ಶಿವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
|||
೨೦ ನೇ ಸಾಲು:
{{Hinduism}}
ಮಂಗಳಕರನೋ ಅವನೇ '''ಶಿವ'''. ಹಿಂದೂ ಧರ್ಮದಲ್ಲಿ ಯಾವ ಯಾವಾಗ [[ನಿರಾಕಾರ ಉಪಾಸನೆ]] ಬರುತ್ತದೋ ಆಗ ಆ [[ಪರಬ್ರಹ್ಮ]]ವನ್ನು ಶಿವ ಎಂದೇ ಸಂಬೋಧಿಸುತ್ತಾರೆ. ಲಿಂಗಾಯತ ಮತದ ಪ್ರಕಾರ ಶಿವವೇ ಪರಬ್ರಹ್ಮ. ಕೆಲವರು [[ಹಿಂದೂ ಧರ್ಮ]]ದ ಪ್ರಕಾರ [[ತ್ರಿಮೂರ್ತಿ]]ಗಳಲ್ಲಿ ಒಬ್ಬನಾದ ಮಹೇಶ್ವರನೇ ಶಿವನೆಂದು ಭಾವಿಸುತ್ತಾರೆ.
ಶಿವನಿಗೆ ''ಲಯಕಾರಕ'' ಎಂದೂ ಸಹ ಕರೆಯುತ್ತಾರೆ. ಅಂದರೆ ''ಸೃಷ್ಟಿ'' ಮಾಡುವುದು ಬ್ರಹ್ಮನ ಕೆಲಸವಾದರೆ, ಆ ಸೃಷ್ಟಿಯಾದ ಆಕರಗಳಿಗೆ (ಜೀವಿಗಳಿಗೆ) ''ಸ್ಥಿತಿ'' ಕೊಡುವುದು ವಿಷ್ಣುವಿನ ಕೆಲಸ. ಈ ರೀತಿ ಸೃಷ್ಟಿ, ಸ್ಥಿತಿ ಪಡೆದ ಆಕರಗಳಿಗೆ ''ಲಯ'' (ಕೊನೆ) ಕಾಣಿಸುವವನು ಶಿವ. ಆದ್ದರಿಂದ ಶಿವನಿಗೆ ''ಲಯಕಾರ'' ಎಂದೂ ಸಹ ಕರೆಯುತ್ತಾರೆ. ಸಂಹಾರಕ
ಋಗ್ವೇದದಲ್ಲಿ ಶಿವ ಎನ್ನುವ ದೇವತೆ ಇಲ್ಲ. ರುದ್ರ ಎನ್ನುವ ಹೆಸರಿನ ದೇವತೆ ಇದ್ದಾನೆ. ಈ ರುದ್ರನಿಗೆ ಶಿವ, ಈಶ್ವರ, ಶಂಭು, ಶಂಕರ, ಪಶುಪತಿ, ಮುಕ್ಕಣ್ಣ, ಶಶಿಧರ, ಚಂದ್ರಶೇಖರ, ನೀಲಕಂಠ, ನಂಜುಂಡ, ಮಹದೇಶ್ವರ, ಮಹೇಶ್ವರ, ನಾಗರಾಜ, ನಾಗೇಶ, ಕೈಲಾಸ ಪತಿ ಎನ್ನುವ ವಿಶೇಷಣವನ್ನು ಬಳಸಲಾಗಿದೆ.
ಶಿವ ಶಬ್ದಕ್ಕೆ ಸಂಸ್ಕೃತದಲ್ಲಿ 'ಮಂಗಳ'' ಎನ್ನುವ ಅರ್ಥವನ್ನು ಹೇಳುವರಾದರೂ, ಈ ಶಬ್ದಕ್ಕೆ ಸಂಸ್ಕೃತದಲ್ಲಿ ಸರಿಯಾದ ವ್ಯುತ್ಪತ್ತಿಯು ಇನ್ನೂ ನಿಶ್ಚಯವಾಗಿಲ್ಲ. ಶಿವ ಶಬ್ದವು ಮೂಲದಲ್ಲಿ ಸಂಸ್ಕೃತ ಭಾಷೆಯ ಶಬ್ದವೇ ಅಲ್ಲ. ಆದುದರಿಂದಲೇ ಈ ಶಬ್ದಕ್ಕೆ ನಿರುಕ್ತ ದೊರೆಯು ವುದಿಲ್ಲ ಎಂದು ದ್ರಾವಿಡ ಭಾಷಾತಜ್ಞರು ಹೇಳುತ್ತಾರೆ. ಶಿವ ಎಂದರೆ ಮಾಯಾ, ನಿರಹಂಕಾರ, ಬಂಧರಹಿತ ಎನ್ನಲಾಗಿದೆ.
