ನಾಗತಿಹಳ್ಳಿ ಚಂದ್ರಶೇಖರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Bot: Migrating 1 interwiki links, now provided by Wikidata on d:q6958678 (translate me) |
No edit summary |
||
೧೫ ನೇ ಸಾಲು:
}}
ನಾಗತಿಹಳ್ಳಿ ಚಂದ್ರಶೇಖರ್ ನಮ್ಮ ನಾಡಿನ ಬಹುಮುಖ ಪ್ರತಿಭೆ. ಸಾಂಸ್ಕೃತಿಕ ಲೋಕದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ, ಬರವಣಿಗೆ ಪ್ರಪಂಚದಲ್ಲಿ, ಪತ್ರಿಕಾ ಅಂಕಣಗಳಲ್ಲಿ, ಸಿನಿಮಾ, ಕಿರುತೆರೆ ಹೀಗೆ ಅವರು ಸರ್ವವ್ಯಾಪಿಯಾಗಿ ವಿವಿಧ ಸಾಂಸ್ಕೃತಿಕ ನೆಲೆಗಳಲ್ಲಿ ಹೆಸರು ಮಾಡಿದವರು.
==ಜೀವನ==
▲1985ರ ಆಗಸ್ಟ್ 15.(ಇದು ನಾಗತಿಹಳ್ಳಿ ಅವರ ಜನ್ಮದಿನವೂ ಹೌದು). ಅದಾಗಲೇ ಕಥೆಗಾರರಾಗಿ ಹೆಸರು ಮಾಡಿದ್ದ ಚಂದ್ರಶೇಖರ್, ತಮ್ಮೂರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಾಗತಿಹಳ್ಳಿಗೆ ಏನಾದರೂ ಸಹಾಯ ಮಾಡಬೇಕು. ಊರಿನ ಋಣ ತೀರಿಸಬೇಕು ಎಂದು ಬಯಸಿ "ಅಭಿವ್ಯಕ್ತಿ" ಸಾಂಸ್ಕೃತಿಕ ವೇದಿಕೆ ಎಂಬ ಹೆಸರಿನೊಂದಿಗೆ ನಾಗತಿಹಳ್ಳಿಯಲ್ಲಿ "ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ`"ಯನ್ನು ಆರಂಭಿಸಿದರು.ಮತ್ತು ಪ್ರತಿ ಯುಗಾದಿಯ ಸಂದರ್ಭದಲ್ಲಿ `ನಾಗತಿಹಳ್ಳಿ ಸಾಂಸ್ಕೃತಿಕ ಹಬ್ಬ`ಕ್ಕೆ ಚಾಲನೆ ನೀಡಿದರು . ವೇದಿಕೆಯ ಮೂಲಕ ಗ್ರಾಮದಲ್ಲಿ ಸುಸಜ್ಜಿಯ ಗ್ರಂಥಾಲಯ, ರಂಗಮಂದಿರ, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವ ಮೂಲಕ ಗ್ರಾಮೀಣರ ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಿಗೊಳಿಸುವ ಕೆಲಸವನ್ನೂ ಆರಂಭಿಸಿದರು.ಈ ವೇದಿಕೆಯು ಗ್ರಾಮೀಣರ ಆರ್ಥಿಕ ಸಮಸ್ಯೆಗಳಿಗೂ ಸ್ಪಂದಿಸುತ್ತಿರುವ ಸಂಗತಿ ನಾಗಮಂಗಲ ತಾಲ್ಲೂಕಿನ ಬಿದರಕೆರೆ, ಯರಗನಹಳ್ಳಿ, ಸಬ್ಬನಕುಪ್ಪೆ ಗ್ರಾಮಸ್ಥರಿಗೂ ಸ್ಫೂರ್ತಿ ನೀಡಿದೆ. ಈ ವೇದಿಕೆಯ ಆಶಯಗಳನ್ನೇ ಆ ಗ್ರಾಮಸ್ಥರು ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ."ನಮನ"
