ಕಾಳಿದಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೯ ನೇ ಸಾಲು:
*ಮೂರನೆಯದು ಕುಮಾರಗುಪ್ತನ ಕಾಲದಲ್ಲಿ ಕಾಳಿದಾಸನು ಲಂಕಾದ್ವೀಪಕ್ಕೆ ಹೋಗಿ ಅಲ್ಲಿ ವೇಶ್ಯೆಯೊಬ್ಬಳ ಮೋಸದಿಂದ ವಿಷಪ್ರಾಶನದಿಂದ ಹತನಾದನಂತೆ. ಈ ಕತೆಯು ಅವನ ಶೃಂಗಾರಪ್ರಿಯತೆಯಿಂದಾಗಿ ಹುಟ್ಟಿರಬಹುದೆಂಬುದು ವಿದ್ವಾಂಸರ ಅಭಿಪ್ರಾಯ.
 
*ಕ್ರಿಸ್ತ ಪೂರ್ವ ಒಂದನೇ ಶತಮಾನದಲ್ಲಿಯೇ ಈತನು ಇದ್ದನು ಎಂಬುದು ಕೆಲವರ ಅಭಿಪ್ರಾಯವಾದರೆ ಇನ್ನು ಕೆಲವು ವಿದ್ವಾಂಸರು ಈತನು ೬ನೇ ಶತಮಾನದಲ್ಲಿ [[ಉಜ್ಜಯಿನಿ]]ಯ ರಾಜ [[ವಿಕ್ರಮಾದಿತ್ಯ]]ನ ಆಸ್ಥಾನದಲ್ಲಿದ್ದನು ಎಂದು ಹೇಳುತ್ತಾರೆ.
 
*ಕಾಳಿದಾಸನ ಕುರಿತ ಮೊಟ್ಟಮೊದಲ ಉಲ್ಲೇಖ ಕ್ರಿಸ್ತಶಕ ೬೩೪ರ ಶಿಲಾಲೇಖವೊಂದಲ್ಲಿ ಸಿಗುತ್ತದೆ. ಈ ಶಾಸನವು ಕರ್ನಾಟಕದ ಐಹೊಳೆಯಲ್ಲಿ ದೊರೆತಿದೆ<Ref>Gaurīnātha Śāstrī (1987). A Concise History of Classical Sanskrit Literature.p 80. Motilal Banarsidass Publ. ISBN 978-81-208-0027-4. {https://en.wikipedia.org/} </Ref>. ಇದರಲ್ಲಿ ಕಾಳಿದಾಸ ಮತ್ತು ಭಾರವಿಯರಿಬ್ಬರನ್ನೂ ಪ್ರಸಿದ್ಧ ಕವಿಗಳೆಂದು ತಿಳಿಸಲಾಗಿದೆ. ಆ ಶ್ಲೋಕ ಹೀಗಿದೆ:
 
ಯೇನಾಯೋಜಿ ನ ವೇಶ್ಮ, ಸ್ಥಿರಮರ್ಥವಿಧೌ ವಿವೇಕನಾ ಜಿನವೇಶ್ಮ |
೧೭ ನೇ ಸಾಲು:
ಸ ವಿಜಯತಾಂ ರವಿಕೀರ್ತಿ: ಕವಿತಾಶ್ರಿತಕಾಲಿದಾಸಭಾರವಿಕೀರ್ತಿ: ||
 
*ಬಾಣನ 'ಹರ್ಷಚರಿತ'ದ ಆರಂಭದಲ್ಲಿ ಕಾಳಿದಾಸನ ಉಲ್ಲೇಖವಿದೆ. ಬಾಣನ ಕಾಲವು ಕ್ರಿಸ್ತಶಕದ ಆರನೆಯ ಶತಾಬ್ಧಿಯ ಉತ್ತರಾರ್ಧ ಅಥವಾ ಏಳನೇ ಶತಾಭ್ಧಿಯ ಪೂರ್ವಾರ್ಧವೆಂದು ಹೇಳಲಾಗುವುದರಿಂದ ಕಾಳಿದಾಸನು ಇವನಿಗಿಂತ ಮೊದಲಿದ್ದವನೆಂದು ಹೇಳಬಹುದು.
 
