ಆದಿ ಶಂಕರರು ಮತ್ತು ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪ ನೇ ಸಾಲು:
ಆದಿ ಶಂಕರರ ಜೀವನದ ಇತಿಹಾಸವನ್ನು ನಿಖರವಾಗಿ ತಿಳಿಯುವುದು ಕಷ್ಟ. ಮಾಧವೀಯ ಶಂಕರ ವಿಜಯವೇ ಪ್ರಾಚೀನವಾದುದು. [ಮಾಧವ ಕವಿ ವಿರಚಿತ-೧೪ನೇ ಶ.: ಚಿದ್ವಿಲಾಸೀಯ ಶಂಕರ ವಿಜಯಮ್-ಕವಿ ಚಿದ್ವಿಲಾಸ೧೫-೧೭ನೇಶ.; ಕೇರಳೀಯ ಶಂಕರಶಂಕರ ವಿಜಯಮ್-೧೭ನೇಶ.]
=== ಬಾಲ್ಯ :- ===
ಶ್ರೀ ಶಂಕರರ ತಂದೆ ಕಾಯ್‌ಪಿಳ್ಳೆ ಶಿವಗುರು ನಂಬೂದರಿ; ತಾಯಿ ಆರ್ಯಾಂಬಾ. ಅವರು ಬಹಳ ವರ್ಷ ಮಕ್ಕಳಾಗದಿದ್ದುದರಿಂದ ತ್ರಿಶೂರಿನ ವಡಕ್ಕನಾಥನ ಪ್ರಾರ್ಥನೆ ಮಾಡಿಕೊಂಡರು. ಅದರ ಫಲವಾಗಿ ಶ್ರೀ ಶಂಕರರು ಕೇರಳದ ಕಾಲಡಿ ಎಂಬ ಊರಿನಲ್ಲಿ ಅಥವಾ ಅದರ ಹತ್ತಿರ ಕ್ರಿ. ಶ. ೭೮೮ ರಲ್ಲಿ ಶುಭ ನಕ್ಷತ್ರದಲ್ಲಿ ಜನಿಸಿದರು. (ಕಾಲಡಿಯ ಜನ್ಮ ಸ್ಥಳ,-ಇತ್ತೀಚೆಗೆ ಕಾಂಬೋಡಿಯಾದಲ್ಲಿ ಶ್ರೀ ಶಂಕರರ ಶಿಷ್ಯ ಶಿವಸೋಮ ಇವರ ಕ್ರಿ.ಶ.880 ರ ಶಾಸನವೊಂದು ಪ್ರಾಪ್ತವಾಗಿದೆ. ಅದರ ಪ್ರಕಾರ ಶ್ರೀ ಶಂಕರರು ಕ್ರಿ.ಶ.880 ರಲ್ಲಿ ಕಾಲವಾದರೆಂಬ ಅಂಶ ತಿಳಿಯುತ್ತದೆ. ಅವರು ಬದುಕಿದ್ದು ಕೇವಲ 32 ವರ್ಷ ಅದ್ದರಿಂದ ಜನನ ಕ್ರಿ.ಶ. 788 ರಲ್ಲಿ ಎನ್ನುವುದು ಖಚಿತ.-ಭಾರತದ ಇತಿಹಾಸ ಫಾಲಾಕ್ಷ ಭಾಗ-1-೧೯೮೪/ಪುಟ ೨೬೬ ;ಕಾಲಡಿಯ ಜನ್ಮ ಸ್ಥಳ,- ಶ್ರೀ ಶಂಕರರ ಕೀರ್ತಿ ಸ್ಥಂಭ, ಕಾಲಡಿ)
 
*ತಂದೆ ಶಿವಗುರು, ಶಂಕರರು ಚಿಕ್ಕವರಿದ್ದಾಗಲೇ ತೀರಿಕೊಂಡರು. ಶಂಕರರು ಐದು ವರ್ಷದವರಿದ್ದಾಗಲೇ ಅವರ ಉಪನಯನವನ್ನು ತಾಯಿ ಆರ‍್ಯಾಂಬಾ ನೆರವೇರಿಸಿದರು. ಅಸಾಧಾರಣ ಮೇಧಾವಿಯಾದ ಶಂಕರರು ಎಂಟು ವರ್ಷಕ್ಕೇ ನಾಲ್ಕು ವೇದಗಳನ್ನೂ ಕಲಿತು ಕರಗತ ಮಾಡಿಕೊಂಡರು. ಬೇರೆ ಬೇರೆ ಗುರುಗಳಿಂದ ಷಡ್ದರ್ಶನಗಳನ್ನೂ ಪುರಾಣಗಳನ್ನೂ , ಸಕಲ ಶಾಸ್ತ್ರಗಳನ್ನೂ ಹನ್ನೆರಡನೇ ವರ್ಷಕ್ಕೆಲ್ಲಾ ಕಲಿತು ಸರ್ವ ಶಾಸ್ತ್ರ ವಿಶಾರದರಾದರು.