ಜ್ಯೋತಿಷ ಮತ್ತು ವಿಜ್ಞಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೯೪ ನೇ ಸಾಲು:
* ರಾಹು ಕೇತುಗಳ ವಿಚಾರ. ಇವುಗಳನ್ನು ಛಾಯಾ ಗ್ರಹಗಳೆಂದೂ, ಕಣ್ಣಿಗೆ ಅಗೋಚರ ಗ್ರಹಗಳೆಂದು ಹೇಳಲಾಗತ್ತಿದೆ. ಆದರೆ ಇವು ಗ್ರಹಗಳೇ ಅಲ್ಲ. ಇವು ಆಕಾಶ ಕಾಯಗಳೇ ಅಲ್ಲ. ಇವು ಆಕಾಶದಲ್ಲಿ ಎರಡು ಊಹಾ ಬಿಂದುಗಳು. ಖಗೋಲ ಶಾಸ್ತ್ರದ ಪ್ರಕಾರ ಆಕಾಶದಲ್ಲಿ ಭೂಮಧ್ಯ ರೇಖೆಯನ್ನು ಆಕಾಶಕ್ಕೆ ವಿಸ್ತರಿಸಿದರೆ ಅದು ಖಗೋಲ-ವಿಷುವದ್ ವೃತ್ತ ಮತ್ತು ಸೂರ್ಯನು ಭೂಮಿಯನ್ನು ವರ್ಷದಲ್ಲಿ ಒಂದು ಬಾರಿ ಸುತ್ತುತ್ತಾನೆ ಎಂದು ಇಟ್ಟುಕೊಂಡರೆ, ಸೂರ್ಯನ ಪಥ ಖಗೋಲದಲ್ಲಿ ಒಂದು ವೃತ್ತವಾಗುವುದು. ಅದು ಕ್ರಾಂತಿ ವೃತ್ತ. ಅದರಲ್ಲಿ ಈ ಮೇಷಾದಿ ನಕ್ಷತ್ರ ಪುಂಜ(ರಾಶಿ)ಗಳನ್ನೂ, ಅಶ್ವಿನಿ ಆದಿಯಾಗಿ ನಕ್ಷತ್ರಗಳನ್ನೂ ಗುರುತಿಸಲಾಗುವುದು. (ಭೂಮಿಯು ಸೂರ್ಯನನ್ನು ಸುತ್ತುವ ಪಥವೇ ಕ್ರಾಂತಿವೃತ್ತ - ಸೂರ್ಯ ಭೂಮಿಯನ್ನು ಸುತ್ತುವನೆಂದು ಭಾವಿಸಿದರೂ ಅದೇ ಪಥ ಬರುವುದು)
* ಭೂಮಿಯ ಅಕ್ಷವು ಸೂರ್ಯನಿಗೆ ೨೩.೫ಡಿಗ್ರಿ ಓರೆಯಾಗಿರುವುದರಿಂದ, ಭೂಮಧ್ಯ ರೇಖೆಯನ್ನು ಆಕಾಶಕ್ಕೆ ವಿಸ್ತರಿಸಿದರೆ ಬರುವ [[ವಿಷುವದ್ ವೃತ್ತ]]ಕ್ಕೆ ೨೩.೫ ಡಿಗ್ರಿಯಷ್ಟು ಓರೆಯಾಗಿ ಒಂದು ಊಹಾ [[ಕ್ರಾಂತಿ ವೃತ್ತ]] ವಾಗುವುದು. ಭೂಮಿಯನ್ನು ಚಂದ್ರನು ಸುಮಾರು ೨೯ ದಿನಗಳಲ್ಲಿ ಒಂದು ಸುತ್ತು ಸುತ್ತುತ್ತಾನೆ. ಚಂದ್ರನ ಪಥ ಸೂರ್ಯನ ಕ್ರಾಂತಿ ವೃತ್ತ ಪಥಗಳು ಸಮತಲದಲ್ಲಿ ಇಲ್ಲ; ಸ್ವಲ್ಪ ಓರೆಯಾಗಿವೆ. ಅದರಿಂದ ಸೂರ್ಯ ಚಂದ್ರರ ಪಥದ ದಾರಿ ಎರಡು ಬಳೆಗಳು ಒಂದರೊಳಗೊಂದು ಸೇರಿ ಉತ್ತರ ಮತ್ತು ದಕ್ಷಿಣದಲ್ಲಿ ಎರಡು ಕಡೆ ಒಂದನ್ನೊಂದು '''ಎರಡು ಬಿಂದು'''ಗಳಲ್ಲಿ ಕತ್ತರಿಸುತ್ತವೆ. (ಚಿತ್ರಕ್ಕೆ -ವಿಕಿ- ಇಂಗ್ಲಿಷ್ 'ನೋಡ್ಸ್ ' ಫೈಲ್ ನೋಡಿ)
*(https://en.wikipedia.org/wiki/Orbital_node)
*'''ಈ ಬಿಂದುಗಳೇ ರಾಹುಮತ್ತು ಕೇತುಗಳು.''' ಈ ಬಿಂದುಗಳನ್ನು ಇಂಗ್ಲಿಷಿನಲ್ಲಿ 'ನೋಡ್' ಗಳೆಂದು ಕರೆಯುತ್ತಾರೆ. ಈ ಊಹಾ ಬಿಂದುಗಳಲ್ಲಿ ಉತ್ತರ ದಿಕ್ಕಿನದು ರಾಹು ದಕ್ಷಿಣದಿಕ್ಕಿನದು ಕೇತು. ಈ ಬಿಂದುಗಳಲ್ಲಿ ಚಂದ್ರನು ಬಂದಾಗ ಅಮವಾಸ್ಯೆಯಲ್ಲಿ ಸೂರ್ಯ ಗ್ರಹಣವೂ ಹುಣ್ಣಿಮೆಯಲ್ಲಿ ಚಂದ್ರ ಗ್ರಹಣವೂ ಆಗುವುದು. ರಾಹು ಬಿಂದುವಿನಲ್ಲಿದ್ದರೆ ಅದು ರಾಹು ಗ್ರಸ್ತ ; ಕೇತು ಬಿಂದುವಿನಲ್ಲಿದ್ದರೆ ಅದು ಕೇತುಗ್ರಸ್ತ. ಆಗ ಸೂರ್ಯ, ಭೂಮಿ, ಚಂದ್ರ ಒಂದೇ ರೇಖೆಯಲ್ಲಿ ಬರುವುದು. ಭೂಮಿಯ ನರಳು ಚಂದ್ರನ ಮೇಲೆ ಬಿದ್ದಾಗ ಚಂದ್ರಗ್ರಹಣ, '''ಚಂದ್ರನ ನೆರಳು ಭೂಮಿಯ ಮೇಲೆ ಬಿದ್ದಾಗ ಆ ನೆರಳಿರುವ ಪ್ರದೇಶಕ್ಕಷ್ಟೇ ಸೂರ್ಯಗ್ರಹಣ.''' ದಟ್ಟ ಕಪ್ಪು ಮೋಡದ ಹಿಂದೆ ಚಂದ್ರ ಅಥವಾ ಸೂರ್ಯನಿದ್ದಾಗ ಏನು ಪರಿಣಾಮ ಆಗುವುದೋ ಅದೇ ಪರಿಣಾಮ ಸ್ವಲ್ಪಕಾಲ ಭೂಮಿಯ ಮೇಲೆ ಆಗುವುದು.