*ಕಾಳಿದಾಸನ ಮೇಘದೂತ ಕಾವ್ಯದ ವ್ಯಾಖ್ಯೆಯನ್ನು ಬರೆದ ಮಲ್ಲಿನಾಥನು ಆರನೇ ಶತಮಾನದ ಮಧ್ಯದಲ್ಲಿದ್ದ ನಿಚುಲ ಮತ್ತು ದಿಙ್ನಾಗರು ಕಾಳಿದಾಸನ ಸಮಕಾಲೀನರೆಂದು ಹೇಳಿದ್ದಾನೆ. ಆದರೆ ಮಲ್ಲಿನಾಥನ ಈ ಹೇಳಿಕೆಯ ಕುರಿತು ಬಹಳ ಸಂದೇಹಗಳಿವೆ.
 
*ಕಾಳಿದಾಸನು ತಾನು ವಿಕ್ರಮ ರಾಜನ ಆಸ್ಥಾನದಲ್ಲಿದ್ದವನೆಂದು ಬರೆದಿದ್ದಾನೆ. ಆದರೆ ವಿಕ್ರಮ ಎಂಬ ಹೆಸರಿದ್ದ ಕೆಲವಾರು ರಾಜರಲ್ಲಿ ಯಾರೆಂದು ನಿರ್ಣಯಿತವಾಗಿಲ್ಲ. ಪ್ರಚಲಿತವಾಗಿರುವಂತೆ ವಿಕ್ರಮಶಕೆಯು ಕ್ರಿಸ್ತಪೂರ್ವ ೫೬ರಲ್ಲಿ ಆರಂಭವಾಗಿದೆ. ಕಾಳಿದಾಸನು ಉಜ್ಜಯಿನಿಯಲ್ಲಿದ್ದ ಈ ವಿಕ್ರಮನ ಆಸ್ಥಾನದಲ್ಲಿದ್ದನೆಂದರೆ ಅವನು ಕ್ರಿಸ್ತಪೂರ್ವ ಒಂದನೆಯ ಶತಾಬ್ಧಿಯಲ್ಲಿದ್ದನೆನ್ನಬಹುದು.
 
*ಆದರೆ ಇತ್ತೀಚೆಗೆ ಕೆಲವು ವಿದ್ವಾಂಸರು ವಿಕ್ರಮಶಕೆಯು ಕೋರೂರಿನ ಮಹಾಯುದ್ಧವನ್ನು ಆಧರಿಸಿರುವದಾಗಿ ತೀರ್ಮಾನಿಸಿದ್ದಾರೆ. ಕ್ರಿಸ್ತಶಕ ೫೪೪ರಲ್ಲಿ ವಿಕ್ರಮನು ಮ್ಲೇಚ್ಛರನ್ನು ಸೋಲಿಸಿದ್ದ. ಆ ಸಮಯದ ೬೦೦ ವರ್ಷಗಳ ಹಿಂದಿನಿಂದ ವಿಕ್ರಮಶಕೆಯನ್ನು ಆರಂಭಿಸಲಾಗಿದೆಯೆಂದೂ ನಿರ್ಧರಿಸಿದ್ದಾರೆ. ಇದು ನಿಜವಾದರೆ ಕಾಳಿದಾಸನು ಆರನೇ ಶತಮಾನದಲ್ಲಿದನೆಂದು ತಿಳಿಯಬೇಕು. ಇನ್ನೂ ಇವೆಲ್ಲದರ ಬಗ್ಗೆ ಏಕಮತವಿಲ್ಲ<ref> ಸಂಸ್ಕೃತ-ಹಿಂದೀ ಕೋಶ; ವಾಮನ ಶಿವರಾಮ ಆಪ್ಟೆ, ಮೋತೀಲಾಲ್ ಬನಾರಸೀದಾಸ್ ಪ್ರಕಾಶನ, ದೆಹಲಿ - ೧೯೮೯</ref>.
 
