ಆಹುತಾತ್ಮರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಕೊಂಡಿ ಸೇರಿಸಿದ್ದು |
ಕೊಂಡಿ ಸೇರಿಸಿದ್ದು |
||
೧ ನೇ ಸಾಲು:
ಎಂದರೆ [[ಧರ್ಮ]]ಕ್ಕಾಗಿ ಪ್ರಾಣ ತೆತ್ತವರು (ಮಾರ್ಟರ್ಸ್). ಇದು ಆ ಪದದ ಸಂಕುಚಿತಾರ್ಥ. ತಮ್ಮ ಧರ್ಮದ ಪರವಾಗಿ ಧೈರ್ಯವಾಗಿ ಕಷ್ಟಗಳನ್ನೂ ಹಿಂಸೆಯನ್ನೂ ಎದುರಿಸಿದವರು ಎಂಬುದು ಆ ಪದದ ವಿಶಾಲಾರ್ಥ. ಆಹುತಾತ್ಮರೆಂದೆನ್ನಿಸಿಕೊಳ್ಳಬಹುದಾದವರು ಕೊಲೆಗೆ ಈಡಾಗಬೇಕಾದುದಿಲ್ಲ. ಧರ್ಮದ ನಿಮಿತ್ತವಾಗಿ ಕಾರಾಗೃಹವಾಸ, ಕಶಾಪ್ರಹಾರ, ಮುಂತಾದ ಶಿಕ್ಷೆಗಳಿಗೆ ಒಳಪಟ್ಟವರೂ ಆಹುತಾತ್ಮರೆಂದೆನ್ನಿಸಿಕೊಳ್ಳಲು ಅರ್ಹರು. ಇವರನ್ನಲ್ಲದೆ ಐಹಿಕ ಸುಖಗಳನ್ನು ತೊರೆದು, ಐಶ್ವರ್ಯ, ಅಧಿಕಾರಗಳಿಗೆ ಮರುಳಾಗದೆ ಸದಾ ದೇವರ ಸೇವೆಯಲ್ಲಿ ಧರ್ಮದ ಪ್ರಗತಿಗಾಗಿ ಜೀವವನ್ನು ಸವೆಸಿದವರನ್ನೂ ಆಹುತಾತ್ಮರೆಂದು ಕ್ರೈಸ್ತರು ಭಾವಿಸುತ್ತಾರೆ. ಆಹುತಾತ್ಮರನ್ನು ಧರ್ಮವೀರರೆಂದೂ ಹುತಾತ್ಮರೆಂದೂ ಕರೆಯುವ ವಾಡಿಕೆ ಸರಿಯಾದುದೆಂದು ಒಪ್ಪಬಹುದು. ಸಾಧು ಸಂತರೆಲ್ಲರೂ ಈ ವರ್ಗಕ್ಕೆ ಸೇರಿದವರು.
ಆಹುತಾತ್ಮ ಭಾವನೆ ಎಲ್ಲ ಧರ್ಮದವರಲ್ಲೂ ಒಂದೇ ಆಗಿರುವುದಿಲ್ಲ. ಜರತುಷ್ಟ್ರ ಧರ್ಮದವರು ಧರ್ಮಕ್ಕಾಗಿ ಪ್ರಾಣತೆತ್ತವರನ್ನು ಮಾತ್ರ ಆಹುತಾತ್ಮರೆಂದು ಭಾವಿಸುತ್ತಾರೆ. ಅಷ್ಟೇ ಅಲ್ಲ, ಅವರಿಗೆ ಉಳಿದೆಲ್ಲ ಧರ್ಮದವರು ತೋರಿಸುವ ಭಕ್ತಿಗಿಂತ ವಿಶೇಷ ಭಕ್ತಿಯನ್ನು ತೋರಿಸುತ್ತಾರೆ. ಜರತುಷ್ಟ್ರ ಯಜ್ಞದಲ್ಲಿ ತೊಡಗಿದ್ದಾಗ ಪರಧರ್ಮೀಯರಿಂದ ಕೊಲೆಯಾದುದೇ ಈ ವೈಶಿಷ್ಟ್ಯಕ್ಕೆ ಕಾರಣ.
