ಮಕ್ಕಳ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬೦ ನೇ ಸಾಲು:
ಇದೇ ಪರಂಪರೆಯಲ್ಲಿ, ಸಿದ್ದಯ್ಯ ಪುರಾಣಿಕರ 'ಅಜ್ಜನ ಕೋಲಿದು ನನ್ನಯ ಕುದುರೆ' ('ನನ್ನ ಕುದುರೆ' ಕವಿತೆ), ಎನ್. ಶ್ರೀನಿವಾಸ್ ಉಡುಪರ 'ಕುಂಬಕರ್ಣನ ನಿದ್ದೆ', ಡಾ.ಎನ್.ಎನ್.ಲಕ್ಷ್ಮೀನಾರಾಯಣಭಟ್ಟರ, ಹೆಚ್.ಎಸ್.ವೆಂಕಟೇಶಮೂರ್ತಿಯವರ ಕವಿತೆಗಳು ಗಮನಿಸಬೇಕಾದವು.'ಬಾಳ ಒಳ್ಳೇವ್ರು ನಮ್ಮಿಸ್ಸು', 'ಗೇರ್ ಗೇರ್ ಮಂಗಣ್ಣ' ಇಂಥ ಕವಿತೆಗಳನ್ನು ಹಾಡಿ ಕುಣಿಯದ ಮಕ್ಕಳೇ ಇಲ್ಲ. ಇತ್ತೀಚಿನ ದಿನಗಳಲ್ಲಿ ಮಕ್ಕಳ ಸಾಹಿತ್ಯವನ್ನು ಮಕ್ಕಳೇ ಸ್ವತಃ ತಮ್ಮ ಕಲ್ಪನೆಯಲ್ಲಿ ಹರಿಯಬಿಡುತ್ತಾರೆ.ಮಕ್ಕಳ ಮುಗ್ಧತೆಯನ್ನು ಸರಳ-ಸುಂದರವಾಗಿ ತಮ್ಮ ಕವಿತೆಗಳಲ್ಲಿ ಹೇಳುವ ಮೂಲಕ ತಮ್ಮ ಸಾಹಿತ್ಯಾಸಕ್ತಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಕನ್ನಡದಲ್ಲಿ ಸಮೃದ್ಧವಾದ 'ಮಕ್ಕಳ ಸಾಹಿತ್ಯ' ರಚನೆಯಾಗಿದೆ. ಈ ಸಾಹಿತ್ಯಕ್ಕೆ 'ಪತ್ರಿಕಾ ಮಾಧ್ಯಮ' ಪ್ರೋತ್ಸಾಹವನ್ನು ನೀಡುತ್ತಿದೆ. ಆದರೂ ಮಕ್ಕಳು ಇದರ ಪ್ರಯೋಜನವನ್ನು ಸರಿಯಾಗಿ ಪಡೆದುಕೊಳ್ಳುತ್ತಿಲ್ಲವೆಂದು ಹೇಳಲು ವಿಷಾದವೆನಿಸುತ್ತದೆ.
ಇದಕ್ಕೆ ಮುಖ್ಯ ಕಾರಣ ಇಂದಿನ ವಿದ್ಯಾಭ್ಯಾಸ. ಮಕ್ಕಳ ಮನಸ್ಸನ್ನು ತಟ್ಟುವ ಮಾತೃಭಾಷೆಯ (ಕನ್ನಡ) ಪದ್ಯಗಳಿಗಿಂತ ಇಂಗ್ಲೀಷ್ ರೈಮ್ಸ್ ನ್ನೇ ತರಗತಿಯಲ್ಲಿ ಬೋಧನೆ ಮಾಡುವ ಮೂಲಕ ಪುಟ್ಟ ಹೃದಯಕ್ಕೆ ಸಿಗಬಹುದಾದ ಆನಂದಕ್ಕೆ ಪೆಟ್ಟುಬೀಳುತ್ತಿದೆ. ಇದರಲ್ಲಿ ಪೋಷಕರೂ ಪಾಲುದಾರುರೇ. ಅಲ್ಲದೇ ವಿದ್ಯುನ್ಮಾನ ಮಾಧ್ಯಮಗಳಿಗೆ ಮಾರುಹೋದ ಮಕ್ಕಳು ಕವಿತೆಗಳ ಭಾವ ಪ್ರಪಂಚದಿಂದ ವಂಚಿತರಾಗಿ ಯಾಂತ್ರಿಕವಾಗುತ್ತಿದ್ದಾರೆ.ಹೀಗಾಗಿ ಅವರಲ್ಲಿ ಆದರ್ಶ, ಕಲ್ಪನೆ, ಹೃದಯವಂತಿಕೆಗಳು ಕಡಿಮೆಯಾಗುತ್ತಿವೆ. ಆಧುನಿಕ ವಿದ್ಯಾಭ್ಯಾಸದ ಜೊತೆ ಜೊತೆಗೆ ಮಕ್ಕಳಲ್ಲಿ ಈ ಕವಿತೆಗಳ ಆಸ್ವಾದನೆಯ ರುಚಿ ತಿಳಿಸಿಕೊಟ್ಟರೆ ಅವರು ಇನ್ನೂ ಉತ್ತಮ ರೀತಿಯಲ್ಲಿ ವಿದ್ಯಾವಂತರೂ-ಹೃದಯವಂತರೂ ಆಗುತ್ತಾರೆಂದೇ ದೃಢವಾಗಿ ಹೇಳಬಹುದು.