*ಬಹಳಷ್ಟು ವಿದ್ವಾಂಸರು ಇಮ್ಮಡಿ ಚಂದ್ರಗುಪ್ತ ವಿಕ್ರಮಾದಿತ್ಯ ಮತ್ತು ಅವನ ಉತ್ತರಾಧಿಕಾರಿಯಾದ ಕುಮಾರಗುಪ್ತನ ಕಾಲದಲ್ಲಿ, ಅಂದರೆ ಕ್ರಿಸ್ತಶಕ ನಾಲ್ಕನೇ ಮತ್ತು ಐದನೇ ಶತಮಾನಗಳ ನಡುವಿನ ಕಾಲದಲ್ಲಿ ಕಾಳಿದಾಸನಿದ್ದನೆಂದು ಅಭಿಪ್ರಾಯಪಡುತ್ತಾರೆ<Ref>Encyclopedia Americana, Walter Harding Maurer, University of Hawaii at Manoe</Ref>.
 
*ಇಮ್ಮಡಿ ಚಂದ್ರಗುಪ್ತ(ಕ್ರಿಸ್ತಶಕ ೩೫೭ -೪೧೩)ನಿಗೂ ಸ್ಕಂದಗುಪ್ತ(ಕ್ರಿಸ್ತಶಕ ೪೫೫-೪೮೦)ನಿಗೂ ವಿಕ್ರಮಾದಿತ್ಯನೆಂಬ ಬಿರುದಿತ್ತು. ಕಾಳಿದಾಸನು ಇವರ ಕಾಲದಲ್ಲಿದ್ದನೆಂದೂ ಹೇಳುತ್ತಾರೆ<Ref>Gaurīnātha Śāstrī (1987). A Concise History of Classical Sanskrit Literature.p 78. Motilal Banarsidass Publ. ISBN 978-81-208-0027-4. {https://en.wikipedia.org/} </ref>ಆದರೆ ಈಗ ಕಾಳಿದಾಸನ ಕಾಲವು ಕ್ರಿಸ್ತಶಕ ೫ನೇ ಮತ್ತು ೬ನೇ ಶತಕಗಳ ನಡುವೆಯಿತ್ತೆಂಬುದನ್ನು ಅಂಗೀಕರಿಸಲಾಗಿದೆ. <Ref>Gaurīnātha Śāstrī (1987). A Concise History of Classical Sanskrit Literature.p 77. Motilal Banarsidass Publ. ISBN 978-81-208-0027-4. {https://en.wikipedia.org/} </ref>.
 
*ಧನ್ವಂತರಿ, ಕ್ಷಪಣಕ, ಅಮರಸಿಂಹ, ಶಂಕು, ವೇತಾಲಭಟ್ಟ, ಘಟಕರ್ಪರ, ಕಾಳಿದಾಸ, ವರಾಹಮಿಹಿರ ಮತ್ತು ವರರುಚಿ ಎಂಬವರು ವಿಕ್ರಮಾದಿತ್ಯನ ಆಸ್ಥಾನದಲ್ಲಿ ನವರತ್ನಗಳೆಂದು ಪ್ರಸಿದ್ಧರಾಗಿದ್ದರು.
 
==ಜನನ ಮತ್ತು ವಿದ್ಯಾಭ್ಯಾಸ==
೪೭ ನೇ ಸಾಲು:
* [[ವಿಕ್ರಮೋರ್ವಶೀಯಮ್]]
 