ಆಹುತಾತ್ಮರ ವಿಚಾರವಾಗಿ ಮುಸ್ಲಿಮರ ಭಾವನೆ ಬೇರೆ. ಪರಧರ್ಮದವರೊಡನೆ ಧರ್ಮಯುದ್ಧದಲ್ಲಿ (ಜಿಹಾದ್) ಭಾಗವಹಿಸಿ ಮಡಿದವರನ್ನು ಮಾತ್ರ ಆಹುತಾತ್ಮರೆಂದು ಇವರು ಭಾವಿಸುತ್ತಾರೆ. ಆದ್ದರಿಂದ ಆಹುತಾತ್ಮಸೂಚಕವಾದ ಷಾಹಿದ್ ಎಂಬ ಅರಬ್ಬೀ ಮಾತಿನ ಅರ್ಥ ಇದೇ. ಹಿಂದೂಗಳೊಡನೆ ಹೋರಾಡಿದ ಪ್ರದೇಶಗಳನ್ನು ಗಂಜ್ಷಾಹಿದಾನ್ ಎಂದರೆ ಆಹುತಾತ್ಮರ ಭಂಡಾರಗಳೆಂದು ಕರೆದಿರುತ್ತಾರೆ. ಹಾಗೆಯೇ ರಜಪುತರು, ಸಿಖ್ಖರು ಕೂಡ ಮುಸ್ಲಿಮರೊಡನೆ ಯುದ್ಧದಲ್ಲಿ ಹೋರಾಡಿ ಸತ್ತವನನ್ನು ಆಹುತಾತ್ಮನೆಂದು ಪೂಜಿಸುತ್ತಾರೆ. ಮದುವಣಿಗ ಹಾಗೆ ಸತ್ತ ಧರ್ಮಾತ್ಮರ ಸಮಾಧಿಯ ಸುತ್ತ ಪ್ರದಕ್ಷಿಣೆ ಮಾಡಿದ ಹೊರತು ಮದುವೆಶಾಸ್ತ್ರ ಪೂರ್ಣವಾಗುವುದಿಲ್ಲ. ಹಿಂದೂಗಳಲ್ಲಿ ಮುಸ್ಲಿಮರಂತೆ ಧರ್ಮಸ್ಥಾಪನೆಗಾಗಿ ಯುದ್ಧಹೂಡುವುದು ತುಂಬ ಅಪೂರ್ವ. ಮುಸಲ್ಮಾನರು ಭಾರತಕ್ಕೆ ಬರುವ ಮುನ್ನ ಧರ್ಮಕ್ಕಾಗಿ ಯುದ್ಧಹೂಡಿದ ಯಾವೊಂದು ಪ್ರಸಂಗವೂ ಚರಿತ್ರೆಯಲ್ಲಿ ವರ್ಣಿತವಾಗಿಲ್ಲ. ಭಾರತಕ್ಕೆ ಮುಸ್ಲಿಮರು ಬಂದ ಅನಂತರ ದಶನಾಮಿ ಸಂಪ್ರದಾಯದ ಸಂತರು ಮತ್ತು ಸನ್ಯಾಸಿಗಳು ತಮ್ಮ ಧರ್ಮರಕ್ಷಣೆಗಾಗಿ ಹೋರಾಡಿದ ಪ್ರಸಂಗಗಳು ಅನೇಕವಿವೆ. ಸಿಪಾಯಿದಂಗೆಯ ಸಮಯದಲ್ಲೂ ದಶನಾಮಿ ಸಂನ್ಯಾಸಿಗಳು ಧರ್ಮಯುದ್ಧದಲ್ಲಿ ಪಾತ್ರವಹಿಸಿದರು. ಈ ಶತಮಾನದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವಾಮಿಶ್ರದ್ಧಾನಂದರು ಪ್ರಾಣ ಒಪ್ಪಿಸಿದ್ದು ಭಾರತೀಯರ ನೆನಪಿನಲ್ಲಿ ಚಿರವಾಗಿ ಉಳಿದಿದೆ.
|