ಉಪನಿಷತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವಿಸ್ತರಣೆ
೧೧ ನೇ ಸಾಲು:
| publisher = General Printers \& Publishers
| isbn =
}}ಅಧ್ಯಾಯ: VEDIC LITERATURE AND UPANISHADS. ಪು. ೧೯: "..ವೇದಗಳ ಪ್ರಕಾರ ಅವು ಯಾವುದಕ್ಕೆ ಸೇರಬೇಕೆಂದು, ... ೧೦೮ ಉಪನಿಷತ್‌ಗಳ ಮುಕ್ತಿಕ ಪಟ್ಟಿಯು ಕೆಳಕಂಡಂತಿದೆ:"</ref> ಆ ಪಟ್ಟಿಯೇ ಅಂತಿಮ ಪಟ್ಟಿ ಎಂದು ತಿಳಿಸಲಾಗಿದೆ. ಉಪನಿಷದ್‌ಗಳಲ್ಲಿ ನಾನಾ ರೀತಿಯ ತತ್ವಶಾಸ್ತ್ರದ ಮತಾಭಿಪ್ರಾಯಗಳನ್ನು ಪ್ರತಿಪಾದಿಸಿದ್ದರೂ ಅವುಗಳಲ್ಲಿ [[ಉದಾತ್ತವಾದ]] [[ಏಕಾತ್ಮವಾದ]]ವೇ ಪ್ರಮುಖವಾದದ್ದೆಂಬ [[[[ಆದಿ ಶಂಕರ |ಶಂಕರಾಚಾರ್ಯ]]ರ ನಿಲುವನ್ನು ಅವರ ನಂತರದ ಭಾಷ್ಯಕಾರರು ಅನುಸರಿಸಿದರು.<ref>ರ್ಯಾಂಡಲ್ ಕಾಲಿನ್ಸ್, ''ದಿ ಸೋಷಿಯಾಲಜಿ ಆಫ್ ಫಿಲಾಸಫೀಸ್: ಎ ಗ್ಲೋಬಲ್ ಥಿಯರಿ ಆಫ್ ಇಂಟಲೆಕ್ಚುಯಲ್ ಚೇಂಜ್.'' ಹಾರ್ವರ್ಡ್ ಯೂನಿವರ್ಸಿಟಿ ಪ್ರೆಸ್, 2000, ಪುಟ 195 [http://books.google.com/books?id=2HS1DOZ35EgC&amp;pg=PA177&amp;source=gbs_toc_r&amp;cad=0_0#PPA195,M1 ]: "
ವೈದಿಕ ಆರಾಧನಾ ಪದ್ಧತಿಗಳ ಕುಸಿತವು, ಹಿಂದಿನ ತತ್ವಗಳ ಸಿಂಹಾವಲೋಕನದಿಂದ, ಮಂಕಾಗಿಸಿರುವುದು ಭಾರತದ ಇತಿಹಾಸದಲ್ಲೇ ಆಗ ಅತಿ ಹೆಚ್ಚಾಗಿ ಪ್ರಾಮುಖ್ಯತೆಯನ್ನು ಪಡೆದಿದ್ದ ತತ್ವಶಾಸ್ತ್ರವು ಈಗ ಆದರ್ಶ ಅದ್ವೈತ ಸಿದ್ಧಾಂತವಾಗಿದೆ ಎಂದು ಸಾಮಾನ್ಯವಾಗಿ ಭಾವಿಸಲಾಗಿದೆ, ಆತ್ಮ (ಜೀವ) ಮತ್ತು ಬ್ರಹ್ಮ(ಶಕ್ತಿ)ಗಳ ಸಾಮ್ಯತೆಯ ರಹಸ್ಯ ಜ್ಞಾನವು ಕರ್ಮ ಚಕ್ರ ಮತ್ತು ಪುನರ್ಜನ್ಮದಿಂಡ ಜೀವನವನ್ನು ಮೇಲೆತ್ತುವ ಒಂದು ಮಾರ್ಗ ಒದಗಿಸುವುದೆಂದು ನಂಬಲಾಗಿದೆ. ಇದು ನಾವು ಉಪನಿಷತ್‌ಗಳನ್ನು ಓದುವಾಗ ದೊರೆಯು ಖಚಿತ ಚಿತ್ರಕ್ಕಿಂತ ಅತಿದೂರವಾಗಿದೆ. ಉಪನಿಷತ್‌ಗಳನ್ನು ಶಂಕರರ ಅದ್ವೈತ ಸಿದ್ಧಾಂತದ ವಿವರಣೆಗಳ ಭೂತ ಕನ್ನಡಿಯ ಮೂಲಕ ನೋಡುವುದು ಒಂದು ಪರಂಪರೆಯಾಗಿ ಬಿಟ್ಟಿದೆ. ಕ್ರಿಶ್ಚಿಯನ್ ಯುಗದ ೭೦೦ C.E.ವರ್ಷದ ತತ್ವಶಾಸ್ತ್ರದ ಕ್ರಾಂತಿಯನ್ನು ಪೂರ್ತಿ ಬೇರೆಯೇ ಆದ ೧,೦೦೦ ರಿಂದ ೧,೫೦೦ ವರ್ಷಗಳಷ್ಟು ಹಿಂದಿನ ಸನ್ನಿವೇಶದ ಮೇಲೆ ಹೇರುತ್ತದೆ. ಶಂಕರರು ತಮ್ಮ ಅಧ್ವೈತ ಮತ್ತು ಆದರ್ಶವಾದದ ವಸ್ತು ವಿಷಯವನ್ನು ಹೆಚ್ಚು ವ್ಯಾಪಕವಾದ ತತ್ವ ಶಾಸ್ತ್ರದ ಗ್ರಂಥಗಳಿಂದ ಆಯ್ದು ಕೊಂಡಿದ್ದರು."</ref><ref>ಪ್ಯಾಟ್ರಿಕ್ ಒಲಿವಿಲ್ಲೆ, ''ಉಪನಿಷತ್‌ಗಳು.'' ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಮುದ್ರಣಾಲಯ, ೧೯೯೮, ಪುಟ ೪: " ಇದರ ಮುನ್ನುಡಿಯಲ್ಲಿ ನಾನು ಉಪನಿಷತ್‌ಗಳಾ ತತ್ವಶಾಸ್ತ್ರದ ಬಗ್ಗೆ ಹೇಳುವುದನ್ನು ತಡೆದಿದ್ದೇನೆ.ಇದು ಉಪನಿಷತ್‌ಗಳ ಭಾಷಾಂತರ ಮಾಡಿ ಮುನ್ನುಡಿ ಬರೆಯುವವರ ಸಾಮಾನ್ಯ ಅಭ್ಯಾಸವಾಗಿದೆ. ಈ ದಾಖಲೆಗಳು ಹಲವು ಶತಮಾನಗಳ ಕಾಲದಲ್ಲಿ, ಬೇರೆ ಬೇರೆ ಪ್ರದೇಶಗಳಲ್ಲಿ ಸಂಕಲಿಸಲಾಗಿದೆ, ಮತ್ತು ಇವುಗಳಲ್ಲಿ ಒಂದು ಸಿದ್ಧಾಂತ ಅಥವಾ ತತ್ವಶಾಸ್ತ್ರ ಕಂಡುಹಿಡಿಯಲು ಪ್ರಯತ್ನಿಸುವುದು ವ್ಯರ್ಥ."</ref><ref>ಏರಿಯಲ್ ಗ್ಲುಕ್‌ಲಿಚ್, ''ವಿಷ್ಣುವಿನ ದಾಪುಗಾಲು: ಚಾರಿತ್ರಿಕ ದೃಷ್ಟಿಯಲ್ಲಿ ಹಿಂದು ಸಂಸ್ಕೃತಿ.''
ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್ US, 2008, ಪುಟ 70: "ಬಹುತತ್ವವಾದದ ವಿಶ್ವ ದೃಷ್ಟಿ" ಉಪನಿಷತ್ ಕಾಲದ ಲಕ್ಷಣವೂ ಆಗಿತ್ತು. ಕೆಲವು ಉಪನಿಷತ್‌ಗಳು ಅಧ್ವೈತ ಎಂದು ಕೊಂಡಿದ್ದರೆ ಕಥಾ ಉಪನಿಷತ್ ಒಳಗೊಂಡಂತೆ ಇತರೆಯವು ಎರಡನ್ನೂ ಪ್ರತಿಪಾದಿಸುತ್ತಿದ್ದವು."</ref><ref>ಗ್ರಿಗೊರಿ ಪಿ. ಫೀಲ್ಡ್ಸ್, ''ರಿಲಿಜಿಯಸ್ ಥೆರಪಿಟಿಕ್ಸ್: ಯೋಗ, ಆಯುರ್ವೇದ ಮತ್ತು ತಂತ್ರದಲ್ಲಿ ಶರೀರ ಮತ್ತು ಆರೋಗ್ಯ.'' SUNY ಪ್ರೆಸ್, 2001, ಪುಟ 26: "ದ್ವೈತವಾದ ಪ್ರತಿಪಾದಿಸುವ ಉಪನಿಷತ್‌ಗಳಲ್ಲಿ ಮೈತ್ರಿ ಒಂದಾಗಿದೆ. ಶಾಸ್ತ್ರೀಯ [[ಸಂಖ್ಯಾ]] ಮತ್ತು [[ಯೋಗ]]ಗಳಿಗೆ ಹಿನ್ನಡೆಯಾದರೆ ಅದರ ವಿರುದ್ಧವಾಗಿ ದ್ವೈತವಲ್ಲದ ಉಪನಿಷತ್‌ಗಳು ವೇದಾಂತದಲ್ಲಿ ಸ್ಥಾನ ಕಂಡುಕೊಂಡವು."</ref><ref>ಉಪನಿಷತ್‌ನ ಮೊದಲ ದಿನಗಳಲ್ಲಿ ಪ್ಲೇಟೋನ [[ಬಹುತತ್ವವಾದ]]ದ ಉದಾಹರಣೆಗಳಿಗಾಗಿ ನೋಡಿರಿ ರ್ಯಾಂಡಲ್ ಕಾಲಿನ್ಸ್ ಅವರ ''ದಿ ಸೋಶಿಯಾಲಜಿ ಆಫ್ ಫಿಲಾಸಫೀಸ್: ಬೌದ್ಧಿಕ ಬದಲಾವಣೆಯ ಜಾಗತಿಕ ಸಿದ್ಧಾಂತ.'' ಹಾರ್ವರ್ಡ್ ಯೂನಿವರ್ಸಿಟಿ ಪ್ರೆಸ್, 2000, ಪುಟಗಳು 197-198.</ref>
 
