ಮುರಿಗೆಪ್ಪ ಚನ್ನವೀರಪ್ಪ ಮೋದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
some more copyedit
೮ ನೇ ಸಾಲು:
ಮುರಿಗೆಪ್ಪ ಚನ್ನವೀರಪ್ಪ ಮೋದಿಯವರ ಜನ್ಮ [[ಅಕ್ಟೋಬರ್ ೦೪]] [[೧೯೧೬]]ರಲ್ಲಿ [[ಬಾಗಲಕೋಟೆ]]ಯ ಬೀಳಗಿ ಗ್ರಾಮದಲ್ಲಾಯಿತು. ಮೋದಿಯವರು ಜಮಖಂಡಿಯ ಪಿ ಬಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ನಂತರ [[ಬೆಳಗಾವಿ]] ಆಯುರ್ವೇದ ಕಾಲೇಜಿನಲ್ಲಿ ಓದಿ ಕೆಬಿ‌ಎಚ್‌ಬಿ ಕಣ್ಣಿನ ಆಸ್ಪತ್ರೆ ಹಾಗೂ ರಾಮವಾಡಿ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ಶಿಕ್ಷಣ ಪಡೆದರು. ಬಡತನದ ನಡುವೆಯೂ ವಿದ್ಯಾರ್ಜನೆ ಮುಂದುವರೆಸಿದ ಮೋದಿಯವರು [[ಕೊಲಂಬಿಯಾ]] ಮತ್ತು [[ನ್ಯೂಯಾರ್ಕ್]] [[ವಿಶ್ವವಿದ್ಯಾಲಯ|ವಿಶ್ವವಿದ್ಯಾಲಯಗಳಲ್ಲಿ ]][[ಸ್ನಾತಕೋತ್ತರ]] ಪದವಿಗಳಿಸಿದರು. [[ಬೆಳಗಾವಿ|ಬೆಳಗಾವಿಯಲ್ಲಿ]] ತಮ್ಮ ವೃತ್ತಿ ಜೀವನ ಆರಂಭಿಸಿ ನಂತರ [[ದಾವಣಗೆರೆ|ದಾವಣಗೆರೆಯಲ್ಲಿ]] ನೆಲೆಸಿದರು. ೧೯೪೨ರಲ್ಲಿ [[ಕ್ವಿಟ್ ಇಂಡಿಯಾ ಚಳುವಳಿ|ಕ್ವಿಟ್ ಇಂಡಿಯಾ ಚಳುವಳಿಯ]] ಸಮಯದಲ್ಲಿ [[ಮಹಾತ್ಮ ಗಾಂಧಿ|ಮಹಾತ್ಮ ಗಾಂಧಿಯವರ]] ಭಾಷಣದಿಂದ ಪ್ರೇರಿತರಾಗಿ ಕೆಲವೆ ಸ್ವಯಂಸೇವಕರ ಜತೆ ಹಳ್ಳಿಗಳಿಗೆ ಹೋಗಿ ರೋಗಿಗಳಿಂದ ಹಣ ಪಡೆಯದೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುತ್ತಿದ್ದರು. [[ಕರ್ನಾಟಕ]], [[ಆಂಧ್ರ ಪ್ರದೇಶ]], [[ತಮಿಳುನಾಡು]], [[ಮಹಾರಾಷ್ಟ್ರ]] ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಮಾಡುತ್ತಿದ್ದರು. [[ಕಣ್ಣಿನ ಪೊರೆ]] (ಕ್ಯಟರಾಕ್ಟ್) ತೆಗೆಯುವ ಶಸ್ತ್ರ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದ್ದ ಡಾ.ಮೋದಿಯವರು ಪ್ರತಿ ಗ್ರಾಮದಲ್ಲೂ ಶಾಲೆ, ಕಾಲೇಜುಗಳನ್ನು ತೆಗೆದುಕೊಂಡು ಅದನ್ನೇ ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸಿ ಸತತವಾಗಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರು. ರಷ್ಯಾ ಮತ್ತು ಅಮೇರಿಕ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲೂ ಸಹ ತಮ್ಮ ಸೇವೆ ಸಲ್ಲಿಸಿ ಗೌರವಗಳಿಗೆ ಪಾತ್ರರಾಗಿದ್ದರು. [[ದಾವಣಗೆರೆ]],[[ಬೆಂಗಳೂರು]] ಮತ್ತು [[ಬೆಳಗಾವಿ]]ಗಳಲ್ಲಿ ಕಣ್ಣು ಚಿಕಿತ್ಸಾಲಯಗಳನ್ನು ಸ್ಥಾಪಿಸಿದ ಶ್ರೀಯುತರು ತಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಸೇವೆ ಒದಗಿಸುತ್ತಿದ್ದರು. ಸಾಮೂಹಿಕ ನೇತ್ರ ಚಿಕಿತ್ಸೆ ಹಾಗೂ ಸಂಚಾರಿ ಘಟಕವನ್ನು ತೆರೆದ ಮೊದಲ ವೈದ್ಯ ಎಂಬ ಖ್ಯಾತಿಯನ್ನು ಗಳಿಸಿದ್ದ ಮೋದಿಯವರು ತಮ್ಮ ಸ್ವಂತ ಹಣವನ್ನು ವ್ಯಯಿಸಿ ಬಡಜನರ ಸೇವೆ ಮಾಡುತ್ತಿದ್ದರು.
 
