ಗೀತಪ್ರಿಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Vikashegde (ಚರ್ಚೆ | ಕಾಣಿಕೆಗಳು) ವಿಕಿಶೈಲಿಗೆ ವ್ಯವಸ್ಥಿತಗೊಳಿಸಿದ್ದು ಮತ್ತು ಹೆಚ್ಚಿನ ಮಾಹಿತಿ ಸೇರಿಸಿದ್ದು |
Vikashegde (ಚರ್ಚೆ | ಕಾಣಿಕೆಗಳು) ಉಲ್ಲೇಖ ಸೇರ್ಪಡೆ |
||
೧೦ ನೇ ಸಾಲು:
ಭಾಗ್ಯ ಚಕ್ರ (1956) ಎಂಬುದು ಇವರು ಸಂಭಾಷಣೆ ಹಾಗೂ ಹಾಡುಗಳನ್ನು ರಚಿಸಿದ ಮೊದಲ ಚಿತ್ರ. ಇವರಲ್ಲಿ ಅಡಗಿದ್ದ ನಿರ್ದೇಶಕನನ್ನು ಗುರುತಿಸಿದವರು ಕರ್ನಾಟಕ ಪಿsಲಂಸ್ ಸಂಸ್ಥೆಯಲ್ಲಿದ್ದ ಎಂ.ವಿ. ವೆಂಕಟಾಚಲಂ. ಅವರು ತಮ್ಮ ಮಣ್ಣಿನ ಮಗ ಚಿತ್ರದ ನಿರ್ದೇಶನದ ಹೊಣೆಗಾರಿಕೆಯನ್ನು ಇವರಿಗೆ ವಹಿಸಿದರು (1968). ಬೆಂಗಳೂರಿನ ಕಪಾಲಿ ಚಿತ್ರ ಮಂದಿರದಲ್ಲಿ ಶತದಿನೋತ್ಸವ ಕಂಡ ಪ್ರಥಮ ಕನ್ನಡ ಚಿತ್ರವೆಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಯಿತು. ಎಂ.ಪಿ. ಶಂಕರರ ಕಾಡಿನ ರಹಸ್ಯ (1969) ಇವರು ನಿರ್ದೇಶಿಸಿದ ಎರಡನೆಯ ಚಿತ್ರ. ಅದೇ ವರ್ಷ ಮದುವೆ, ಮದುವೆ, ಮದುವೆ, ಎಂಬ ಹಾಸ್ಯ ಚಿತ್ರವನ್ನೂ ಇವರು ನಿರ್ದೇಶಿಸಿ ದರು. ಇವರು ನಿರ್ದೇಶಿಸಿದ ಬಹುತೇಕ ಚಿತ್ರಗಳ ಸಾಹಿತ್ಯವನ್ನು ರಚಿಸಿದವರು ಇವರೇ.
ಗೀತಪ್ರಿಯರಿಗೆ ಚಿತ್ರರಂಗದ ಗೀಳು ಅಂಟಿಕೊಂಡದ್ದಕ್ಕೂ ಒಂದು ಹಿನ್ನೆಲೆಯಿದೆ. ಅದು 1943ರ ಮಾತು. ಆಗಷ್ಟೇ `ಸತ್ಯಹರಿಶ್ಚಂದ್ರ’ ಸಿನಿಮಾ ಬಿಡುಗಡೆಯಾಗಿತ್ತು. ಆ ಸಿನಿಮಾ ನೋಡಿದ ಗೀತಪ್ರಿಯ, ಚಿತ್ರನಟನಾಗಲೇಬೇಕು ಎಂದು ಆ ಕ್ಷಣದಲ್ಲೇ ನಿರ್ಧರಿಸಿದರಂತೆ. ಅಷ್ಟೇ ಅಲ್ಲ, ನಟನಾಗುವ ಉದ್ದೇಶದಿಂದಲೇ ಮದ್ರಾಸ್ಗೆ ಹೋದರು. ಅಲ್ಲಿ ಕಥಕ್ ಡ್ಯಾನ್ಸ್ ಕಲಿತರು. ನಾಟಕ ಕಂಪನಿಗಳಲ್ಲಿ ಅಭಿನಯಿಸಿ `ಅನುಭವ’ ಪಡೆದುಕೊಂಡರು. ನಂತರ ಒಂದೆರಡು ತೆಲುಗು ಚಿತ್ರಗಳಲ್ಲಿ `ಡ್ಯಾನ್ಸರ್’ ಆಗಿಯೂ ಕಾಣಿಸಿಕೊಂಡದ್ದಾಯಿತು. ಹೀಗಿದ್ದಾಗಲೇ ಆರ್. ನಾಗೇಂದ್ರರಾವ್ ಅವರು ಒಂದು ಸಿನಿಮಾ ತಯಾರಿಸಲಿದ್ದಾರೆ ಎಂಬ ಸುದ್ದಿ ಕಿವಿಗೆ ಬಿತ್ತು. ತಕ್ಷಣವೇ ಅಲ್ಲಿಗೆ ಹೋದ ಗೀತಪ್ರಿಯ,`ನನಗೆ ಒಂದು ಪಾತ್ರ ಕೊಡಿ’ ಅಂದರಂತೆ. ಅದಕ್ಕೆ ನಾಗೇಂದ್ರರಾಯರು- ಈಗಾಗಲೇ ಎಲ್ಲ ಪಾತ್ರಗಳ ಆಯ್ಕೆ ಮುಗಿದಿದೆಯಪ್ಪಾ. ಮುಂದೆ ನೋಡೋಣ. ಈಗ ನೀನು ಬೆಂಗಳೂರಿಗೆ ಹೋಗು’ ಎಂದರಂತೆ. ಬೇಸರದಿಂದಲೇ ಬೆಂಗಳೂರಿಗೆ ಹಿಂತಿರುಗಿದರು ಗೀತಪ್ರಿಯ. ಇದಾಗಿ ಕೆಲದಿನಗಳಲ್ಲೇ ಗೀತಪ್ರಿಯರ ತಂದೆ ಅನಾರೋಗ್ಯದಿಂದ ತೀರಿಕೊಂಡರು. ಮುಂದೆ, ಅನುಕಂಪದ ಆಧಾರದ ಮೇಲೆ ತಂದೆಯವರು ನೌಕರಿ ಮಾಡುತ್ತಿದ್ದ ಮೈಸೂರು ಲ್ಯಾನ್ಸರ್ಸ್ ಕಂಪನಿಯಲ್ಲೇ ಕೆಲಸಕ್ಕೆ ಸೇರಿಕೊಂಡರು ಗೀತಪ್ರಿಯ. ಆದರೆ, ಕೆಲವೇ ದಿನಗಳಲ್ಲಿ ಆ ಕಂಪನಿ ಕೂಡ ಮುಚ್ಚಿಹೋಯಿತು. ಈ ಸಂದರ್ಭದಲ್ಲಿ ತಾಯಿ, ಇಬ್ಬರು ತಂಗಿಯರು ಹಾಗೂ ಮೂವರು ಸೋದರರನ್ನು ಸಾಕುವ ಹೊಣೆ ಗೀತಪ್ರಿಯರ ಮೇಲಿತ್ತು. [[ಕಬ್ಬನ್ ಪಾರ್ಕ್]] ಬಳಿ ಇದ್ದ ಬಾರ್ ಒಂದರಲ್ಲಿ ಬಿಲ್ರೈಟರ್ ಆಗಿ ಸೇರಿಕೊಂಡರು. ಸಿನಿಮಾ ಸೇರಬೇಕೆಂಬ ಗೀಳು ಇದ್ದೇ ಇತ್ತು. ಆ ಕಾರಣದಿಂದಲೇ ರಾತ್ರಿ ಬಂದು ಸಿನಿಮಾಕ್ಕೆ ಹಾಡು, ಚಿತ್ರಕತೆ ಬರೆಯುತ್ತಿದ್ದರು. ಒಂದು ದಿನ ಪ್ರತಿಭೆಯನ್ನು ಕಂಡ ವಿಜಯಭಾಸ್ಕರ್ `ನಿನಗೆ ಇಲ್ಲಿ ಎಷ್ಟು ಸಂಬಳ ಸಿಗುತ್ತೆ, 40 ರೂಪಾಯಿ ಕೊಡ್ತೇನೆ, ನನ್ನ ಜೊತೆ ಮದ್ರಾಸಿಗೆ ಬಂದುಬಿಡು' ಎಂದರು. ಕೇವಲ ಐದು ರೂಪಾಯಿ ಹೆಚ್ಚಿನ ಸಂಬಳದ ಆಸೆಗೆ ಮದ್ರಾಸಿಗೆ ಹೋಗಿ, ಅಲ್ಲಿ ತೆಲುಗು, ತಮಿಳು ಚಿತ್ರಗಳಲ್ಲಿ ಚಿಕ್ಕಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತ, ಸಂಭಾಷಣೆ, ಗೀತರಚನೆಯಲ್ಲಿ ತೊಡಗಿಸಿಕೊಂಡರು. ಮುಂದೆ, ೧೯೬೭ ರಲ್ಲಿ ವನಮಾಲ ಎಂಬಾಕೆ ಅಶ್ವತ್ಥ್, ರಾಜಾಶಂಕರ್, ಪಂಡರಿಭಾಯಿ, ಜಯಂತಿ ತಾರಾಗಣದ ಒಂದು ಸಿನಿಮಾ ನಿರ್ಮಾಣಕ್ಕೆ ಣಕ್ಕೆ ಮುಂದಾದರು. ಎಂ.