[[ಮೊಘಲ್]] ಚಕ್ರವರ್ತಿ [[ಶಹಜಹಾನ್| ಶಹಜಹಾನ]]ನ ಮಗ [[ದಾರಾ ಶಿಕೊಹ್]] (ಮ. ೧೬೫೯) ಐವತ್ತು ಉಪನಿಷದ್‌ಗಳನ್ನು [[ಪರ್ಷಿಯನ್]] ಭಾಷೆಗೆ ಅನುವಾದಿಸಿದ್ದನು. [[ಮ್ಯಾಕ್ಸ್ ಮುಲ್ಲರ್‌]]ಗೆ (೧೮೭೯) ೧೭೦ ಉಪನಿಷದ್‌ಗಳ ಅರಿವಿತ್ತು. ಸದಾಲೆಯು ತನ್ನ ಬೃಹತ್ ಕಾವ್ಯಗಳ ಪಟ್ಟಿಯಲ್ಲಿ{{IAST|''Upaniṣad-vākya-mahā-kośa''}} ಉಪಲಬ್ಧವಿರುವ ಬೇರೆ ಬೇರೆ 223 ಇದೇ ಹೆಸರಿನಿಂಡ ಕರೆಯಲ್ಪಡುವ ಗ್ರಂಥಗಳಾನ್ನು ಸೂಚಿಸಿದ್ದಾನೆ.<ref>ಎಸ್. ಗಜಾನನ ಶಂಭು ಸಾಧಲೆ, ''ಶ್ರೀ ಗರೀಬ್‌ದಾಸ್ ಓರಿಯಂಟಲ್ ಸೀರೀಸ್'' , no. 44. (ದೆಹಲಿ: ''ಶ್ರೀ ಸತ್ಗುರು ಪಬ್ಲಿಕೇಶನ್ಸ್,'' 1987).</ref> ಇದರ ಜೊತೆಗೆ, ಉಪನಿಷದ್‌ಗಳ ಸಮಯಕ್ಕೂ ಮುಂಚೆ ರಚಿತವಾದ [[ಬ್ರಾಹ್ಮಣ]]ರ ಭಾಗಗಳು ಮತ್ತು [[ವೇದಗಳ]] ಸೂಕ್ತಗಳನ್ನೂ ಕೆಲವು ಬಾರಿ ಉಪನಿಷದ್‌ಗಳೆಂದು ಭಾವಿಸಲಾಗಿದೆ.{{citation needed|date=February 2010}}
Line ೧೮ ⟶ ೧೯:
== ಪದಮೂಲ ==
[[ಸಂಸ್ಕೃತ]] ಪದ ''ಉಪ-'' (ಹತ್ತಿರದಲ್ಲಿ), ''ನಿ-'' (ಸರಿಯಾಗಿ ಸ್ಥಳದಲ್ಲಿ,ಕೆಳಗೆ) ಮತ್ತು ''ಸದ್'' ("ಹತ್ತಿರದಲ್ಲಿ ಕೆಳಗೆ ಕೂಡುವುದು" (ಉಪಾದ್ಯಾಯರ ಬಳಿ ಉಪದೇಶ ಪಡೆಯಲು))<ref>Cf. [[ಆರ್ಥರ್ ಆಂಥೊನಿ ಮೆಕ್‌ಡೊನೆಲ್]]. ಎ ಪ್ರ್ಯಾಕ್ಟಿಕಲ್ ಸಾಂಸ್ಕ್ರಿತ್ ಡಿಕ್ಷನರಿ. ಪು. 53.</ref> - ಸ್ಕೇಯರ್ ವಿವರಿಸಿದಂತೆ ಉಪಾದ್ಯಾಯರಿಗೆ "ಮುತ್ತಿಗೆ ಹಾಕುವುದು".<ref>ಸ್ಟಾನಿಸ್ಲಾ ಸ್ಚಯೆರ್. Die Bedeutung des Wortes Upanisad. Rocznik Orientalistyczny 3,1925, 57-67)</ref> "ಸ್ಥಳೀಯ ಅಧಿಕೃತ ವಕ್ತಾರರ ಹೇಳಿಕೆಯಂತೆ ಉಪನಿಷದ್ ಎಂದರೆ ಬ್ರಹ್ಮ ಜ್ಞಾನವನ್ನು ಭೋದಿಸುವುದರಿಂಡ ಅಜ್ಞಾನವನ್ನು ನಿವಾರಿಸುವುದು" ಎಂದು [[ಮೋನಿಯರ್-ವಿಲಿಯಮ್ಸ್]]ರು ಸೇರಿಸಿ ಹೇಳುತ್ತಾರೆ ");..."<ref>ಮೋನಿಯರ್-ವಿಲಿಯಮ್ಸ್. ''A Sanskrit-English Dictionary'' . ಪು. 201. [http://www.ibiblio.org/sripedia/ebooks/mw/0200/mw__0234.html ] ವೆಬ್ ಆವೃತ್ತಿ ಬಿಡುಗಡೆಯಾದದ್ದು 1 ಏಪ್ರಿಲ್ 2007.</ref> [[ಆದಿ ಶಂಕರ |ಶಂಕರ]]ರು ಉಪನಿಷತ್ ಪದದ''{{IAST|upaniṣad}}'' ಮೇಲೆ ಅವು ಕೊಡುವ ಟಿಪ್ಪಣಿಯು ಅದನ್ನು ''ಆತ್ಮವಿದ್ಯೆ'' ಗೆ ಅಂದರೆ ’[[ನಾನು]]’ ಎಂಬುದರ ಬಗ್ಗೆ ತಿಳುವಳಿಕೆ ''ಬ್ರಹ್ಮವಿದ್ಯೆ'' ಗೆ ದೇವನ ಬಗ್ಗೆ ತಿಳುವಳಿಕೆಗೆ [[ಕಠೋಪನಿಷತ್|ಕಠ]] ಮತ್ತು [[ಬೃಹದಾರಣ್ಯಕ ಉಪನಿಷತ್|ಬೃಹದಾರಣ್ಯಕ]] ಉಪನಿಷತ್‌ಗಳು ಸಮ ಎಂದು ಸೂಚಿಸುತ್ತದೆ. ಪದದ ಶಬ್ಧಾರ್ಥವನ್ನು ಇತರೆ ಪದಕೋಶಗಳು "ವಿಶೇಷ ಜ್ಞಾನಿಗಳಿಗಾಗಿ ಇರುವ" ಮತ್ತು "ರಹಸ್ಯವಾದ ಸಿದ್ಧಾಂತ" ಎಂದು ಕೊಟ್ಟಿವೆ.
==ಕಾಲ==
 
