ಅಂಟಿಕೆ -ಪಂಟಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು added Category:ಜಾನಪದ ಆಟಗಳು using HotCat |
ಚುNo edit summary |
||
೧ ನೇ ಸಾಲು:
'''ಅಂಟಿಕೆ ಪಂಟಿಕೆ''' [[ಶಿವಮೊಗ್ಗ]] ಮತ್ತು [[ಉತ್ತರ ಕನ್ನಡ]] ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರಚಾರದಲ್ಲಿರುವ ಒಂದು [[ಸಂಪ್ರದಾಯ]]. ಇದಕ್ಕೆ ಹಬ್ಬ ಹಾಡುವುದು, ದೀಪ ನೀಡುವುದು ಎಂಬ ಹೆಸರುಗಳೂ ಇವೆ. ತೀರ್ಥಹಳ್ಳಿಯ ಸುತ್ತಮುತ್ತ ಮಾತ್ರ ಇದಕ್ಕೆ ಅಂಟಿಕೆ ಪಂಟಿಕೆ ಎನ್ನುತ್ತಾರೆ.
=='''ಸಂಪ್ರದಾಯ'''==
=='''ತಂಡಗಳು ಮತ್ತು ನಿಯಮಗಳು'''==
ಒಂದೊಂದು
ಅಂಟಿಗೆ-ಪಂಟಿಗೆ ಕೆಲವು ಖಚಿತವಾದ ನಿಯಮಗಳಿಂದ ಬದ್ಧವಾಗಿರುತ್ತವೆ. ಉದಾಹರಣೆಗೆ ಎರಡು ತಂಡಗಳು ಪರಸ್ಪರ ಎದುರುಬದರಾಗಿ ಸಂಧಿಸಿ ಮುಂದೆ ಹೋಗಬಾರದು. ಅಂತಹ ಸಂಭವವು ಎದುರಾದಾಗ ಅವರು ‘ದೀಪ-ದೀಪೋಳ್ಗೆ ‘ ಎಂದು ಗಟ್ಟಿಯಾಗಿ ಕೂಗುವುದರ ಮೂಲಕ ಪರಸ್ಪರ ಎಚ್ಚರಿಕೆ ಕೊಟ್ಟುಕೊಂಡು ಬೇರೆ ಬೇರೆ ಹಾದಿ ಹಿಡಿಯುತ್ತಾರೆ. ದೀಪಾವಳಿ ಹಬ್ಬದ ರಾತ್ರಿಗಳಲ್ಲಿ ಮಾತ್ರ ತಂಡ ಕಟ್ಟಬೇಕು. ದೇವಾಲಯದಲ್ಲಿ ಹೊತ್ತಿಸಿಕೊಂಡ ದೀಪವನ್ನು ಅಗ್ನಿ ಗುಡಿ ಸೇರುವತನಕ ನಂದುವಂತಿಲ್ಲ. ಬಾಗಿಲಿಗೆ ಬಂದ ಜ್ಯೋತಿಯನ್ನು ಸ್ವಾಗತಿಸಿ, ಎಣ್ಣೆ ಎರೆಯಬೇಕು. ಜ್ಯೋತಿ ಹಿಡಿದವರು ಕಾಲಿಗೆ ಚಪ್ಪಲಿ ಧರಿಸುವಂತಿಲ್ಲ. ಮಲಮೂತ್ರ ವಿಸರ್ಜನೆ ಮಾಡುವಂತಿಲ್ಲ. ಸೂತಕವಿದ್ದವರು ಮೇಳದಲ್ಲಿ ಭಾಗವಹಿಸುವಂತಿಲ್ಲ. ಸೂತಕದವರ ಮನೆಗೆ ದೀಪ ನೀಡುವಂತಿಲ್ಲ. ಒಮ್ಮೆ ಸೂತಕವಾದರೆ, ಮೂರು ವರ್ಷಗಳವರೆಗೆ ಮೇಳದಲ್ಲಿ ಭಾಗವಹಿಸುವಂತಿಲ್ಲ.
