'''ಡಿ. ದೇವರಾಜ ಅರಸ್''' (೧೯೧೫ - ೧೯೮೨) ಎರಡು ಬಾರಿ [[ಕರ್ನಾಟಕದ ಮುಖ್ಯಮಂತ್ರಿ]]ಯಾಗಿದ್ದ [[ಮೈಸೂರು|ಮೈಸೂರಿನ]] ರಾಜಕಾರಣಿ. <br />
ದಿವಂಗತ ದೇವರಾಜು ಅರಸು ಅವರ ದೂರದೃಷ್ಠಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಗೇಣಿ ಶಾಸನ, ಹಾವನೂರು ಆಯೋಗದಂಥಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ . ಯಾವುದೇ ಹೋರಾಟ ಅಥವಾ ಕ್ರಾಂತಿ ಮುಂದಿನ ಪೀಳಿಗೆಯ ದೃಷ್ಠಿಯಿಂದ ಆದರೆ ಮಾತ್ರ ಅದು ಹೋರಾಟದ ಸಾರ್ಥಕತೆಯನ್ನು ಕಾಣುತ್ತದೆ. ಗೇಣಿ ಹೋರಾಟದ ಅನುಷ್ಠಾನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸದಿದ್ದರೆ ಈವರೆವಿಗೂ ಬಹುಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ. ಆದರೆ ದೇವರಾಜ ಅರಸು ಅವರು ತಮ್ಮ ಕಟು ನಿರ್ಧಾರದಿಂದ ಮುಂದಿನ ಪೀಳಿಗೆಯ ಬದುಕಿನ ದೂರದೃಷ್ಠಿಯಿಂದ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದರು.