ಅಶ್ವತ್ಥ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೨ ನೇ ಸಾಲು:
 
==ಹುಟ್ಟೂರು, ಬಾಲ್ಯ ಹಾಗೂ, ಜೀವನ :==
[[ಕೂದುವಳ್ಳಿ]], [[ಚಿಕ್ಕಮಗಳೂರು]] ಜಿಲ್ಲೆಯ, ಪುಟ್ಟ ಗ್ರಾಮ. ಇದು ಅಶ್ವತ್ಥರ ಊರು. ಜನನ, [[ಚಾಮರಾಜನಗರ]]ದಲ್ಲಿ. ತಂದೆ ಸೋಮಯ್ಯ . ಚಿಕ್ಕವಯಸ್ಸಿನಲ್ಲೇ ತಾಯಿ ಶ್ರೀಮತಿ ಲಕ್ಷ್ಮಮ್ಮವನವರನ್ನು ಕಳೆದುಕೊಂಡರು. ದೊಡ್ಡಮ್ಮನವರ ಆಶ್ರಯದಲ್ಲಿ [[ತರೀಕೆರೆ]], [[ಚಿತ್ರದುರ್ಗ]], [[ಶಿವಮೊಗ್ಗ]], [[ಮೈಸೂರು]], [[ಬೆಂಗಳೂರು]]ಗಳಲ್ಲಿ ವಿದ್ಯಾಭ್ಯಾಸ. ೧೯೩೪ ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಬಿ. ಇ. (ಸಿವಿಲ್) ಇಂಜಿನಿಯರಿಂಗ್ ಪದವಿಪಡೆದರು. ಮಾಸ್ತಿವೆಂಕಟೇಶ ಅಯ್ಯಂಗಾರರ, 'ಜೀವನ' ಮಾಸಪತ್ರಿಕೆಯಲ್ಲಿ ಅಶ್ವತ್ಥರ ಕತೆಗಳು ಪ್ರಕಟವಾದವು. (೧೯೩೫-೩೮ ರವರೆಗೆ ) ಕೆ. ವಿ ಆಚಾರ್ಯ ಅಂಡ್ ಕಂ. ಯಲ್ಲಿ ಕೆಲಸ. ೧೯೩೯-೧೯೪೨ ರವರೆಗೆ, ಚಿಕ್ಕಮಗಳೂರು ಲೋಕೋಪಯೋಗಿ ಇಲಾಖೆ, [[ಕಡೂರು]] ಶಾಖೆಯಲ್ಲಿ ಕೆಲಸಮಾಡಿದರು. ೧೯೪೨ ರಲ್ಲಿ [[ಮಹಾತ್ಮ ಗಾಂಧಿ |ಗಾಂಧೀಜಿ]]ಯವರು, ಬ್ರಿಟಿಷರ ವಿರುದ್ಧ, [[ಮುಂಬಯಿ |ಬೊಂಬಾಯಿ]]ನಲ್ಲಿ " ಕ್ವಿಟ್ ಇಂಡಿಯ " ಚಳುವಳಿಯನ್ನು ಪ್ರಾರಂಭಿಸಿದರು. ಗಾಂಧಿವಾದಿಯಾಗಿದ್ದ, ಅಶ್ವತ್ಥರು, ಆಗ ತಮ್ಮ ಆ ಸರ್ಕಾರಿ ನೌಕರಿಗೆ ರಾಜೀನಾಮೆ ಸಲ್ಲಿಸಿದರು. ೧೯೪೨-೪೫ ರವರೆಗೆ ಬೊಂಬಾಯಿನ Hindustan construction co; ಯಲ್ಲಿ ಉದ್ಯೋಗಮಾಡಿದರು. ೧೯೪೫ ರಲ್ಲಿ [[ಪಂ. ಮದನ ಮೋಹನ ಮಾಳವೀಯ]]ಯರ ಆಹ್ವಾನದಮೇರೆಗೆ, "ಬನಾರಸ್ ಹಿಂದೂ ವಿಶ್ವವಿದ್ಯಾಲಯ" ದಲ್ಲಿ ಪ್ರಾಧ್ಯಾಪಕರಾಗಿ ಕೆಲಸಮಾಡಿದರು. ಕೆಲಕಾಲ [[ಸಿಮ್ಲಾ|ಸಿಮ್ಲಾದಲ್ಲಿ]] ಮಿಲಿಟರಿ ಎಂಜಿನಿಯರ್, ಆಗಿ ಸೇವೆ ಸಲ್ಲಿಸಿದ್ದರು. ಕಥೆಬರೆಯುವುದರಲ್ಲಿ ಅತ್ಯಂತ ಆಸಕ್ತರಾದ ಅಶ್ವತ್ಥರು, ೧೯೬೩ ರಲ್ಲಿ, ಪ್ರಾಧ್ಯಾಪಕವೃತ್ತಿಗೆ ರಾಜೀನಾಮೆ ನೀಡಿ, ನಂಜನಗೂಡಿಗೆ ಬಂದು ವಾಸಮಾಡಿದರು. ೧೯೬೫ ರಿಂದ ಮೈಸೂರಿನಲ್ಲಿ ಸ್ವಂತಮನೆ ಕಟ್ಟಿಸಿದರು. ಗಾಂಧಿವಾದಿಯಾದ ಅಶ್ವತ್ಥರು, ಅಲ್ಲಿ ಶಿಸ್ತು, ಸಂಯಮದ ಸರಳಜೀವನವನ್ನು ನಡೆಸುತ್ತಿದ್ದರು. ೧೬, ಜನವರಿ, ೧೯೯೪ ರಲ್ಲಿ ನಿಧನರಾದರು. ಅಶ್ವತ್ಥ-ಲಲಿತ ದಂಪತಿಗಳಿಗೆ ನರಸಿಂಹಮೂರ್ತಿ ಎಂಬ ಮಗನಿದ್ದಾರೆ. ಅವರು, ಭೂವಿಜ್ಞಾನಿಯಾಗಿ ಈಗ, [[ನಾಗಪುರ]]ದಲ್ಲಿದ್ದಾರೆ.
ಅಶ್ವತ್ಥರು ಕರ್ನಾಟಕ ಸಾಹಿತ್ಯ ಅಕ್ಯಾಡಮಿ ಪ್ರಶಸ್ತಿದೊರೆತರೂ ಅದನ್ನು ಸ್ವೀಕರಿಸಲಿಲ್ಲ.
 
=='[[ಅಜ್ಞಾತನ ನಂಜುಂಡಾಯಣ]],' ಕಾದಂಬರಿಯಲ್ಲಿ ಅವರ ಅತ್ಮಕಥೆಯ ಎಳೆಗಳಿವೆ.==
"https://kn.wikipedia.org/wiki/ಅಶ್ವತ್ಥ" ಇಂದ ಪಡೆಯಲ್ಪಟ್ಟಿದೆ