ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೮ ನೇ ಸಾಲು:
| footnotes = (ಇತರ ವಿಷಯಗಳು)
}}
'''ದೇಜಗೌ''', ಎನ್ನುವುದು ದೇ.ಜವರೇಗೌಡ, ಎಂಬುದರ ಹೃಸ್ವ ರೂಪ. '''ದೇಜಗೌ''' ಎಂದೇ ಹೆಸರಾಗಿರುವ '''ದೇ.ಜವರೇಗೌಡ''' ಅವರು [[ಕನ್ನಡ]]ದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರು. [[ಕುವೆಂಪು]] ಅವರ ಮಾನಸ ಪುತ್ರರೆಂದು ಕರೆಯಲ್ಪಡುವ ದೇಜಗೌ ಅವರು, ಡಾ. ಕುವೆಂಪು ಅವರ ಶಿಷ್ಯರಾಗಿ ಅವರ ಮಾರ್ಗದರ್ಶನದಿಂದ ಕನ್ನಡದ ಹೆಸರಾಂತ ಗದ್ಯ ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. 'ದೇಜಗೌ' ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ.
 
==ಜೀವನ==
 
=== ಜನನ ===
 
1918ರ ಜುಲೈ ೮ರಂದು ಈಗಿನ [[ರಾಮನಗರ]] ಜಿಲ್ಲೆಯ [[ಚನ್ನಪಟ್ಟಣ]] ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ [[೧೯೧೮]], [[ಜುಲೈ ೮]]ರಂದು ದೇವೇಗೌಡ, ಚೆನ್ನಮ್ಮ ದಂಪತಿಗಳಿಗೆ ಜನಿಸಿದರು.
 
=== ಶಿಕ್ಷಣ ===
ಬಡತನವನ್ನು ಹಾಸಿಹೊದ್ದರೂ ವಿದ್ಯೆಯ ಕಡೆ ಅಪಾರವಾದ ಆಸಕ್ತಿ ಇದ್ದುದರಿಂದ ಶಾಲೆಗೆ ಸೇರಿ, ನಂತರದಲ್ಲಿ ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಪಡೆದರು. ರಾಷ್ಟ್ರಕವಿ ಕುವೆಂಪು ಅವರಿಂದ ಪ್ರಭಾವಿತರಾಗಿ, ಮೈಸೂರಿನಲ್ಲಿ ಕನ್ನಡ ಎಂ.ಎ.ಪದವಿ ಪಡೆದರು.
 
===ಮರಣ===
ದೇ.ಜವರೇಗೌಡರು, ದಿನಾಂಕ 30-5-2016ರಂದು ಸೋಮವಾರ ಸಂಜೆ 6.30ಕ್ಕೆ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು.
<ref> [https://web.archive.org/web/20160531052203/http://www.prajavani.net/article/%E0%B2%B9%E0%B2%BF%E0%B2%B0%E0%B2%BF%E0%B2%AF-%E0%B2%B8%E0%B2%BE%E0%B2%B9%E0%B2%BF%E0%B2%A4%E0%B2%BF-%E0%B2%A6%E0%B3%87%E0%B2%9C%E0%B2%97%E0%B3%8C-%E0%B2%87%E0%B2%A8%E0%B3%8D%E0%B2%A8%E0%B2%BF%E0%B2%B2%E0%B3%8D%E0%B2%B2 ಹಿರಿಯ ಸಾಹಿತಿ ದೇಜಗೌ ಇನ್ನಿಲ್ಲ], ಪ್ರಜಾವಾಣಿ ವಾರ್ತೆ, 05/30/2016</ref><ref>[https://web.archive.org/save/http://www.udayavani.com/kannada/news/state-news/150630/he-dies-dejagau-kattalu-mysore-funeral-today ಕನ್ನಡದ ಕಟ್ಟಾಳು ದೇಜಗೌ ವಿಧಿವಶ; ಇಂದು ಮೈಸೂರಲ್ಲಿ ಅಂತ್ಯಕ್ರಿಯೆ], ಉದಯವಾಣಿ, May 31, 2016 </ref>, <ref>[http://www.newskarnataka.com/mysore/noted-kannada-litterateur-javare-gowda-no-more, Noted Kannada litterateur Javare Gowda no more] News karnataka.com, May 31, 2016, </ref>
 