*ಮೇಘದೂತವು ಸಂಸ್ಕೃತ ಸಾಹಿತ್ಯದಲ್ಲಿ ದೂತಕಾವ್ಯವೆಂದೂ, ಸಂದೇಶಕಾವ್ಯವೆಂದೂ ಪ್ರಖ್ಯಾತವಾಗಿದೆ. 'ಅಭಿಜ್ಞಾನಶಾಕುಂತಲ'ವಂತೂ ವಿಶ್ವದ ಅತ್ಯುತ್ತಮ ನಾಟಕಗಳಲ್ಲೊಂದು ಎಂದು ಪ್ರಸಿದ್ಧ. ಇದನ್ನು ಓದಿದ ಜರ್ಮನ್ ಪ್ರಸಿದ್ಧ ಕವಿ ಗೋಏಟೇ ಅತ್ಯಂತ ವಿಮುಗ್ಧನೂ ಪರಮಾನಂದಿತ ನೂ ಆಗಿದ್ದುದು ಸರ್ವಶ್ರುತ. ಈ ನಾಟಕವು ಪ್ರಪಂಚದ ಅನೇಕ ಭಾಷೆಗಳಿಗೆ ಅನುವಾದಗೊಂಡಿದೆ. ಉಪಮಾಲಂಕಾರವನ್ನು ಪ್ರಯೋಗಿಸುವದರಲ್ಲಿ ಕಾಳಿದಾಸನ ಶ್ರೇಷ್ಠತೆಯು ಸರ್ವತ್ರ ಪ್ರಸಿದ್ಧಿಯಾಗಿದೆ.
 
*ಕಾಳಿದಾಸನ ಕೃತಿಗಳನ್ನು ಅಧ್ಯಯನ ಮಾಡಿದ ವಿದ್ವಾಂಸರು ‘ಋತುಸಂಹಾರ’ವು ಅವನ ಮೊದಲ ರಚನೆಯೆಂದೂ, ‘ಅಭಿಜ್ಞಾನ ಶಾಕುಂತಲ’ವು ಕೊನೆಯ ಕೃತಿಯೆಂದೂ ಅಭಿಪ್ರಾಯಪಡುತ್ತಾರೆ. ಯೌವನದಲ್ಲಿ ಕಾಲಿಡುತ್ತಿರುವ ಬಿಸಿರಕ್ತದ ಕವಿಯು ವಿವಿಧ ಋತುಗಳಲ್ಲಿ ಕಂಡು ಬರುವ ಪ್ರಕೃತಿಯ ಚೆಲುವಿಗೆ ಮನಸೋತು, ಅದನ್ನು ಕಾವ್ಯದಲ್ಲಿ ಸೆರೆ ಹಿಡಿದಿರುವುದು ಸಹಜವೇ ಆಗಿದೆ. ಈ ಖಂಡಕಾವ್ಯವನ್ನು ರಚಿಸಿದ ತರುಣದಲ್ಲೇ ಕವಿಗೆ ಆಸ್ಥಾನದಿಂದ ಕರೆ ಬಂದು ಅವನು ‘ಮಾಲವಿಕಾಗ್ನಿಮಿತ್ರ’ವನ್ನು ರಚಿಸಿರಬೇಕು.
 
*ಈ ನಾಟಕದಲ್ಲಿ ಕವಿಯು ತನ್ನ ಕವಿತಾಮಾರ್ಗವನ್ನು ಕಂಡು ಕೊಳ್ಳುತ್ತಿದ್ದಾನೆ. ಇಮ್ಮಡಿ ಚಂದ್ರಗುಪ್ತನ ರಾಯಭಾರಿಯಾಗಿ ದಕ್ಷಿಣದ ಕುಂತಲ ದೇಶಕ್ಕೆ ಹೋಗಬೇಕಾಗಿ ಬಂದಾಗ, ತನ್ನ ಪ್ರಿಯತಮೆಯ ವಿರಹವನ್ನು ಯಕ್ಷನ ವಿರಹವೆಂದು ಸಮನ್ವಯಗೊಳಿಸಿ ಹೊರಹೊಮ್ಮಿಸಿದ ಭಾವಗೀತೆಯೇ ‘ಮೇಘದೂತ’. ಯಕ್ಷನ ಸಂದೇಶವನ್ನು ಹೊತ್ತ ಮೇಘವು ದಕ್ಷಿಣದಿಂದ ಉತ್ತರಕ್ಕೆ ಪ್ರಯಾಣಿಸಿರುವದು ಗಮನಾರ್ಹ.
 
