ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
ದೇ. ಜ. ಗೌ. ಎನ್ನುವುದು ದೇ. ಜವರೇಗೌಡ ಎಂಬುದರ ಹೃಸ್ವ ರೂಪ. '''ದೇಜಗೌ''' ಎಂದೇ ಹೆಸರಾಗಿರುವ '''ದೇ.ಜವರೇಗೌಡ''' ಅವರು [[ಕನ್ನಡ]]ದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರು.
ಇವರು [[ಕುವೆಂಪು]]
ದೇ. ಜವರೇಗೌಡ ಅವರು ಕನ್ನಡದ ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರಲ್ಲಿ ಒಬ್ಬರು. ಸರಿಸುಮಾರು ಏಳು ದಶಕಗಳಿಂದ ವಿದ್ವತ್ತು, ಆಡಳಿತ ಮತ್ತು ಚಳುವಳಿಗಳೆಂಬ -ಮೂರು ನೆಲೆಗಳಲ್ಲಿ ಮಾಡಿರುವ ಕೆಲಸಗಳು ಅವರ ಕೊಡುಗೆಯ ಸ್ವರೂಪವನ್ನು ನಿರ್ಧರಿಸಿವೆ. ಜಾನಪದ, ಗ್ರಂಥಸಂಪಾದನೆ, ಸಾಹಿತ್ಯವಿಮರ್ಶೆ, ಭಾಷಾಂತರ, ಜೀವನಚರಿತ್ರೆ, ಪ್ರವಾಸ ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ವ್ಯಾಪಕವಾದ ಕೆಲಸ ಮಾಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗಾಗಿ ಹತ್ತಾರು ಮಹತ್ವದ ಯೋಜನೆಗಳನ್ನು ರೂಪಿಸಿದ, ಸಂಪನ್ಮೂಲಗಳನ್ನು ಸೃಷ್ಟಿಸಿ, ಅವನ್ನು ಯಶಸ್ವಿಯಾಗಿ ನಿರ್ವಹಿಸಿದ ದೇಜಗೌರ ಸಾಧನೆ ಅನುಪಮವಾದುದು. ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ, ಅವರು ಕನ್ನಡದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕೆಲಸಗಳನ್ನು ಮಾಡಿದ್ದಾರೆ, ನಿವೃತ್ತಿಯ ನಂತರವೂ ಅಂತಹುದೇ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ದೇಜಗೌ ಅವರು ಪ್ರಾರಂಭಿಸಿದ ಮತ್ತು ಯಶಸ್ವಿಯಾಗಿ ನಿರ್ವಹಿಸಿದ ‘ಕನ್ನಡ ವಿಶ್ವಕೋಶ’, ‘ವಿಷಯ ವಿಶ್ವಕೋಶ-ಕರ್ನಾಟಕ’, ‘ಇಂಗ್ಲಿಷ್-ಕನ್ನಡ ನಿಘಂಟು’, ‘ಸಮಗ್ರ ಕನ್ನಡ ಸಾಹಿತ್ಯಚರಿತ್ರೆ ‘, ‘ಕನ್ನಡ ಛಂದಸ್ಸಿನ ಇತಿಹಾಸ’ ಮುಂತಾದ ಕೆಲವು ಮುಖ್ಯವಾದ ಯೋಜನೆಗಳನ್ನು ಇಲ್ಲಿ ಹೆಸರಿಸಬಹುದು. ಕರ್ನಾಟಕಲ್ಲೇ ಮೊದಲಬಾರಿಗೆ ‘ಜಾನಪದ ವಸ್ತುಸಂಗ್ರಹಾಲ’ಯವನ್ನು ಸ್ಥಾಪಿ¹ ಜಾನಪದ ಅಧ್ಯಯನಕ್ಕೆ ತಳಹದಿಯನ್ನು ರೂಪಿಸಿಕೊಟ್ಟಿದ್ದು ಅವರ ಮುಖ್ಯವಾದ ಸಾಧನೆಗಳಲ್ಲಿ ಒಂದು. ಅವರು ವಿಶ್ವವಿದ್ಯಾಲಯದಲ್ಲಿ ಅನೇಕ ಹೊಸ ವಿಭಾಗಗಳನ್ನು ಪ್ರಾರಂಭಿಸಿದರು. ಈಗಲೂ ‘ಕುವೆಂಪು ವಿದ್ಯಾವರ್ಧಕ ಟ್ರಸ್ಟ್’ ಮೂಲಕ ಕನ್ನಡಪರವಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
೧೬ ನೇ ಸಾಲು:
=== ವೃತ್ತಿಜೀವನ ===
1946ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ, ಕನ್ನಡ ಅಧ್ಯಾಪಕರಾದರು. ಅನೇಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಪ್ರಕಟಣ ವಿಭಾಗದ ಕಾರ್ಯದರ್ಶಿ, ಸಹಾಯಕ ಪ್ರಾಧ್ಯಾಪಕ, ಪರೀಕ್ಷೆಗಳ ನಿಯಂತ್ರಣಾಧಿಕಾರಿ, ಪ್ರಾಧ್ಯಾಪಕರು, ವಿಭಾಗದ ಮುಖ್ಯಸ್ಥರು, ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಮುಂತಾದವು ಅವುಗಳಲ್ಲಿ ಕೆಲವು. 1969ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ತಮ್ಮ ಕನ್ನಡಪರವಾದ ರಚನಾತ್ಮಕ ಚಟುವಟಿಕೆಗಳನ್ನು ಆರು ವರ್ಷಗಳ ಕಾಲ ಮುಂದುವರೆಸಿದರು.(1975) ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ. ಕುವೆಂಪು ಅವರ ಮಾನಸ ಪುತ್ರರೆಂದು ಇವರನ್ನು ಕರೆಯುತ್ತಾರೆ.
ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬೆಳವಣಿಗೆಯಲ್ಲಿ ಇವರ ಪಾತ್ರ ತುಂಬಾ ಹಿರಿದಾದುದು. ೧೯೬೬ರಲ್ಲಿ ಜಾನಪದವನ್ನು ಕನ್ನಡ ತರಗತಿಗಳಲ್ಲಿ ವಿಶೇಷ ಅಧ್ಯಯನವಾಗಿ ಅಳವಡಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಜಾನಪದ ವಸ್ತು ಸಂಗ್ರಹಾಲಯದ ಅಭಿವೃದ್ದಿಗೆ ನೆರವಾದವರು. ಇವರ ಜಾನಪದ ಸೇವೆ ಗಮನಿಸಿ ಕರ್ನಾಟಕ ವಿಶ್ವವಿದ್ಯಾನಿಲಯದ ಮೂರನೇ ಜಾನಪದ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆರಿಸಿತು. ಕನ್ನಡಕ್ಕೆ ಎಲ್ಲೆ ಸಮಸ್ಯೆಗಳು ಉದ್ಬವಿಸಿದರೂ
=== ಸಾಹಿತ್ಯಕೃಷಿ ===
|