== ವೃತ್ತಿಜೀವನ ==
1946ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ, ಕನ್ನಡ ಅಧ್ಯಾಪಕರಾದರು. ಅನೇಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಪ್ರಕಟಣ ವಿಭಾಗದ ಕಾರ್ಯದರ್ಶಿ, ಸಹಾಯಕ ಪ್ರಾಧ್ಯಾಪಕ, ಪರೀಕ್ಷೆಗಳ ನಿಯಂತ್ರಣಾಧಿಕಾರಿ, ಪ್ರಾಧ್ಯಾಪಕರು, ವಿಭಾಗದ ಮುಖ್ಯಸ್ಥರು, ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಮುಂತಾದವು ಅವುಗಳಲ್ಲಿ ಕೆಲವು. 1969ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ತಮ್ಮ ಕನ್ನಡಪರವಾದ ರಚನಾತ್ಮಕ ಚಟುವಟಿಕೆಗಳನ್ನು ಆರು ವರ್ಷಗಳ ಕಾಲ ಮುಂದುವರೆಸಿದರು. ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬೆಳವಣಿಗೆಯಲ್ಲಿ ಇವರ ಪಾತ್ರ ತುಂಬಾ ಹಿರಿದಾದುದು. ೧೯೬೬ರಲ್ಲಿ ಜಾನಪದವನ್ನು ಕನ್ನಡ ತರಗತಿಗಳಲ್ಲಿ ವಿಶೇಷ ಅಧ್ಯಯನವಾಗಿ ಅಳವಡಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಜಾನಪದ ವಸ್ತು ಸಂಗ್ರಹಾಲಯದ ಅಭಿವೃದ್ದಿಗೆ ನೆರವಾದವರು. ಇವರ ಜಾನಪದ ಸೇವೆ ಗಮನಿಸಿ ಕರ್ನಾಟಕ ವಿಶ್ವವಿದ್ಯಾನಿಲಯದ ಮೂರನೇ ಜಾನಪದ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆರಿಸಿತು. ಕನ್ನಡಕ್ಕೆ ಎಲ್ಲೆ ಸಮಸ್ಯೆಗಳು ಉದ್ಬವಿಸಿದರೂ ಇಳಿವಯಸ್ಸಿನಲ್ಲೂ ಹಾಜರಾಗುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ.
 
==ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರು==
ದೇ. ಜವರೇಗೌಡ ಅವರು ಕನ್ನಡದ ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರಲ್ಲಿ ಒಬ್ಬರು. ಸರಿಸುಮಾರು ಏಳು ದಶಕಗಳಿಂದ ವಿದ್ವತ್ತು, ಆಡಳಿತ ಮತ್ತು ಚಳುವಳಿಗಳೆಂಬ -ಮೂರು ನೆಲೆಗಳಲ್ಲಿ ಮಾಡಿರುವ ಕೆಲಸಗಳು ಅವರ ಕೊಡುಗೆಯ ಸ್ವರೂಪವನ್ನು ನಿರ್ಧರಿಸಿವೆ. ಜಾನಪದ, ಗ್ರಂಥಸಂಪಾದನೆ, ಸಾಹಿತ್ಯವಿಮರ್ಶೆ, ಭಾಷಾಂತರ, ಜೀವನಚರಿತ್ರೆ, ಪ್ರವಾಸ ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ವ್ಯಾಪಕವಾದ ಕೆಲಸ ಮಾಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗಾಗಿ ಹತ್ತಾರು ಮಹತ್ವದ ಯೋಜನೆಗಳನ್ನು ರೂಪಿಸಿದ, ಸಂಪನ್ಮೂಲಗಳನ್ನು ಸೃಷ್ಟಿಸಿ, ಅವನ್ನು ಯಶಸ್ವಿಯಾಗಿ ನಿರ್ವಹಿಸಿದ ದೇಜಗೌರ ಸಾಧನೆ ಅನುಪಮವಾದುದು. ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ, ಅವರು ಕನ್ನಡದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕೆಲಸಗಳನ್ನು ಮಾಡಿದ್ದಾರೆ,
Line ೪೫ ⟶ ೫೧:
==ವಿಶ್ವಕೋಶದ ಸಂಪಾದಕರು==
ದೇಜಗೌ ಅವರು ಪ್ರಾರಂಭಿಸಿದ ಮತ್ತು ಯಶಸ್ವಿಯಾಗಿ ನಿರ್ವಹಿಸಿದ ‘ಕನ್ನಡ ವಿಶ್ವಕೋಶ’, ‘ವಿಷಯ ವಿಶ್ವಕೋಶ-ಕರ್ನಾಟಕ’, ‘ಇಂಗ್ಲಿಷ್-ಕನ್ನಡ ನಿಘಂಟು’, ‘ಸಮಗ್ರ ಕನ್ನಡ ಸಾಹಿತ್ಯಚರಿತ್ರೆ ‘, ‘ಕನ್ನಡ ಛಂದಸ್ಸಿನ ಇತಿಹಾಸ’ ಮುಂತಾದ ಕೆಲವು ಮುಖ್ಯವಾದ ಯೋಜನೆಗಳನ್ನು ಇಲ್ಲಿ ಹೆಸರಿಸಬಹುದು. ಕರ್ನಾಟಕಲ್ಲೇ ಮೊದಲಬಾರಿಗೆ ‘ಜಾನಪದ ವಸ್ತುಸಂಗ್ರಹಾಲ’ಯವನ್ನು ಸ್ಥಾಪಿ¹ ಜಾನಪದ ಅಧ್ಯಯನಕ್ಕೆ ತಳಹದಿಯನ್ನು ರೂಪಿಸಿಕೊಟ್ಟಿದ್ದು ಅವರ ಮುಖ್ಯವಾದ ಸಾಧನೆಗಳಲ್ಲಿ ಒಂದು. ಅವರು ವಿಶ್ವವಿದ್ಯಾಲಯದಲ್ಲಿ ಅನೇಕ ಹೊಸ ವಿಭಾಗಗಳನ್ನು ಪ್ರಾರಂಭಿಸಿದರು. ಈಗಲೂ ‘ಕುವೆಂಪು ವಿದ್ಯಾವರ್ಧಕ ಟ್ರಸ್ಟ್’ ಮೂಲಕ ಕನ್ನಡಪರವಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
 