=='''ಹಾಡಿನ ಅರ್ಥ ಮತ್ತು ಭಾವ'''==
ಒಂದೊಂದು ಮನೆಯ ಮುಂದೆ ನಿಂತು 'ಬಾಗಿಲ ತೆಗಿಯರಮ್ಮ ಭಾಗ್ಯದ ಲಕ್ಷ್ಮಮ್ಮ ಜ್ಯೋತ್ಸಮ್ಮನೊಳಗೆ ಕರಕೊಳ್ಳಿ' ಎಂದು 'ಮುಳ್ಳಾಗೆ ಕಲ್ಲಾಗೆ ಬಂದೇವಯ್ಯ ತಂದೇವಿ ದೀಪವ ಕೊಳ್ಳೀರೀ' ಮುಂತಗಿ ಹಾಡಿಸಿ ಬಾಗಿಲು ತೆಗೆಸಿ 'ಜ್ಯೋತಿಗೆಣ್ಣೆಯರೆಯ ಬನ್ನಿ' ಎಂಬಂತ ಹಾಡುಗಳನ್ನು ಹೇಳಿ ತಮ್ಮ ಹಣತೆಯಿಂದ ಅವರಿಗೆ ದೀಪದ ಕುಡಿ ಕೊಡುತ್ತಾರೆ . ಅನಂತರ ಮನೆಯ ಜಗುಲಿಯನ್ನೇರಿ ಅರ್ಜುನ ಜೋಗಿಯ ಹಾಡು, ಉತ್ತರದೆವಿಯ ಹಾಡು, ತೆರೆ ಅಳೆಯುವ ಹಾಡು, ಕರು ಹಾಡು ಇತ್ಯಾದಿ ಧೀರ್ಘ ಗೀತೆಗಳನ್ನು ಒಕ್ಕೊರಲಿಂದ ಹಾಡುತ್ತರೆ. ಕೊನೆಯಲ್ಲಿ ಮಂಗಳಗೀತೆ ಹೆಳುತ್ತರೆ. ಹಾಡುಗಳಲ್ಲಿ ಹೆಚ್ಚಿನವು ತ್ರಿಪದಿಗಳು. ಉಳಿದವ ದ್ವಿಪದಿ, ಚೌಪದಿ ಮುಂತಾದ ಸರಳ ಗಳೂ ರಚನೆಗಳು, ಅಪರೂಪವಾಗಿ ಲಾವಣಿ ಅಥವಾ ಕೋಲಾಟದ ಮಟ್ಟುಗಳೂ ಇರುತ್ತವೆ. ಹಾಡುವಾಗ ಯಾವುದೇ ವಾದ್ಯ ಜೊತೆಗೆ ಇರುವುದಿಲ್ಲ. ಕಥನಗೀತೆಗಳಲ್ಲಿ ಸಾಮಾನ್ಯವಾಗಿ ಶಿವನ, ಶಿವಭಕ್ತರ ಅಪರೂಪವಾಗಿ ಐತಿಹಾಸಿಕ, ಕೌಟುಂಬಿಕ ಕಥೆಗಳು ಸೇರಿರುತ್ತವೆ. ಹಾಡುವವರಿಗೆ ಮನೆಮನೆಯಲ್ಲೂ ದೀಪಕ್ಕೆ ಎಣ್ಣೆ ಬಟ್ಟೆ ಅಕ್ಕಿ ಹಣ್ಣು ತೆಂಗಿನಕಾಯಿ ಹಬ್ಬದ ತಿಂಡಿ ಚಿಲ್ಲರೆ ಹಣ ಕೊಡುತ್ತರೆ. ಹೀಗೆ ಮೂರು ರಾತ್ರಿ ಪರ್ಯಂತ ದೀಪ ನೀಡುವುದು ನಡೆಯುತ್ತದೆ.