*ಕವಿಯ ನಡುವಯಸ್ಸಿನ ಕೃತಿ ‘ಕುಮಾರಸಂಭವ’. ತನ್ನ ಪೋಷಕ ರಾಜನಿಗೆ ಮಗ ಹುಟ್ಟಿದ ನೆನಪಿಗೆ ಇದರ ರಚನೆಯಾಗಿರಬಹುದು. ತನ್ನ ಅರಸನ ಕೀರ್ತಿ-ಪರಾಕ್ರಮಗಳನ್ನು ಕಂಡು ಅವನ್ನು ಉದ್ಘೋಷಿಸಲು ಬರೆದ ನಾಟಕವೇ ‘ವಿಕ್ರಮೋರ್ವಶೀಯ’ ಎಂದೆನ್ನುತ್ತಾರೆ ವಿದ್ವಾಂಸರು.
 
*ಇದಾದ ನಂತರ ತುಂಬು ಜೀವನದ ಎರಡು ಪಕ್ವ ಕೃತಿಗಳು ವಿರಚಿತವಾದವು. ಒಂದು- ಮಹಾಕಾವ್ಯ ‘ರಘುವಂಶ’. ಮತ್ತೊಂದು ಹಾಗೂ ಕೊನೆಯದೆಂದೆಣಿಸಲಾದ ನಾಟಕ ‘ಅಭಿಜ್ಞಾನ ಶಾಕುಂತಲ’. ಈ ನಾಟಕವನ್ನು ಬರೆಯುವ ವೇಳೆಗೆ ಕವಿಗೆ ತನ್ನ ಶಕ್ತಿಯಲ್ಲಿ ಅಪಾರ ಆತ್ಮವಿಶ್ವಾಸ ವಿದ್ದು, ತನ್ನ ಬದುಕು ಧನ್ಯವಾಯಿತೆಂಬ ಭಾವನೆ ಮೂಡಿದೆ. ಇದರ ಫಲವಾಗಿ ಈ ಭವದಿಂದ ನನಗೆ ಬಿಡುಗಡೆಯಾಗಲಿ; ಮರುಹುಟ್ಟನು ನನಗೆ ಆ ಮಹೇಶನು ಕರುಣಿಸದಿರಲಿ ಎಂದು ಪ್ರಾರ್ಥಿಸುತ್ತಾ ನಾಟಕವನ್ನು ಕವಿಯು ಮುಗಿಸುತ್ತಾನೆ. ಬದುಕಿನಲ್ಲಿ ಕೃತಕೃತ್ಯನಾದವನು ಆಡುವ ಭರತವಾಕ್ಯವಿದು, ಎನ್ನುತ್ತಾರೆ ವಿಮರ್ಶಕರು<Ref>ಅವಲೋಕನ - ಬಸಪ್ಪಶಾಸ್ತ್ರೀ (ವಿರಚಿತ) ಕರ್ಣಾಟಕ ಶಾಕುಂತಲ ನಾಟಕಂ - ಸಂಪಾದಕ: ಎಚ್ ಎಮ್ ಶಂಕರನಾರಾಯಣರಾವ್ - ಶಾರದಾ ಮಂದಿರ, ಪ್ರಕಾಶಕರು, ಮೈಸೂರು - ಐದನೆಯ ಮುದ್ರಣ: ೧೯೭೯ </Ref>.
 
==ಕನ್ನಡದಲ್ಲಿ ಕಾಳಿದಾಸನ ಕೃತಿಗಳು ==
೮೮ ನೇ ಸಾಲು:
|- bgcolor=#FFCCFF
|}
 
 
 
 
 
 
==ಉಲ್ಲೇಖ==
"https://kn.wikipedia.org/wiki/ಕಾಳಿದಾಸ" ಇಂದ ಪಡೆಯಲ್ಪಟ್ಟಿದೆ