ಅ.ನಾ.ಪ್ರಹ್ಲಾದರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೪೬ ನೇ ಸಾಲು:
1983ರಲ್ಲಿ ವಾರ್ತಾ ಇಲಾಖೆ ಸೇರ್ಪಡೆಗೊಂಡು, ಸುದ್ದಿ ಮತ್ತು ಪತ್ರಿಕಾ ಶಾಖೆಯಲ್ಲಿ ಕಾರ್ಯನಿರ್ವಹಿಸಿದರು. 1988ರಿಂದ 1990ರವರೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯಲ್ಲಿ ಸಹಾಯಕ ಸಂಪರ್ಕ ಅಧಿಕಾರಿಯಾಗಿ, 1990ರಲ್ಲಿ ಹಾಸನ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಕಛೇರಿಯಲ್ಲಿ ವಾರ್ತಾ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು. 1992ರಿ0ದ 1996ರವರೆಗೆ ಮುಖ್ಯಮಂತ್ರಿಗಳ ಪತ್ರಿಕಾ ಕಾರ್ಯಾಲಯದಲ್ಲಿ ಕೆಲಸ ಮಾಡಿ ಅನುಭವಹೊಂದಿದರು. 1996ರಿಂದ 2000ರವರೆವಿಗೂ ಮಂಡ್ಯ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. 2000ರಿ0ದ 2003 ರವರೆವಿಗೂ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. 2003ರಿಂದ ಬೆಂಗಳೂರಿನಲ್ಲಿ ವಾರ್ತಾ ಇಲಾಖೆಯ ಸುದ್ದಿ ಶಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ, 2004ರ ನವೆಂಬರ್ನಿಂದ 2011ರ ಆಗಸ್ಟ್ ತಿಂಗಳವರೆಗೆ ಸುಮಾರು ಏಳು ವರ್ಷಗಳ ಕಾಲ ಬೆಂಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಲಿಯಲ್ಲಿ ಸಾರ್ವಜನಿಕ ಸಂಪಕರ್À ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪ್ರಸ್ತುತ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರತಿನಿತ್ಯ `ವಿಜಯಕರ್ನಾಟಕ`, `ಕನ್ನಡಪ್ರಭ`, `ಸಂಯುಕ್ತಕರ್ನಾಟಕ` ಪತ್ರಿಕೆಗಳಲ್ಲಿ ಇವರು ನಿತ್ಯ ಪದಬಂಧ ರಚಿಸಿದ್ದಾರೆ. ಪ್ರತಿ ನಿತ್ಯ ಪದಬಂಧ ಪ್ರಕಟಿಸಲಾರಂಭಿಸಿದ ಹೆಗ್ಗಳಿಕೆ ವೈ.ಎನ್.ಕೆ ಸಾರಥ್ಯದ `ಕನ್ನಡಪ್ರಭ` ಪತ್ರಿಕೆಯದಾದರೆ, ಈ ಪತ್ರಿಕೆಗಾಗಿ ಮೊದಲು ಪದಬಂಧ ಬರಯಲಾರಂಭಿಸಿದವರು ಅ.ನಾ.