳುತ್ತಿದ್ದುದರಿಂದ ಹಣಕ್ಕೆ ಹೆಚ್ಚಿನ ಆದ್ಯತೆ ದೊರೆತಿರಲಿಲ್ಲ. ಬಂಗಾರ ಮುಂತಾದ ಬೆಲೆಬಾಳುವ ವಸ್ತುಗಳ ಬಳಕೆಯೂ ಕಡಿಮೆಯೇ ಇದ್ದೀತೆಂದು ಹೇಳಬಹುದು. ಆದರೆ, ಒಡವೆಗಳ ರಚನಾ ಚಾತುರ್ಯ ಮತ್ತು ತಾಂತ್ರಿಕತೆಯು ಉನ್ನತಮಟ್ಟದಾಗಿತ್ತೆಂಬುದು ಹೊಯ್ಸಳರ ಶಿಲ್ಪಕಲೆಯಿಂದಲೇ ತಿಳಿದುಬರುತ್ತದೆ. ಹೊಯ್ಸಳರ ಕಾಲದ ನಾಣ್ಯಗಳು ಹೆಚ್ಚು ದೊರೆತಿಲ್ಲವಾದರೂ ಸಿಕ್ಕಿರುವ ಕೆಲವಷ್ಟನ್ನು ಇಲ್ಲಿಯ ಪುರಾತತ್ವ ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಿಡಲಾಗಿದೆ.
ಇಂದು ಈ ಪ್ರಾಂತ್ಯವು ಅರೆಮಲೆನಾಡು ಪ್ರದೇಶಕ್ಕೆ ಸೇರಿದ್ದು ಎಲ್ಲ ಬಗೆಯ ತರಕಾರಿಗಳನ್ನು ಹೆಚ್ಚು ಬೆಳೆಯುತ್ತಾರೆ. ಸೂರ್ಯಕಾಂತಿ. ರಾಗಿ, ಹತ್ತಿ, ಮುಸುಕಿನ ಜೋಳ , ತೆಂಗು, ಬಾಳೆ ಇಲ್ಲಿಯ ಪ್ರಮುಖ ಉತ್ಪನ್ನಗಳಾಗಿದ್ದು ಅವರೆಕಾಯಿ , ಆಲೂಗೆಡ್ಡೆ ಮತ್ತು ಸೌತೆಕಾಯಿ ಋತುಮಾನದ ವಿಶೇಷ ಬೆಳೆಯಾಗಿದೆ. ಈ ಪ್ರಾಂತ್ಯದ ಅವರೆಕಾಯಿಗೆ ವಿಶೇಷ ರುಚಿಯ ಕಾರಣ ಹೆಚ್ಚು ಬೇಡಿಕೆ ಇದೆ. ಕಬ್ಬು ಮತ್ತು ಹತ್ತಿ
==ಪ್ರೇಕ್ಷಣೀಯ ಸ್ಥಳಗಳು==
|