ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭ ನೇ ಸಾಲು:
 
== ಕರ್ಮದ ಮೂಲ==
ಕರ್ಮ ಮತ್ತು ದೇವರು (ಈಶ್ವರ)
 
:ಕರ್ಮಕ್ಕೂ ದೇವರಿಗೂ ಏನು ಸಂಬಂಧ ? ಕರ್ಮಕ್ಕೆ ತಕ್ಕಫಲವೆಂದಾದರೆ , ದೇವರ ಅಗತ್ಯವಿಲ್ಲವೆಂದು ಕೆಲವು ದರ್ಶನಗಳು ಹೇಳುತ್ತವೆ . ಕರ್ಮಫಲವನ್ನು ಕೊಡಲು ಈಶ್ವರನು ಬೇಕೆಂದು ಕೆಲವರು ಹೇಳುತ್ತಾರೆ. ಇದ್ದರೂ ಅವನಿಗೆ (ದೇವನಿಗೆ ಕರ್ಮಫಲವನ್ನು ತೆಗೆದು ಹಾಕಲು ) ಸ್ವಾತಂತ್ರ್ಯವಿಲ್ಲವೆಂದೂ -ಜೀವರಿಗೆ ಅವರವರ ಕರ್ಮದಂತೆಯೇ ಅವರವರ ಜನ್ಮ ಕೊಡಬೇಕಾಗುವುದಲ್ಲಾ ?. ಕರ್ಮ ಜಡ (ತಾರ್ಕಿಕವಾಗಿ) -ಅದನ್ನು ಪ್ರವರ್ತಿಸಲು (ದೇವರು) -ಚೇತನ ಬೇಕು . ಅದರಿಂದ ಬಿಡುಗಡೆ ಹೊಂದಲೂ ಅವನ ಅನುಗ್ರಹ ಬೇಕೆಂದು ಭಕ್ತಿ ಪಂಥ ಹೇಳುತ್ತದೆ. ಹಾಗೆ ಕೆಲವರಿಗೆ ಅನುಗ್ರಹ ಮಾಡಿದರೆ ದೇವನಿಗೆ ಪಕ್ಷಪಾತದ ಬರುವುದಲ್ಲಾ ? -ಎಂದು ಪ್ರತಿ ವಾದ .
:ಕರ್ಮ ಫಲವನ್ನು ಅನುಭವಿಸಿಯೇ ತೀರಿಸಬೇಕೆಂದು ಒಂದು ವಾದ ; ಪುಣ್ಯದಿಂದ ಪಾಪ ಕರ್ಮ ಬಿಡುಗಡೆಯಾಗುದೆಂದು ಮತ್ತೊಂದುವಾದ ಭಕ್ತಿ ಮಾರ್ಗದಿಂದ ಆಗಾಮಿ ಕರ್ಮವನ್ನು ತಡೆಗಟ್ಟಬಹುದು -ಆದರೆ ಪ್ರಾರಬ್ಧವನ್ನು ಅನುಭವಿಸಿಯೇ ತೀರಬೇಕೆಂದು ಕೆಲವರು ಹೇಳುವರು .
:ಸತ್ಕರ್ಮದಿಂದ ಪುಣ್ಯ , ದುಷ್ಕರ್ಮದಿಂದ ಪಾಪ ಎಂದರೆ , ಸತ್ಕರ್ಮ -ದುಷ್ಕರ್ಮ ಎಂದು ನಿರ್ಧರಿಸುವವರು ಯಾರು ? ಉತ್ತರ -ವೇದ ! ಆದರೆ ಅದರಲ್ಲಿಲ್ಲದ ವಿಚಾರಗಳಿಗೆ ಫಲ ನಿರ್ಣಯ ಹೇಗೆ ? ಅದಕ್ಕೇನು ಉತ್ತರ ? ಮಹಾಭಾರತದಲ್ಲಿ ಸರಳವಾಗಿ, ||ಪರೋಪಕಾರಃ ಪುಣ್ಯಾಯ ಪಾಪಾಯ ಪರಪೀಡನಂ ||ಎಂದಿದೆ.
ಮೀಮಾಂಸಕರು ವೈದಿಕ (ವೇದದಲ್ಲಿ ವಿಧಿಸಿದ) ಕರ್ಮಗಳಿಗೆ ಮಾತ್ರಾ ಪುಣ್ಯವೆಂದು ಹೇಳುತ್ತಾರೆ -ಅದೇ ಯಜ್ಞ, ಯಾಗ ಇತ್ಯಾದಿ. ಅಧರೆ ಅದೇ ವೇದಾಂತಿಗಳು , ಅಶಾಶ್ವತ ಫಲ (ಸ್ವರ್ಗಫಲವನ್ನು ಕೊಟ್ಟರೂ-ಆ ಫಲತೀರಿದ ನಂತರ ಪುನಃ ಜನ್ಮವೆತ್ತಬೇಕು) ಕೊಡುವುದರಿಂದ ಅವು ಮುಖ್ಯವಲ್ಲ ಎನ್ನುತ್ತಾರೆ . ಆದ್ದರಿಂದ ಜ್ಞಾನಮಾರ್ಗವೇ ಮುಖ್ಯ ಅದಾದರೆ -ಜ್ಞಾನವಾದರೆ ಎಲ್ಲಾಕರ್ಮದಿಂದ ಬಿಡುಗಡೆ ಎನ್ನುತ್ತಾರೆ.
:ಮೀಮಾಂಸಕರು ಕರ್ಮವು -ನಿತ್ಯ , ನೈಮಿತ್ತಿಕ , ಕಾಮ್ಯ , ಪ್ರಾಯಶ್ಚಿತ ಎಂದು ನಾಲ್ಕು ಬಗೆ (ನಿಷಿದ್ಧವೂ -ಮಾಡಬಾರದ್ದು ಸೇರಿದರೆ ಐದು ಬಗೆ) . ಎನ್ನುತ್ತಾರೆ. ವ್ಭೆದಾಂತಿಗಳು ಈಶ್ವರಾರ್ಪಣ ಬುದ್ಧಿಯಿಂದ ಮಾಡಿದ ಕರ್ಮಗಳೆಲ್ಲಾ ನಿತ್ಯ - ಫಲವಿಲ್ಲ -ಚಿತ್ತಶುದ್ಧಿಯಾಗುವುದು - ಫಲಾಪೇಕ್ಷೆಯಿಂದ ಮಾಡಿದರೆ ಕಾಮ್ಯ ಅದು ಜೀವನಿಗೆ ಅಂಟುವುದು ಹೀಗೆ ಕರ್ಮದಲ್ಲಿಎರಡೇ ವಿಧ ಎನ್ನುತ್ತಾರೆ .
(ಮುಂದುವರೆಯುವುದು/ ಮುಂದುವರೆಸಿದೆ )
:ಓಂ [[ಸದಸ್ಯ:Bschandrasgr/ಪರಿಚಯ|ತತ್]] ಸತ್
"https://kn.wikipedia.org/wiki/ಕರ್ಮ_ಸಿದ್ಧಾಂತ" ಇಂದ ಪಡೆಯಲ್ಪಟ್ಟಿದೆ