=='''ಮೇಳದ ಮುಕ್ತಾಯ'''==
ಮೂರು ದಿನವಾದ ಮೇಲೆ ದೀಪದ ಬತ್ತಿಯನ್ನು ಹಣತೆಯಿಂದ ತೆಗೆದು ಹಲಸಿನ ಮರದ ಕೊಂಬೆಯ ಮೇಲಿಟ್ಟು ಅದಕ್ಕೆ ಕೈ ಮುಗಿಯುತ್ತಾರೆ.“ಅಂಟಿಕೆ-ಪಂಟಿಕೆ ಔಂತ್ಲ” ಎಂದು ಕರೆಯುವ ಸಾಮೂಹಿಕ ಔತಣಕೂಟವನ್ನು ಏರ್ಪಡಿಸುತ್ತಾರೆ. ಮೇಳದಲ್ಲಿ ಸಂಗ್ರಹಿಸಿದ ದವಸ-ಧಾನ್ಯ ಹಾಗೂ ಹಣದಿಂದ ಔತಣಕೂಟದ ಖರ್ಚುಗಳನ್ನು ಭರಿಸುತ್ತಾರೆ. ಅಂದು ಊರಿನವರಲ್ಲದೆ ಸುತ್ತಲಿನ ಊರಿನವರನ್ನು ಸ್ವಾಗತಿಸುತ್ತಾರೆ. ಜ್ಯೋತಿ ಕಳುಹಿಸಲು ಒಂದು ನಿಗದಿತ ಸ್ಥಳವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಊರಿನ ಹಲಸಿನ ತೋಪಿನ ದೊಡ್ಡ ಬಯಲೇ ಸಮಾರಂಭದ ಸ್ಥಳವಾಗಿರುತ್ತದೆ. ಹಾಲು ಸುರಿಸುವ ಆಲ, ಹಲಸು ಮರಗಳ ಬುಡದಲ್ಲಿ ಜ್ಯೋತಿಯನ್ನು ಇಟ್ಟು, ಎಡೆ ಮಾಡಿ, ಪೂಜೆ ಸಲ್ಲಿಸುತ್ತಾರೆ.ಈ ಸಂದರ್ಭದಲ್ಲಿ ದೀಪ ಹಿಡಿದ ದೀಪಧಾರಿಗಳು ಜ್ಯೋತಿ ಕಳುಹಿಸುವ ಪದಗಳನ್ನು ಹಾಡುತ್ತಾರೆ. “ಒಂದೇ ಬಟ್ಟಲು ಒಂದೇ ಬೆಲ್ಲದಚ್ಚು, ಒಂದೆಲೆ ಹಲಸು ಬಲಬಂದು, ಒಂದೆಲೆ ಹಲಸು ಬಲಬಂದು ಜ್ಯೋತಮ್ಮ ತಾಯಿ, ಒಂದೆ ದೀವಿಗೆಲೆ ಗುಡಿದುಂಬಿ, ಒಂದೆ ದೀವಿಗೆಲೆ ಗುಡಿದುಂಬಿ ಜ್ಯೋತಮ್ಮ ತಾಯಿ, ಇಂದ್ಹೋಗಿ ಮುಂದೆ ಬರಬೇಕು” ಎಂದು ಹಾಡುತ್ತಾರೆ.
ಈ ಸಂಪ್ರದಾಯವು ದೀಪ ಮತ್ತು ಅದಕ್ಕೆ ಸಂಬಂಧಿಸಿದ ನಂಬಿಕೆಯ ಅಂಶ ಎದ್ದು ಕಾಣುತ್ತದೆ. ದೀಪ ಅಂಟಿಸುವ ಕ್ರಿಯೆ ಪ್ರಧಾನವಾಗಿಯೂ, ಸುಗ್ಗಿ ಒಳ್ಳೆಯದನ್ನು ಹೊತ್ತು ತರಲಿ ಎಂಬ ಹಾರೈಕೆ ವ್ಯಕ್ತವಾಗಿದೆ. ಮಲೆನಾಡಿನ ಸಾಂಸ್ಕೃತಿಕ ಕನ್ನಡಿಯಂತಿರುವ ಈ ಸಂಪ್ರದಾಯವು ಅಜ್ಞಾನವನ್ನು, ಕತ್ತಲನ್ನು ಆ ಮೂಲಕ ಸಂಕಷ್ಟಗಳನ್ನು ಕಳೆಯುವ ಮುಖ್ಯ ಆಶಯವನ್ನು ಹೊಂದಿದೆ.
|