ಉಪನಿಷತ್ತುಗಳ ಕಾಲದ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿವೆ. ಆದರೆ ಇವು [[ಬೌದ್ಧ ಧರ್ಮ]]ಕ್ಕೆ ಹಿಂದಿನವು ಎಂಬಲ್ಲಿ ಒಮ್ಮತವಿದೆ. ಅಂದರೆ ಇವು ಪ್ರ.ಶ.ಪು. 600ಕ್ಕೆ ಹಿಂದಿನವು. ಋಗ್ವೇದ ಸಂಹಿತೆಗಳ ಕಾಲಕ್ಕೆ ಈಚಿನವು ಎಂದು ಹೇಳಬೇಕಾಗಿರುವುದರಿಂದಲೂ [[ಋಗ್ವೇದ]]ದ ಕಾಲ ಸು. ಪ್ರ.ಶ.ಪು. 1200 ಎಂದು ಪಂಡಿತರ ಅಭಿಪ್ರಾಯವಿರುವುದರಿಂದಲೂ ಉಪನಿಷತ್ತುಗಳ ಕಾಲವನ್ನು ಪ್ರ.ಶ.ಪು. 1200 ಮತ್ತು ಪ್ರ.ಶ.ಪು. 600ರ ಮಧ್ಯಕಾಲವೆನ್ನಬಹುದು. ಆದರೆ ಮೈತ್ರಾಯಣೀಯ ಉಪನಿಷತ್ತಿನಲ್ಲಿ ಬಂದಿರುವ ಜ್ಯೋತಿಶ್ಶಾಸ್ತ್ರಕ್ಕೆ ಸಂಬಂಧಿಸಿದ ಒಂದು ಉಲ್ಲೇಖದ ಆಧಾರದ ಮೇಲೆ [[ಬಾಲಗಂಗಾಧರ ತಿಲಕ]]ರು ಕಾಲವನ್ನು ಪ್ರ.ಶ.ಪು. 2000ದ ಹಿಂದಕ್ಕೆ ಹಾಕಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಅತ್ಯಂತ ಪ್ರಾಚೀನವಾದವು ಛಾಂದೋಗ್ಯ, ಬೃಹದಾರಣ್ಯಕಗಳು.
== ತತ್ವಚಿಂತನೆ ==
ಉಪನಿಷದ್‌ಗಳು ಒಂದು ವಿಶ್ವವ್ಯಾಪಿ ಚೇತನ (''[[ಬ್ರಹ್ಮ]]'' ) ಮತ್ತು ಒಂದು ವೈಯಕ್ತಿಕ ಸ್ವರೂಪದ (''[[ಆತ್ಮ]]'' ),<ref>ಸ್ಮಿತ್ 10)</ref> ಬಗ್ಗೆ ಹೇಳುತ್ತವೆ ಮತ್ತು ಕೆಲವೊಮ್ಮೆ ಇವೆರಡರ ಅನನ್ಯತೆಯನ್ನು ಪ್ರತಿಪಾದಿಸುತ್ತವೆ. ಬ್ರಹ್ಮನು ಸರ್ವಶ್ರೇಷ್ಠನೂ, ಇಂದ್ರಿಯಾತೀತನೂ ಆಗಿದ್ದು , ಸಂಪೂರ್ಣ ಹಾಗೂ ಅನಂತ ಅಸ್ತಿತ್ವ ವಿರುವ ಸರ್ವಾಂತರ್ಯಾಮಿಯಾಗಿದ್ದಾನೆ.ಅಲ್ಲದೇ, ಅವನು ಹಿಂದೆ ಇದ್ದ,ಈಗ ಇರುವ , ಮುಂದೆ ಇರಬಹುದಾದ ಎಲ್ಲದರ ಮೊತ್ತವಾಗಿದ್ದಾನೆ. ರಹಸ್ಯಾತ್ಮಕ ಗುಣ ಮತ್ತು ಗಾಢ ತತ್ವಶಾಸ್ತ್ರದ ಕಡೆಗೆ ಬಲ ಉಪನಿಷದ್‌ಗಳನ್ನು ನಾನಾವಿಧಗಳಲ್ಲಿ ವಿವರಿಸುವಂತೆ ಮಾಡಿದೆ. ಮತ್ತು ಮೂರು ಮುಖ್ಯವಾದ [[ವೇದಾಂತ]] ಮತಗಳನ್ನು ಹುಟ್ಟು ಹಾಕಿದೆ. [[[[ಆದಿ ಶಂಕರ |ಶಂಕರ]]ರ ಉಪನಿಷದ್ ಅರ್ಥವಿವರಣೆಯು ಬ್ರಹ್ಮನನ್ನು [[ಏಕದೇವತತ್ವ]]ದ ದೇವರಾಗಿ ವರ್ಣಿಸಿಲ್ಲ. ಶಂಕರರ ತತ್ವವಾದವನ್ನು [[ಅಧ್ವೈತ]], "ಎರಡು-ಅಲ್ಲದ" ಎಂದು ಕರೆಯಲಾಗಿದೆ. ಇದು [[ಮಧ್ವಾಚಾರ್ಯ|ಮಧ್ವಾಚಾರ್ಯ]]ರು ಸ್ಥಾಪಿಸಿದ [[ದ್ವೈತಮತ |ದ್ವೈತ]]ವಾದಕ್ಕೆ ವಿರುದ್ಧವಾಗಿದೆ, ದ್ವೈತವಾದವು ಬ್ರಹ್ಮನನ್ನು ಸರ್ವಶ್ರೇಷ್ಠ ಸಾಕಾರ ದೇವನಾಗಿ, ಮಾನವನ ಆತ್ಮಕ್ಕಿಂತ ವಿಭಿನ್ನವಾಗಿ ಕಾಣುತ್ತದೆ ಮತ್ತು ಆ ದೇವನು [[ವಿಷ್ಣು]] ಅಥವಾ [[ಕೃಷ್ಣ]]ನಾಗಿರುವಂತೆ ಬಿಂಬಿಸುತ್ತದೆ. (''ಬ್ರಹ್ಮನೋ ಹಿ ಪ್ರತಿಷ್ಠಾನಂ'' , ''ನಾನು ಬ್ರಹ್ಮನ ಮೂಲ ಸಂಸ್ಥಾಪಕ'' [[ಭಗವದ್ಗೀತೆ]] ೧೪.೨೭). ವೇದಾಂತದ ಮೂರನೇ ಮುಖ್ಯ ಮತವೆಂದರೆ [[ರಾಮಾನುಜ |ರಾಮಾನುಜಾ]]ಚಾರ್ಯರು ಸ್ಥಾಪಿಸಿದ [[ವಿಶಿಷ್ಟಾದ್ವೈತ |ವಿಶಿಷ್ಠಾದ್ವೈತ]]ವಾಗಿದ್ದು ಮೇಲಿನೆರಡು ಮತಗಳಿಗೂ ಸಾಮಾನ್ಯವಾದ ತೋರಿಕೆಗಳನ್ನು ಹೊಂದಿದೆ ಮತ್ತು ಇವೆರಡನ್ನೂ ಸಮನ್ವಯಗೊಳಿಸಲು ಬಯಸಿದೆ.
Line ೨೯ ⟶ ೩೧:
[[File:Om.svg |thumb|ಓಂ ಕಾರ]]
ಉಪನಿಷದ್‌ಗಳು ಮೊಟ್ಟ ಮೊದಲ ಹಾಗೂ ಅತ್ಯಂತ ಸ್ಪುಟವಾಗಿ ಪವಿತ್ರ ಅಕ್ಷರವಾದ [[ಅ‌ಉಮ್]] ಅಥವಾ ಓಂಕಾರವನ್ನು ವಿವರಿಸುತ್ತವೆ. ಇದು ಎಲ್ಲಾ ಸೃಷ್ಠಿಯ ಮೂಲಾಧಾರವಾದ ವಿಶ್ವಕಂಪನ ನಾದವಾಗಿದೆ. "''ಓಂ ಶಾಂತಿ ಶಾಂತಿ ಶಾಂತಿ'' " ಎನ್ನುವ [[ಮಂತ್ರ]] (ಶಬ್ಢವಿಲ್ಲದ ನಾದ, ಶಾಂತಿ, ಶಾಂತಿ, ಶಾಂತಿ)ಉಪನಿಷದ್‌ಗಳಾಲ್ಲಿ ಪದೇ ಪದೇ ಕಂಡುಬರುತ್ತದೆ. 'ಭಗವಂತನಿಗೆ ನಿಷ್ಠೆ' (ಸಂಸ್ಕೃತ: [[ಭಕ್ತಿ]]) ಸರಳ ಅರ್ಥದಲ್ಲಿ ಭಕ್ತಿಯು ಉಪನಿಷತ್‌ಗಳ ಸಾಹಿತ್ಯದ ಮುಂಚೂಣಿಯಾಗಿದ್ದು ಮತ್ತು ನಂತರ ಅದನ್ನು ''[[ಭಗವದ್ಗೀತೆ]]'' ಯಂತಹ ಗ್ರಂಥಗಳು ಕಂಡುಕೊಂಡವು.<ref>ಕ್ಯಾಥೆರಿನ್ ರಾಬಿನ್ಸನ್, ''Interpretations of the Bhagavad-Gītā and Images of the Hindu Tradition: The Song of the Lord.'' ರೌಟ್‌ಲೆಡ್ಜ್ ಪ್ರೆಸ್, 1992, ಪುಟ 51.</ref>
ಉಪನಿಷತ್ತುಗಳನ್ನು ಪರಮ ಪ್ರಮಾಣವಾದ ಅಪೌರುಷೇಯ [[ಮಂತ್ರ]]ಗಳೆಂಬ ದೃಷ್ಟಿಯಿಂದ ಪರಿಶೀಲಿಸಿದಾಗ ಅವೆಲ್ಲವೂ ಒಂದೇ ತತ್ತ್ವವನ್ನು ಪ್ರತಿಪಾದಿಸುವುವು ಎಂದು ಒಪ್ಪಿಕೊಳ್ಳಬೇಕಾಗುತ್ತದಾದರೂ ಭಾಷ್ಯಕಾರರ ದೃಷ್ಟಿಯಲ್ಲಿ ಅವುಗಳಲ್ಲಿ ಭಿನ್ನ ಭಿನ್ನ ಸಿದ್ಧಾಂತಗಳ ನಿರೂಪಣೆ ಇದೆ. [[ಬಾದರಾಯಣ]]ರು [[ವೇದಾಂತಸೂತ್ರ]]ದಲ್ಲಿ ಇದನ್ನು ಒಪ್ಪಿಕೊಂಡಿದ್ದಾರೆ. ಅನೇಕ ಸಿದ್ಧಾಂತಗಳ ಉಲ್ಲೇಖವಿದ್ದರೂ ಅವುಗಳೆಲ್ಲಕ್ಕೂ ಸಮಪ್ರಾಧಾನ್ಯ ದೊರೆತಿಲ್ಲ. ಕೆಲವು ಮಿಂಚಿನಂತೆ ಕಂಡು ಮಾಯವಾಗುವುವು. ಕೆಲವು ಸಂಗ್ರಹವಾಗಿ ಬಂದರೆ ಮತ್ತೆ ಕೆಲವು ಹಳೆಯ ತತ್ತ್ವಗಳನ್ನೇ ಸಮರ್ಥಿಸುವುವು. ಆದರೆ ಈ ಎಲ್ಲ ಸಂಶಯಗಳನ್ನೂ ಬದಿಗೊತ್ತಿ ಪರಿಶೀಲಿಸಿದಲ್ಲಿ ಪ್ರಧಾನವಾಗಿ ಅಲ್ಲಿ ಘೋಷಿತವಾಗಿರುವ ತತ್ತ್ವ [[ವೇದಾಂತ ದರ್ಶನ]]ವೆನ್ನಿಸಿಕೊಂಡಿರುವ [[ಬ್ರಹ್ಮತತ್ತ್ವ]] ಅಥವಾ [[ಬ್ರಹ್ಮ]] ಮತ್ತು [[ಆತ್ಮ]]ಗಳೆಂಬ ಆಧಾರಸ್ತಂಭಗಳ ಮೇಲೆ ನಿಂತಿರುವ ಭಾರತೀಯ ದರ್ಶನಸಾರ. ಉಪನಿಷತ್ತುಗಳು ಬ್ರಾಹ್ಮಣಗಳೊಂದಿಗೆ ಸೇರಿಕೊಂಡಿದ್ದರೂ ಇವುಗಳ ವಿಚಾರಧಾರೆ ಬೇರೆಯಾಗಿವೆ. ಬ್ರಾಹ್ಮಣಗಳು ಪ್ರತಿಪಾದಿಸುವ ಯಾಗಾದಿಗಳನ್ನು ಕಾಮ್ಯ ಕರ್ಮಗಳೆಂದು ಉಪನಿಷತ್ತುಗಳು ತಿರಸ್ಕರಿಸಿ ಅವುಗಳಿಂದ ಆತ್ಮೋದ್ಧಾರವಿಲ್ಲವೆನ್ನುತ್ತವೆ; ಮತ್ತು ಬಾಹ್ಯಯಜ್ಞ ಆತ್ಮಯಜ್ಞದ ಪ್ರತೀಕವೆಂದು ಹೇಳಿವೆ. ಹೀಗೆ ಉಪನಿಷತ್ತುಗಳ ಕಾಲಕ್ಕೆ ಭಾರತೀಯ ದರ್ಶನದ ಸರಣಿಯಲ್ಲಿ ಗಮನಾರ್ಹವಾದ ಬದಲಾವಣೆಯಾಗಿತ್ತು. ಅದಲ್ಲದೆ ಉಪನಿಷತ್ ರಹಸ್ಯವಾದ ವಿದ್ಯೆ ಎಂಬ ಅರ್ಥವನ್ನೂ ಹೊಂದಿದೆ. ಇದನ್ನು ಗುರುಮುಖೇನ ಪಡೆಯುವವ ಅಸಾಧಾರಣ ಶ್ರದ್ಧಾಭಕ್ತಿಗಳಿಂದ ಕೂಡಿದವನಾಗಿದ್ದು ಜ್ಞಾನಪಿಪಾಸುವೂ ಸಮ್ಯಗುಪಸನ್ನನೂ ಶಮಾನ್ವಿತನೂ ಆಗಿರಬೇಕು. ಈ ಆದರ್ಶವಿದ್ಯೆಗೆ ಆದರ್ಶ ಶಿಷ್ಯನೇ ಪಾತ್ರವೆಂದು ಕಟ್ಟುನಿಟ್ಟಾಗಿ ನಿರ್ದೇಶಿಸಲಾಗಿದೆ. ಮೇಲೆ ಹೇಳಿದ ಉಪನಿಷತ್ತುಗಳಲ್ಲಿ ಈ ಬಗೆಯ ಗುರುಶಿಷ್ಯ ಸಂವಾದಗಳೇ ಚಿತ್ರಿತವಾಗಿವೆ. ಪ್ರವಚನದಲ್ಲೂ ಕೆಲವು ಗೂಢತತ್ತ್ವಗಳು ಸೂತ್ರರೂಪದಲ್ಲಿವೆಯೇ ಹೊರತು ಸ್ಪಷ್ಟವಾದ ವಿವರಣೆ ಇಲ್ಲ. ಈ ಕಾರಣದಿಂದಲೇ ಅರ್ಥವೃತ್ತಿಗಳಲ್ಲಿ ಭಿನ್ನತೆಗೆ ಅವಕಾಶವಾಗಿದೆ. [[ಸಂಹಿತೆ]]ಗಳಂತೆ ಬೇರೆ ಬೇರೆ ಕಾಲದಲ್ಲಿ ಬೇರೆ ಬೇರೆ ದಾರ್ಶನಿಕರಿಂದ ಸಂಗ್ರಹವಾಗಿರುವುದು ಸಿದ್ಧಾಂತಗಳ ವ್ಯತ್ಯಾಸಕ್ಕೆ ಕಾರಣವಿರಬಹುದೆಂದು ವಿದ್ವಾಂಸರ ಅಭಿಪ್ರಾಯ.
* [[ಸೃಷ್ಟಿ ಮತ್ತು ಉಪನಿಷತ್]] ನೋಡಿ
 
