ಪಾರಿಜಾತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಸಂಪರ್ಕಗಳು
(~~~~ )
೧೫ ನೇ ಸಾಲು:
[[ಮರಾಠಿ]] - ಖುರಸಳಿ,ಪಾರಿಜಾತಕ<BR>
 
===ಪುರಾಣಗಳಲ್ಲಿ ಪಾರಿಜಾತ=[[ಅಗ್ನಿಪುರಾಣ]]ದ ಪ್ರಕಾರ==
[[ಅಗ್ನಿಪುರಾಣ]]ದ ಪ್ರಕಾರ - ಸಮುದ್ರ ಮಥನ ಕಾಲದಲ್ಲಿ ಸುರಭಿ ಮತ್ತು ವಾರಿಣಿಯ ನಂತರ ಜನಿಸಿದ್ದು ಪಾರಿಜಾತ. ಕ್ಷೀರಸಮುದ್ರದಿಂದ ಹುಟ್ಟಿದ ೫ ಕಲ್ಪವೃಕ್ಷಗಳಲ್ಲಿ ಇದೂ ಒಂದು. ನಂತರ ಇಂದ್ರನ ನಂದನವನದಲ್ಲಿ ಪಲ್ಲವಿಸಿತು. ಕೃಷ್ಣಾವತಾರ ಕಾಲದಲ್ಲಿ, [[ಕೃಷ್ಣ]]ನು ಪಾರಿಜಾತವನ್ನು ಸ್ವರ್ಗಲೋಕದಿಂದ ತಂದು ಸತ್ಯಭಾಮೆಯ ಅಂಗಳದಲ್ಲಿ ನೆಟ್ಟನೆಂಬ ಕಥೆ ಇದೆ. ಕೃಷ್ಣಪರಮಾತ್ಮನಿಗೆ ಪಾರಿಜಾತಪುಷ್ಪವನ್ನು ಕಂಡರೆ ಪ್ರಾಣ. ಬೌದ್ಧಮಂದಿರಗಳಲ್ಲೂ ಈ ಹೂಗಳನ್ನು ಉಪಯೋಗಿಸುತ್ತಾರೆ. ಪುರಾಣಗಳಲ್ಲಿ ಉಲ್ಲೇಖಗೊಂಡ ಪಾರಿಜಾತದ ಹೂ, ಒಂದು ಕಾಲ್ಪನಿಕ ಪುಷ್ಪ. ಸಸ್ಯಶಾಸ್ತ್ರಜ್ಞರ ಪ್ರಕಾರ, ಇದು ಹೂವಲ್ಲವಂತೆ.
===ಪಾರಿಜಾತದ ಔಷಧೀಯ ಗುಣಗಳು===
ಜೀರ್ಣಾಂಗಗಳ ತೊಂದರೆಗೆ ಬೀಜದ ಪುಡಿಯನ್ನೂ ಜಾಂಡಿಸ್ ಹಾಗೂ ಮಲಬದ್ಧತೆಯ ತೊಂದರೆಗಳಿಗೆ, ಎಲೆಗಳ ರಸವನ್ನು ಔಷಧಿಯಾಗಿ ಉಪಯೋಗಿಸುತ್ತಾರೆ
ಕೀಲು ನೋವು, ತಲೆ ಹೊಟ್ಟು, ಮೂಲವ್ಯಾಧಿ, ಚರ್ಮರೋಗ, ನಾನಾರೀತಿಯ ಜ್ವರ, ಯಕೃತ್ತಿನ ರೋಗ, ಕರುಳಿನ ಹುಳು ನಿವಾರಣೆಗೆ ಪಾರಿಜಾತವನ್ನು ಔಷಧಿಯಾಗಿ ಬಳಸುತ್ತಾರೆ.