==ಪ್ರಾಧ್ಯಾಪಕ ಮತ್ತು ಬರಹಗಾರರಾಗಿ==
ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸತೊಡಗಿದ ನಾಗತಿಹಳ್ಳಿ ಚಂದ್ರಶೇಖರರು ಕಥಾಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದರು. ಇನ್ನೂ ಎಂಟನೆಯ ತರಗತಿಯಲ್ಲಿ ಓದುತ್ತಿರುವಾಗಲೇ ಅವರು ‘ಆವರ್ತ’ ಎಂಬ ಕಥೆಬರೆದರು. ಇದುವರೆಗೆ ಕಥೆ, ಕಾದಂಬರಿ, ಪ್ರವಾಸ ಕಥನಗಳನ್ನು ಒಳಗೊಂಡ ಅವರ 21ಪ್ರಕಟಣೆಗಳು ಬೆಳಕು ಕಂಡಿವೆ. ‘ಹಾಡುಗಳು’, ‘ನನ್ನ ಪ್ರೀತಿಯ ಹುಡುಗನಿಗೆ’, ‘ಮಲೆನಾಡಿನ ಹುಡುಗಿ, ಬಯಲು ಸೀಮೆಯ ಹುಡುಗ’, ‘ಸನ್ನಿಧಿ’, ‘ಪ್ರೇಮ ಕಥಾ ಸಂಪುಟ’, ‘ಅಕಾಲ’, ‘ಛಿದ್ರ’ ನಾಗತಿಹಳ್ಳಿಯವರ ಪ್ರಸಿದ್ಧ ಕಥಾ ಸಂಕಲನಗಳು. ‘ಬಾ ನಲ್ಲೆ ಮಧುಚಂದ್ರಕೆ’, ‘ಚುಕ್ಕಿ ಚಂದ್ರಮರ ನಾಡಿನಲ್ಲಿ’, ‘ವಲಸೆ ಹಕ್ಕಿಯ ಹಾಡು’ ಅವರ ಕಾದಂಬರಿಗಳು. ‘ಆಯನ’, ‘ಅಮೆರಿಕ! ಅಮೇರಿಕಾ!!’, ‘ದಕ್ಷಿಣ ಧ್ರುವದಿಂ’, ‘ಹೊಳೆದಂಡೆ’ ಮುಂತಾದವು ಅವರ ಪ್ರವಾಸ ಕಥನಗಳು’. ‘ನನ್ನ ಪ್ರೀತಿಯ ಹುಡುಗಿಗೆ’ ಹಲವು ಸಂಪುಟಗಳಲ್ಲಿ ಮೂಡಿಬಂದಿರುವ ಅವರ ಆತ್ಮಕಥೆಯಾಗಿದೆ. ‘ಶತಮಾನದಂಚಿನಲ್ಲಿ’ ಅವರ ವಿವಿಧ ಲೇಖನಗಳ ಸಂಗ್ರಹ ಸಂಪುಟವಾಗಿದೆ. ಹೀಗೆ ಕಥೆ ಹೇಳುವುದರಲ್ಲಿ ಪ್ರೀತಿಯುಳ್ಳ ನಾಗತಿಹಳ್ಳಿ ಚಂದ್ರಶೇಖರರಿಗೆ ಕಥೆ ಹೇಳುವ ದೃಶ್ಯ ಮಾಧ್ಯಮದ ಕಡೆ ಕೂಡಾ ಒಲವು ಹರಿದು ಬಂತು.
==ಚಲನಚಿತ್ರ ಲೋಕದಲ್ಲಿ==
ಇಂದು ಕನ್ನಡ ಚಿತ್ರರಂಗದಲ್ಲಿ ನಾಗತಿಹಳ್ಳಿ ಚಂದ್ರಶೇಖರರ ಚಿತ್ರಗಳು ವಿಶಿಷ್ಟ ಸ್ಥಾನ ಪಡೆದಿವೆ. ಅವರ ‘ಮಾತಾಡ್ ಮಾತಾಡು ಮಲ್ಲಿಗೆ’ ಸಾಗರಗಳನ್ನು ದಾಟಿ ಕೇನ್ಸ್ ಅಂತಹ ಪ್ರತಿಷ್ಟಿತ ಉತ್ಸವಗಳಲ್ಲಿ ಪ್ರದರ್ಶನ ಕಂಡಿತು. ತಮ್ಮ ಅಧ್ಯಾಪನದ ದಿನಗಳಲ್ಲಿ ಚಿತ್ರಕಥೆ, ಸಂಭಾಷಣೆ, ಗೀತ ರಚನೆಗಳಲ್ಲಿ ಭಾಗಿಯಾಗುತ್ತಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅವರ ಕಾಯಕಗಳು ‘ಕಾಡಿನ ಬೆಂಕಿ’, ಸಂಕ್ರಾಂತಿ’, ಪ್ರಥಮ ಉಷಾ ಕಿರಣ’, ‘ಉದ್ಭವ’, ‘ಊರ್ವಶಿ’ ಮುಂತಾದ ಪ್ರಸಿದ್ಧ ಚಿತ್ರಗಳಿಗೆ ಮೆರುಗು ನೀಡಿತ್ತು.