ಬ್ರಹ್ಮತತ್ವ :ಮೂಲ ಎಂಬ ಅರ್ಥವುಳ್ಳ ಬೃಃ ಶಬ್ದದಿಂದ ಬ್ರಹ್ಮಶಬ್ದ ಬಂದಿದೆ. ಯಾವುದು ತಾನೇ ತನ್ನ ಅಂತಃಶಕ್ತಿಯಿಂದಲೇ ನಿರಾತಂಕವಾಗಿ ಆವಿರ್ಭವಿಸುವುದೋ ಅದೇ ಬ್ರಹ್ಮ. ಇದೇ ಜಗತ್ತಿಗೆ ಏಕೈಕ ಕಾರಣ ಮತ್ತು ಏಕಮೇವಾದ್ವಿತೀಯವಾದದ್ದು. ಉಪನಿಷತ್ಕಾರರ ಮೊದಲ ತತ್ತ್ವವೇ ಬ್ರಹ್ಮನನ್ನು ಕುರಿತದ್ದು. ಬ್ರಹ್ಮ ಮತ್ತು ಆತ್ಮ ಎಂಬ ಶಬ್ದಗಳು ಮೊಟ್ಟಮೊದಲು [[ಅಥರ್ವವೇದ]]ದಲ್ಲಿ ಉಪಯೋಗಿಸಲ್ಪಟ್ಟಿವೆ. ಪರಮಾತ್ಮಪರವಾಗಿ ಬ್ರಹ್ಮಶಬ್ದದ ಅರ್ಥಪುಷ್ಟಿಯನ್ನು ಅಲ್ಲಿ ಕಾಣುತ್ತೇವೆ.
 
ಉಪನಿಷತ್ಕಾರರ ಮೊದಲ ಪ್ರಶ್ನೆ ಜಗತ್ತು ಮತ್ತು ನಾವು ಎಲ್ಲಿಂದ ಬಂದೆವು ? ನಮ್ಮ ಮುಂದಿನ ಗತಿಗೂ ಸುಖದುಃಖಗಳಿಗೂ ಕಾರಣರಾರು ? ಎಂಬುದೇ ಆಗಿದೆ. ಉತ್ತರವಾಗಿ ಸತ್, ಆತ್ಮ, ಬ್ರಹ್ಮ, ಅಕ್ಷರ, ಆಕಾಶ ಶಬ್ದಗಳಿಂದ ಜಗತ್ಕಾರಣವಾದ ಪರವಸ್ತುವನ್ನು ಹೇಳಲಾಗಿದೆ. ಬ್ರಹ್ಮನೇ ಜಗತ್ತಿಗೆ ಉಪಾದಾನ ಕಾರಣ ಮತ್ತು ನಿಮಿತ್ತಕಾರಣ ಎರಡೂ. ಬ್ರಹ್ಮ ಹೊರತು ಮತ್ತಾವುದೂ ಮೊದಲು ಇರಲಿಲ್ಲವಾದ್ದರಿಂದ ಜಗತ್ತು ಬ್ರಹ್ಮಮಯ. ಸಂಕಲ್ಪ ಮಾತ್ರದಿಂದ ಜಗತ್ತನ್ನು ಸೃಷ್ಟಿಸಿ ಅದರಲ್ಲಿ ಬ್ರಹ್ಮ ಅಂತರ್ಯಾಮಿಯಾಗಿದೆ. ಸರ್ವಭೂತಗಳಿಗೂ ಅಂತರಾತ್ಮನಾದ ಬ್ರಹ್ಮವೊಂದೇ ಶಾಶ್ವತ, ಸರ್ವಶಕ್ತ, ಅನಂತ, ಪೂರ್ಣಕಾಮ. ಸರ್ವರಿಗೂ ಅಂತರಾತ್ಮನಾದ ಬ್ರಹ್ಮನಲ್ಲಿ ಸರ್ವ ಆತ್ಮಗಳೂ ಚಕ್ರದ ನೇಮಿ ಮತ್ತು ನಾಭಿಯಲ್ಲಿ ಅರೆಕಾಲುಗಳು ಹೇಗೋ ಹಾಗೆ ಅಡಕವಾಗಿದ್ದಾರೆ. [[ಲವಣ]] ನೀರಿನಲ್ಲಿ ಕರಗಿ ವ್ಯಾಪಿಸುವಂತೆ ಬ್ರಹ್ಮ ಸರ್ವವನ್ನೂ ವ್ಯಾಪಿಸಿದ್ದಾನೆ. [[ಅಗ್ನಿ]]ಯಿಂದ ಅಗ್ನಿಕಣಗಳೂ ಜೇಡರ ಹುಳುವಿನಿಂದ ಬಲೆಯ ಎಳೆಗಳೂ ವೇಣುವಿನಿಂದ ನಾದದ ಅಲೆಗಳೂ ಉದ್ಭವಿಸುವಂತೆ ಎಲ್ಲ ಭೂತಜಾತಗಳೂ ಬ್ರಹ್ಮನಿಂದಲೇ ಉದ್ಭವಿಸುತ್ತವೆ. ಎಲ್ಲ ಭೂತ ಜಾತಗಳಿಗೂ ಬ್ರಹ್ಮ ಏಕಾಯನನಾಗಿದ್ದಾನೆ.
 
ಬ್ರಹ್ಮನಿಗೂ ಜಗತ್ತಿಗೂ ಹೇಗೆ ಸಂಬಂಧ ಎಂಬ ವಿಚಾರದಲ್ಲಿ ಉಪನಿಷತ್ತುಗಳು ಹೀಗೆಯೇ ಎಂದು ಸ್ಪಷ್ಟವಾಗಿ ಹೇಳಿಲ್ಲ. ಅಂದರೆ ಆತ ವಿಶ್ವಾಂತರ್ಯಾಮಿಯೆಂದೂ ವಿಶ್ವಾತೀತನೆಂದೂ ಎರಡು ಬಗೆಯಾಗಿ ಹೇಳಿವೆ. ಹಾಗೆಯೇ ಸಪ್ರಪಂಚ ಬ್ರಹ್ಮ, ನಿಷ್ಪ್ರಪಂಚ ಬ್ರಹ್ಮರ ವಿಚಾರವೂ ಬರುತ್ತದೆ. ಈ ಎರಡು ವಾದಗಳ ಸಮರ್ಥನೆಗೂ ಉಪನಿಷತ್ತಿನಲ್ಲಿ ಸಾಕಷ್ಟು ತತ್ತ್ವಪ್ರತಿಪಾದನೆಯನ್ನು ಕಾಣುತ್ತೇವೆ. ಮುಂಡಕೋಪನಿಷತ್ತಿನಲ್ಲಿ ಎರಡು ವಾದಗಳನ್ನೂ ಸಮನ್ವಯ ಮಾಡುವ ಅರ್ಥವುಳ್ಳ ಒಂದು ಮಂತ್ರವಿದೆ. ಬ್ರಹ್ಮನನ್ನು ಬಿಟ್ಟು ಜಗತ್ತಿಗೆ ಬೇರೆ ಅಸ್ತಿತ್ವವಿಲ್ಲ. ಆದರೆ ಬ್ರಹ್ಮ ಜಗತ್ತಿಗೆ ಪರಿಮಿತನಾಗಿಲ್ಲ. ನಾಮರೂಪಗಳಿಗೆ ಸಿಲುಕಿಲ್ಲ. ಬ್ರಹ್ಮ ಪರಿಣಾಮವಾದದ ಪ್ರಕಾರ ಬ್ರಹ್ಮನೇ ಜಗತ್ತಿನ ರೂಪವನ್ನು ತಾಳುತ್ತಾನೆ. ಇದು ಸಪ್ರಪಂಚವಾದ. ಬ್ರಹ್ಮ ಜಗತ್ತಿಗೆ ಕಾರಣನಾಗಿದ್ದು, ನಾಮರೂಪ ಜಗತ್ತು ಬ್ರಹ್ಮನಷ್ಟು ಸತ್ಯವಲ್ಲವೆಂಬುದು ನಿಷ್ಪ್ರಪಂಚವಾದ. ಇದರ ಪ್ರಕಾರ ಬ್ರಹ್ಮ ಜಗತ್ತಿನಂತೆ ಕಾಣಿಸಿಕೊಳ್ಳುತ್ತಾನೆ. ಅಂದರೆ ಬ್ರಹ್ಮವಿವರ್ತವಾದ ಸಮರ್ಥನೆ ಇದೇ. ಆದರೆ ಬ್ರಹ್ಮನೇ ಏಕಮೇವಾದ್ವಿತೀಯವಾದ ಸತ್ಯ ಎಂಬುದನ್ನು ನಿಸ್ಸಂಶಯವಾಗಿ ಸಾರಲಾಗಿದೆ. ನಿಷ್ಪ್ರಪಂಚನಾದ ಬ್ರಹ್ಮ ಸಪ್ರಪಂಚನಂತೆ ಕಾಣಿಸುತ್ತಾನೆಂದು ಹೇಳುವುದು ಮಾಯಾವಾದ. [[ಅದ್ವೈತ]]ವಾದ ಇದನ್ನೇ ಹೆಚ್ಚು ವಿಸ್ತಾರವಾಗಿ ವಿವರಿಸಿದೆ. ಉಪನಿಷತ್ತುಗಳಲ್ಲಿ ಮಾಯೆ ಎಂಬ ಶಬ್ದ ಅಷ್ಟು ನಿರ್ದಿಷ್ಟವಾಗಿಲ್ಲ. ಇದರ ಅರ್ಥವನ್ನೇ ಕೊಡುವ ಅವಿದ್ಯೆ ಎಂಬ ಮತ್ತೊಂದು ಪದದ ಪ್ರಯೋಗವೂ ಇದೆ.
 