ಪ್ರಹ್ಲಾದರಾವ್. `ಪ್ರಜಾವಾಣಿ` ಸಿನಿಮಾರಂಜನೆ ಪುರವಣಿಯಲ್ಲಿ ಸುಮಾರು 15 ವರ್ಷಗಳ ಕಾಲ ಪ್ರತಿ ಶುಕ್ರವಾರ ಇವರ ಸಿನಿಮಾ ಪದಬಂಧ ಪ್ರಕಟಗೊಂಡಿದೆ. `ಮಂಗಳ` ವಾರ ಪತ್ರಿಕೆಯಲ್ಲಿ ಕಳೆದ 25 ವರ್ಷಗಳಿಂದ ಪ್ರತಿವಾರ ಪದಬಂಧ ಹಾಗೂ ಪದಾನ್ವೇಷಣೆ ಕ್ವಿಜ್ ಪ್ರಕಟವಾಗುತ್ತಿವೆ. `ಬಾಲಮಂಗಳ` ಪಾಕ್ಷಿಕ ಪತ್ರಿಕೆಯಲ್ಲಿ ಕನ್ನಡ ಸುಳಿವುಗಳ ಮೂಲಕ ಇಂಗ್ಲಿಷ್ ಪದಗಳನ್ನು ತುಂಬಿಸುವ ವಿಶಿಷ್ಟ ಪದಬಂಧ ಹಾಗೂ ಸಾಮಾನ್ ಜ್ಞಾನ ಕ್ವಿಜ್ ಪ್ರಕಟಗೊಂಡಿದೆ. `ಪ್ರಿಯಾಂಕ` ಮಾಸ ಪತ್ರಿಕೆಗಾಗಿ ಸುಮಾರು 12 ವರ್ಷಗಳಿಂದ ಪದಬಂಧ ಸಿದ್ಧಪಡಿಸಿಕೊಡುತ್ತಿದ್ದಾರೆ. ರವಿ ಬೆಳಗೆರೆ ಸಂಪಾದಕತ್ವದಲ್ಲಿ ಪುನರಾರಂಭಗೊಂಡ `ಕರ್ಮವೀರ` ವಾರಪತ್ರಿಕೆಗಾಗಿ ಮೊದಲ ಸಂಚಿಕೆಯಿಂದ ಪದಸಂಪದ ಬರೆದುಕೊಟ್ಟ ಖ್ಯಾತಿಯೂ ಪ್ರಹ್ಲಾದ್ ಅವರದೆ. `ಕರ್ಮವೀರ` ಸಾಪ್ತಾಹಿಕಕ್ಕಾಗಿ ಚರ್ವಿತಚರ್ವಣ ಹಾಗೂ ಒಳಗುಟ್ಟು ಹೆಸರಿನ ವಿಶೇಷ ಫಜಲ್ ರಚಿಸಿದ್ದಾರೆ. ಕರ್ನಾಟಕ ಸರ್ಕಾರ ಪ್ರಕಟಿಸುತ್ತಿರುವ `ಕಂದಾಯ ವಾರ್ತೆ` ಮಾಸ ಪತ್ರಿಕೆಗಾಗಿ ಕಂದಾಯ ಇಲಾಖೆಗೆ ಪ್ರಸ್ತುತವೆನಿಸುವ ಪದಬಂಧ ರಚಿಸುತ್ತಿದ್ದಾರೆ. ಚಲನಚಿತ್ರ ಮಾಸಿಕ `ಚಿತ್ರ` ಪತ್ರಿಕೆಗಾಗಿ ಪದಬಂಧ ಹಾಗೂ ಸಿನಿಮಾ ಕ್ವಿಜ್ ಬರೆದುಕೊಡುತ್ತಿದ್ದಾರೆ. `ಈಸಂಜೆ` ಪತ್ರಿಕೆಗಾಗಿ ಪ್ರತಿವಾರ ಚಲನಚಿತ್ರ ಪದಬಂಧಗಳನ್ನು ರಚಿಸಿದ್ದಾರೆ. ಕನ್ನಡದ ಏಕಮೇವ ಸಿನಿಮಾ ಸಾಪ್ತಾಹಿಕ `ಅರಗಿಣಿ` ಮೊದಲ ಸಂಚಿಕೆಯಿಂದ ಇವರ ಗಿಣಿಬಂಧ ಪ್ರಕಟಿಸುತ್ತಾ ಬಂದಿದೆ.
ಪದಬಂಧಗಳಷ್ಟೇ ಅಲ್ಲದೇ ಚಲನಚಿತ್ರ ಲೇಖನಗಳನ್ನು ಬರೆದಿದ್ದಾರೆ. `ಅರಗಿಣಿ` ಪತ್ರಿಕೆಗಾಗಿ ಸ್ಮರಣೀಯ ಚಿತ್ರಗಳು, ಕರ್ಮವೀರಕ್ಕಾಗಿ ಗತವೈಭವ, ಮಂಗಳ ಪತ್ರಿಕೆಗಾಗಿ ಚಲನಚಿತ್ರ ಇತಿಹಾಸ ಲೇಖನ ಮಾಲೆ ಹಲವಾರು ವರ್ಷ ಕಾಲ ನಿರಂತರವಾಗಿ ಪ್ರಕಟಗೊಂಡಿದೆ. ಕರ್ನಾಟಕ ವಿಶ್ವವಿದ್ಯಾಲಯ ಹೊರ ತಂದಿರುವ ಕಿರಿಯರ ಕರ್ನಾಟಕ ಹಾಗೂ ಚಲನಚಿತ್ರ ಇತಿಹಾಸ ಗ್ರಂಥಗಳಿಗೆ ಮತ್ತು ಉದಯಬಾನು ಕಲಾಸಂಘ ಹೊರ ತಂದಿರುವ ಬೃಹತ್ ಕೃತಿ ಬೆಂಗಳೂರುದರ್ಶನಕ್ಕಾಗಿ ಮಾಹಿತಿ ಲೇಖನಗಳನ್ನು