== ಸಾಹಿತ್ಯಕೃಷಿ ==
ಜವರೇಗೌಡರು, ವಿವಿಧ ಪ್ರಕಾರಗಳಲ್ಲಿ 135 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ನೂರಾರು ಲೇಖನಗಳನ್ನು ಪ್ರಕಟಿಸಿದ್ದಾರೆ. ಇವರು ಅನುವಾದಕರಾಗಿಯೂ ಹೆಸರು ಮಾಡಿದ್ದಾರೆ. ಇವರ ಭಾಷಾಂತರಗಳಲ್ಲಿ 'ಪುನರುತ್ಥಾನ' ಪ್ರಮುಖವಾದುದು. ಇದಕ್ಕೆ ಸೋವಿಯತ್ ಲ್ಯಾಂಡ್ ಪ್ರಶಸ್ತಿ ದೊರಕಿದೆ. ಟಾಲ್ ಸ್ಟಾಯ್ ಅವರ 'ವಾರ್ ಅಂಡ್ ಪೀಸ್' ಕೃತಿಯನ್ನು 'ಯುದ್ದ ಮತ್ತು ಶಾಂತಿ' ಎಂಬ ಹೆಸರಿನಲ್ಲಿ ತರ್ಜುಮೆ ಮಾಡಿದ್ದಾರೆ. ಅಲ್ಲದೆ ಇವರು 'ಕಬ್ಬಿಗರ ಕಾವ', 'ನಳಚರಿತ್ರೆ', 'ರಾಮನಾಥ ಚರಿತೆ', 'ಲೀಲಾವತಿ ಪ್ರಬಂಧಂ' ಮೊದಲಾದ ಗ್ರಂಥಗಳನ್ನು ಶಾಸ್ತ್ರೀಯವಾಗಿ ಸಂಪಾದಿಸಿ ಪ್ರಕಟಿಸಿದ್ದಾರೆ. ಇವರು ನಲವತ್ತಕ್ಕೂ ಹೆಚ್ಚು ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಇವರು ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿದ್ದಾಗ 'ಕುಲಪತಿಯ ಭಾಷಣಗಳು', 'ಕುಲಪತಿಯ ಪತ್ರಗಳು' ಮುಂತಾದ ಆರು ಸಂಪುಟಗಳ ಬರಹವನ್ನು ಹೊರತಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬೆಳವಣಿಗೆಯಲ್ಲಿ ಇವರ ಪಾತ್ರ ತುಂಬಾ ಹಿರಿದಾದುದು. ೧೯೬೬ರಲ್ಲಿ ಜಾನಪದವನ್ನು ಕನ್ನಡ ತರಗತಿಗಳಲ್ಲಿ ವಿಶೇಷ ಅಧ್ಯಯನವಾಗಿ ಅಳವಡಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಜಾನಪದ ವಸ್ತು ಸಂಗ್ರಹಾಲಯದ ಅಭಿವೃದ್ದಿಗೆ ನೆರವಾದವರು. ಇವರ ಜಾನಪದ ಸೇವೆ ಗಮನಿಸಿ ಕರ್ನಾಟಕ ವಿಶ್ವವಿದ್ಯಾನಿಲಯದ ಮೂರನೇ ಜಾನಪದ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆರಿಸಿತು. ಕನ್ನಡಕ್ಕೆ ಎಲ್ಲೇ ಸಮಸ್ಯೆಗಳು ಉದ್ಬವಿಸಿದರೂ ಇಳಿವಯಸ್ಸಿನಲ್ಲೂ ಹಾಜರಾಗುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ.
ಇವರು [[ಕುವೆಂಪು]] ರವರ ಮಾರ್ಗದರ್ಶನದಿಂದ ಅವರ ಶಿಷ್ಯರಾಗಿ ತಮ್ಮ ವಿದ್ಯಾಭ್ಯಾಸವನ್ನು ಮಾಡಿ ಕನ್ನಡದ ಹೆಸರಾಂತ [[ಗದ್ಯ]] ಪ್ರಕಾರ ಲೇಖಕರಲ್ಲಿ ಒಬ್ಬರೆನಿಸಿ ಕೊಂಡಿದ್ದಾರೆ. ದೇಜಗೌ ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ.
 
==ಕೃತಿಗಳು==
 
=== ಗ್ರಂಥ ಸಂಪಾದನೆ ===
# ಹರಿಹರನ ‘ಗಿರಿಜಾಕಲ್ಯಾಣ ಮಹಾಪ್ರಬಂಧಂ’ (1951)
Line ೫೮ ⟶ ೬೭:
# ರಾಮನಾಥ ಚರಿತೆ
# ನೇಮಿಚಂದ್ರನ ‘ಲೀಲಾವತೀ ಪ್ರಬಂಧ’, (ಕೆ.ವೆಂಕಟರಾಮಪ್ಪನವರೊಂದಿಗೆ)
 