===ಪಾರಿಜಾತದ ಮಹತ್ವ ===
ಪಂಚ ವೃಕ್ಷಗಳಲ್ಲಿ ಒಂದು. ಮಂದಾರ, ಸಂತಾನ, ಕಲ್ಪವೃಕ್ಷ, ಹರಿಚಂದನಗಳೇ ಉಳಿದ ನಾಲ್ಕು ವೃಕ್ಷಗಳು. ಪಾರಿಜಾತದ ಕೆಂಪು ತೊಟ್ಟಿನಿಂದ ಪೂರ್ವಜರು ಬಟ್ಟೆಗೆ ಹಾಕುವ ಕಾವಿ ಬಣ್ಣವನ್ನು ತಯಾರಿಸುತ್ತಿದ್ದರು. ಪಾರಿಜಾತವನ್ನು ತಿಳುವಳಿಕೆ ಮತ್ತು ಜ್ಞಾನದ ಸಂಕೇತವೆಂದು ಭಾವಿಸುತ್ತಿದ್ದರು. ನೆಲದ ಮೇಲೆ ಉದುರಿದ ಹೂವನ್ನು ದೇವರಿಗೆ ಸಮರ್ಪಿಸುವುದಿಲ್ಲ. ಆದರೆ ಪಾರಿಜಾತ ಮತ್ತು [[ಬಕುಳ]]ದ ಹೂವುಗಳಿಗೆ ಮಾತ್ರ ಇದರಿಂದ ವಿನಾಯಿತಿ ಉಂಟು. ನಮ್ಮ ದೇಶದ ಸುಗಂಧಿತ ಪುಷ್ಪಗಳಲ್ಲಿ '[[ಪಾರಿಜಾತ,' ಒಂದು ವಿಶಿಷ್ಟಸ್ಥಾನವನ್ನು ಪಡೆದಿದೆ. ಕನ್ನಡದ ಆದಿಕವಿ ಪಂಪ, ತನ್ನ ಕಾವ್ಯಗಳಲ್ಲಿ ಪಾರಿಜಾತದ ಹೂವಿನ ವರ್ಣನೆಯನ್ನು ಬಹಳವಾಗಿ ಮಾಡಿದ್ದಾನೆ. ಪಾರಿಜಾತದ ಕಂಪು ಮೂಗಿಗೆ ಹಿತ. ಹೆಚ್ಚಿನ ತೀಕ್ಷ್ಣತೆಯಿಲ್ಲದ ಕೋಮಲವಾದ ಹೂವನ್ನು ಎಲ್ಲರೂ ಪ್ರೀತಿಸುತ್ತಾರೆ.ಪಾರಿಜಾತ, '[[Nyctanthes arbor-tristis]]', ಎಂಬ ಸಸ್ಯಶಾಸ್ತ್ರೀಯವರ್ಗಕ್ಕೆ ಸೇರುತ್ತದೆ. ಅಂದರೆ ರಾತ್ರಿಯಲ್ಲಿ ಅರಳುವ ಹೂ ಎಂದರ್ಥ.
==ಇದರ ಇನ್ನೊಂದು ಹೆಸರು, [[Nyctanthes arbor-tristis]](ಸೊರಗಿದ ಮರ) ವೆಂದು==
ರಾತ್ರಿಯ ಹೊತ್ತೇ ಪಾರಿಜಾತದ ಹೂಗಳು ಅರಳಿ ಸುಗಂಧವನ್ನು ಹೊರಸೂಸುವುದರಿಂದ, [[ಟ್ರೀ ಆಫ್ ಸ್ಯಾಡ್ನೆಸ್]], ಎನ್ನುವವರೂ ಇದ್ದಾರೆ.