==== ನಾಟಕ ====
ನಾಟಕವು ನಟರು ಅಭಿನಯಿಸಬಹುದಾದ ರೀತಿಯಲ್ಲಿ ರಚಿಸಲ್ಪಡುವ ಒಂದು ಸಾಹಿತ್ಯ ಪ್ರಕಾರ ನಾಟಕದ ಅಭಿನಯವು ಒಂದು ರಂಗಕಲೆಯ ವಿಧಿ.
==== ಮಕ್ಕಳ ನಾಟಕ ====
ಹಿಂದಿನ ಕಾಲದಲ್ಲಿ ಮಕ್ಕಳಿಗೆ ಮೂಲವಾದ ಮನೋರಂಜನೆ ಎಂದರೆ ನಾಟಕ.ನಾಟಕಗಳಿಂದ ಮಕ್ಕಳು ಜೀವನದ ಮೌಲ್ಯಗಳನ್ನು ಕಲಿಯುತ್ತಿದರು ಹಾಗು ಸರಿ ತಪ್ಪು ವಿನ ವ್ಯತ್ಯಾಸವನು ತಿಳಿಯುತ್ತಿದರು.ನಾಟಕಗಳಿಂದ ಮಕ್ಕಳ ವರ್ತನೆಗಳು ಬದಲಾದವು.ಮಕ್ಕಳ ಮನಸ್ಸು ಸೂಕ್ಷಮವಾದ್ದುದು,ಆದರಿಂದ ನಾಟಕ ಮಕ್ಕಳ ಮನಸ್ಸಿನಲ್ಲಿ ಪ್ರಮೂಕವಾದ ಸ್ಥಾನವನ್ನು ನಿಡಲು,ನಾಟಕಗಾರರು ಬಿನ್ನವಾದ ಪಾತ್ರಗಳನ್ನು ಪ್ರರಂಭಿಸುತ್ತಿದರು.ಅವುಗಳಲ್ಲಿ ಹಾಸ್ಯ,ಗೀತೆ,ಭಯಕರವಾದ ಪಾತ್ರಗಳು ಮತ್ತು ಬಿನ್ನವಾದ ಪ್ರಾಣಿಗಳ ವೇಶಗಳನ್ನು ದರಿಸಿ ಮಕ್ಕಳ ಮನಸ್ಸನ್ನು ಮುಟುತ್ತಿದ್ದರು.ನಾಟಕವು ಬಹಳ ಅದ್ಭುತವಾಗಿ ಮೂಡಿಸಲು ನಾಟಕಗಾರರು ತರತರದ ಉಡುಪುಗಳನ್ನು ದರಿಸಿ,ಪಾತ್ರದ ತಕ್ಕವಾಗಿ ಅಲಂಕಾರವನ್ನು ಮಾಡಿಕೋಳುತ್ತಿದರು.
ತುಂಬ ಪ್ರಮುಖವಾದ ಮಕ್ಕಳ ನಾಟಕಗಳು ಎಂದರೆ ಕುವೆಂಪುರವರ ನನ್ನ ಗೋಪಾಲ,ಮೋಡಣ್ಣನ ತಮ್ಮ.ಇನೂಂದು ಪ್ರಮುಖವಾದ ನಾಟಕ ಎಂದರೆ ರುದ್ರ ನಾಟಕ,ಪಾಶ್ಚಾತ್ಯ ಸಾಹಿತ್ಯದಲ್ಲಿ ಟ್ರಾಜೆಡಿ ಎಂಬ ನಾಟಕ ಪ್ರಕಾರಕ್ಕೆ ಕನ್ನಡದಲ್ಲಿ ರುದ್ರನಾಟಕ ಎಂಬುದು ರೂಢಿಯ ಹೆಸರು;ಪರ್ಯಾಯವಾಗಿ ದುರಂತನಾಟಕ,ದುಃಖಾಂತ ನಾಟಕ,ವಿಷಾದಾಂತ ನಾಟಕ,ಗಂಭೀರ ನಾಟಕ,ಆವಿದ್ಧ ನಾಟಕ-ಎಂದೂ ಹೇಳುವುದುಂಟು.ನಾಯಕನ ಅಥವಾ ನಾಯಕನನ್ನೂ ಒಳಗೊಂಡು ಕೆಲವರ ಸಾವುನೋವುಗಳಿಂದ ನಾಟಕ ಮುಗಿಯುವುದು ಇದರ ಸಾಮಾನ್ಯ ಲಕ್ಷಣ.
"https://kn.wikipedia.org/wiki/ಮಕ್ಕಳ_ಸಾಹಿತ್ಯ" ಇಂದ ಪಡೆಯಲ್ಪಟ್ಟಿದೆ