ಅಂಬರೀಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
No edit summary |
||
೩ ನೇ ಸಾಲು:
(ಅಂಬರೀಶ್ ರವರ ಮೊದಲ ಹೆಸರು ಮಳವಳ್ಳಿ ಹುಚ್ಚೆ ಗೌಡ ಅಮರನಾಥ್. 'ಇವರು ಮಂಡ್ಯ ಜಿಲ್ಲೆ ದೊಡ್ಡರಸನ ಕೆರೆ ಗ್ರಾಮದಲ್ಲಿ 1952 ಮೇ 29ರಂದು ಜನಿಸಿದರು. ತಂದೆ ಹುಚ್ಚೇಗೌಡ, ತಾಯಿ ಪದ್ಮಮ್ಮ. , ಖ್ಯಾತ ಪಿಟೀಲು ವಿದ್ವಾನ್ [[ಟಿ.ಚೌಡಯ್ಯ]] ಇವರ ಅಜ್ಜ.ಕನ್ನಡ ಚಲನಚಿತ್ರ ರಂಗಕ್ಕೆ ೧೯೭೩ರಲ್ಲಿ, [[ಪುಟ್ಟಣ್ಣ ಕಣಗಾಲ್]] ನಿರ್ದೇಶನದ "[[ನಾಗರಹಾವು]]" ಚಿತ್ರದ (ಜಲೀಲನ ಪಾತ್ರ) ಮೂಲಕ ಪಾದಾರ್ಪಣೆ ಮಾಡಿದರು. ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ ಎಚ್.ಕೆ.ಅನಂತರಾವ್ ಅವರ ಕಾದಂಬರಿ ಆಧಾರಿತ ಅಂತ ಚಿತ್ರದ ನಾಯಕನಾಗಿ ಅಭಿನಯಿಸಿದ್ದು ಇವರ ವೃತ್ತಿ ಜೀವನಕ್ಕೆ ಒಂದು ಹೊಸ ಆಯಾಮ ನೀಡಿತು. ಈ ಚಿತ್ರದಲ್ಲಿ ಅನ್ಯಾಯದ ವಿರುದ್ಧ ಸಿಡಿದೇಳುವ ಇನ್ಸ್ಪೆಕ್ಟರ್ ಸುಶೀಲ್ ಕುಮಾರ್ ಪಾತ್ರ ಇವರಿಗೆ ರೆಬೆಲ್ ಸ್ಟಾರ್ ಎಂಬ ಇಮೇಜು ನೀಡಿತು. ಅನಂತರ ಇವರು ನಾಯಕ, ಖಳನಾಯಕಪಾತ್ರಗಳಲ್ಲಿ ನಟಿಸಿದರು. ರಂಗನಾಯಕಿ, ಪಡುವಾರಹಳ್ಳಿ ಪಾಂಡವರು, ಮಸಣದ ಹೂವು, ಚಕ್ರವ್ಯೂಹ, ಏಳುಸುತ್ತಿನ ಕೋಟೆ, ಹೃದಯಹಾಡಿತು, ಸ್ನೇಹಸಂಬಂಧ, ಬ್ರಹ್ಮಾಸ್ತ್ರ, ಅಮರಜ್ಯೋತಿ ಮೊದಲಾದ ಅನೇಕ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ಮಸಣದಹೂವು ಚಿತ್ರದಲ್ಲಿನ ಇವರ ಪಾತ್ರದ ಅಭಿನಯ ಅವಿಸ್ಮರಣೀಯವಾದದ್ದು. ಹೃದಯ ಹಾಡಿತು ಚಿತ್ರ ಇವರ ಚಿತ್ರರಂಗದ ಇಮೇಜನ್ನು ಬದಲಾಯಿಸಿತು. ಚಕ್ರವ್ಯೂಹ ಹಾಗೂ ಮೌನರಾಗ ಚಿತ್ರಗಳು ಇವರಿಗೆ ಜನಪ್ರಿಯತೆ ತಂದುಕೊಟ್ಟವು.
[[
ಅಂಬರೀಶ್ ಅವರ ಪತ್ನಿ ಕನ್ನಡ ಚಿತ್ರನಟಿ [[ಸುಮಲತಾ]]. ಪುತ್ರನ ಹೆಸರು ಅಭಿಷೇಕ್ ಗೌಡ.
ಇವರು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿದ ಸಂದರ್ಭದಲ್ಲಿ ಮೊದಲಿಗೆ ಜನತಾದಳದಲ್ಲಿದ್ದರು. ಅನಂತರ ಕಾಂಗ್ರೆಸ್ಪಕ್ಷ ಸೇರಿದರು. ಮಂಡ್ಯ ಕ್ಷೇತ್ರದಿಂದ ಸ್ಪದಿರ್sಸಿ ಲೋಕಸಭೆಗೆ ಆಯ್ಕೆಯಾದರು. ಅನಂತರ ಕಾವೇರಿ ಚಳವಳಿಯ ಹಿನ್ನೆಲೆಯಲ್ಲಿ ಜನತೆಯ ಅಬಿsಪ್ರಾಯಕ್ಕೆ ಮನ್ನಣೆ ನೀಡಿ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದರು (2002). ಅಂಬರೀಶ್ ತಮ್ಮ ಉದಾರ ಸ್ವಭಾವದಿಂದಾಗಿ ದಾನಶೂರ ಕರ್ಣ ಎಂದೇ ಹೆಸರಾಗಿದ್ದಾರೆ. ಸಮಾಜದ ದುರ್ಬಲ ವರ್ಗದವರ ಬಗ್ಗೆ ಇವರಿಗೆ ವಿಶೇಷ ಕಳಕಳಿ.
|