==ಪಾರಿಜಾತ ಹೂವಿನ ವೃತ್ತಾಂತ==
ಪಾರಿಜಾತವೆಂಬ ಹೆಸರು ಬರಲು ಕಾರಣವಿದೆ. ಇದರಬಗ್ಗೆ ಒಂದು ಸುಂದರ ಕಥೆಯ ಪ್ರಕಾರ, ಪಾರಿಜಾತವೆಂಬ ಹೆಸರಿನ ರಾಜಕುವರಿಯೊಬ್ಬಳು, ಸೂರ್ಯನನ್ನು ಪ್ರೀತಿಸಿದಳಂತೆ. ಸೂರ್ಯ ಸ್ವಲ್ಪಸಮಯದಲ್ಲೇ ಅವಳನ್ನು ತೊರೆದುಬಿಟ್ಟ. ಪ್ರಿಯಕರನ ವಿರಹವನ್ನು ತಾಳಲಾರದೆ ಆಕೆ ಆತ್ಮಹತ್ಯೆ ಮಾಡಿಕೊಂಡಳಂತೆ. ಅವಳ ದೇಹವನ್ನು ಸುಟ್ಟಬೂದಿಯಿಂದ ಪಾರಿಜಾತದ ಗಿಡವು ಹುಟ್ಟಿತಂತೆ. ಆದ್ದರಿಂದಲೇ ಸೂರ್ಯ ಭಗವಾನನ ಪ್ರಖರ ಕಿರಣಗಳನ್ನು ಇದು ತಡೆದುಕೊಳ್ಳಲಾರದು. ಪಾರಿಜಾತ ಅದಕ್ಕಾಗಿಯೇ ಸೂರ್ಯಕಿರಣಗಳು ಮೂಡುವಮೊದಲೇ ಹೂ ಉದುರಿಸಿತ್ತವೆ. ಇಂತಹ ನೋವಿನ ಕಥೆಯಿಂದಾಗಿ [[ಸೊರಗಿದ ಮರ]] ವೆಂಬ ಹೆಸರು ಬಂದಿದೆ. ರಾತ್ರಿಅರಳುವಹೂವಾದ್ದರಿಂದ [[ನೈಟ್ ಜ್ಯಾಸ್ಮಿನ್,]] ಎನ್ನುವ ಹೆಸರೂ ಇದಕ್ಕೆ ಅನ್ವಯಿಸುತ್ತದೆ. ಸಂಸ್ಕೃತ ಕನ್ನಡಭಾಷೆಗಳಲ್ಲಿ ಇದರ ಹೆಸರು, ಪಾರಿಜಾತವೇ. ಆದರೆ ಮರಾಠಿಭಾಷೆಯಲ್ಲಿ ಇದನ್ನು [[ಪಾರಿಜಾತಕ್]], ಎಂದು ಕರೆಯುವ ವಾಡಿಕೆಯಿದೆ.
==ಪಾರಿಜಾತದ ಮರದ ವರ್ಣನೆ==
ಇದು ಮಧ್ಯಮ ಗಾತ್ರದ ಹೊದರು. ಅಥವ ಚಿಕ್ಕಮರವೆಂದು ಹೇಳಹಹುದು. ಪಾರಿಜಾತದ ಹೂಗಳನ್ನು ಮಲ್ಲಿಗೆ ಹೂವಿಗೆ ಹೋಲಿಸಬಹುದು. ಆದರೆ ಸುವಸನೆಯಲ್ಲಿ ಇವು ಬಹಳ ನಾಜೂಕು. ಗೊಂಚಲಿನ ರೂಪದಲ್ಲಿ ಅರಳುತ್ತವೆ. ೫ ರಿಂದ ೮ ದಳಗಳ ಬಿಳಿಹೂವಿಗೆ, ಹವಳಗೆಂಪಿನನಾಳ ಆಕರ್ಷಕವಾಗಿ ಜೋಡಿಸಲಾಗಿದೆ. ಮನಕ್ಕೆ ಮುದಕೊಡುವ ಹಿತ-ಮಿತವಾದ ಸುಗಂಧ ಪಾರಿಜಾತದ ಕೆಲವುವಿಶೇಷಶತೆಗಳಲ್ಲೊಂದು. ಕೋಮಲವಾದ ಹೂಗಳನ್ನು ಮುಟ್ಟಿದರೆ ಗಿಡದಿಂದ ಕಳಚಿಕೊಳ್ಳುವ ಸಾಧ್ಯತೆಗಳಿವೆ. ಜುಲೈ ತಿಂಗಳಿನಿಂದ ನವೆಂಬರ್ ಮಾಸದವರೆಗೆ ದಂಡಿಯಾಗಿ ಹೂ ಸುರಿಸುತ್ತವೆ. ಸೂರ್ಯ ಮುಳುಗಿದಮೇಲೆ ಅರಳ್ದಿದ ಹೂವುಗಳು, ರಾಶ್ತ್ರಿಯೇ ಉದುರಿ, ಬೆಳಿಗ್ಯೆ ಗಿಡದ ಕೆಳಭಗದಲ್ಲಿ, ಹೂವಿನ ಹಾಸಿಗೆಯಂತೆ ಕಾಣಿಸುತ್ತವೆ. ಈ ಹೂವುಗಳನ್ನು ಆಯ್ದು ಮನೆಯಲ್ಲಿಟ್ಟರೆ, ಜೇನಿನಂತಹ ಪರಿಮಳದ ಅನುಭವವಾಗುತ್ತದೆ. ಇದು ಎಲೆ ಉದುರಿಸುವ ಮರ. ಪಾರಿಜಾತದ ಹೂವಿನ ಕಾಲಮುಗಿದಮೇಲೆ ಕೊಂಬೆಯನ್ನು ಕತ್ತರಿಸಬೇಕು.
