ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ. |
No edit summary |
||
೪೬ ನೇ ಸಾಲು:
==ವಿವಾಹ==
*ರಾಜ ಶುದ್ಧೋಧನನು ಮಗನು ವಿರಕ್ತನಾಗದಂತೆ ನೋಡಿಕೊಳ್ಳಲು ಸರ್ವ ಪ್ರಯತ್ನಗಳನ್ನು ಮಾಡುತ್ತಿದ್ದನು. ಹರೆಯದಲ್ಲಿ ಮದುವೆ ಮಾಡಿದರೆ ಅವನು ಸಂಸಾರಸುಖದಲ್ಲಿ ಮಗ್ನನಾಗಿರುತ್ತಾನೆಂದು ಬಗೆದು, ಮಗನಿಗೊಂದು ಸ್ವಯಂವರವನ್ನೇರ್ಪಡಿಸಿದನು. ಅವನು ಒಪ್ಪುವ ಕನ್ಯೆ ಅವನಿಗೆ ಸಿಕ್ಕಲಿ ಎಂಬ ಉದ್ದೇಶವಿತ್ತು. ಒಂದು ದಿನ ಊರಿನ ಎಲ್ಲ ಕನ್ಯೆಯರೂ ಬಂದು ರಾಜಕುಮಾರನಿಂದ ಆಭರಣಗಳನ್ನು ದಾನ ಪಡೆಯುವಂತೆ ಸಮಾರಂಭ ಏರ್ಪಡಿಸಲಾಗಿತ್ತು.
*ಅಂತೆಯೇ ಊರಿನ ಎಲ್ಲಾ ಕನ್ಯೆಯರು ಬಂದು ಸಿದ್ಧಾರ್ಥನ ಕೈಯಿಂದ ಆಭರಣಗಳನ್ನು ಪಡೆದರು. ಆದರೆ ಶುದ್ಧೋಧನನ ಸಚಿವನಾದ ದಂಡಪಾಣಿಯ (ಯಶೋಧರೆಯ ತಂದೆ ಮಹಾಮಾನನೆಂದು, ಸುಪ್ರಬುದ್ಧನೆಂದು ಕೆಲವು ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ.) ಮಗಳು ಅಥವಾ ಯಶೋಮತಿ ಎಂಬುವವಳು ಅತೀ ಸುಂದರೆಳೂ, ಸುಸಂಸ್ಕೃತಳೂ ಆಗಿದ್ದು ಕಟ್ಟಕಡೆಯಲ್ಲಿ ಬಂದಳು.
*ಆಕೆಯ ಗಾಂಭಿರ್ಯ, ಘನತೆಗಳು ಸಿದ್ಧಾರ್ಥನನ್ನು ಮಂತ್ರಮುಗ್ಧಗೊಳಿಸಿದವು. ದಾನ ಮಾಡುತ್ತಿದ್ದ ಒಡವೆಗಳೆಲ್ಲ ಮುಗಿದು ಹೋಗಿದ್ದುವು. ಆಗ ಸಿದ್ಧಾರ್ಥನು ತನ್ನ ಬೆರಳಿನಲ್ಲಿದ್ದ ಉಂಗುರವನ್ನೇ ತೆಗೆದು ಕೊಡಲು ಹೋದನು. ಆದರವಳು ನಿಮ್ಮ ವಾತ್ಸಲ್ಯಮಯನೋಟವೇ ನನಗೊಂದು ಆಭರಣ, ಅದೇ ಸಾಕೆಂದು ಮುಂದೆ ಸಾಗಿದಳು. ಸಿದ್ಧಾರ್ಥನಿಗೆ ಯಶೋಧರೆಯಲ್ಲಿ ಮಮಕಾರ ಉಂಟಾಗಿದೆಯೆಂಬ ಗೂಢಚಾರ ವರದಿಯನ್ನಾಧರಿಸಿ, ಯಶೋಧರೆಯನ್ನು ವರಿಸಲು ಸಮ್ಮತಿಸಿದನು.
==ವೈರಾಗ್ಯ==
|