ದಸರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೩ ನೇ ಸಾಲು:
ಪ್ರಥಮಾ ತಿಥಿಯಂದು ಪ್ರಾತಃಕಾಲದಲ್ಲಿ ಅಭ್ಯಂಜನ ಸ್ನಾನ ಮಾಡಿ ಕಲಶ ಸ್ಥಾಪನೆ ಮಾಡಿ, ಷೋಡಶಾಂಗ ಪೂಜೆಯನ್ನು ದೇವಿಗೆ ಅರ್ಪಿಸುವರು. [[ಬಲಿ]] ಕೊಡುವುದರ ಸಂಕೇತವಾಗಿ ಉದ್ದಿನ ಅನ್ನ ಅಥವಾ ಬೂದುಗುಂಬಳಕಾಯಿಯನ್ನು ಮೊದಲನೆಯ ದಿನ ಅಥವಾ ಕೊನೆಯ ದಿನದಂದು ಅರ್ಪಿಸುವರು. ಈ ಸಮಯದಲ್ಲಿ ಚಂಡೀ ಸಪ್ತಶತಿ, ನಾರಾಯಣಹೃದಯ ಪಾಠ, ಲಕ್ಷ್ಮೀ ಹೃದಯ ಪಾಠ, ಲಲಿತಾ ಸಹಸ್ರನಾಮಯುಕ್ತ ಕುಂಕುಮಾರ್ಚನೆಯನ್ನೂ ಮಾಡುವ ಪದ್ಧತಿ ಇದೆ. ಎರಡು ವರ್ಷದಿಂದ ಹತ್ತು ವರ್ಷ ವಯಸ್ಸಿನ ಹೆಣ್ಣುಮಕ್ಕಳನ್ನು ಕೌಮಾರಿಯೆಂದು ಪೂಜಿಸುವ ಸಂಪ್ರದಾಯವೂ ಇದೆ. [[ಕುಮಾರಿ]], [[ತ್ರಿಮೂರ್ತಿ]], ಕಲ್ಯಾಣೀ, ರೋಹಿಣೀ, [[ಕಾಳಿ]], ಚಂಡಿಕಾ, [[ಶಾಂಭವಿ]], [[ದುರ್ಗಾ]] ಮತ್ತು [[ಭದ್ರಾ]] ಎಂದ ಹೆಸರುಗಳಿಂದ ಆವಾಹಿಸಿ ಭವಾನೀ ಸಹಸ್ರನಾಮವನ್ನು ಪಾರಾಯಣ ಮಾಡುವರು. ಪಂಚಮೀ ತಿಥಿಯಂದು ಉಪಾಂಗ ಲಲಿತಾ ದೇವಿಯನ್ನು ಪೂಜಿಸಿದರೆ, ಮೂಲಾ [[ನಕ್ಷತ್ರ]]ದಂದು ಸರಸ್ವತೀ ದೇವಿಯನ್ನು ಪೂಜಿಸಿ, ಅಷ್ಟಮಿಯಂದು ದುರ್ಗಾದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸುವರು. ಮಹಾನವಮಿಯಂದು ಶತಚಂಡೀ ಹೋಮವನ್ನೂ ಮಾಡುವರು. ವಿಜಯದಶಮಿಯಂದು ಯುದ್ಧಕ್ಕಾಗಿ ಬಳಸುವ ಎಲ್ಲ ಆಯುಧ, ಪರಿಕರಗಳನ್ನು ಪೂಜಿಸಿ ಮೆರವಣಿಗೆಯ ಮೂಲಕ ಅರಮನೆಯಿಂದ ಬನ್ನಿ ಮಂಟಪಕ್ಕೆ ಒಯ್ಯುವುದು ಮೈಸೂರಿನ ವಿಶೇಷತೆ. ಸಿಂಹದ ಮೇಲೆ ಕುಳಿತು ಮಹಿಷಾಸುರನೆಂಬ ರಕ್ಕಸನನ್ನು ಕೊಂದು ಪ್ರಜೆಗಳನ್ನು ಕಾಪಾಡಿದ [[ಚಾಮುಂಡಿ]] ದೇವತೆಯನ್ನು ಪೂಜಿಸುವುದು ಮೈಸೂರಿನ ವಿಶೇಷತೆ.
== ಪುರಾಣಗಳಲ್ಲಿಪುರಾಣಗ4444ಳಲ್ಲಿ ದಸರಾ ==
 
[[ರಾಮ|ಶ್ರೀ ರಾಮನು]] [[ರಾವಣ|ರಾವಣನ]] ಮೇಲೆ ಯುದ್ಧ ಮಾಡುವ ಮುನ್ನ ದುರ್ಗೆಯನ್ನು ಪೂಜಿಸಿ ವರ ಪಡೆದಿದ್ದನೆಂಬ ಕಥೆ ಇದೆ. ದುಷ್ಟ ಶಕ್ತಿ ರಾವಣನ ಮೇಲೆ ಶ್ರೀ ರಾಮನ ಜಯದ ಸಂಕೇತವಾಗಿ ನವರಾತ್ರಿಯನ್ನು ಆಚರಿಸುವರು. ಕರ್ನಾಟಕದಲ್ಲಿ ವಿಜಯನಗರ ಸಂಸ್ಥಾನದಲ್ಲಿ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದರೆ, ಮೈಸೂರು ಸಂಸ್ಥಾನದ ಒಡೆಯರ ಕಾಲದಲ್ಲಿ ಮನೆ ಮನೆಗಳಲ್ಲೂ ಪ್ರಚಲಿತವಾಯಿತು. ಮೈಸೂರಿನ ಅರಮನೆಯಲ್ಲಿ ಆಳೆತ್ತರದ ಗೊಂಬೆಗಳನ್ನೂ, ಅರಸರ ವಿವಿಧ ಬಗೆಯ ಸಂಗ್ರಹಗಳನ್ನೂ ಒಂದು ದೊಡ್ಡ ತೊಟ್ಟಿಯಲ್ಲಿ ಇರಿಸುತ್ತಿದ್ದರು. [[ದಕ್ಷಿಣ ಕರ್ನಾಟಕ]] (ಹಳೆಯ ಮೈಸೂರು ಪ್ರಾಂತ್ಯ) ಮನೆಗಳಲ್ಲಿ ಗೊಂಬೆ ಕೂರಿಸುವರು. ಹಂತ ಹಂತವಾಗಿ ಮೆಟ್ಟಿಲುಗಳನ್ನು ನಿರ್ಮಿಸಿ, ಪಟ್ಟದ ಗೊಂಬೆ ಮತ್ತು ಇತರ ಗೊಂಬೆಗಳನ್ನು ಕೂರಿಸುವರು . ಇದಕ್ಕೆಂದೇ ಮದುವೆಗಳಲ್ಲಿ ನೂತನ ದಂಪತಿಗಳಿಗೆ ಪಟ್ಟದ ಗೊಂಬೆಗಳನ್ನು (ತೇಗ ಅಥವಾ ಚಂದನದ ಮರದಿಂದ ಮಾಡಿದ) ನೀಡುವರು.
"https://kn.wikipedia.org/wiki/ದಸರ" ಇಂದ ಪಡೆಯಲ್ಪಟ್ಟಿದೆ