ಗಿಡದ ರೆಂಬೆಗಳು ನಾಲ್ಕುಮೂಲೆ, ಎಲೆಗಳ ಆಕಾರ ಹೃದಯವನ್ನು ಹೋಲುತ್ತವೆ. ತುದಿ ಮೊನಚು. ಒರಟಾದ ಎಲೆಗಳು,ಬೂದಿಮಿಶ್ರಿತ ಹಸಿರುಬಣ್ಣ. ಉಪ್ಪುಕಾಗದದಂತೆ ಒರಟು. ಎಲೆತೊಟ್ಟು ಮೋಟಾಗಿರುತ್ತದೆ. ಕೊಂಬೆಗಳು ಸಾಮಾನ್ಯವಾಗಿ ಬಾಗಿರುತ್ತವೆ. ೪ ಮೀಟರ್ ಎತ್ತರ ಬೆಳೆಯುತ್ತವೆ. ಗಿಡ ವಿಶಾಲವಾಗಿ ಹಬ್ಬಿಕೊಂಡು ಎಲ್ಲಾ ಭಾಗದಲ್ಲೂ ಹರಡಿಕೊಂಡಿರುತ್ತದೆ. ಕಾಯಿಗಳು ಗುಂಡಾಗಿರುತ್ತವೆ. ದಕ್ಷಿಣಭಾರತದ ಉದ್ಯಾನವನಗಳಿಗೆ ಬಹಳ ಹಿಂದೆಯೇ ಬಂದಿದೆ. ಮಹಾರಾಷ್ಟರ ಮಣ್ಣು ಹಾಗೂ ಪರಿಸರ ಇದಕ್ಕೆ ಅನುಕೂಲಕರವಾಗಿದೆ. ರಸ್ತೆಯ ಅಕ್ಕ ಪಕ್ಕಗಳಲ್ಲೂ ಇದು ಮಹಾರಾಷ್ಟ್ರದಲ್ಲಿ ಬೆಳೆಯುತ್ತದೆ.
==ಪಾರಿಜಾತ ಮರ ಹಾಗೂ ಹೂವಿನ ಉಪಯೋಗಗಳು==
ಪಾ ಸುಗಂಧವನ್ನು ತಯಾರಿಸುತ್ತಾರೆ. ಹೂವಿನ ಕಿತ್ತಳೆಗೆಂಪಿನ ನಾಳ ಬಣ್ಣ ಕಟ್ಟಲು ಉಪಯೋಗಕ್ಕೆ ಬರುತ್ತದೆ. ಎಲೆಗಳನ್ನು ನಾಟವನ್ನು ಪಾಲಿಷ್ ಮಾಡಲು ಉಪಯೋಗಿಸುತ್ತಾರೆ. ಪಾರಿಜಾತ ಸಹಜವಾಗಿ ಅಸ್ಸಾಮ್ ಈಶನ್ಯ ಭಾರತದ ಕಾಡುಗಳಲ್ಲಿ ಬೆಳೆಯುತ್ತದೆ. ಮರದ ತೊಗಟೆಯಿಂದ ಟ್ಯಾನಿನ್ ಅನ್ನು ತಯಾರಿಸುತ್ತಾರೆ.