ನಾಮರೂಪ ಜಗತ್ತಿನ ಸೃಷ್ಟಿಕ್ರಮವನ್ನು ಉಪನಿಷತ್ತುಗಳು ಹೇಳುವಾಗ ಚೇತನ, ಅಚೇತನ ಎಂಬ ಭೇದವನ್ನು ಹೇಳಿವೆ. ಅಚೇತನ ಜಗತ್ತು ಚೇತನ ಜೀವಗಳಿಗೆ ಸಾಧನಸಾಮಗ್ರಿ ಮಾತ್ರ. ಅದು ಪಂಚಭೂತಗಳಿಂದ ಕೂಡಿದೆ. [[ಪೃಥ್ವಿ]], ಅಪ್, ತೇಜಸ್, [[ವಾಯು]], [[ಆಕಾಶ]] ಎಂಬುವೇ ಇವು. ಛಾಂದೋಗ್ಯೋಪನಿಷತ್ತಿನಲ್ಲಿ ಅಗ್ನಿ, ಜಲ, ಪೃಥ್ವಿ ಎಂಬುವು ಬ್ರಹ್ಮನಿಂದ ಕ್ರಮವಾಗಿ ಸೃಷ್ಟಿಯಾದುವೆಂದು ಹೇಳಲಾಗಿದೆ. ತೇಜಸ್ಸು, ಜಲ, ಅನ್ನಗಳೇ ಇತರ ಸಕಲ ಭೂತಜಾತಗಳಿಗೆ ಮೂಲಕಾರಣ. ಈ ಮೂರನ್ನು ಸೃಷ್ಟಿಸಿದ ಮೇಲೆ ಇದನ್ನು ಒಂದುಗೂಡಿಸಿ ಅವುಗಳೊಂದಿಗೆ ಜೀವನಸಹಿತ ಪ್ರವೇಶಿಸಿ ನಾಮರೂಪಾತ್ಮಕವಾದ ಜಗತ್ತನ್ನು ಸೃಜಿಸಲು ಬ್ರಹ್ಮ ಸಂಕಲ್ಪಿಸಿತು. ಹೀಗೆ ಜಗತ್ತಿಗೆ ಬ್ರಹ್ಮವೇ ಉಪಾದಾನಕಾರಣ, ನಿಮಿತ್ತಕಾರಣ ಎರಡೂ ಆಗಿದೆ. ಐತರೇಯ, ತೈತ್ತಿರೀಯ ಉಪನಿಷತ್ತುಗಳಲ್ಲಿಯೂ ಪರಮಾತ್ಮಸಂಕಲ್ಪದಿಂದ ಸೃಷ್ಟಿ ಯೆಂದೂ ಅದರೊಳಗೆ ಬ್ರಹ್ಮನೇ ಅಂತಃಪ್ರವೇಶ ಮಾಡಿದನೆಂದೂ ಭಾವವಿದೆ. ಕಾರಣರೂಪಿ ಯಾದ ಬ್ರಹ್ಮನನ್ನು ತಿಳಿದವ ಅದರಿಂದಾದ ಪಂಚಭೌತಿಕ ಜಗತ್ತನ್ನೂ ಅರಿಯುತ್ತಾನೆ.
 
ಬ್ರಹ್ಮಜ್ಞಾನವನ್ನು ಪಡೆಯುವ ಕ್ರಮವನ್ನು ಕುರಿತು ಪರಾವಿದ್ಯೆ, ಅಪರಾವಿದ್ಯೆಗಳ ಭೇದವನ್ನು ಹೇಳಿದೆ. ಬ್ರಹ್ಮನನ್ನು ತಿಳಿಯುವುದು ಪರಾವಿದ್ಯೆ. ನಾಮರೂಪವಾದ ಜಗತ್ತನ್ನು ತಿಳಿಯುವುದು ಅಪರಾವಿದ್ಯೆ. ಮಣ್ಣನ್ನು ತಿಳಿಯುವುದರಿಂದ ಮಣ್ಣಿನಿಂದಾದುವೆಲ್ಲವನ್ನೂ ತಿಳಿಯುವಂತೆ, ಬ್ರಹ್ಮನನ್ನು ತಿಳಿದರೆ ಎಲ್ಲವನ್ನೂ ತಿಳಿದಂತೆ, ಇದಕ್ಕಿಂತ ಹೆಚ್ಚಿನ ವಿದ್ಯೆ ಯಾವುದೂ ಇಲ್ಲ. ಹೀಗೆಂದು ಮುಂಡಕೋಪನಿಷತ್ ಹೇಳುತ್ತದೆ. ಆದರೆ ಈಶೋಪನಿಷತ್ ಬ್ರಹ್ಮನನ್ನು ಅರಿಯಲು ಸಾಧ್ಯವಿಲ್ಲವೆಂದು ಬ್ರಹ್ಮಸ್ವರೂಪವನ್ನು ಹೇಳುವಾಗ ಸೂಚಿಸುತ್ತದೆ. ‘ಚಲಿಸುತ್ತದೆ, ಚಲಿಸುವುದಿಲ್ಲ, ದೂರದಲ್ಲಿದೆ, ಸಮೀಪದಲ್ಲಿದೆ, ಒಳಗೂ ಇದೆ, ಹೊರಗೂ ಇದೆ.’ ಹೀಗೆಯೇ ಬೃಹದಾರಣ್ಯಕದಲ್ಲಿ ಅಕ್ಷರರೂಪಿಯಾದ ವಿಶ್ವಾತ್ಮನನ್ನು ಕುರಿತು `ಸ್ಥೂಲನಲ್ಲ, ಅಣುವಲ್ಲ, ಹ್ರಸ್ವನಲ್ಲ, ದೀರ್ಘನಲ್ಲ, ಅಗ್ನಿಯಂತೆ ಕೆಂಪಾಗಿಲ್ಲ, ಜಲದಂತೆ ಹರಿಯುವುದಿಲ್ಲ. ನೆರಳಲ್ಲ, ಕತ್ತಲೆಯಲ್ಲ, ವಾಯುವಾಗಲೀ ಆಕಾಶವಾಗಲೀ ಅಲ್ಲ, ಸಂಸರ್ಗವುಳ್ಳದ್ದಲ್ಲ, ರಸವಲ್ಲ, ಗಂಧವಲ್ಲ. ಅದಕ್ಕೆ ಕಣ್ಣುಗಳಿಲ್ಲ, ಅದು ಅಳತೆಗೊಳಗಾದುದಲ್ಲ, ಒಳಗಿಲ್ಲ, ಹೊರಗಿಲ್ಲ’ ಎಂಬ ವಿವರಣೆ ಇದೆ. ಕೊನೆಯಲ್ಲಿ ಅರಿಯಲ್ಪಡುವವನೂ ನೋಡುವವನೂ ಮನನಮಾಡು ವವನೂ ಅರಿಯುವವನೂ ಅದಲ್ಲದೆ ಬೇರೆಯಲ್ಲ. ಈ ಅಕ್ಷರನಲ್ಲಿ ಎಲ್ಲವೂ ಓತಪ್ರೋತವಾಗಿದೆ. ಯಾವನು ಈ ಅಕ್ಷರನನ್ನು ತಿಳಿದು, ಈ ಲೋಕವನ್ನೇ ಬಿಡುವನೋ ಅವನು ಬ್ರಹ್ಮಜ್ಞನೆನಿಸುವನು ಎಂದು ಹೇಳಿದ್ದರೂ ವಾಕ್ಕಿಗೂ ಮನಸ್ಸಿಗೂ ದೂರನಾಗಿರುವನೆಂಬ ಸೂಚನೆ ಇದೆ. ಇದು ವಾಚಕ್ನವೀಗಾರ್ಗಿಗೆ ಯಾಜ್ಞವಲ್ಕ್ಯ ಜನಕನ ಸಭೆಯಲ್ಲಿ ಮಾಡಿದ ಉಪದೇಶ. ಧನದಲ್ಲಿ ನಿರಾಸಕ್ತಳಾಗಿ, ಅಮೃತತ್ವವನ್ನು ಪಡೆಯುವ ಅಭಿಲಾಷೆಯಿಂದ ತನ್ನ ಪತ್ನಿ ಮೈತ್ರೇಯಿ ಬ್ರಹ್ಮೋಪದೇಶ ಮಾಡಬೇಕೆಂದು ಬೇಡಿದಾಗಲೂ [[ಯಾಜ್ಞವಲ್ಕ್ಯ]] ಸರ್ವಾಂತರ್ಯಾಮಿಯಾದ ಆತ್ಮನನ್ನು (ಬ್ರಹ್ಮ) ತಿಳಿಯುವುದರಿಂದ ಮಾತ್ರವೇ ಅಮೃತತ್ವವನ್ನು ಪಡೆಯಬಹುದೆಂದೂ ಅವನೊಬ್ಬನನ್ನು ತಿಳಿದರೆ ಸರ್ವವನ್ನೂ ತಿಳಿದಂತಾಗುವುದೆಂದೂ ಹೇಳುತ್ತಾನೆ. ಆದರೆ ಬ್ರಹ್ಮತತ್ತ್ವವನ್ನು ತಿಳಿಯುವುದಾಗುವುದಿಲ್ಲ. ಬ್ರಹ್ಮನ ಹೊರತು ಮತ್ತಾವುದೂ ಇಲ್ಲ ಎಂದು ತಿಳಿಯಬೇಕಾದರೆ ಬ್ರಹ್ಮತ್ವವನ್ನು ಪಡೆಯುವುದರಿಂದ ಮಾತ್ರ ಸಾಧ್ಯ ಎಂದೂ ಅಹಂ ಬ್ರಹ್ಮಾಸ್ಮಿ, ತತ್ತ್ವಮಸಿ ಎಂಬ ಜ್ಞಾನವುಂಟಾಗಬೇಕೆಂದೂ ಇದೇ ಉಪನಿಷತ್ತಿನ ಸಾರವೆಂದೂ ಶಂಕರಾಚಾರ್ಯರು ಪ್ರತಿಪಾದಿಸುತ್ತಾರೆ. ಅವರ ವೇದಾಂತಸೂತ್ರಭಾಷ್ಯದಲ್ಲಿ ಬಾಷ್ಕಲಿ ಎಂಬ ಶಿಷ್ಯ ಬಾಧ್ವ ಎಂಬ ಗುರುವಿನಲ್ಲಿ ಬ್ರಹ್ಮಜ್ಞಾನವನ್ನು ಉಪದೇಶಿಸಬೇಕೆಂದು ಕೋರಿದ ಸಂದರ್ಭದಲ್ಲಿ ಮೂರನೆಯ ಸಲ ಕೇಳಿದಾಗಲೂ ಮೌನವಾಗಿದ್ದ ಗುರು ‘ಉಪಶಾಂತೋಯಂ ಆತ್ಮಾ’ ಎಂದು ಕೊನೆಯಲ್ಲಿ ಉಪದೇಶಿಸಿದುದನ್ನು ಉದಾಹರಿಸಿದ್ದಾರೆ. ಬ್ರಹ್ಮನನ್ನು ವರ್ಣಿಸಲು ಸಾಧ್ಯವಿಲ್ಲ, ಬ್ರಹ್ಮನನ್ನು ಅರಿತವ ಬ್ರಹ್ಮನಾಗುತ್ತಾನೆ-ಎಂಬುದೇ ಸಾರಾಂಶ. ಬೃಹದಾರಣ್ಯಕ ‘ನೇತಿ, ನೇತಿ’ ಎಂದು ಬ್ರಹ್ಮಸ್ವರೂಪವನ್ನು ತಿಳಿಸಲೆತ್ನಿಸಿದೆ.
 