==ಗಿನ್ನಿಸ್ ದಾಖಲೆ==
==ಡಾ. ಮೋದಿಯವರ ಅಮೋಘ ಶಸ್ತ್ರಚಿಕಿತ್ಸೆಯ ಕಾರ್ಯವೈಖರಿ, " [[ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್]]," ನಲ್ಲಿ ದಾಖಲಾಗಿದೆ :==
 
ಮೋದಿಯವರು [[ತಿರುಪತಿ]]ಯಲ್ಲಿ ಒಂದೆ ದಿನದಲ್ಲಿ ೮೩೩ ಶಸ್ತ್ರ ಚಿಕಿತ್ಸೆ ಮಾಡಿ ವಿಶ್ವ ದಾಖಲೆ ಸ್ಥಾಪಿಸಿದರು. ಒಟ್ಟಾರೆ ೭ ಲಕ್ಷಕ್ಕೂ ಹೆಚ್ಚು ಕಣ್ಣಿನ ಶಸ್ತ್ರ ಚಿಕಿತ್ಸೆ ಕೂಡ ಒಂದು ವಿಶ್ವ ದಾಖಲೆ. ಇವುಗಳನ್ನು [[ಗಿನ್ನಿಸ್ ದಾಖಲೆಗಳ ಪುಸ್ತಕ|ಗಿನ್ನಿಸ್ ದಾಖಲೆಗಳ ಪುಸ್ತಕದಲ್ಲಿ]] ಸೇರಿಸಲಾಗಿದೆ. ಮೋದಿಯವರು ಎಲ್ಲಾ ಪ್ರಶಸ್ತಿ ಪುರಸ್ಕಾರಗಳಿಂದ ಬಂದ ಹಣವನ್ನು ಬಡವರಿಗಾಗಿ ವ್ಯಯಿಸಿ ತಮ್ಮ ಸೇವಾ ಮನೋಭಾವವನ್ನು ಮೆರೆದಿದ್ದಾರೆವ್ಯಯಿಸಿದ್ದಾರೆ.
 
ಶ್ರೀಯುತರುಮೋದಿಯವರು ಕೆಲಕಾಲ ಕರ್ನಾಟಕ ವಿಧಾನ ಮಂಡಲದ ಸದಸ್ಯರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಸೇವಾ ಮನೋಭಾವದ ಧೀಮಂತ ವ್ಯಕ್ತಿತ್ವದ ಮೋದಿಯವರು [[ನವೆಂಬರ್ ೧೧]] [[೨೦೦೫]]ರಲ್ಲಿ, ತಮ್ಮ ೯೦ನೆ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಕಾಲವಾದ ನಂತರವೂ ತಮ್ಮ ಕಣ್ಣುಗಳನ್ನು ಶ್ರೀಯುತರು ಕುರುಡರಿಗಾಗಿಮರಣೋತ್ತರವಾಗಿ ದಾನಮಾಡಿದ್ದಾರೆ. ಅವರ ಪುತ್ರ ಡಾ. [[ಅಮರನಾಥ ಮೋದಿ]] ಸಹ ನೇತ್ರ ತಜ್ಞರಾಗಿದ್ದು ತಂದೆಯ ಕೆಲಸವನ್ನು ಮುಂದುವರಿಸಿದ್ದಾರೆತಜ್ಞರಾಗಿದ್ದಾರೆ.
 
==ಪ್ರಶಸ್ತಿಗಳು , ಸನ್ಮಾನಗಳು : ==