 
ಮನೆಯ ಹತ್ತಿರದಲ್ಲಿ ಅಂಗಳದ ಮೂಲೆಯಲ್ಲಿ ಒಂದು ಪಾರಿಜಾತದ ಮರವಿದ್ದರೆ ಸಾಕು ; ಪ್ರದೇಶದ ಗಾಳಿಯಲ್ಲಿ ನವಿರಾದ ಸುಗಂಧದ ಎಳೆಗಳು ಗಾಳಿಯಲ್ಲಿ ತೇಲಿಬರುವ ಅನುಭವನ್ನು ಸವಿಯುತ್ತೀರಿ.
===ಪುರಾಣಗಳಲ್ಲಿ ಪಾರಿಜಾತ===
 
[[ಅಗ್ನಿಪುರಾಣ]]ದ ಪ್ರಕಾರ - ಸಮುದ್ರ ಮಥನ ಕಾಲದಲ್ಲಿ ಸುರಭಿ ಮತ್ತು ವಾರಿಣಿಯ ನಂತರ ಜನಿಸಿದ್ದು ಪಾರಿಜಾತ. ಕ್ಷೀರಸಮುದ್ರದಿಂದ ಹುಟ್ಟಿದ ೫ ಕಲ್ಪವೃಕ್ಷಗಳಲ್ಲಿ ಇದೂ ಒಂದು. ನಂತರ ಇಂದ್ರನ ನಂದನವನದಲ್ಲಿ ಪಲ್ಲವಿಸಿತು. ಕೃಷ್ಣಾವತಾರ ಕಾಲದಲ್ಲಿ, [[ಕೃಷ್ಣ]]ನು ಪಾರಿಜಾತವನ್ನು ಸ್ವರ್ಗಲೋಕದಿಂದ ತಂದು ಸತ್ಯಭಾಮೆಯ ಅಂಗಳದಲ್ಲಿ ನೆಟ್ಟನೆಂಬ ಕಥೆ ಇದೆ.
 
===ಪಾರಿಜಾತದ ಔಷಧೀಯ ಗುಣಗಳು===
 
 
ಕೀಲು ನೋವು, ತಲೆ ಹೊಟ್ಟು, ಮೂಲವ್ಯಾಧಿ, ಚರ್ಮರೋಗ, ನಾನಾರೀತಿಯ ಜ್ವರ, ಯಕೃತ್ತಿನ ರೋಗ, ಕರುಳಿನ ಹುಳು ನಿವಾರಣೆಗೆ ಪಾರಿಜಾತವನ್ನು ಔಷಧಿಯಾಗಿ ಬಳಸುತ್ತಾರೆ.
 
===ಪಾರಿಜಾತದ ಮಹತ್ವ ===
 
ಪಂಚ ವೃಕ್ಷಗಳಲ್ಲಿ ಒಂದು. ಮಂದಾರ, ಸಂತಾನ, ಕಲ್ಪವೃಕ್ಷ, ಹರಿಚಂದನಗಳೇ ಉಳಿದ ನಾಲ್ಕು ವೃಕ್ಷಗಳು. ಪಾರಿಜಾತದ ಕೆಂಪು ತೊಟ್ಟಿನಿಂದ ಪೂರ್ವಜರು ಬಟ್ಟೆಗೆ ಹಾಕುವ ಕಾವಿ ಬಣ್ಣವನ್ನು ತಯಾರಿಸುತ್ತಿದ್ದರು. ಪಾರಿಜಾತವನ್ನು ತಿಳುವಳಿಕೆ ಮತ್ತು ಜ್ಞಾನದ ಸಂಕೇತವೆಂದು ಭಾವಿಸುತ್ತಿದ್ದರು. ನೆಲದ ಮೇಲೆ ಉದುರಿದ ಹೂವನ್ನು ದೇವರಿಗೆ ಸಮರ್ಪಿಸುವುದಿಲ್ಲ. ಆದರೆ ಪಾರಿಜಾತ ಮತ್ತು [[ಬಕುಳ]]ದ ಹೂವುಗಳಿಗೆ ಮಾತ್ರ ಇದರಿಂದ ವಿನಾಯಿತಿ ಉಂಟು.
 
 
"https://kn.wikipedia.org/wiki/ಪಾರಿಜಾತ" ಇಂದ ಪಡೆಯಲ್ಪಟ್ಟಿದೆ