=== ಜಾನಪದ ===
# ‘ಜಾನಪದ ಅಧ್ಯಯನ’ (1976)
Line ೬೩ ⟶ ೭೩:
# ‘ಜಾನಪದ ವಾಹಿನಿ’ (1983)
# ‘ಜನಪದ ಗೀತಾಂಜಲಿ’ (ಸಂಪಾದಿತ ಕೃತಿ) (1978)
 
=== ಜೀವನ ಚರಿತ್ರೆಗಳು ===
# ಮೋತಿಲಾಲ್ ನೆಹರೂ
Line ೬೯ ⟶ ೮೦:
# ಶ್ರೀ ಬಸವೇಶ್ವರರು
# ಸ್ವಾಮಿ ಓಂಕಾರಾನಂದ
 
=== ಆತ್ಮಕಥೆ ===
# ಹೋರಾಟದ ಬದುಕು (ಭಾಗ 1, 2) (ಆತ್ಮಕಥೆ)
# ನೆನಪಿನ ಬುತ್ತಿ
 
=== ಅನುವಾದ ===
# ‘ಹಮ್ಮು ಮತ್ತು ಬಿಮ್ಮು,’ (ಜೇನ್ ಆಸ್ಟಿನ್ ಅವರ 'ಪ್ರೈಡ್ ಅಂಡ್ ಪ್ರಿಜುಡೀಸ್')
Line ೭೮ ⟶ ೯೧:
# ‘ಯುದ್ಧ ಮತ್ತು ಶಾಂತಿ’, (ಲಿಯೋ ಟಾಲ್ ಸ್ಟಾಯ್ ಅವರ 'ವಾರ್ ಅಂಡ್ ಪೀಸ್')
# ‘ಪುನರುತ್ಥಾನ’ (ಲಿಯೋ ಟಾಲ್ ಸ್ಟಾಯ್ ಅವರ 'ರಿಸರೆಕ್ಷನ್')
 
=== ಗದ್ಯಾನುವಾದ ===
# ರಾಮಾಯಣ ದರ್ಶನಂ ವಚನ ಚಂದ್ರಿಕೆ
 
=== ಭಾಷಣ ===
# ಕುಲಪತಿಯ ಭಾಷಣಗಳು (ಸಂಪುಟ 1,2)
# ದೇಜಗೌ ಭಾಷಣಗಳು (ಸಂಪಟ 1,2)
 
=== ಇತರೆ ===
# ಸಾಹಿತಿಗಳ ಸಂಗದಲ್ಲಿ
# ಕುಲಪತಿಯ ಪತ್ರಗಳು
 
== ಪ್ರಶಸ್ತಿ/ಪುರಸ್ಕಾರಗಳು ==
ದೇ. ಜ. ಗೌ. ಅವರು ಸರ್ಕಾರ ಮತ್ತು ಸಾರ್ವಜನಿಕರಿಂದ ಅನೇಕ ಪ್ರಶಸ್ತಿಗಳನ್ನೂ ಸನ್ಮಾನಗಳನ್ನೂ ಪಡೆದಿದ್ದಾರೆ.
 
=== ಪ್ರಶಸ್ತಿಗಳು ===
# ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್,
Line ೧೦೨ ⟶ ೧೨೦:
# ಕನಕಶ್ರೀ
# ಪದ್ಮಶ್ರೀ
 
=== ಅಧ್ಯಕ್ಷತೆ ===
# ದೇ. ಜವರೇಗೌಡರು 1970ರಲ್ಲಿ ಬೆಂಗಳೂರಿನಲ್ಲಿ ನಡೆದ 47ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
 
=== ಅಭಿನಂದನಾ ಗ್ರಂಥಗಳು ===
# ಅಂತಃಕರಣ
"https://kn.wikipedia.org/wiki/ದೇ._ಜವರೇಗೌಡ" ಇಂದ ಪಡೆಯಲ್ಪಟ್ಟಿದೆ