[[ಜ್ಞಾನಮಾರ್ಗ]]ವನ್ನಷ್ಟೇ ಅಲ್ಲದೆ, ಉಪನಿಷತ್ತುಗಳು ಭಕ್ತಿ ಮತ್ತು [[ಕರ್ಮಮಾರ್ಗ]]ಗಳನ್ನೂ ಅನುಮೋದಿಸಿವೆ. ಜಾಗ್ರತ್, ಸ್ವಪ್ನ, ಸುಷುಪ್ತಿ, ತುರೀಯ ಎಂಬ ನಾಲ್ಕು ಅವಸ್ಥೆಗಳಲ್ಲಿ ನಾಲ್ಕನೆಯದರಲ್ಲಿ ಯೋಗಶಕ್ತಿಯಿಂದ [[ಬ್ರಹ್ಮಜ್ಞಾನ]] ಉಂಟಾಗುತ್ತದೆ ಎಂದು ಉಪನಿಷತ್ತುಗಳಲ್ಲಿ ಹೇಳಲಾಗಿದೆ. ಆದರೂ ಈ ಜ್ಞಾನಮಾರ್ಗದಲ್ಲಿ ಕರ್ಮಕ್ಕೂ ಭಕ್ತಿಗೂ ಅವಕಾಶವನ್ನು ಕಲ್ಪಿಸಲಾಗಿದೆ. ತೈತ್ತಿರೀಯೋಪನಿಷತ್ತಿನಲ್ಲಿ ಸತ್ಯನಿಷ್ಠೆ, ತಪಸ್ಸು, ವೇದಾಧ್ಯಯನಗಳಿಂದ ಅಮೃತತ್ವವುಂಟಾಗುತ್ತದೆ ಎಂದು ಹೇಳಲಾಗಿದೆ. ಅಹಂಕಾರನಿವೃತ್ತಿಯಾದಾಗಲೇ ಬ್ರಹ್ಮಜ್ಞಾನ ಪ್ರಾಪ್ತಿ. [[ಬ್ರಹ್ಮಚರ್ಯ]], ಗೃಹಸ್ಥ, [[ವಾನಪ್ರಸ್ಥ]] ಎಂಬ ಮೂರು ಆಶ್ರಮಗಳಲ್ಲಿದ್ದು ಮಾನವ ಸರ್ವಸಂಗ ಪರಿತ್ಯಾಗ ಭಾವನೆಯಿಂದ ವೈರಾಗ್ಯವನ್ನು ಅಭ್ಯಾಸ ಮಾಡಿದರೆ ಸಂನ್ಯಾಸಾಶ್ರಮ, ಅದರೊಂದಿಗೆ ಬ್ರಹ್ಮಜ್ಞಾನ ಪ್ರಾಪ್ತಿಯಾಗುತ್ತವೆ ಎಂದು ತಿಳಿಸಲಾಗಿದೆ. ಹೀಗೆ ಮೋಕ್ಷಕ್ಕೆ ಅಂದರೆ ಬ್ರಹ್ಮಸಾಕ್ಷಾತ್ಕಾರಕ್ಕೆ ಪೂರ್ವಭಾವಿಯಾಗಿ ಸಾಧನೆಯೂ ಅಗತ್ಯ. ಬೃಹದಾರಣ್ಯಕದಲ್ಲಿ ಪ್ರಜಾಪತಿಯ ಮಕ್ಕಳನ್ನು ದೇವ, ಮನುಷ್ಯ, ಅಸುರ ಎಂದು ವರ್ಗೀಕರಿಸಿ ಅವರಿಗೆ ಪ್ರಜಾಪತಿ ಕರ್ತವ್ಯವನ್ನು ವಿಧಿಸುವಾಗ ಅಸುರರಿಗೆ ದಯಧ್ವಂ ಎಂದೂ ಮನುಷ್ಯರಿಗೆ ದತ್ತ ಎಂದೂ ದೇವತೆಗಳಿಗೆ ದಾಮ್ಯತ ಎಂದೂ ವಿಧಿಸಿರುವ ಸಂಗತಿ ಇದೆ. ಅಂದರೆ ಮಾನವರು ಸಮಾಜದಲ್ಲಿ ಪರಹಿತವನ್ನು ಆಚರಿಸತಕ್ಕದ್ದು, ಲೋಕವನ್ನು ತ್ಯಜಿಸಿ ಒಂಟಿಯಾಗಿದ್ದರೆ ಮಾತ್ರ ಮೋಕ್ಷಪ್ರಾಪ್ತಿಯಲ್ಲ ಎಂಬುದೇ ಸಾರಾಂಶ.
 
ವೈರಾಗ್ಯ ಮಾನವನನ್ನು ಜ್ಞಾನಕ್ಕೆ ಒಯ್ಯುತ್ತದೆ. ಜ್ಞಾನಮಾರ್ಗದಲ್ಲಿ ಶ್ರವಣ, ಮನನ, ನಿಧಿಧ್ಯಾಸನ ಎಂಬ ಮೂರು ವಿಧವಾದ ಸಾಧನೆ ಇದೆ. ಮೊದಲನೆಯದಾಗಿ ಉಪನಿಷತ್ತುಗಳನ್ನು ಸರಿಯಾದ ಗುರುವಿನಲ್ಲಿ ಅಧ್ಯಯನ ಮಾಡುವುದು ಶ್ರವಣ. ಬ್ರಹ್ಮಜ್ಞಾನಿಯಾದ ಗುರುವಿನ ಸಂಗದಿಂದಲೇ ಜ್ಞಾನ ಪ್ರಾಪ್ತಿಯಾಗಬೇಕಾದರೆ. ಶ್ರವಣ ಮಾತ್ರ ಸಾಲದು. ಪದೇ ಪದೇ ಕೇಳಿದುದನ್ನು ಮನನ ಮಾಡಿ ಮಂದಟ್ಟು ಮಾಡಿಕೊಳ್ಳಬೇಕು. ಅನಂತರ ನಿಧಿಧ್ಯಾಸನದಿಂದ ಜಗತ್ತಿನ ಏಕೈಕ ಸತ್ಯವನ್ನು ಕಂಡುಕೊಳ್ಳಬೇಕು. ನಿಧಿಧ್ಯಾಸನವೆಂಬ ಸಾಧನೆಯಲ್ಲಿ ಉಪಾಸನೆ ಗಳಿವೆ. ಈ ಉಪಾಸನೆಗಳು ಬ್ರಾಹ್ಮಣಗಳಲ್ಲಿ ಹೇಳಿರುವ ಯಜ್ಞಯಾಗಾದಿಗಳಂತೆ ಪ್ರಾಧಾನ್ಯವನ್ನು ಪಡೆದಿವೆ. ಬ್ರಹ್ಮಜ್ಞಾನಿಯಾಗಲು ಸಾಮಾನ್ಯ ಮನುಷ್ಯನಿಗೆ ಸಾಧ್ಯವಿಲ್ಲವೆಂತಲೂ ಅಂಥವನು ಅತ್ಯಂತ ವಿರಳನೆಂದೂ ಕಠೋಪನಿಷತ್ತಿನಲ್ಲಿ ಹೇಳಲಾಗಿದೆ. ಸರ್ವಶಕ್ತನಾದ ಪರಬ್ರಹ್ಮ ನಿರ್ಗುಣನಂತೆ ನಿರೂಪಿತನಾಗಿದ್ದರೂ ಅವನು ದಯಾಮಯ ನೆಂದೂ ಸಂಸಾರ (ಜನ್ಮ, ಮೃತ್ಯು) ಬಂಧನದಿಂದ ನಮ್ಮನ್ನು ಬಿಡುಗಡೆ ಮಾಡುವವನೆಂದೂ ತಿಳಿಸಿ 32 ಉಪಾಸನೆಗಳನ್ನು ಹೇಳಿದೆ. ಅದರಲ್ಲಿ ಶರಣಾಗತಿ ಎಂಬುದನ್ನು ಸೇರಿಸಲಾಗಿದೆ.
 
