ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೭ ನೇ ಸಾಲು:
 
== ಕನ್ನಡದ ಕಟ್ಟಾಳು ==
ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬೆಳವಣಿಗೆಯಲ್ಲಿ ಇವರ ಪಾತ್ರ ತುಂಬಾ ಹಿರಿದಾದುದು. ೧೯೬೬ರಲ್ಲಿ ಜಾನಪದವನ್ನು ಕನ್ನಡ ತರಗತಿಗಳಲ್ಲಿ ವಿಶೇಷ ಅಧ್ಯಯನವಾಗಿ ಅಳವಡಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಜಾನಪದ ವಸ್ತು ಸಂಗ್ರಹಾಲಯದ ಅಭಿವೃದ್ದಿಗೆ ನೆರವಾದವರು. ಇವರ ಜಾನಪದ ಸೇವೆ ಗಮನಿಸಿ ಕರ್ನಾಟಕ ವಿಶ್ವವಿದ್ಯಾನಿಲಯದ ಮೂರನೇ ಜಾನಪದ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆರಿಸಿತು. ಕನ್ನಡಕ್ಕೆ ಎಲ್ಲೆ ಸಮಸ್ಯೆಗಳು ಉದ್ಬವಿಸಿದರೂ ಇಳಿವಯಸ್ಸಿನಲ್ಲೂ ಹಾಜರಾಗುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ.
 
ದೇ. ಜವರೇಗೌಡ ಅವರು ಕನ್ನಡದ ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರಲ್ಲಿ ಒಬ್ಬರು. ಸರಿಸುಮಾರು ಏಳು ದಶಕಗಳಿಂದ ವಿದ್ವತ್ತು, ಆಡಳಿತ ಮತ್ತು ಚಳುವಳಿಗಳೆಂಬ -ಮೂರು ನೆಲೆಗಳಲ್ಲಿ ಮಾಡಿರುವ ಕೆಲಸಗಳು ಅವರ ಕೊಡುಗೆಯ ಸ್ವರೂಪವನ್ನು ನಿರ್ಧರಿಸಿವೆ. ಜಾನಪದ, ಗ್ರಂಥಸಂಪಾದನೆ, ಸಾಹಿತ್ಯವಿಮರ್ಶೆ, ಭಾಷಾಂತರ, ಜೀವನಚರಿತ್ರೆ, ಪ್ರವಾಸ ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ವ್ಯಾಪಕವಾದ ಕೆಲಸ ಮಾಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗಾಗಿ ಹತ್ತಾರು ಮಹತ್ವದ ಯೋಜನೆಗಳನ್ನು ರೂಪಿಸಿದ, ಸಂಪನ್ಮೂಲಗಳನ್ನು ಸೃಷ್ಟಿಸಿ, ಅವನ್ನು ಯಶಸ್ವಿಯಾಗಿ ನಿರ್ವಹಿಸಿದ ದೇಜಗೌರ ಸಾಧನೆ ಅನುಪಮವಾದುದು. ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ, ಅವರು ಕನ್ನಡದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕೆಲಸಗಳನ್ನು ಮಾಡಿದ್ದಾರೆ, ಕನ್ನಡಕ್ಕೆ ಎಲ್ಲೇ ಸಮಸ್ಯೆಗಳು ಉದ್ಬವಿಸಿದರೂ ಇಳಿವಯಸ್ಸಿನಲ್ಲೂ ಹಾಜರಾಗುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ.
"https://kn.wikipedia.org/wiki/ದೇ._ಜವರೇಗೌಡ" ಇಂದ ಪಡೆಯಲ್ಪಟ್ಟಿದೆ