೧೯೯೧ರಲ್ಲಿ ಮೂಡಿಬಂದ ‘ಉಂಡು ಹೋದ ಕೊಂಡು ಹೋದ’ ಚಿತ್ರದಿಂದ ಮೊದಲ್ಗೊಂಡಂತೆ, ‘ಬಾ ನಲ್ಲೆ ಮಧು ಚಂದ್ರಕೆ’, ‘ಕೊಟ್ರೇಶಿ ಕನಸು’, ‘ಅಮೆರಿಕ! ಅಮೇರಿಕಾ!!’, ‘ಹೂಮಳೆ’, ‘ನನ್ನ ಪ್ರೀತಿಯ ಹುಡುಗಿ’, ‘ಸೂಪರ್ ಸ್ಟಾರ್’, ‘ಪ್ಯಾರಿಸ್ ಪ್ರಣಯ’, ‘ಅಮೃತಧಾರೆ’, ‘ಮಾತಾಡ್ ಮಾತಾಡು ಮಲ್ಲಿಗೆ’, ‘ಒಲವೆ ಜೀವನ ಲೆಖ್ಖಾಚಾರ’, ‘ನೂರೂ ಜನ್ಮಕು’ ಮುಂತಾದ ಚಿತ್ರಗಳನ್ನು ಅವರು ನಿರ್ದೇಶಿಸಿದ್ದಾರೆ. ಕಲಾತ್ಮಕ ಚಿತ್ರಗಳ ಚಿಂತನಾತ್ಮಕ ಗುಣ, ಸಾಮಾಜಿಕ ಚಿತ್ರಗಳ ಸ್ಪಂದನೆ, ಆಧುನಿಕ ಬದುಕಿನ ವೈವಿಧ್ಯಮಯ ವೈರುಧ್ಯ ಇವುಗಳ ಜೊತೆಗೆ ಹಿತಮಿತದ ಸಂಗೀತ, ದೃಶ್ಯ ವೈಭವ ಇವುಗಳನ್ನೆಲ್ಲ ನಾಗತಿಹಳ್ಳಿ ತಮ್ಮ ಸೃಜನಶೀಲ ಸ್ಪರ್ಶದಲ್ಲಿ ಬೆಳ್ಳಿತೆರೆಯಲ್ಲಿ ಅಭಿವ್ಯಕ್ತಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿನ ಹಲವಾರು ಪ್ರಶಸ್ತಿ, ಗಲ್ಲಾಪೆಟ್ಟಿಗೆಯ ಯಶಸ್ಸುಗಳು ಮತ್ತು ಸೋಲುಗಳನ್ನು ನಾಗತಿಹಳ್ಳಿ ಸಮಭಾವತ್ವದಲ್ಲಿ ಸ್ವೀಕರಿಸಿ ಮುನ್ನಡೆಯುತ್ತಿದ್ದಾರೆ.
==ಇವರ ಕೃತಿಗಳು==▼
ಇಂದು ಕನ್ನಡ ಚಿತ್ರರಂಗದಲ್ಲಿ ಪ್ರಸಿದ್ಧ ಚಿತ್ರಸಂಗೀತ ನಿರ್ದೆಶಕರಾಗಿರುವ ಮನೋಮೂರ್ತಿ ಅವರನ್ನು ಅಮೇರಿಕದ ಸಾಫ್ಟ್ವೇರ್ ಕ್ಷೇತ್ರದಿಂದ ಕನ್ನಡ ಚಿತ್ರ ಸಂಗೀತಕ್ಕೆ ಕರೆತಂದ ಕೀರ್ತಿ ಕೂಡಾ ನಾಗತಿ ಹಳ್ಳಿ ಚಂದ್ರಶೇಖರ್ ಅವರದ್ದು.
==ಕಿರುತೆರೆಯಲ್ಲಿ==
ಕಿರುತೆರೆಯಲ್ಲಿ ಪ್ರತಿಬಿಂಬ, ಕಾವೇರಿ, ಅಪಾರ್ಟ್ ಮೆಂಟ್, ಒಲವೆ ನಮ್ಮ ಬದುಕು, ವಟಾರ ಮುಂತಾದ ಹಲವಾರು ಧಾರವಾಹಿಗಳನ್ನು ನಾಗತಿಹಳ್ಳಿ ಪ್ರಸ್ತತಪಡಿಸಿದ್ದಾರೆ.
* ಹದ್ದುಗಳು
* ನನ್ನ ಪ್ರೀತಿಯ ಹುಡುಗನಿಗೆ
|