ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಲೇಖನವನ್ನು ಮುಂದುವರಿಸಲಾಗುತ್ತಿದೆ.
೪೯ ನೇ ಸಾಲು:
*ಅಂತೆಯೇ ಊರಿನ ಎಲ್ಲಾ ಕನ್ಯೆಯರು ಬಂದು ಸಿದ್ಧಾರ್ಥನ ಕೈಯಿಂದ ಆಭರಣಗಳನ್ನು ಪಡೆದರು. ಆದರೆ ಶುದ್ಧೋಧನನ ಸಚಿವನಾದ ದಂಡಪಾಣಿಯ (ಯಶೋಧರೆಯ ತಂದೆ ಮಹಾಮಾನನೆಂದು, ಸುಪ್ರಬುದ್ಧನೆಂದು ಕೆಲವು ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ.) ಮಗಳು ಅಥವಾ ಯಶೋಮತಿ ಎಂಬುವವಳು ಅತೀ ಸುಂದರೆಳೂ, ಸುಸಂಸ್ಕೃತಳೂ ಆಗಿದ್ದು ಕಟ್ಟಕಡೆಯಲ್ಲಿ ಬಂದಳು.
*ಆಕೆಯ ಗಾಂಭಿರ್ಯ, ಘನತೆಗಳು ಸಿದ್ಧಾರ್ಥನನ್ನು ಮಂತ್ರಮುಗ್ಧಗೊಳಿಸಿದವು. ದಾನ ಮಾಡುತ್ತಿದ್ದ ಒಡವೆಗಳೆಲ್ಲ ಮುಗಿದು ಹೋಗಿದ್ದುವು. ಆಗ ಸಿದ್ಧಾರ್ಥನು ತನ್ನ ಬೆರಳಿನಲ್ಲಿದ್ದ ಉಂಗುರವನ್ನೇ ತೆಗೆದು ಕೊಡಲು ಹೋದನು. ಆದರವಳು ನಿಮ್ಮ ವಾತ್ಸಲ್ಯಮಯನೋಟವೇ ನನಗೊಂದು ಆಭರಣ, ಅದೇ ಸಾಕೆಂದು ಮುಂದೆ ಸಾಗಿದಳು. ಸಿದ್ಧಾರ್ಥನಿಗೆ ಯಶೋಧರೆಯಲ್ಲಿ ಮಮಕಾರ ಉಂಟಾಗಿದೆಯೆಂಬ ಗೂಢಚಾರ ವರದಿಯನ್ನಾಧರಿಸಿ, ಯಶೋಧರೆಯನ್ನು ವರಿಸಲು ಸಮ್ಮತಿಸಿದನು.
*ಯಶೋಧರೆಯೊಂದಿಗೆ ಗೌತಮಾ ಮತ್ತು ಮನೋವುರಾ ಎಂಬಿಬ್ಬರು ಯುವತಿಯರನ್ನು ತಂದು ಸಿದ್ಧಾರ್ಥನಿಗೆ ವಿವಾಹ ಮಾಡಿಸುತ್ತಾರೆ.( ಲಲಿತ ವಿಸ್ತಾರ ಎಂಬ ಕೃತಿಯಲ್ಲಿ ಸಿದ್ಧಾರ್ಥನ ಪತ್ನಿಯರ ಹೆಸರು ಮೃಗಜಾ, ಯಶೋಧರೆ ಮತ್ತು ಉತ್ಪಲಾವರ್ಣಾ ಎಂದೂ, ಚೈನಾ ಗ್ರಂಥಗಳಲ್ಲಿ
ಯಶೋಧರೆ, ಗೋಪ ಮತ್ತು ಉತ್ಪಲಾವರ್ಣಾ ಎಂದು ಹೇಳಿದೆ.
 
==ಪುತ್ರೋತ್ಸವ==
 
==ವೈರಾಗ್ಯ==
 
==ಜ್ಞಾನಯೋಗಿಯಾಗಿ==
 
==ಡಾ.ಬಿ.ಆರ್. ಅಂಬೇಡ್ಕರ್ ದೃಷ್ಠಿಯಲ್ಲಿ ಬುದ್ಧ==
 
==ಕೃತಿ ನೆರವು==
"https://kn.wikipedia.org/wiki/ಬುದ್ಧ" ಇಂದ ಪಡೆಯಲ್ಪಟ್ಟಿದೆ