ಮುಮುಕ್ಷುರ್ವೈ ಶರಣಮಹಂ ಪ್ರಪದ್ಯೇ-ಎಂಬುದನ್ನು ಶ್ವೇತಾಶ್ವತರೋಪನಿಷತ್ತಿನಲ್ಲಿ ಹೇಳಿದೆ. ಆದ್ದರಿಂದ ದಯಾಮಯನಾದ ಭಗವಂತನನ್ನು ಭಜಿಸುವ ಭಕ್ತಿಗೂ ಉಪನಿಷತ್ತುಗಳಲ್ಲಿ ಪ್ರಶಂಸೆ ಇದೆ. ಆತ್ಮ ಮತ್ತು ಜೀವಾತ್ಮ: ಉಪನಿಷತ್ತುಗಳು ಮೊದಮೊದಲು ಆತ್ಮನಿಗೂ ಬ್ರಹ್ಮನಿಗೂ ಭೇದವನ್ನು ಹೇಳುವಂತೆ ತೋರುತ್ತವೆ. ಆತ್ಮ ಎಂದರೆ ಚೇತನದಲ್ಲಿರುವ ಪರತತ್ತ್ವ, ಬ್ರಹ್ಮ ಎಂದರೆ ಜಗತ್ತಿನಲ್ಲಿರುವ ಪರತತ್ತ್ವ ಎಂಬ ಭಾವನೆ ಇದೆ. ಅವಿನಾಶಿಯಾದ ಚೇತನ ಅಥವಾ ಪ್ರಾಣವೇ ಆತ್ಮ. ಮಾನವನಲ್ಲಿ ಇರುವ ಅಂತಸ್ಸತ್ತ್ವ ಯಾವುದು ? ದೇಹ ನಾಶವಾದಾಗ ಅವನು ಏನಾಗುತ್ತಾನೆ? ಎಂಬ ಪ್ರಶ್ನೆಗಳನ್ನು ಉಪನಿಷತ್ತುಗಳು ಕೇಳಿವೆ. ಆತ್ಮ ಎಂದರೆ ಮಾನವನ ಅಂತಸ್ಸತ್ತ್ವ: ನಾಶವಾಗದೆ ಉಳಿಯುವ ಸತ್ಯ. ಅದರಂತೆ ಜಗತ್ತಿಗೆ ಅಂತಸ್ಸತ್ತ್ವ ಬ್ರಹ್ಮ. ಈ ಎರಡು ಅಂತಸ್ಸತ್ತ್ವಗಳೂ ಒಂದೇ ಎಂಬ ತತ್ತ್ವ ಕ್ರಮೇಣ ಬೆಳೆಯಿತು. ಆತ್ಮ ಮತ್ತು ಬ್ರಹ್ಮ ಶಬ್ದಗಳನ್ನು ಒಂದೇ ಅರ್ಥದಲ್ಲಿ ಪ್ರಯೋಗಿಸಲಾಗಿದೆ. ತನ್ನಲ್ಲಿರುವ ಸತ್ಯ ಯಾವುದು ? ಜಗತ್ತಿನಲ್ಲಿ ಯಾವ ಸತ್ಯವಿದೆ ? ಎಂದು ಮಾನವ ಒಳಗೂ ಹೊರಗೂ ಶೋಧನೆ ಮಾಡಲು ಯತ್ನಿಸಿ ಕೊನೆಗೆ ಏಕೈಕ ಸತ್ಯವೇ ತನಗೂ ಜಗತ್ತಿಗೂ ಕಾರಣವಾಗಿದೆ ಎಂದು ತತ್ತ್ವವನ್ನು ಕಂಡುಕೊಂಡನೆಂದು ಉಪನಿಷತ್ತುಗಳು ಹೇಳಿವೆ. ಒಳಗೂ ಹೊರಗೂ ಬ್ರಹ್ಮವೊಂದೇ ಇರುವುದು. ಉಳಿದುದೆಲ್ಲ ಅಸತ್ಯ, ಅನಿತ್ಯ-ಎಂಬುದೇ ಸಾರಾಂಶ. ದೇಹಕ್ಕೂ ಆತ್ಮಕ್ಕೂ ಯಾವ ಸಂಬಂಧವಿದೆಯೋ ಅದೇ ಜಗತ್ತಿಗೂ ಬ್ರಹ್ಮನಿಗೂ ಇರುವ ಸಂಬಂಧ ವೆಂದೂ ತಿಳಿಸಲಾಗಿದೆ. ಆತ್ಮನಿಗೂ ಬ್ರಹ್ಮನಿಗೂ ಸಮನ್ವಯ ಮಾಡಿ `ಸತ್ಯಂ ಜ್ಞಾನಂ ಅನಂತಂ’ ಆಗಿರುವ ಪರವನ್ನು ನಿರ್ದೇಶಿಸಲಾಗಿದೆ. ಜೀವಾತ್ಮನ ಸ್ವರೂಪವನ್ನು ಹೇಳುವಾಗ ಕಠೋಪನಿಷತ್ತಿನಲ್ಲಿ ಶರೀರವೆಂಬ ವೃಕ್ಷದಲ್ಲಿ ಜೀವ ಈಶ್ವರನೊಡನೆ ವಾಸಿಸುತ್ತಾನೆಂದೂ ಈಶ್ವರನನ್ನು ಕಾಣುವವರೆಗೂ ಮೋಹದಿಂದ ದೇಹವೇ ತಾನೆಂದು ಭ್ರಮಿಸಿ ತನ್ನ ಅಸಹಾಯಕತೆಗೂ ದುಃಖಸ್ಥಿತಿಗೂ ಶೋಕಿಸುತ್ತಾನೆಂದೂ ಆದರೆ ನಿತ್ಯನೂ ಜನನ ಮರಣ ರಹಿತನೂ ಆದ ಆತ್ಮನ ಸ್ವರೂಪವನ್ನು ಅರಿತಾಗ ಅವನ ಶೋಕಗಳು ಕಳೆದುಹೋಗುವುವೆಂದೂ ಹೇಳಿದೆ. ಜೀವಾತ್ಮನ ಸ್ವರೂಪವನ್ನು ಹೇಳುವಾಗ ಪ್ರಜಾಪತಿ ಛಾಂದೋಗ್ಯೋಪನಿಷತ್ತಿನಲ್ಲಿ ಉಪದೇಶಿಸಿದ್ದು ಹೀಗಿದೆ: ಇದನ್ನು ನೋಡುವೆನು, ತಿಳಿಯುವೆನು ಎಂದು ಯಾರು ತಿಳಿಯುವನೋ ಅವನೇ ಆತ್ಮ. ಅಮೃತಸ್ವರೂಪಿಯೂ ಅಶರೀರಿಯೂ ಆದ ಆತ್ಮನಿಗೆ ಅವನ ಕರ್ಮಾನುಗುಣವಾಗಿ ಈ ದೇಹ ವಾಸಸ್ಥಾನವಾಗುವುದು. ದೇಹಸಂಬಂಧದಿಂದ ಪ್ರಿಯ ಅಪ್ರಿಯಗಳಿಂದ ಆವೃತವಾಗುವ ಆತ್ಮನಿಗೆ ದೇಹವಿರುವವರೆಗೂ ಸುಖದುಃಖಗಳು ತಪ್ಪುವುದಿಲ್ಲ.
 
ಜಗತ್ತಿನ ಚೇತನಾಚೇತನ ವಸ್ತುಗಳಲ್ಲಿ ಸೂತ್ರದಂತೆ ಒಂದಾಗಿರುವ ಬ್ರಹ್ಮವಸ್ತು ಅಸಂಖ್ಯಾತ ಜೀವರನ್ನು ಸೃಷ್ಟಿಸಿ ಜೀವಾತ್ಮನೂ ಆಗಿದೆ. ಇವರನ್ನು ಸೃಷ್ಟಿಸುವಾಗ ಅವರವರ ಕರ್ಮಾನುಸಾರವಾದ ಜನ್ಮಪ್ರಾಪ್ತಿಯಾಗುತ್ತದೆ. ಅನಾದಿಯಾದ ಅವಿದ್ಯೆಯೇ ಅವರ ಪುಣ್ಯಪಾಪರೂಪವಾದ ಕರ್ಮಕ್ಕೆ ಕಾರಣ. ಶರೀರದಲ್ಲಿ ವಾಸಿಸುವುದರಿಂದ ಜೀವಾತ್ಮನಿಗೆ ಪುರುಷ (ಪುರೀಶಯಃ) ಎಂದು ನಿರ್ದೇಶ. ಪಂಚಭೂತಗಳಿಂದ ಉತ್ಪನ್ನವಾಗಿರುವ ಶರೀರೇಂದ್ರಿಯಗಳಿಗೆ ಸಂಬಂಧಿಸಿರುವ ಸೋಪಾಧಿಕ ಬ್ರಹ್ಮನಿಗೆ ಮೂರ್ತ, ಮತರ್ಯ್‌, ಪರಿಚ್ಛಿನ್ನ, ಸರ್ತ ಎಂಬ ರೂಪವುಂಟು. ಇದಕ್ಕೆ ವಿರೋಧವಾದ ಅಜವೂ ಅಜರವೂ ಅಮೃತವೂ ಅಭಯವೂ ಆಗಿ ಅದ್ವೈತವಾಗಿರುವ ಬ್ರಹ್ಮನನ್ನು ನೇತಿ ನೇತಿ ಎಂದು ನಿರ್ದೇಶಿಸಲಾಗಿದೆ. ಆದರೆ ಶರೀರಗಳನ್ನು ಪ್ರವೇಶಿಸಿದ ಪರಮಾತ್ಮ ಜೀವಾತ್ಮನಂತೆ ಕಾಣುತ್ತಾನೆಯೇ ಹೊರತು ಬ್ರಹ್ಮ ಜೀವಾತ್ಮನಿಂದ ಭಿನ್ನವಾಗಿಲ್ಲ. ಜೀವಾತ್ಮ ಸತ್ಯ, ಬ್ರಹ್ಮ ಸತ್ಯದ ಸತ್ಯ. ಪ್ರಾಣ, ಇಂದ್ರಿಯ, ಮನಸ್ಸು ಜೀವಾತ್ಮನಿಗೋಸ್ಕರವಾಗಿಯೇ ಜೀವನಿಗೆ ಅಧೀನವಾಗಿವೆ. ಸುಷುಪ್ತಿಯಲ್ಲಿ ಆತ್ಮ ಬ್ರಾಹ್ಮೀಸ್ಥಿತಿಯಲ್ಲಿ, ತನ್ನ ಪರಮಪದದಲ್ಲಿ ಪರಮ ಸಂಪತ್ತಿನಿಂದ ಕೂಡಿ ಪರಮಾನಂದದಿಂದಿರುತ್ತಾನೆ. ಇದೇ ಅವನ ಸ್ವಾಭಾವಿಕ ಸ್ಥಿತಿ, ಇತರ ಸಂಪತ್ತುಗಳೆಲ್ಲ ಕೃತಕ. ಜಾಗ್ರದವಸ್ಥೆಯಲ್ಲಿ ಅಹಂಕಾರದಿಂದ ಆವೃತನಾಗುತ್ತಾನೆ. ಬ್ರಹ್ಮನಿಂದ ತಾನು ಭಿನ್ನವೆಂದು ಭ್ರಮಿಸುತ್ತಾನೆ. ಸರ್ವವೂ ಆತ್ಮನೆಂದು (ಬ್ರಹ್ಮನೆಂದು) ಅರಿಯದೆ ಎಲ್ಲವನ್ನೂ ಆತ್ಮನಿಗಿಂತ ಭಿನ್ನವೆಂದು ಅರಿಯುವವನನ್ನು ಎಲ್ಲವೂ ನಿರಾಕರಿಸುವುವು. ಅಸಂಗನೂ ನಿರಾಸಕ್ತನೂ ಬಂಧರಹಿತನೂ ಶೋಕರಹಿತನೂ ಆದ ಆತ್ಮನಿಗಾಗಿಯೇ ಅಂದರೆ ಆತ್ಮನ ಪ್ರಯೋಜನಕ್ಕಾಗಿಯೇ ಎಲ್ಲವೂ ಪ್ರಿಯವಾಗಿರುತ್ತದೆ. ಎಲ್ಲದರ ಪ್ರಯೋಜನ ಕ್ಕಾಗಿ ಎಲ್ಲವೂ ಪ್ರಿಯವಾಗಿರುವುದಿಲ್ಲ. ಆದ್ದರಿಂದ ಆತ್ಮನನ್ನೇ ಕೇಳಬೇಕು, ಮನನ ಮಾಡಬೇಕು. ನಿಧಿಧ್ಯಾಸನ ಮಾಡಿ ಆತ್ಮಸಾಕ್ಷಾತ್ಕಾರ-ಅಂದರೆ ಬ್ರಹ್ಮಸಾಕ್ಷಾತ್ಕಾರ ಹೊಂದಬೇಕು.
 