ಎಸ್. ನಾಯಕ್ ಅವರಿಗೆ ನಿರ್ದೇಶನದ ಹೊಣೆ ಬಿತ್ತು. ಚಿತ್ರಕಥೆ -ಹಾಡು ಬರೆವ ಜವಾಬ್ಧಾರಿ ಇವರ ಹೆಗಲಿಗೇರಿತು. ಇವರು ಬರೆದ ಒಂದೇ ಬಳ್ಳಿಯ ಹೂಗಳು ಚಿತ್ರದ "ನೀನೆಲ್ಲಿ ನಡೆವೆ ದೂರ…" ಹಾಡು [[ಮಹಮ್ಮದ್ ರಫಿ]]ಯವರು ಹಾಡಿರುವ ಏಕೈಕ ಕನ್ನಡ ಗೀತೆ ಇದು. ಅವರ ಗೀತೆಗಳಲ್ಲಿ ಅಡಗಿರುವ ಮಾನವ ಪ್ರೀತಿ, ಶೋಷಣೆಯ ಬಗ್ಗೆ ಆಕ್ರೋಶ, ಬಡವರ ಪರ ದನಿ, ದೇವರ ಮೇಲೆ ಸಿಟ್ಟು ಇವೆಲ್ಲವೂ ಜನಸಾಮಾನ್ಯರ ದನಿಯೆನಿಸಿ ಪ್ರಸಿದ್ಧವಾಗಿವೆ. ಇವರ ಪತ್ನಿಯ ಹೆಸರು ಸುಶೀಲಾ ಬಾಯಿ. ವಿಜಯ್ ಇನ್ಸ್ ಟ್ಯೂಟ್ ನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.
==ಚಿತ್ರರಂಗದಲ್ಲಿ==
===ಗೀತರಚನೆ===
ಗೀತಪ್ರಿಯ ೨೫೦ ಕ್ಕೂ ಹೆಚ್ಚಿನ ಚಿತ್ರಗಳಿಗೆ ಗೀತೆಗಳನ್ನು ರಚಿಸಿದ್ದಾರೆ. ಅವರ ರಚಿಸಿದ ಗೀತೆಗಳ ಸಂಖ್ಯೆ ಸಾವಿರ ದಾಟಿದೆ.<ref>[http://vijaykarnataka.indiatimes.com/state/gitapriya-filmmaker-dies/articleshow/50617240.cms ವಿಜಯಕರ್ನಾಟಕ, 18ಜನವರಿ2016 ]</ref>
ಗೀತರಚನೆ ಮಾಡಿದ ಸಿನೆಮಾಗಳು.
* [[ಭಾಗ್ಯಚಕ್ರ]]
Line ೬೧ ⟶ ೬೨:
* ಪ್ರಚಂಡ ಪುಟಾಣಿಗಳು ಚಿತ್ರವನ್ನು ಹಿಂದಿಯಲ್ಲಿ "ಅನ್ಮೋಲ್ ಸಿತಾರೆ"ಯಾಗಿ ನಿರ್ದೇಶಿಸಿದರು.
===ಇವರು ರಚಿಸಿದ ಕೆಲವು ಜನಪ್ರಿಯ ಗೀತೆಗಳು<ref>[
ನೀರ ಬಿಟ್ಟು ನೆಲದ ಮೇಲೆ (ಹೊಂಬಿಸಿಲು), ಹನುಮನ ಪ್ರಾಣ ಪ್ರಭೋ ರಘು ರಾಮಾ, ಜಗದೀಶನಾಡುವ ಜಗವೇ ನಾಟಕರಂಗ (ಶ್ರೀರಾಮಾಂಜ ನೇಯ ಯುದ್ಧ), ಹೂವಿಂದ ಹೂವಿಗೆ ಹಾರುವ ದುಂಬಿಯು ಏನನು ಹೇಳುತಿದೆ (ಹೊಂಬಿಸಿಲು), ರಸಿಕ ರಸಿಕ ಬಲು ಮೆಲ್ಲನೆ ತೂರಾಡು (ಭೂಪತಿ ರಂಗ), ಇದೇನು ಸಭ್ಯತೆ (ಮಣ್ಣಿನ ಮಗ), ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ (ಪುಟಾಣಿ ಏಜೆಂಟ್ 123), ನೀನೆಲ್ಲಿ ನಡೆವೆ ದೂರ (ಒಂದೇ ಬಳ್ಳಿಯ ಹೂಗಳು), ಬೆಳುವಲದ ಮಡಿಲಲ್ಲಿ ಬೆವರ ಹನಿ ಬಿದ್ದಾಗ (ಬೆಳವಲದ ಮಡಿಲಲ್ಲಿ), ಇಲ್ಲೆ ಸ್ವರ್ಗ ಇಲ್ಲೆ ನರಕ, ಮೇಲೆ ಇಲ್ಲ ಸುಳ್ಳು (ನಾಗರ ಹೊಳೆ), ಗೋಪಿಲೋಲ, ಹೇ ಗೋಪಾಲ, ಈ ಜಗವೆಲ್ಲ ನಿನ್ನದೇ ಜಾಲ (ನಾರಿ ಮುನಿದರೆ ಮಾರಿ), ನಮ್ಮೊರ್ನಾಗ್ ನಾನೊಬ್ಬನೆ ಜಾಣ, ನನ್ನ ಹಾಡಂದ್ರೆ ಎಲ್ಲಾರ್ಗು ಪ್ರಾಣ (ನಾರಿ ಮುನಿದರೆ ಮಾರಿ), ನನ್ನ ನಿನ್ನ ಆಸೆ ನಮ್ಮ ಪ್ರೇಮ ಭಾಷೆ, ಸವಿಜೇನಿನಂತೆ, ಶ್ರುತಿ ಸೇರಿದಾಗ ಅದೇ ಆಶಾಗೀತೆ (ಮಿಡಿದ ಶೃತಿ), ಆಡುತಿರುವ ಮೋಡಗಳೆ ಹಾರುತಿರುವ ಹಕ್ಕಿಗಳೆ, ಯಾರ ತಡೆಯೂ ನಿಮಗಿಲ್ಲ ನಿಮ್ಮ ಭಾಗ್ಯ ನಮಗಿಲ್ಲ (ಬೆಟ್ಟದ ಹುಲಿ), ಪ್ರೇಮವಿದೆ ಮನದೆ ನಗುತ ನಲಿವ ಹೂವಾಗಿ, ಬಂದೆ ಇಲ್ಲಿಗೆ..ನಾ ಸಂಜೆ ಮಲ್ಲಿಗೆ..ನಾ ಸಂಜೆ ಮಲ್ಲಿಗೆ (ಅಂತ), ತಂದಾನಿ ತಂದ ನಾನ ತನ ನನನಾ, ಮಲಾ°ಡಿನ ಮೂಲೆನಾಗೆ ಇತ್ತೂಂದು ಸೋಮನ ಹಳ್ಳಿ (ಸುವರ್ಣ ಸೇತುವೆ), ಜೀವವೀಣೆ ನೀಡು ಮಿಡಿತದ ಸಂಗೀತ, ಭಾವಗೀತೆ ಬಾಳಿನೊಲುಮೆಯ ಸಂಕೇತ (ಹೊಂಬಿಸಿಲು), ಮುತ್ತುಮಳೆಗಾಗಿ ಹೊತ್ತು ಕಾದಿದೆ, ಕೆನ್ನೆಕೆಂಪಗಾಗಿ ತಂಪು ಕೋರಿದೆ (ಬೆಳುವಲದಾ ಮಡಿಲಲ್ಲಿ), ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ, ಜೀವನವೆಲ್ಲ ಸುಂದರ ಬೆಸುಗೆ (ಬೆಸುಗೆ), ನಿನ್ನ ಸವಿನೆನಪೆ ಮನದಲ್ಲಿ ಆರಾಧನೆ, ಪ್ರೀತಿಯ ಸವಿಮಾತೇ ಉಪಾಸನೆ (ಅನುರಾಗ ಬಂಧನ).
* ಆಡುತಿರುವ ಮೋಡಗಳೇ
Line ೯೯ ⟶ ೧೦೦:
* [http://antekante.com/518 ಗೀತಪ್ರಿಯರು ರಚಿಸಿದ ಕೆಲವು ಪ್ರಸಿದ್ಧ ಗೀತೆಗಳ ವಿಡಿಯೋ], ಅಂತೆಕಂತೆ.ಕಾಂ
* [http://www.udayavani.com/kannada/news/state-news/128376/kannada-film-director-geeta-priya-is-no-more ಅಗಲಿದ ಚೇತನಕ್ಕೊಂದು ನುಡಿ ನಮನ : ಗೀತಪ್ರಿಯ ನಡೆದು ಬಂದ ಹಾದಿ...], ಉದಯವಾಣಿ, Jan 18, 2016
* [https://kanaja.in/archives/113770 ತುಳು ಸಾಹಿತ್ಯ ಚರಿತ್ರೆ: ಮಾಧ್ಯಮಗಳಲ್ಲಿ ತುಳು: ಚಲನಚಿತ್ರ (೧)], ಕಣಜ
[[ವರ್ಗ:ಕನ್ನಡ ಚಲನಚಿತ್ರ ನಿರ್ದೇಶಕರು]]
|