ಬರೆದಿದ್ದಾರೆ. ಮಂಗಳ, ಬಾಲಮಂಗಳ, ಕರ್ಮವೀರ, ಅರಗಿಣಿ, ಸ್ಟಾರ್, ಸಂಯುಕ್ತಕರ್ನಾಟಕ, ಸಿನಿಮಾಮಕರಂದ, ಬೆಳ್ಳಿತೆರೆ ವಿಡಿಯೋ ಮ್ಯಾಗ್ಜೆನ್ಗಾಗಿ ಕ್ವಿಜ್ ರಚಿಸಿದ್ದಾರೆ. ವಾರ್ತ ಇಲಾಖೆ ಸಾದರ ಪಡಿಸುತ್ತಿದ್ದ ಕರ್ನಾಟಕ ವಾರ್ತಾಚಿತ್ರ, ಅವಲೋಕನಕ್ಕಾಗಿ ನಿರೂಪಣಾ ಸಾಹಿತ್ಯ ರಚಿಸಿದ್ದಾರೆ. ಸರ್ಕಾರ ಪ್ರಕಟಿಸುತ್ತಿರುವ ಜನಪದ, ಕರ್ನಾಟಕವಿಕಾಸ, ಸಹಕಾರ ಪತ್ರಿಕೆಗಳಿಗಾಗಿ ಅಭಿವೃದ್ದಿ ಲೇಖನಗಳನ್ನು ಬರೆದಿದ್ದಾರೆ. 1996ರಲ್ಲಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡೆಗಳ ಸಂದರ್ಭದಲ್ಲಿ ಹೊರತಂದ `ನಂದೂಸ್ಪೀಕ್ಸ್` ಪತ್ರಿಕೆ ಒಂದು ತಿಂಗಳ ಕಾಲ ಪ್ರಕಟಗೊಳ್ಳಲು ಸಂಪಾದಕೀಯ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಹಲವಾರು ಲೇಖನಗಳು, ಕಥೆ, ಕವನಗಳು ಮಲ್ಲಿಗೆ, ವಾರಪತ್ರಿಕೆ, ತರಂಗ, ರೂಪತಾರ, ಸುಧಾ, ಚಿತ್ರ, ಪ್ರಿಯಾಂಕ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಕವಿ ದೊಡ್ಡರಂಗೇಗೌಡರ ಅಭಿನಂದನ ಗ್ರಂಥ `ಜಾನಪದಜಂಗಮ`ಕ್ಕಾಗಿ ಜಾನಪದ ಸೊಗಡಿನ ಜೋಪಾನಕಾರ ಲೇಖನ ಬರೆದಿದ್ದಾರೆ.ಡಿ.ಎಸ್.ವೀರಯ್ಯನವರ ಅಭಿನಂದನ ಗ್ರಂಥ ಹೋರಾಟದ ಹೆಜ್ಜೆಗಳು ಕೃತಿಗಾಗಿ `ಕನ್ನಡ ಚಲನಚಿತ್ರ: ದಲಿತ ಸಂವೇದನೆ` ಲೇಖನ ರಚಿಸಿದ್ದಾರೆ. ಕರ್ನಾಟಕ ಸರ್ಕಾರ ಪ್ರಕಟಿಸಿರುವ ಕೋಲಾರ ಜಿಲ್ಲೆ ಗೆಜೆಟಿಯರ್ನಲ್ಲಿ ಮೂರು ಕಡೆ ಇವರ ಹೆಸರು ಉಲ್ಲೇಖಗೊಂಡಿದೆ. ಕರ್ನಾಟಕ ಗೆಜೆಟಿಯರ್ನಲ್ಲಿ ಇವರ ಹೆಸರನ್ನು ಉಲ್ಲೇಖಿಸಲಾಗಿದೆ. ಸಿ.ಎಸ್.ನಂಜುಂಡಯ್ಯ ಅವರ `ಅಮ್ಮ ಪಂಡರಿಬಾಯಿ` ಹಾಗೂ `ಅಭಿನಯ ಸವ್ಯಸಾಚಿ ಹೆಚ್.ಎಲ್.ಎನ್.ಸಿಂಹ ಕೃತಿಗಳಲ್ಲಿ ಇವರ ಹೆಸರನ್ನು ಉಲ್ಲ್ಲೇಖಿಸಲಾಗಿದೆ. ಕವಿ ಕೆ.ಎಸ್.ನಿಸಾರ್ ಅಹಮದ್ ಅವರ ಅಭಿನಂದನಗ್ರಂಥ `ನಿಸಾರ್ ನಿಮಗಿದೋ ನಮನ` ಹೆಬ್ಬೊತ್ತಿಗೆಯಲ್ಲಿ ಡಾ.ರಾಜಕುಮಾರ್ ಹಾಗೂ ನಿಸಾರ್ ಕುರಿತ ಲೇಖನ ಬರೆದಿದ್ದಾರೆ. ಚಿಂತಾಮಣಿಯ ವೆ.ಎಸ್.ಗುಂಡಪ್ಪನವರ ಸ್ಮರಣಸಂಚಿಕೆ ಸೇರಿದಂತೆ ಹಲವಾರು ಸ್ಮರಣಸಂಚಿಕೆಗಳಿಗೆ ಲೇಖನಗಳನ್ನು ಬರೆದಿದ್ದಾರೆ.
|