ಮೂಲ ದ್ರಾವಿಡ ಭಾಷೆಯಲ್ಲಿ ಶೆನ್, ಶಿನ್ ಎಂಬ ಬೀಜ ಶಬ್ದಗಳು ಇವೆ ಹಾಗು ಈ ಶಬ್ದಗಳಿಗೆ ಕೆಂಪು ಎನ್ನುವ ಅರ್ಥ ಇದೆ. ಆದ್ದರಿಂದ ಶಿವ ಶಬ್ದವು ಶೆನ್, ಶಿನ್ ಶಬ್ದದಿಂದಲೇ ಹುಟ್ಟಿದೆ ಎಂದು ಅಭಿಪ್ರಾಯ ಪಡುತ್ತಾರೆ. ಶಿನ್ (ದಂತೆ ಇರುವ) ಅವನೇ ಶಿವನು ಎಂದು ಹೇಳಿ, ಶಿವನನ್ನು ಕೆಂಪಗೆ ಇರುವ ದೇವತೆ ಎನ್ನುತ್ತಾರೆ . ಋಗ್ವೇದ ಭಾಷ್ಯದಲ್ಲಿ ಸಾಯಣರು ರುದ್ರ ಶಬ್ದಕ್ಕೆ ಆರು ಬಗೆಯಿಂದ ಆರ್ಥ ಮಾಡಬಹುದೆಂದು ತೋರಿಸಿದ್ದಾರಾದರೂ, ರುದ್ರ ಶಬ್ದಕ್ಕೆ ಕೆಂಪು ಎಂದು ಆರ್ಥಮಾಡಿಲ್ಲ.
ಪಿಶ್ಚಲ್ ಎಂಬ ವೇದ ವಿದ್ವಾಂಸ, ರುದ್ರ ಶಬ್ದಕ್ಕೆ ಕೆಂಪು ಎಂದು ಅರ್ಥಮಾಡಿದ್ದಾನೆ. ರುದ್ರ ಶಬ್ದ ಬಳಗದ 'ರುಧಿರ' ಶಬ್ದಕ್ಕೆ ಹೋಲಿಸಿದರೆ ರುದ್ರ ಶಬ್ದದಲ್ಲಿ ಅಡಗಿರುವ ಕೆಂಪು ಮನವರಿಕೆಯಾಗುತ್ತದೆ ಎನ್ನುತ್ತಾನೆ. ವೇದ ಋಷಿಗಳಿಗೆ ರುದ್ರ ದೇವತೆ ಕೆಂಪು ಮೂರ್ತಿಯಾಗಿ ಕಾಣಿಸಿದ್ದರೆ ಆಶ್ಚರ್ಯಪಡಬೇಕಾಗಿಲ್ಲ.
ವೇದ ಋಷಿಗಳೇ ಅವನನ್ನು 'ತಾಮ್ರವರ್ಣಿ' ಎಂದಿದ್ದಾರೆ. ಪ್ರಾಚೀನ ಕನ್ನಡ ಭಾಷೆಯಲ್ಲಿ ತಾಮ್ರಕ್ಕೆ 'ಶೆಮ್ಬೋನ್' = ಕೆಂಪು ಲೋಹ ಎನ್ನುವ ಹೆಸರಿದ್ದುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ವೈದಿಕ ಸಂದರ್ಭದಲ್ಲಿ ರುದ್ರನನ್ನು ಕೆಂಪನೆಯ ಸಾಯಂಕಾಲದ ಸೂರ್ಯನಲ್ಲಿ ಕಲ್ಪಿಸಿಕೊಳ್ಳಲಾಗಿದೆ ಮತ್ತು ಅವನು ಅಲ್ಲಿ ಚಂಡಮಾರುತದ ಪ್ರಭುವೆಂದು ಭಾವಿಸಲಾಗಿದೆ ಎಂದು ಋಗ್ವೇದದ ಕನ್ನಡಾನುವಾದದಲ್ಲಿ ಹೆಚ್.ಪಿ. ವೆಂಕಟರಾವ್ ಅವರು ತಿಳಿಸಿದ್ದಾರೆ .
[[ವರ್ಗ:ಹಿಂದೂ ದೇವತೆಗಳು]]
|