ಕರ್ಮಸಿದ್ಧಾಂತವನ್ನೂ ಉಪನಿಷತ್ತುಗಳಲ್ಲಿ ನಿರೂಪಿಸಲಾಗಿದೆ. ಜನನಮರಣ ಪರಂಪರೆಗಳಿಗೆ ಜೀವಾತ್ಮನ ಕರ್ಮವೇ ಕಾರಣ. ಜೀವರುಗಳು ಅವರವರ ಪುಣ್ಯ ಪಾಪಾನುಸಾರವಾದ ಪುನರ್ಜನ್ಮಗಳನ್ನು ಪಡೆಯುತ್ತಾರೆ. ಭಗವಂತ ನಿಷ್ಪಕ್ಷಪಾತಿ. ಪುಣ್ಯಪಾಪ ಫಲಗಳ ನಿಯಾಮಕ. ಆದ್ದರಿಂದ ಕರ್ಮವನ್ನು ಮಾಡುವುದಕ್ಕೆ ಮಾತ್ರ ಜೀವ ಅಧಿಕಾರಿ, ಫಲವನ್ನು ಕೊಡುವವ ಪರಮಾತ್ಮ. ಆದ್ದರಿಂದ ಕರ್ಮವನ್ನು ನಿಷ್ಕಾಮಬುದ್ಧಿಯಿಂದ ಮಾಡಬೇಕು. ಆತ್ಮರು ಅನಾದಿಯಾದ ಅವಿದ್ಯೆಯ ಸಂಬಂಧದಿಂದ ತಮ್ಮ ನಿಜಸ್ವರೂಪವನ್ನರಿ ಯದೆ ಕರ್ಮಬಂಧನಕ್ಕೂ ಅದರಿಂದ ಸಂಸಾರಕ್ಕೂ ಸಿಕ್ಕಿ ನರಳುತ್ತಾರೆ-ಎಂದು ಉಪನಿಷತ್ ಗಳು ಹೇಳಿವೆ. ಐಹಿಕ ಸುಖಗಳು ಪ್ರೇಯವೇ ವಿನಾ ಶ್ರೇಯವಲ್ಲ. ನಿರತಿಶಯವಾದ ಆನಂದವನ್ನೂ ಪಡೆಯುವುದು ಬ್ರಹ್ಮಸಾಕ್ಷಾತ್ಕಾರದಿಂದ ಮಾತ್ರ. ಆನಂದಂ ಬ್ರಹ್ಮಣೋ ವಿದ್ವಾನ್ ನಬಿಭೇತಿ ಕದಾಚನೇತಿ.
 
ಜನ್ಮಕಾರಣವನ್ನಷ್ಟೇ ಹೇಳದೆ ಜನಿಸುವ ಬಗೆಯನ್ನು ಬೃಹದಾರಣ್ಯಕ ಪಂಚಾಗ್ನಿ ವಿದ್ಯೆಯಲ್ಲಿ ಹೇಳಿದೆ. ಪಾಂಚಾಲ ರಾಜನಾದ ಜೈಬಲಿ ಆರುಣಿಗೂ ಅವನ ಮಗ ಶ್ವೇತಕೇತು ವಿಗೂ ಈ ವಿದ್ಯೆಯನ್ನು ಉಪದೇಶಿಸುತ್ತಾನೆ. ಮೃತರಾದ ಮೇಲೆ ಜೀವರು ಯಾವ ಯಾನದಲ್ಲಿ ಹೋಗಿ ಯಾವ ರೀತಿ ಪುನಃ ಭೂಲೋಕಕ್ಕೆ ಹಿಂತಿರುಗುತ್ತಾರೆ ಎಂದು ವಿವರಿಸಲಾಗಿದೆ. ಬ್ರಹ್ಮಜ್ಞಾನಿಗಳು ದೇವಯಾನದಲ್ಲಿ ಪ್ರಯಾಣ ಮಾಡಿ ಬ್ರಹ್ಮಲೋಕಕ್ಕೆ ಹೋಗಿ ಸೇರುವರು. ಪುನಃ ಸಂಸಾರಕ್ಕೆ ಹಿಂತಿರುಗುವುದಿಲ್ಲ. ಬ್ರಹ್ಮೋಪಾಸನೆಯನ್ನು ಮಾಡದೆ, ಯಜ್ಞದಾನಾದಿಗಳಲ್ಲಿ ನಿರತರಾಗಿ ಕರ್ಮ ಮಾಡುವವರು ಪಿತೃಯಾನವೆಂಬ ಧೂಮಮಾರ್ಗದಲ್ಲಿ ಚಲಿಸಿ ಕರ್ಮಫಲಕ್ಷಯವಾದ ಮೇಲೆ ಭೂಮಿಗೆ ಹಿಂತಿರುಗುವರು. ಇದೇ ಪುನರ್ಜನ್ಮ ಸಿದ್ಧಾಂತ.
 
ದುಃಖಕರವಾದ ಸಂಸಾರಚಕ್ರದಿಂದ ಬಿಡುಗಡೆ ಹೊಂದುವುದೇ ಮೋಕ್ಷ. ಮೋಕ್ಷೋಪಾಯವಾಗುವುದು? ಎಂಬ ಪ್ರಶ್ನೆಯನ್ನು ಉಪನಿಷತ್ತುಗಳಲ್ಲಿ ಪುನಃ ಪುನಃ ವಿಮರ್ಶಿಸಲಾಗಿದೆ. ಪರಿಶುದ್ಧವಾದ ನಡತೆ, ಇಂದ್ರಿಯನಿಗ್ರಹ, ಆತ್ಮಶುದ್ಧಿ ಅತ್ಯಾವಶ್ಯಕವೆಂದೂ ಬ್ರಹ್ಮಸಾಕ್ಷಾತ್ಕಾರವೇ ಮಾನವನ ಗುರಿಯೆಂದೂ ಉಪನಿಷತ್ತುಗಳ ಉತ್ತರ. ನಿಜವಾದ ಯೋಗಿಯನ್ನು ಶಾಂತ, ದಾಂತ, ತಿತಿಕ್ಷು, ಉಪರತ, ಸಮಾಹಿತ ಎಂದು ವರ್ಣಿಸುತ್ತವೆ. ಮುಕ್ತರಾದವರು ನದಿಗಳು ಸಾಗರವನ್ನು ಸೇರುವಂತೆ, ನಾಮರೂಪಗಳನ್ನು ಕಳೆದುಕೊಂಡು ಸರ್ವಾತ್ಮಗಳನ್ನು ಸೇರುವರು. ಮೋಕ್ಷ ಆತ್ಮನಾಶವಲ್ಲ. ಅನಾದಿಯಾಗಿದ್ದ ಕರ್ಮಲೇಪ ಪುರ್ತಿಯಾಗಿ ತೊಳೆದು ಹೋಗಿ ಆತ್ಮ ಸ್ವರೂಪಾವಿರ್ಭಾವದಿಂದ, ಪೂರ್ಣವಿಕಾಸವಾದ ಜ್ಞಾನದಿಂದ ಪ್ರಜ್ವಲಿಸುತ್ತ ನಿರತಿಶಯವಾದ ಆನಂದವನ್ನು ಅನುಭವಿಸುವುದೇ ಮೋಕ್ಷ. ಕೆಲವು ಉಪನಿಷತ್ತುಗಳು ಮುಕ್ತರು ಪರಮಾತ್ಮನಿಗೆ ಸಮರಾಗುವರೆಂದೂ ಮತ್ತೆ ಕೆಲವು ಪರಮಾತ್ಮನೊಡನೆ ಸೇರಿಹೋಗುವವೆಂದೂ ಹೇಳಿವೆ. ಇನ್ನು ಕೆಲವು ಮಂತ್ರಗಳು ಜೀವ ಪರಮರಿಗೆ ಭೇದ ಮತ್ತು ಐಕ್ಯ ಎರಡನ್ನೂ ಹೇಳುವ ಘಟಕಶ್ರುತಿಗಳಾಗಿವೆ.
 
ಅಭೇದ ಶ್ರುತಿಗಳು [[ಅದ್ವೈತ]] ದರ್ಶನಕ್ಕೂ ಭೇದಶ್ರುತಿಗಳು ಭೇದದರ್ಶನಕ್ಕೂ ಆಧಾರವಾಗಿವೆ. ಭೇದಾಭೇದ ದರ್ಶನಗಳು ಎರಡು ವಿಧವಾದ ಶ್ರುತಿಗಳನ್ನೂ ಸ್ವೀಕರಿಸುತ್ತವೆ. ಸಗುಣ ಬ್ರಹ್ಮನನ್ನು ಕೆಲವು ಉಪನಿಷತ್ತುಗಳೂ ನಿರ್ಗುಣ ಬ್ರಹ್ಮವನ್ನು ಮತ್ತೆ ಕೆಲವೂ ಪ್ರತಿಪಾದಿಸುತ್ತವೆ, ಸಗುಣ ಶ್ರುತಿಗಳಿಗೆ ಪ್ರಾಧಾನ್ಯ ಕೊಡುವ ದರ್ಶನಗಳು ನಿರ್ಗುಣ ಶ್ರುತಿಗಳಿಗೆ ಹೇಯಗುಣರಾಹಿತ್ಯವೆಂದು ವಿವರಣೆ ಕೊಡುತ್ತವೆ. ನಿರ್ಗುಣ ಶ್ರುತಿಗಳಿಗೇ ಪ್ರಾಧಾನ್ಯ ಕೊಡುವ ದರ್ಶನಗಳು ಸಗುಣ ಶ್ರುತಿಗಳೇ ಪರಮಾಧಾರವೆಂದೂ ಹೇಳುತ್ತವೆ. ಹೀಗೆ ಉಪನಿಷತ್ತುಗಳು ಸರ್ವ ದರ್ಶನಗಳಿಗೂ ಪರಮಾಧಾರವಾಗಿಯೂ ರಹಸ್ಯವಾದ ಜ್ಞಾನಪ್ರಚೋದಕವಾಗಿಯೂ ಮಾನವ ಕೋಟಿಯ ಉದ್ಧಾರದ ಅಮೃತಧಾರೆಯಾಗಿಯೂ ಇವೆ.
 
== ಉಪನಿಷದ್‌ಗಳ ಪಟ್ಟಿ ==
Line ೨೫೪ ⟶ ೨೮೨:
* [http://sanskrit.gde.to/doc_upanishhat/ Upanishads at Sanskrit Documents Site]
* [http://www.celextel.org/108upanishads/ Complete translation on-line into English of all 108 Upaniṣad-s]
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಉಪನಿಷತ್ತುಗಳು}}
 
[[ವರ್ಗ:ಉಪನಿಷತ್‌ಗಳು]]
[[ವರ್ಗ:ಸಂಸ್ಕೃತ ಪದಗಳು ಮತ್ತು ವಾಕ್ಯಗಳು]]
"https://kn.wikipedia.org/wiki/ಉಪನಿಷತ್" ಇಂದ ಪಡೆಯಲ್ಪಟ್ಟಿದೆ