ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{rename media|ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾಣ ನಿಲ್ದಾಣ.ext|ಹೆಸರನ್ನು ತಪ್ಪಾಗಿ ಬರೆಯಲಾಗಿದೆ.-ಅನಂತೇಶ}}
[[ಬೆಂಗಳೂರು ಗ್ರಾಮಂತರ]] ಜಿಲ್ಲೆ, [[ದೇವನಹಳ್ಳಿ]] ತಾಲ್ಲೂಕು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದಾಗಿ ವಿಶ್ವದ [[ವಿಮಾನ]] ಸಾರಿಗೆ ಸಾಗಾಣಿಕೆಯ ನಕ್ಷೆಯಲ್ಲಿ ಮೂಡಿಬಂದಿದೆ. ೨೦೦೮ ರ ಮೇ ೨೩ ರಂದು ಕರ್ನಾಟಕ ರಾಜ್ಯದ ಪ್ರಪ್ರಥಮ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಉದ್ಘಾಟನೆಯಾಯಿತು. ಬೆಂಗಳೂರು ನಗರದಿಂದ ಸುಮಾರು ೩೨ ಕಿ. ಮೀ ದೂರದಲ್ಲಿರುವ ಈ ಸಾರಿಗೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ರಸ್ತೆಗಳು ಸರಿಯಾಗಿವೆ. 'ಎಕ್ಸ್ಪ್ರೆಸ್ ವೇ' ಮತ್ತು 'ಹೈಸ್ಪೀಡ್ ರೈಲ್ವೆ' ಲೈನಿನ ಯೋಜನೆಯ' ನೀಲನಕ್ಷೆ' ತಯಾರಾಗಿದೆ. ಟ್ಯಾಕ್ಸಿ ಸೇವೆ, ಮತ್ತು [[ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ]](ಬಿ.ಎಮ್.ಟಿ.ಸಿ)ಯ ಹವಾನಿಯಂತ್ರಿತ ಬಸ್ ಗಳು ಪ್ರತಿ ೧೫ ನಿಮಿಷಕ್ಕೆ ಒಂದರಂತೆ ಸಂಚಾರಕ್ಕೆ ವ್ಯವಸ್ಥೆಮಾಡಲಾಗಿದೆ. ಬೆಂಗಳೂರಿನ ಯಾವ ಮೂಲೆಯಿಂದಲಾದರೂ ಹೊರಟು ವಿಮಾನ ನಿಲ್ದಾಣವನ್ನು ಸುಮಾರು ಒಂದರಿಂದ ಒಂದೂವರೆ ಗಂಟೆಗಳಲ್ಲಿ ತಲುಪುವ ವ್ಯವಸ್ಥೆ ಗಮನಾರ್ಹವಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ಸಂಸ್ಥೆ (ಬಿ.ಐ.ಎ.ಎಲ್)ಸಹಾಯವಾಣಿ'ಯ ಸೌಲಭ್ಯವಿದೆ. ವಿಮಾನನಿಲ್ದಾಣಕ್ಕೆ ಸಂಪರ್ಕಮಾರ್ಗ, ಸಾರಿಗೆ ಸೌಲಬ್ಯಗಳ ವಿವರಗಳು, ಮತ್ತು ಸಾಮಾನ್ಯ ಮಾಹಿತಿಗಳನ್ನು ದೂರವಾಣಿಯ ಮೂಲಕ ಕೂಡಲೆ ಪಡೆಯಬಹುದು. ಸಹಾಯವಾಣಿ ಸಂಖ್ಯೆ : ೪೦೫೮೧೧೧೧. ವಿಮಾನವೇರುವ ಮೊದಲು ನಡೆಸುವ 'ಭದ್ರತಾ ತಪಾಸಣೆಯ ವಿಧಿ' ಯಲ್ಲಿ ಪ್ರಯಾಣಿಕರು 'ಹಲವು ಕ್ಯೂ' ಗಳಲ್ಲಿ ಕಾದು ಮುಂದುವರೆಯುವ ಬದಲು, 'ಒಂದೇ ಹಂತದ ತಪಾಸಣಾ ವ್ಯವಸ್ಥೆ' ಯನ್ನು ನಿರೂಪಿಸಲಾಗಿದೆ. ೫೩ 'ಚೆಕ್-ಇನ್ ಕೌಂಟರ್'ಗಳು, ಹಾಗೂ ೧೮ 'ಸ್ವಯಂ ತಪಾಸಣಾಯಂತ್ರ' ಗಳನ್ನು ಸ್ಥಾಪಿಸಲಾಗಿದೆ. ಮಕ್ಕಳ ಉಪಚಾರ ಹಾಗೂ ಆರೋಗ್ಯ-ಸೇವೆಗೆ (ಔಷಧಾಲಯ, ಡಯಾಪರ್ ಬದಲಾವಣೆ, ಹಾಲುಕುಡಿಸುವಿಕೆ ಇತ್ಯಾದಿಗಳಿಗೆ) ಪ್ರತ್ಯೇಕ ಜಾಗವಿದೆ.