ಬಾಲ ಗಂಗಾಧರ ತಿಲಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು removed Category:ಭಾರತ ರತ್ನ ಪುರಸ್ಕೃತರು using HotCat |
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ |
||
೬ ನೇ ಸಾಲು:
ತಿಲಕರು ಹುಟ್ಟಿದ್ದು ೧೮೫೬ರ ಜುಲೈ ೨೩ರಂದು ಮಹಾರಾಷ್ತ್ರದ ರತ್ನಾಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ.ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು.
ಪದವಿ ಪಡೆದ ಬಳಿಕ ಪುಣೆಯ ಖಾಸಗೀ ಶಾಲೆಯೊಂದರಲ್ಲಿ ಗಣಿತ ಶಿಕ್ಷಕರಾಗಿ ಸೇರಿದ ತಿಲಕರು , ನಂತರ ಅದನ್ನು ಬಿಟ್ಟು ಪತ್ರಕರ್ತರಾದರು. ಪಾಶ್ಚಿಮಾತ್ಯ ಶಿಕ್ಷಣ ಪಧ್ಧತಿಯು ಭಾರತೀಯ ಪರಂಪರೆಯನ್ನು ಅವಹೇಳಿಸುವಂಥಾದ್ದೂ ಹಾಗೂ ಭಾರತದ ವಿದ್ಯಾರ್ಥಿಗಳನ್ನು ಕೀಳುಗಳೆಯುವಂಥಾದ್ದು ಎಂಬ ನಿರ್ಧಾರಕ್ಕೆ ಬಂದ ಅವರು, ಈ ಪಧ್ಧತಿಯ ತೀವ್ರ ಟೀಕಾಕಾರರಾದರು.
ವಿದ್ಯಾರ್ಥಿಗಳಿಗೆ
== ರಾಜಕೀಯ ಜೀವನ ==
ತಿಲಕರು ಸ್ಥಾಪಿಸಿದ "ಕೇಸರಿ" ಮರಾಠಿ ಪತ್ರಿಕೆಯು ಬಹುಬೇಗ ಜನಸಾಮಾನ್ಯರ ಮನೆಮಾತಾಯಿತು. ಅಭಿಪ್ರಾಯ ಸ್ವಾತಂತ್ರ್ಯವನ್ನು, ಅದರಲ್ಲೂ ಮುಖ್ಯವಾಗಿ, ೧೯೦೫ರ ಬಂಗಾಳದ ವಿಭಜನೆಯ ವಿರೋಧವನ್ನು , ಹತ್ತಿಕ್ಕಿದ; ಭಾರತದ ನಾಗರೀಕರನ್ನು, ಸಂಸೃತಿಯನ್ನು, ಪರಂಪರೆಯನ್ನು ಹೀಯಾಳಿಸುವ ಬ್ರಿಟಿಷ್ ಸತ್ತೆಯ ತೀವ್ರ ಟೀಕೆಯನ್ನು ಅವರು ಕೇಸರಿಯಲ್ಲಿ ಮಾಡುತ್ತಿದ್ದರು. ಭಾರತೀಯರಿಗೆ ಸ್ವರಾಜ್ಯದ ಹಕ್ಕನ್ನು ಬಿಟ್ಟುಕೊಡಬೇಕೆಂದು ಅವರು ಪ್ರತಿಪಾದಿಸಿದರು.
|